Homeಮುಖಪುಟಏಕೈಕ ‘ಪತ್ರಿಕಾಗೋಷ್ಠಿ’ಯಲ್ಲಿ ಒಂದೂ ಪ್ರಶ್ನೆಯನ್ನು ತೆಗೆದುಕೊಳ್ಳದ ಪ್ರಧಾನಿ.

ಏಕೈಕ ‘ಪತ್ರಿಕಾಗೋಷ್ಠಿ’ಯಲ್ಲಿ ಒಂದೂ ಪ್ರಶ್ನೆಯನ್ನು ತೆಗೆದುಕೊಳ್ಳದ ಪ್ರಧಾನಿ.

ಇಂದಿನ ಅಮಿತ್‍ಷಾ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಿಯದ್ದು ಉಪಸ್ಥಿತಿ ಮಾತ್ರ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಪ್ರಧಾನಮಂತ್ರಿಯಾಗಿ ಅಧಿಕಾರಕ್ಕೇರಿದ ನಂತರ ಒಂದೇ ಒಂದು ಪತ್ರಿಕಾಗೋಷ್ಠಿಯನ್ನೂ ನರೇಂದ್ರ ಮೋದಿ ನಡೆಸಲಿಲ್ಲವೆಂಬ ಆರೋಪವನ್ನು ಉದ್ದಕ್ಕೂ ಎದುರಿಸಿದ್ದರು. ಅದಕ್ಕೆ ಉತ್ತರ ಕೊಡಲೆಂಬಂತೆ, ಚುನಾವಣಾ ಪ್ರಚಾರದ ಕಡೆಯ ದಿನವಾದ ಇಂದು ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಯಿತು. ಅದರಲ್ಲಿ ಸ್ವತಃ ನರೇಂದ್ರ ಮೋದಿಯವರು ಉಪಸ್ಥಿತರಿದ್ದರು. ಆದರೆ, ಅವರು ಒಂದೇ ಒಂದು ಪ್ರಶ್ನೆಯನ್ನೂ ತೆಗೆದುಕೊಳ್ಳಲಿಲ್ಲ. ಆ ಮೂಲಕ ಪತ್ರಿಕಾಗೋಷ್ಠಿಯಲ್ಲದ ಪತ್ರಿಕಾಗೋಷ್ಠಿ ಮಾಡಿದರು; ಅಥವಾ ಅಮಿತ್‍ಷಾ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು ಎಂದು ಹೇಳಬಹುದು.

ಪತ್ರಿಕಾಗೋಷ್ಠಿಯಲ್ಲಿ ಮೊದಲಿಗೆ ಬಿಜೆಪಿಯ ರಾಷ್ಟ್ರಾಧ್ಯಕ್ಷ ಅಮಿತ್‍ಷಾ ದೀರ್ಘವಾಗಿ ಮಾತಾಡಿದರು. ಅದರಲ್ಲಿ ಇಂದು ನಮ್ಮ ಜೊತೆ ಪ್ರಧಾನಿ ನರೇಂದ್ರ ಮೋದಿ ಇರುವುದು ನಮ್ಮೆಲ್ಲರಿಗೆ ಸಂತಸದ ಮತ್ತು ಆಶ್ಚರ್ಯಕರವಾದ ವಿಚಾರ ಎಂದು ಅಮಿತ್‍ಷಾ ಶುರು ಮಾಡಿದರು. ಅದಕ್ಕೆ ನರೇಂದ್ರ ಮೋದಿ ನಗುವಿನ ಮೂಲಕ ಪ್ರತಿಕ್ರಿಯೆ ವ್ಯಕ್ತಪಡಿಸಿದರು.

