Homeಮುಖಪುಟಏಕೈಕ ‘ಪತ್ರಿಕಾಗೋಷ್ಠಿ’ಯಲ್ಲಿ ಒಂದೂ ಪ್ರಶ್ನೆಯನ್ನು ತೆಗೆದುಕೊಳ್ಳದ ಪ್ರಧಾನಿ.

ಏಕೈಕ ‘ಪತ್ರಿಕಾಗೋಷ್ಠಿ’ಯಲ್ಲಿ ಒಂದೂ ಪ್ರಶ್ನೆಯನ್ನು ತೆಗೆದುಕೊಳ್ಳದ ಪ್ರಧಾನಿ.

ಇಂದಿನ ಅಮಿತ್‍ಷಾ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಿಯದ್ದು ಉಪಸ್ಥಿತಿ ಮಾತ್ರ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಪ್ರಧಾನಮಂತ್ರಿಯಾಗಿ ಅಧಿಕಾರಕ್ಕೇರಿದ ನಂತರ ಒಂದೇ ಒಂದು ಪತ್ರಿಕಾಗೋಷ್ಠಿಯನ್ನೂ ನರೇಂದ್ರ ಮೋದಿ ನಡೆಸಲಿಲ್ಲವೆಂಬ ಆರೋಪವನ್ನು ಉದ್ದಕ್ಕೂ ಎದುರಿಸಿದ್ದರು. ಅದಕ್ಕೆ ಉತ್ತರ ಕೊಡಲೆಂಬಂತೆ, ಚುನಾವಣಾ ಪ್ರಚಾರದ ಕಡೆಯ ದಿನವಾದ ಇಂದು ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಯಿತು. ಅದರಲ್ಲಿ ಸ್ವತಃ ನರೇಂದ್ರ ಮೋದಿಯವರು ಉಪಸ್ಥಿತರಿದ್ದರು. ಆದರೆ, ಅವರು ಒಂದೇ ಒಂದು ಪ್ರಶ್ನೆಯನ್ನೂ ತೆಗೆದುಕೊಳ್ಳಲಿಲ್ಲ. ಆ ಮೂಲಕ ಪತ್ರಿಕಾಗೋಷ್ಠಿಯಲ್ಲದ ಪತ್ರಿಕಾಗೋಷ್ಠಿ ಮಾಡಿದರು; ಅಥವಾ ಅಮಿತ್‍ಷಾ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು ಎಂದು ಹೇಳಬಹುದು.

ಪತ್ರಿಕಾಗೋಷ್ಠಿಯಲ್ಲಿ ಮೊದಲಿಗೆ ಬಿಜೆಪಿಯ ರಾಷ್ಟ್ರಾಧ್ಯಕ್ಷ ಅಮಿತ್‍ಷಾ ದೀರ್ಘವಾಗಿ ಮಾತಾಡಿದರು. ಅದರಲ್ಲಿ ಇಂದು ನಮ್ಮ ಜೊತೆ ಪ್ರಧಾನಿ ನರೇಂದ್ರ ಮೋದಿ ಇರುವುದು ನಮ್ಮೆಲ್ಲರಿಗೆ ಸಂತಸದ ಮತ್ತು ಆಶ್ಚರ್ಯಕರವಾದ ವಿಚಾರ ಎಂದು ಅಮಿತ್‍ಷಾ ಶುರು ಮಾಡಿದರು. ಅದಕ್ಕೆ ನರೇಂದ್ರ ಮೋದಿ ನಗುವಿನ ಮೂಲಕ ಪ್ರತಿಕ್ರಿಯೆ ವ್ಯಕ್ತಪಡಿಸಿದರು.

