Homeಮುಖಪುಟಏಕೈಕ ‘ಪತ್ರಿಕಾಗೋಷ್ಠಿ’ಯಲ್ಲಿ ಒಂದೂ ಪ್ರಶ್ನೆಯನ್ನು ತೆಗೆದುಕೊಳ್ಳದ ಪ್ರಧಾನಿ.

ಏಕೈಕ ‘ಪತ್ರಿಕಾಗೋಷ್ಠಿ’ಯಲ್ಲಿ ಒಂದೂ ಪ್ರಶ್ನೆಯನ್ನು ತೆಗೆದುಕೊಳ್ಳದ ಪ್ರಧಾನಿ.

ಇಂದಿನ ಅಮಿತ್‍ಷಾ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಿಯದ್ದು ಉಪಸ್ಥಿತಿ ಮಾತ್ರ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಪ್ರಧಾನಮಂತ್ರಿಯಾಗಿ ಅಧಿಕಾರಕ್ಕೇರಿದ ನಂತರ ಒಂದೇ ಒಂದು ಪತ್ರಿಕಾಗೋಷ್ಠಿಯನ್ನೂ ನರೇಂದ್ರ ಮೋದಿ ನಡೆಸಲಿಲ್ಲವೆಂಬ ಆರೋಪವನ್ನು ಉದ್ದಕ್ಕೂ ಎದುರಿಸಿದ್ದರು. ಅದಕ್ಕೆ ಉತ್ತರ ಕೊಡಲೆಂಬಂತೆ, ಚುನಾವಣಾ ಪ್ರಚಾರದ ಕಡೆಯ ದಿನವಾದ ಇಂದು ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಯಿತು. ಅದರಲ್ಲಿ ಸ್ವತಃ ನರೇಂದ್ರ ಮೋದಿಯವರು ಉಪಸ್ಥಿತರಿದ್ದರು. ಆದರೆ, ಅವರು ಒಂದೇ ಒಂದು ಪ್ರಶ್ನೆಯನ್ನೂ ತೆಗೆದುಕೊಳ್ಳಲಿಲ್ಲ. ಆ ಮೂಲಕ ಪತ್ರಿಕಾಗೋಷ್ಠಿಯಲ್ಲದ ಪತ್ರಿಕಾಗೋಷ್ಠಿ ಮಾಡಿದರು; ಅಥವಾ ಅಮಿತ್‍ಷಾ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು ಎಂದು ಹೇಳಬಹುದು.

ಪತ್ರಿಕಾಗೋಷ್ಠಿಯಲ್ಲಿ ಮೊದಲಿಗೆ ಬಿಜೆಪಿಯ ರಾಷ್ಟ್ರಾಧ್ಯಕ್ಷ ಅಮಿತ್‍ಷಾ ದೀರ್ಘವಾಗಿ ಮಾತಾಡಿದರು. ಅದರಲ್ಲಿ ಇಂದು ನಮ್ಮ ಜೊತೆ ಪ್ರಧಾನಿ ನರೇಂದ್ರ ಮೋದಿ ಇರುವುದು ನಮ್ಮೆಲ್ಲರಿಗೆ ಸಂತಸದ ಮತ್ತು ಆಶ್ಚರ್ಯಕರವಾದ ವಿಚಾರ ಎಂದು ಅಮಿತ್‍ಷಾ ಶುರು ಮಾಡಿದರು. ಅದಕ್ಕೆ ನರೇಂದ್ರ ಮೋದಿ ನಗುವಿನ ಮೂಲಕ ಪ್ರತಿಕ್ರಿಯೆ ವ್ಯಕ್ತಪಡಿಸಿದರು.