ಮೊದಲು ಬಿಜೆಪಿ ಪಕ್ಷ ಸಂಘಟನೆ ಹಾಗೂ ಬೂತ್ ಕಮಿಟಿಗಳ ಬಲದ ಕುರಿತು ಅಮಿತ್‍ಷಾ ವಿವರಿಸಿದರು. ಆ ನಂತರ ಐದು ವರ್ಷಗಳ ಸರ್ಕಾರದ ಸಾಧನೆಗಳು ಹಾಗೂ ಯೋಜನೆಗಳನ್ನು ಮುಂದಿಟ್ಟರು. ಸರ್ಕಾರ ರಚಿಸಿದಾಗ ಕೇವಲ 6 ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ, ಈಗ 16 ರಾಜ್ಯಗಳಲ್ಲಿದೆ ಎಂದು ಹೆಮ್ಮೆ ಪಟ್ಟರು. ಈ ರೀತಿ ಸರ್ಕಾರ ರಚಿಸಿದ್ದನ್ನು ನಾವು ‘ನರೇಂದ್ರ ಮೋದಿ ಪ್ರಯೋಗ’ ಎಂದು ಕರೆಯುತ್ತೇವೆ ಮತ್ತು ಅದು ಯಶಸ್ವಿಯಾಗಿದೆ ಎಂಬುದು ಅಮಿತ್‍ಷಾ ಅಭಿಪ್ರಾಯವಾಗಿತ್ತು. ಪ್ರತಿಯೊಂದು ಲೋಕಸಭಾ ಕ್ಷೇತ್ರದಲ್ಲಿ 3,000 ಪೂರ್ಣಾವಧಿ ಕಾರ್ಯಕರ್ತರು 2 ವರ್ಷಗಳ ಕಾಲ ಕೆಲಸ ಮಾಡಿದ್ದು, ಸರ್ಕಾರದ ಯೋಜನೆಗಳನ್ನು ಜನರಿಗೆ ತಿಳಿಸುವಲ್ಲಿ ಯಶಸ್ವಿಯಾಗಿದ್ದೇವೆ. ಹಾಗಾಗಿ ನಮಗೆ ಪೂರ್ಣಬಹುಮತದಿಂದ ಗೆಲ್ಲುವ ವಿಶ್ವಾಸವಿದೆ ಎಂದು ನುಡಿದರು.

ಇದರ ನಂತರ ಅಮಿತ್‍ಷಾರಿಗಿಂಥ ಕಡಿಮೆ ಸಮಯ ನರೇಂದ್ರ ಮೋದಿ ಮಾತಾಡಿದರು. ನಿರ್ದಿಷ್ಟವಾದ ಅಂಶಗಳಿಗೆ ಹೋಗದೇ, ಜನರಲ್ ಆದ ಮಾತುಗಳನ್ನು ಆಡಿದರು. ಆದರೆ ಪ್ರಜಾತಂತ್ರದ ವಿಶೇಷವನ್ನು ಹೊಗಳಿದರು. ಭಾರತದ ಪ್ರಜಾತಂತ್ರವನ್ನು ಇಡೀ ಪ್ರಪಂಚಕ್ಕೆ ನಾವು ಎತ್ತಿ ತೋರಿಸಬಹುದಾದ ಹೆಮ್ಮೆಯ ಸಂಗತಿ ಎಂದರು. 2014ರಲ್ಲಿ ಅಧಿಕಾರಕ್ಕೆ ಬಂದ ಸಂದರ್ಭವನ್ನು ನೆನೆಯುತ್ತಾ, ಆಗ ಬೆಟ್ಟಿಂಗ್ ಕಟ್ಟಿದ್ದವರೆಲ್ಲರೂ ಸೋಲುವಷ್ಟು ಪ್ರಮಾಣದಲ್ಲಿ ನಮಗೆ ಸೀಟುಗಳು ಬಂದಿದ್ದವು ಎಂದು ತಮಾಷೆ ಮಾಡಿದರು.