ಮೊದಲು ಬಿಜೆಪಿ ಪಕ್ಷ ಸಂಘಟನೆ ಹಾಗೂ ಬೂತ್ ಕಮಿಟಿಗಳ ಬಲದ ಕುರಿತು ಅಮಿತ್‍ಷಾ ವಿವರಿಸಿದರು. ಆ ನಂತರ ಐದು ವರ್ಷಗಳ ಸರ್ಕಾರದ ಸಾಧನೆಗಳು ಹಾಗೂ ಯೋಜನೆಗಳನ್ನು ಮುಂದಿಟ್ಟರು. ಸರ್ಕಾರ ರಚಿಸಿದಾಗ ಕೇವಲ 6 ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ, ಈಗ 16 ರಾಜ್ಯಗಳಲ್ಲಿದೆ ಎಂದು ಹೆಮ್ಮೆ ಪಟ್ಟರು. ಈ ರೀತಿ ಸರ್ಕಾರ ರಚಿಸಿದ್ದನ್ನು ನಾವು ‘ನರೇಂದ್ರ ಮೋದಿ ಪ್ರಯೋಗ’ ಎಂದು ಕರೆಯುತ್ತೇವೆ ಮತ್ತು ಅದು ಯಶಸ್ವಿಯಾಗಿದೆ ಎಂಬುದು ಅಮಿತ್‍ಷಾ ಅಭಿಪ್ರಾಯವಾಗಿತ್ತು. ಪ್ರತಿಯೊಂದು ಲೋಕಸಭಾ ಕ್ಷೇತ್ರದಲ್ಲಿ 3,000 ಪೂರ್ಣಾವಧಿ ಕಾರ್ಯಕರ್ತರು 2 ವರ್ಷಗಳ ಕಾಲ ಕೆಲಸ ಮಾಡಿದ್ದು, ಸರ್ಕಾರದ ಯೋಜನೆಗಳನ್ನು ಜನರಿಗೆ ತಿಳಿಸುವಲ್ಲಿ ಯಶಸ್ವಿಯಾಗಿದ್ದೇವೆ. ಹಾಗಾಗಿ ನಮಗೆ ಪೂರ್ಣಬಹುಮತದಿಂದ ಗೆಲ್ಲುವ ವಿಶ್ವಾಸವಿದೆ ಎಂದು ನುಡಿದರು.

ಇದರ ನಂತರ ಅಮಿತ್‍ಷಾರಿಗಿಂಥ ಕಡಿಮೆ ಸಮಯ ನರೇಂದ್ರ ಮೋದಿ ಮಾತಾಡಿದರು. ನಿರ್ದಿಷ್ಟವಾದ ಅಂಶಗಳಿಗೆ ಹೋಗದೇ, ಜನರಲ್ ಆದ ಮಾತುಗಳನ್ನು ಆಡಿದರು. ಆದರೆ ಪ್ರಜಾತಂತ್ರದ ವಿಶೇಷವನ್ನು ಹೊಗಳಿದರು. ಭಾರತದ ಪ್ರಜಾತಂತ್ರವನ್ನು ಇಡೀ ಪ್ರಪಂಚಕ್ಕೆ ನಾವು ಎತ್ತಿ ತೋರಿಸಬಹುದಾದ ಹೆಮ್ಮೆಯ ಸಂಗತಿ ಎಂದರು. 2014ರಲ್ಲಿ ಅಧಿಕಾರಕ್ಕೆ ಬಂದ ಸಂದರ್ಭವನ್ನು ನೆನೆಯುತ್ತಾ, ಆಗ ಬೆಟ್ಟಿಂಗ್ ಕಟ್ಟಿದ್ದವರೆಲ್ಲರೂ ಸೋಲುವಷ್ಟು ಪ್ರಮಾಣದಲ್ಲಿ ನಮಗೆ ಸೀಟುಗಳು ಬಂದಿದ್ದವು ಎಂದು ತಮಾಷೆ ಮಾಡಿದರು.