ಮೊದಲು ಬಿಜೆಪಿ ಪಕ್ಷ ಸಂಘಟನೆ ಹಾಗೂ ಬೂತ್ ಕಮಿಟಿಗಳ ಬಲದ ಕುರಿತು ಅಮಿತ್‍ಷಾ ವಿವರಿಸಿದರು. ಆ ನಂತರ ಐದು ವರ್ಷಗಳ ಸರ್ಕಾರದ ಸಾಧನೆಗಳು ಹಾಗೂ ಯೋಜನೆಗಳನ್ನು ಮುಂದಿಟ್ಟರು. ಸರ್ಕಾರ ರಚಿಸಿದಾಗ ಕೇವಲ 6 ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ, ಈಗ 16 ರಾಜ್ಯಗಳಲ್ಲಿದೆ ಎಂದು ಹೆಮ್ಮೆ ಪಟ್ಟರು. ಈ ರೀತಿ ಸರ್ಕಾರ ರಚಿಸಿದ್ದನ್ನು ನಾವು ‘ನರೇಂದ್ರ ಮೋದಿ ಪ್ರಯೋಗ’ ಎಂದು ಕರೆಯುತ್ತೇವೆ ಮತ್ತು ಅದು ಯಶಸ್ವಿಯಾಗಿದೆ ಎಂಬುದು ಅಮಿತ್‍ಷಾ ಅಭಿಪ್ರಾಯವಾಗಿತ್ತು. ಪ್ರತಿಯೊಂದು ಲೋಕಸಭಾ ಕ್ಷೇತ್ರದಲ್ಲಿ 3,000 ಪೂರ್ಣಾವಧಿ ಕಾರ್ಯಕರ್ತರು 2 ವರ್ಷಗಳ ಕಾಲ ಕೆಲಸ ಮಾಡಿದ್ದು, ಸರ್ಕಾರದ ಯೋಜನೆಗಳನ್ನು ಜನರಿಗೆ ತಿಳಿಸುವಲ್ಲಿ ಯಶಸ್ವಿಯಾಗಿದ್ದೇವೆ. ಹಾಗಾಗಿ ನಮಗೆ ಪೂರ್ಣಬಹುಮತದಿಂದ ಗೆಲ್ಲುವ ವಿಶ್ವಾಸವಿದೆ ಎಂದು ನುಡಿದರು.

ಇದರ ನಂತರ ಅಮಿತ್‍ಷಾರಿಗಿಂಥ ಕಡಿಮೆ ಸಮಯ ನರೇಂದ್ರ ಮೋದಿ ಮಾತಾಡಿದರು. ನಿರ್ದಿಷ್ಟವಾದ ಅಂಶಗಳಿಗೆ ಹೋಗದೇ, ಜನರಲ್ ಆದ ಮಾತುಗಳನ್ನು ಆಡಿದರು. ಆದರೆ ಪ್ರಜಾತಂತ್ರದ ವಿಶೇಷವನ್ನು ಹೊಗಳಿದರು. ಭಾರತದ ಪ್ರಜಾತಂತ್ರವನ್ನು ಇಡೀ ಪ್ರಪಂಚಕ್ಕೆ ನಾವು ಎತ್ತಿ ತೋರಿಸಬಹುದಾದ ಹೆಮ್ಮೆಯ ಸಂಗತಿ ಎಂದರು. 2014ರಲ್ಲಿ ಅಧಿಕಾರಕ್ಕೆ ಬಂದ ಸಂದರ್ಭವನ್ನು ನೆನೆಯುತ್ತಾ, ಆಗ ಬೆಟ್ಟಿಂಗ್ ಕಟ್ಟಿದ್ದವರೆಲ್ಲರೂ ಸೋಲುವಷ್ಟು ಪ್ರಮಾಣದಲ್ಲಿ ನಮಗೆ ಸೀಟುಗಳು ಬಂದಿದ್ದವು ಎಂದು ತಮಾಷೆ ಮಾಡಿದರು.