ನಂತರ ಪ್ರಶ್ನೆಗಳನ್ನು ಎದುರಿಸಿದ್ದು ಅಮಿತ್‍ಷಾ ಮಾತ್ರ. ಬಿಜೆಪಿಗೆ ಬಹುಮತ ಬರದಿದ್ದರೆ ಏನು ಮಾಡುತ್ತೀರಿ ಎಂಬ ಪ್ರಶ್ನೆ ಪದೇ ಪದೇ ಬಂದಿತು. ‘ನಮಗೆ 300ಕ್ಕೂ ಹೆಚ್ಚು ಸೀಟುಗಳು ಬರುತ್ತವೆ, ಆದರೆ ಸರ್ಕಾರ ಎನ್‍ಡಿಎದಾಗಿರುತ್ತದೆ’ ಎಂದು ಅವರು ಪ್ರತಿ ಬಾರಿಯೂ ಹೇಳಿದರು. ಪಶ್ಚಿಮ ಬಂಗಾಳದಲ್ಲಿ ನಿಮ್ಮ ಪಕ್ಷದಿಂದ ಹಿಂಸಾಚಾರ ನಡೆದಿದೆ ಎಂದಾಗ ಅಮಿತ್‍ಷಾ ಕಿಡಿಯಾದರು. ನಮ್ಮ 80 ಕಾರ್ಯಕರ್ತರು ಅಲ್ಲಿ ಕೊಲೆಯಾಗಿದ್ದಾರೆ. ದೇಶಾದ್ಯಂತ ನಾವು ಚುನಾವಣೆ ನಡೆಸಿದ್ದೇವೆ, ಎಲ್ಲೂ ಏಕೆ ಹೀಗೆ ಆಗಿಲ್ಲ? ಎಂದು ಪತ್ರಕರ್ತರನ್ನೇ ಪ್ರಶ್ನಿಸಿದರು.

ಇದನ್ನು ಓದಿ: ನ್ಯೂಸ್ ನೇಷನ್ ಸಂದರ್ಶನದಲ್ಲಿ ಮೋದಿಗೆ ಪ್ರಶ್ನೆಗಳು ಮೊದಲೇ ಗೊತ್ತಿತ್ತಾ?

ಈ ಮಧ್ಯೆ ನರೇಂದ್ರ ಮೋದಿಯವರನ್ನು ಉದ್ದೇಶಿಸಿ ಎರಡೆರಡು ಬಾರಿ ಪತ್ರಕರ್ತರು ಪ್ರಶ್ನೆ ಕೇಳಲು ಯತ್ನಿಸಿದರು. ಆದರೆ, ಅಮಿತ್‍ಷಾರತ್ತ ಕೈ ತೋರಿಸಿದರು. ಒಮ್ಮೆ ‘ನಾನು ಪಕ್ಷದ ಶಿಸ್ತಿನ ಸಿಪಾಯಿ, ನಮ್ಮಲ್ಲಿ ಎಲ್ಲವೂ ಅಧ್ಯಕ್ಷರೇ. (ಅವರೇ ಉತ್ತರ ಕೊಡುತ್ತಾರೆ)’ ಎಂದರು. ಅಲ್ಲಿಗೆ ಮೋದಿಯವರು ಯಾವ ಪ್ರಶ್ನೆಗೂ ಉತ್ತರಿಸುವುದಿಲ್ಲ ಎಂಬುದು ಗೊತ್ತಾಗಿ ಪತ್ರಕರ್ತರು ಸುಮ್ಮನಾದರು.

ಹೆಚ್ಚಿನ ಪ್ರಶ್ನೆಗಳು ನಾಥೂರಾಂ ಗೋಡ್ಸೆಯನ್ನು ದೇಶಭಕ್ತ ಎಂದಿರುವ ಪ್ರಗ್ಯಾ ಠಾಕೂರ್, ಅನಂತಕುಮಾರ್ ಹೆಗಡೆ ಮತ್ತು ನಳಿನ್ ಕುಮಾರ್ ಕಟೀಲರ ಕುರಿತಾಗಿ ಬಂದವು. ಅವರಿಗೆ ಷೋಕಾಸ್ ನೋಟೀಸ್ ಕೊಡಲಾಗಿದೆ. ಪಕ್ಷದ ಶಿಸ್ತು ಸಮಿತಿ ಕ್ರಮ ಕೈಗೊಳ್ಳುತ್ತದೆ ಎಂದು ಅಮಿತ್‍ಷಾ ಹೇಳಿದರು. ಅದೇ ಸಂದರ್ಭದಲ್ಲಿ ‘ಕೇಸರಿ ಭಯೋತ್ಪಾದನೆ’ ಎಂಬ ಸುಳ್ಳು ಆರೋಪಕ್ಕೆ ಪ್ರಗ್ಯಾರನ್ನು ಅಭ್ಯರ್ಥಿಯಾಗಿಸಿ ಉತ್ತರ ಕೊಟ್ಟಿದ್ದೇವೆ ಎಂದು ಸಮರ್ಥನೆ ಸಹಾ ಮಾಡಿಕೊಂಡರು.