ನಂತರ ಪ್ರಶ್ನೆಗಳನ್ನು ಎದುರಿಸಿದ್ದು ಅಮಿತ್‍ಷಾ ಮಾತ್ರ. ಬಿಜೆಪಿಗೆ ಬಹುಮತ ಬರದಿದ್ದರೆ ಏನು ಮಾಡುತ್ತೀರಿ ಎಂಬ ಪ್ರಶ್ನೆ ಪದೇ ಪದೇ ಬಂದಿತು. ‘ನಮಗೆ 300ಕ್ಕೂ ಹೆಚ್ಚು ಸೀಟುಗಳು ಬರುತ್ತವೆ, ಆದರೆ ಸರ್ಕಾರ ಎನ್‍ಡಿಎದಾಗಿರುತ್ತದೆ’ ಎಂದು ಅವರು ಪ್ರತಿ ಬಾರಿಯೂ ಹೇಳಿದರು. ಪಶ್ಚಿಮ ಬಂಗಾಳದಲ್ಲಿ ನಿಮ್ಮ ಪಕ್ಷದಿಂದ ಹಿಂಸಾಚಾರ ನಡೆದಿದೆ ಎಂದಾಗ ಅಮಿತ್‍ಷಾ ಕಿಡಿಯಾದರು. ನಮ್ಮ 80 ಕಾರ್ಯಕರ್ತರು ಅಲ್ಲಿ ಕೊಲೆಯಾಗಿದ್ದಾರೆ. ದೇಶಾದ್ಯಂತ ನಾವು ಚುನಾವಣೆ ನಡೆಸಿದ್ದೇವೆ, ಎಲ್ಲೂ ಏಕೆ ಹೀಗೆ ಆಗಿಲ್ಲ? ಎಂದು ಪತ್ರಕರ್ತರನ್ನೇ ಪ್ರಶ್ನಿಸಿದರು.

ಇದನ್ನು ಓದಿ: ನ್ಯೂಸ್ ನೇಷನ್ ಸಂದರ್ಶನದಲ್ಲಿ ಮೋದಿಗೆ ಪ್ರಶ್ನೆಗಳು ಮೊದಲೇ ಗೊತ್ತಿತ್ತಾ?

ಈ ಮಧ್ಯೆ ನರೇಂದ್ರ ಮೋದಿಯವರನ್ನು ಉದ್ದೇಶಿಸಿ ಎರಡೆರಡು ಬಾರಿ ಪತ್ರಕರ್ತರು ಪ್ರಶ್ನೆ ಕೇಳಲು ಯತ್ನಿಸಿದರು. ಆದರೆ, ಅಮಿತ್‍ಷಾರತ್ತ ಕೈ ತೋರಿಸಿದರು. ಒಮ್ಮೆ ‘ನಾನು ಪಕ್ಷದ ಶಿಸ್ತಿನ ಸಿಪಾಯಿ, ನಮ್ಮಲ್ಲಿ ಎಲ್ಲವೂ ಅಧ್ಯಕ್ಷರೇ. (ಅವರೇ ಉತ್ತರ ಕೊಡುತ್ತಾರೆ)’ ಎಂದರು. ಅಲ್ಲಿಗೆ ಮೋದಿಯವರು ಯಾವ ಪ್ರಶ್ನೆಗೂ ಉತ್ತರಿಸುವುದಿಲ್ಲ ಎಂಬುದು ಗೊತ್ತಾಗಿ ಪತ್ರಕರ್ತರು ಸುಮ್ಮನಾದರು.

ಹೆಚ್ಚಿನ ಪ್ರಶ್ನೆಗಳು ನಾಥೂರಾಂ ಗೋಡ್ಸೆಯನ್ನು ದೇಶಭಕ್ತ ಎಂದಿರುವ ಪ್ರಗ್ಯಾ ಠಾಕೂರ್, ಅನಂತಕುಮಾರ್ ಹೆಗಡೆ ಮತ್ತು ನಳಿನ್ ಕುಮಾರ್ ಕಟೀಲರ ಕುರಿತಾಗಿ ಬಂದವು. ಅವರಿಗೆ ಷೋಕಾಸ್ ನೋಟೀಸ್ ಕೊಡಲಾಗಿದೆ. ಪಕ್ಷದ ಶಿಸ್ತು ಸಮಿತಿ ಕ್ರಮ ಕೈಗೊಳ್ಳುತ್ತದೆ ಎಂದು ಅಮಿತ್‍ಷಾ ಹೇಳಿದರು. ಅದೇ ಸಂದರ್ಭದಲ್ಲಿ ‘ಕೇಸರಿ ಭಯೋತ್ಪಾದನೆ’ ಎಂಬ ಸುಳ್ಳು ಆರೋಪಕ್ಕೆ ಪ್ರಗ್ಯಾರನ್ನು ಅಭ್ಯರ್ಥಿಯಾಗಿಸಿ ಉತ್ತರ ಕೊಟ್ಟಿದ್ದೇವೆ ಎಂದು ಸಮರ್ಥನೆ ಸಹಾ ಮಾಡಿಕೊಂಡರು.