ನಂತರ ಪ್ರಶ್ನೆಗಳನ್ನು ಎದುರಿಸಿದ್ದು ಅಮಿತ್‍ಷಾ ಮಾತ್ರ. ಬಿಜೆಪಿಗೆ ಬಹುಮತ ಬರದಿದ್ದರೆ ಏನು ಮಾಡುತ್ತೀರಿ ಎಂಬ ಪ್ರಶ್ನೆ ಪದೇ ಪದೇ ಬಂದಿತು. ‘ನಮಗೆ 300ಕ್ಕೂ ಹೆಚ್ಚು ಸೀಟುಗಳು ಬರುತ್ತವೆ, ಆದರೆ ಸರ್ಕಾರ ಎನ್‍ಡಿಎದಾಗಿರುತ್ತದೆ’ ಎಂದು ಅವರು ಪ್ರತಿ ಬಾರಿಯೂ ಹೇಳಿದರು. ಪಶ್ಚಿಮ ಬಂಗಾಳದಲ್ಲಿ ನಿಮ್ಮ ಪಕ್ಷದಿಂದ ಹಿಂಸಾಚಾರ ನಡೆದಿದೆ ಎಂದಾಗ ಅಮಿತ್‍ಷಾ ಕಿಡಿಯಾದರು. ನಮ್ಮ 80 ಕಾರ್ಯಕರ್ತರು ಅಲ್ಲಿ ಕೊಲೆಯಾಗಿದ್ದಾರೆ. ದೇಶಾದ್ಯಂತ ನಾವು ಚುನಾವಣೆ ನಡೆಸಿದ್ದೇವೆ, ಎಲ್ಲೂ ಏಕೆ ಹೀಗೆ ಆಗಿಲ್ಲ? ಎಂದು ಪತ್ರಕರ್ತರನ್ನೇ ಪ್ರಶ್ನಿಸಿದರು.

ಇದನ್ನು ಓದಿ: ನ್ಯೂಸ್ ನೇಷನ್ ಸಂದರ್ಶನದಲ್ಲಿ ಮೋದಿಗೆ ಪ್ರಶ್ನೆಗಳು ಮೊದಲೇ ಗೊತ್ತಿತ್ತಾ?

ಈ ಮಧ್ಯೆ ನರೇಂದ್ರ ಮೋದಿಯವರನ್ನು ಉದ್ದೇಶಿಸಿ ಎರಡೆರಡು ಬಾರಿ ಪತ್ರಕರ್ತರು ಪ್ರಶ್ನೆ ಕೇಳಲು ಯತ್ನಿಸಿದರು. ಆದರೆ, ಅಮಿತ್‍ಷಾರತ್ತ ಕೈ ತೋರಿಸಿದರು. ಒಮ್ಮೆ ‘ನಾನು ಪಕ್ಷದ ಶಿಸ್ತಿನ ಸಿಪಾಯಿ, ನಮ್ಮಲ್ಲಿ ಎಲ್ಲವೂ ಅಧ್ಯಕ್ಷರೇ. (ಅವರೇ ಉತ್ತರ ಕೊಡುತ್ತಾರೆ)’ ಎಂದರು. ಅಲ್ಲಿಗೆ ಮೋದಿಯವರು ಯಾವ ಪ್ರಶ್ನೆಗೂ ಉತ್ತರಿಸುವುದಿಲ್ಲ ಎಂಬುದು ಗೊತ್ತಾಗಿ ಪತ್ರಕರ್ತರು ಸುಮ್ಮನಾದರು.

ಹೆಚ್ಚಿನ ಪ್ರಶ್ನೆಗಳು ನಾಥೂರಾಂ ಗೋಡ್ಸೆಯನ್ನು ದೇಶಭಕ್ತ ಎಂದಿರುವ ಪ್ರಗ್ಯಾ ಠಾಕೂರ್, ಅನಂತಕುಮಾರ್ ಹೆಗಡೆ ಮತ್ತು ನಳಿನ್ ಕುಮಾರ್ ಕಟೀಲರ ಕುರಿತಾಗಿ ಬಂದವು. ಅವರಿಗೆ ಷೋಕಾಸ್ ನೋಟೀಸ್ ಕೊಡಲಾಗಿದೆ. ಪಕ್ಷದ ಶಿಸ್ತು ಸಮಿತಿ ಕ್ರಮ ಕೈಗೊಳ್ಳುತ್ತದೆ ಎಂದು ಅಮಿತ್‍ಷಾ ಹೇಳಿದರು. ಅದೇ ಸಂದರ್ಭದಲ್ಲಿ ‘ಕೇಸರಿ ಭಯೋತ್ಪಾದನೆ’ ಎಂಬ ಸುಳ್ಳು ಆರೋಪಕ್ಕೆ ಪ್ರಗ್ಯಾರನ್ನು ಅಭ್ಯರ್ಥಿಯಾಗಿಸಿ ಉತ್ತರ ಕೊಟ್ಟಿದ್ದೇವೆ ಎಂದು ಸಮರ್ಥನೆ ಸಹಾ ಮಾಡಿಕೊಂಡರು.