ಇದನ್ನು ಓದಿ: ಒಂದೇ ಚಾನೆಲ್, ಒಬ್ಬನೇ ಸಂದರ್ಶಕ. ಮೋದಿಗೆ ಕುಶಲ ಪ್ರಶ್ನೆ ರಾಹುಲ್‍ಗೆ ಕಠಿಣ ಪ್ರಶ್ನೆ. ವಿಡಿಯೋ ನೋಡಿ

ರಾಫೇಲ್ ಬಗ್ಗೆ ಬಂದ ಪ್ರಶ್ನೆಗಳಿಗೆ, ‘ಅದರಲ್ಲಿ ಯಾವ ತಪ್ಪೂ ನಡೆದಿಲ್ಲ’ ಎಂದು ಅಮಿತ್‍ಷಾ ಹೇಳಿದರು. ಕರ್ನಾಟಕವೂ ಸೇರಿದಂತೆ ದಕ್ಷಿಣ ರಾಜ್ಯಗಳು, ಒರಿಸ್ಸಾ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಎಲ್ಲಾ ಕಡೆಯೂ ಹಿಂದಿಗಿಂತ ಹೆಚ್ಚಿನ ಮತ ಹಾಗೂ ಸೀಟುಗಳನ್ನು ಗೆಲ್ಲುತ್ತೇವೆ ಎಂಬ ಆತ್ಮವಿಶ್ವಾಸವನ್ನು ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿ ಕುರಿತು ವಿಶ್ಲೇಷಿಸಿದ ಕ್ವಿಂಟ್‍ನ ಆದಿತ್ಯಾ ‘ಇದು ಪತ್ರಿಕಾಗೋಷ್ಠಿಯಲ್ಲದ ಪತ್ರಿಕಾಗೋಷ್ಠಿ’ ಎಂದರಲ್ಲದೇ, ಇದನ್ನು ಮೀಡಿಯಾ ಬ್ರೀಫಿಂಗ್ ಎನ್ನಬಹುದೇ ಹೊರತು ಪತ್ರಿಕಾಗೋಷ್ಠಿ ಎನ್ನಲಾಗದು ಎಂಬ ಅಭಿಪ್ರಾಯ ಮುಂದಿಟ್ಟರು.

ಪತ್ರಿಕಾಗೋಷ್ಠಿಯ ಕುರಿತು ರಾಹುಲ್ ಗಾಂಧಿ ವ್ಯಂಗ್ಯ ಮಾಡಿ ಕೂಡಲೇ ಟ್ವೀಟ್  ಮಾಡಿದರು. ‘ಅಭಿನಂದನೆಗಳು ಮೋದೀಜಿ. ಮುಂದಿನ ಸಾರಿ ಒಂದೆರಡು ಪ್ರಶ್ನೆಗಳಿಗೆ ಉತ್ತರ ಕೊಡಲು ಅಮಿತ್ ಷಾ ನಿಮಗೆ ಬಿಡಬಹುದು’ ಎಂದು ಟ್ವೀಟ್ ಹೇಳುತ್ತದೆ.

ಈ ಪತ್ರಿಕಾಗೋಷ್ಠಿಯ ಕುರಿತು ಬರಹಗಾರರಾದ ಭೀಮನಗೌಡರ್ ಕಾಶಿರೆಡ್ಡಿ ಅವರು ‘ಹೇಳಿಕೊಟ್ಟ ಮಾತು; ಕಟ್ಟಿಕೊಟ್ಟ ಬುತ್ತಿ ಬಹಳ ದಿನ ಉಳಿಯುವುದಿಲ್ಲ ಎಂಬಂತಾಗಿದೆ’ ಎಂದು ಹೇಳಿದರು. ಪತ್ರಕರ್ತ ಮಲ್ಲನಗೌಡರ್ ‘ಕಡೆಯ ದಿನದ ಮೊದಲ ಪ್ರೆಸ್‍ಮೀಟ್ ಸಹಾ ಪ್ರೆಸ್‍ಮೀಟ್ ಆಗದೇ ಮೀಟ್ ದಿ ಪ್ರೆಸ್ ಪೀಪಲ್ ಅಷ್ಟೇ ಆಯಿತು’ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...