ಇದನ್ನು ಓದಿ: ಒಂದೇ ಚಾನೆಲ್, ಒಬ್ಬನೇ ಸಂದರ್ಶಕ. ಮೋದಿಗೆ ಕುಶಲ ಪ್ರಶ್ನೆ ರಾಹುಲ್‍ಗೆ ಕಠಿಣ ಪ್ರಶ್ನೆ. ವಿಡಿಯೋ ನೋಡಿ

ರಾಫೇಲ್ ಬಗ್ಗೆ ಬಂದ ಪ್ರಶ್ನೆಗಳಿಗೆ, ‘ಅದರಲ್ಲಿ ಯಾವ ತಪ್ಪೂ ನಡೆದಿಲ್ಲ’ ಎಂದು ಅಮಿತ್‍ಷಾ ಹೇಳಿದರು. ಕರ್ನಾಟಕವೂ ಸೇರಿದಂತೆ ದಕ್ಷಿಣ ರಾಜ್ಯಗಳು, ಒರಿಸ್ಸಾ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಎಲ್ಲಾ ಕಡೆಯೂ ಹಿಂದಿಗಿಂತ ಹೆಚ್ಚಿನ ಮತ ಹಾಗೂ ಸೀಟುಗಳನ್ನು ಗೆಲ್ಲುತ್ತೇವೆ ಎಂಬ ಆತ್ಮವಿಶ್ವಾಸವನ್ನು ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿ ಕುರಿತು ವಿಶ್ಲೇಷಿಸಿದ ಕ್ವಿಂಟ್‍ನ ಆದಿತ್ಯಾ ‘ಇದು ಪತ್ರಿಕಾಗೋಷ್ಠಿಯಲ್ಲದ ಪತ್ರಿಕಾಗೋಷ್ಠಿ’ ಎಂದರಲ್ಲದೇ, ಇದನ್ನು ಮೀಡಿಯಾ ಬ್ರೀಫಿಂಗ್ ಎನ್ನಬಹುದೇ ಹೊರತು ಪತ್ರಿಕಾಗೋಷ್ಠಿ ಎನ್ನಲಾಗದು ಎಂಬ ಅಭಿಪ್ರಾಯ ಮುಂದಿಟ್ಟರು.

ಪತ್ರಿಕಾಗೋಷ್ಠಿಯ ಕುರಿತು ರಾಹುಲ್ ಗಾಂಧಿ ವ್ಯಂಗ್ಯ ಮಾಡಿ ಕೂಡಲೇ ಟ್ವೀಟ್  ಮಾಡಿದರು. ‘ಅಭಿನಂದನೆಗಳು ಮೋದೀಜಿ. ಮುಂದಿನ ಸಾರಿ ಒಂದೆರಡು ಪ್ರಶ್ನೆಗಳಿಗೆ ಉತ್ತರ ಕೊಡಲು ಅಮಿತ್ ಷಾ ನಿಮಗೆ ಬಿಡಬಹುದು’ ಎಂದು ಟ್ವೀಟ್ ಹೇಳುತ್ತದೆ.

ಈ ಪತ್ರಿಕಾಗೋಷ್ಠಿಯ ಕುರಿತು ಬರಹಗಾರರಾದ ಭೀಮನಗೌಡರ್ ಕಾಶಿರೆಡ್ಡಿ ಅವರು ‘ಹೇಳಿಕೊಟ್ಟ ಮಾತು; ಕಟ್ಟಿಕೊಟ್ಟ ಬುತ್ತಿ ಬಹಳ ದಿನ ಉಳಿಯುವುದಿಲ್ಲ ಎಂಬಂತಾಗಿದೆ’ ಎಂದು ಹೇಳಿದರು. ಪತ್ರಕರ್ತ ಮಲ್ಲನಗೌಡರ್ ‘ಕಡೆಯ ದಿನದ ಮೊದಲ ಪ್ರೆಸ್‍ಮೀಟ್ ಸಹಾ ಪ್ರೆಸ್‍ಮೀಟ್ ಆಗದೇ ಮೀಟ್ ದಿ ಪ್ರೆಸ್ ಪೀಪಲ್ ಅಷ್ಟೇ ಆಯಿತು’ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...