ಇದನ್ನು ಓದಿ: ಒಂದೇ ಚಾನೆಲ್, ಒಬ್ಬನೇ ಸಂದರ್ಶಕ. ಮೋದಿಗೆ ಕುಶಲ ಪ್ರಶ್ನೆ ರಾಹುಲ್‍ಗೆ ಕಠಿಣ ಪ್ರಶ್ನೆ. ವಿಡಿಯೋ ನೋಡಿ

ರಾಫೇಲ್ ಬಗ್ಗೆ ಬಂದ ಪ್ರಶ್ನೆಗಳಿಗೆ, ‘ಅದರಲ್ಲಿ ಯಾವ ತಪ್ಪೂ ನಡೆದಿಲ್ಲ’ ಎಂದು ಅಮಿತ್‍ಷಾ ಹೇಳಿದರು. ಕರ್ನಾಟಕವೂ ಸೇರಿದಂತೆ ದಕ್ಷಿಣ ರಾಜ್ಯಗಳು, ಒರಿಸ್ಸಾ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಎಲ್ಲಾ ಕಡೆಯೂ ಹಿಂದಿಗಿಂತ ಹೆಚ್ಚಿನ ಮತ ಹಾಗೂ ಸೀಟುಗಳನ್ನು ಗೆಲ್ಲುತ್ತೇವೆ ಎಂಬ ಆತ್ಮವಿಶ್ವಾಸವನ್ನು ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿ ಕುರಿತು ವಿಶ್ಲೇಷಿಸಿದ ಕ್ವಿಂಟ್‍ನ ಆದಿತ್ಯಾ ‘ಇದು ಪತ್ರಿಕಾಗೋಷ್ಠಿಯಲ್ಲದ ಪತ್ರಿಕಾಗೋಷ್ಠಿ’ ಎಂದರಲ್ಲದೇ, ಇದನ್ನು ಮೀಡಿಯಾ ಬ್ರೀಫಿಂಗ್ ಎನ್ನಬಹುದೇ ಹೊರತು ಪತ್ರಿಕಾಗೋಷ್ಠಿ ಎನ್ನಲಾಗದು ಎಂಬ ಅಭಿಪ್ರಾಯ ಮುಂದಿಟ್ಟರು.

ಪತ್ರಿಕಾಗೋಷ್ಠಿಯ ಕುರಿತು ರಾಹುಲ್ ಗಾಂಧಿ ವ್ಯಂಗ್ಯ ಮಾಡಿ ಕೂಡಲೇ ಟ್ವೀಟ್  ಮಾಡಿದರು. ‘ಅಭಿನಂದನೆಗಳು ಮೋದೀಜಿ. ಮುಂದಿನ ಸಾರಿ ಒಂದೆರಡು ಪ್ರಶ್ನೆಗಳಿಗೆ ಉತ್ತರ ಕೊಡಲು ಅಮಿತ್ ಷಾ ನಿಮಗೆ ಬಿಡಬಹುದು’ ಎಂದು ಟ್ವೀಟ್ ಹೇಳುತ್ತದೆ.

ಈ ಪತ್ರಿಕಾಗೋಷ್ಠಿಯ ಕುರಿತು ಬರಹಗಾರರಾದ ಭೀಮನಗೌಡರ್ ಕಾಶಿರೆಡ್ಡಿ ಅವರು ‘ಹೇಳಿಕೊಟ್ಟ ಮಾತು; ಕಟ್ಟಿಕೊಟ್ಟ ಬುತ್ತಿ ಬಹಳ ದಿನ ಉಳಿಯುವುದಿಲ್ಲ ಎಂಬಂತಾಗಿದೆ’ ಎಂದು ಹೇಳಿದರು. ಪತ್ರಕರ್ತ ಮಲ್ಲನಗೌಡರ್ ‘ಕಡೆಯ ದಿನದ ಮೊದಲ ಪ್ರೆಸ್‍ಮೀಟ್ ಸಹಾ ಪ್ರೆಸ್‍ಮೀಟ್ ಆಗದೇ ಮೀಟ್ ದಿ ಪ್ರೆಸ್ ಪೀಪಲ್ ಅಷ್ಟೇ ಆಯಿತು’ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...