Homeಮುಖಪುಟಮೋದಿಯ ಗುಜರಾತ್ ಮಾಡಲ್: MGNREGA ಸ್ಕೀಂ ಅಡಿಯಲ್ಲಿ ಸತ್ತ ವ್ಯಕ್ತಿಗೂ ಸಂಬಳ ಬಿಡುಗಡೆ!: ಜಿಗ್ನೇಶ್ ಮೇವಾನಿ

ಮೋದಿಯ ಗುಜರಾತ್ ಮಾಡಲ್: MGNREGA ಸ್ಕೀಂ ಅಡಿಯಲ್ಲಿ ಸತ್ತ ವ್ಯಕ್ತಿಗೂ ಸಂಬಳ ಬಿಡುಗಡೆ!: ಜಿಗ್ನೇಶ್ ಮೇವಾನಿ

"ಲಾಕ್ ಡೌನ್ ಸಮಯದಲ್ಲಿಯೂ ಸಹ, ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಈ ಯೋಜನೆಯಡಿ ಸತ್ತ ವ್ಯಕ್ತಿಗೆ ಕೆಲಸವನ್ನು ನೀಡಿದೆ ಎಂದರೆ, ಭ್ರಷ್ಟಾಚಾರದ ಮಟ್ಟವನ್ನು ನೀವೇ ಊಹಿಸಿ" ಎಂದು ಜಿಗ್ನೇಶ್ ಮೇವಾನಿ ಹೇಳಿದರು.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ತವರು ರಾಜ್ಯ ಗುಜರಾತ್‌ನಲ್ಲಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ಅಡಿಯಲ್ಲಿ ಸತ್ತ ವ್ಯಕ್ತಿಯ ಹೆಸರಿನಲ್ಲಿ ವೇತನ ಬಿಡುಗಡೆಯಾಗಿರುವ ದೊಡ್ಡ ಹಗರಣ ಮುನ್ನೆಲೆಗೆ ಬಂದಿದೆ.

MGNREGA ದ ಇತ್ತೀಚಿನ ದಾಖಲೆಗಳ ಪ್ರಕಾರ, ಹಲವು ದಿನಗಳ ಹಿಂದೆ ಸಾವನ್ನಪ್ಪಿರುವ ಕಾರ್ಮಿಕನ ಹೆಸರಿನಲ್ಲಿ, ಸೈನಿಕನ ಹೆಸರಿನಲ್ಲಿ, ಕೆಲವು ಶಿಕ್ಷಕರ ಹೆಸರಿನಲ್ಲಿ ಸುಳ್ಳು ದಾಖಲೆ ಸೃಷ್ಟಿಸಿ, ಸಂಬಳ ಪಡೆಯಲಾಗಿದೆ ಎಂಬುದು ತಿಳಿದುಬಂದಿದೆ.

“ದಾಖಲೆಗಳಪ್ರಕಾರ, ಈ ವ್ಯಕ್ತಿಗಳು ಏಪ್ರಿಲ್ 2020 ರವರೆಗೆ ಸಂಬಳವನ್ನು ಪಡೆಯುತ್ತಿದ್ದರು. ಆದರೆ ಅವರು ಬಹಳ ಹಿಂದೆಯೇ ನಿಧನರಾಗಿದ್ದಾರೆ. ಲಾಕ್ ಡೌನ್ ಸಮಯದಲ್ಲಿಯೂ ಸಹ, ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಈ ಯೋಜನೆಯಡಿ ಸತ್ತ ವ್ಯಕ್ತಿಗೆ ಕೆಲಸವನ್ನು ನೀಡಿಲಾಗಿದೆ ಎಂದರೆ ಭ್ರಷ್ಟಾಚಾರದ ಮಟ್ಟವನ್ನು ನೀವೇ ಊಹಿಸಿ” ಎಂದು ಹಗರಣವನ್ನು ಬಹಿರಂಗಪಡಿಸಿದ ವಡ್ನಗರ್ ಶಾಸಕ ಜಿಗ್ನೇಶ್ ಮೇವಾನಿ ಹೇಳಿದ್ದಾರೆ.

ಎರಡು ದಿನಗಳ ಹಿಂದೆ ಅವರು ಗುಜರಾತ್ ಕಾಂಗ್ರೆಸ್ ನ ಕಾರ್ಯಾಧ್ಯಕ್ಷ ಹಾರ್ದಿಕ್ ಪಟೇಲ್ ಅವರೊಂದಿಗೆ ಜಿಗ್ನೇಶ್ ಮೇವಾನಿ, ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದರು.

ಇದನ್ನೂ ಓದಿ: ಉದ್ಯೋಗ ಖಾತರಿ ಕೆಲಸ ಹುಡುಕುತ್ತಿರುವ ಪದವೀಧರರ ಕತೆಗಳು: ಉತ್ತರ ಪ್ರದೇಶದಲ್ಲಿ ನಿರುದ್ಯೋಗದ ಸ್ಥಿತಿ ಗಂಭೀರ

ಗುಜರಾತ್‌ನ ಬನಸ್ಕಂತ ಜಿಲ್ಲೆಯ ಹಳ್ಳಿಯಲ್ಲಿ ಬಹು ಕೋಟಿ ಹಗರಣ ಬೆಳಕಿಗೆ ಬಂದಿದ್ದು, MGNREGA ಯೋಜನೆಯಡಿ ಹಣ ವರ್ಗಾವಣೆಯ ಅರಿವಿಲ್ಲದ ಸುಮಾರು 500 ಗ್ರಾಮಸ್ಥರ ಹೆಸರಿನಲ್ಲಿ ಬ್ಯಾಂಕ್ ಖಾತೆಗಳನ್ನು ತೆರೆಯಲಾಗಿದೆ ಎಂದು ಜಿಗ್ನೇಶ್ ಮೇವಾನಿ ಆರೋಪಿಸಿದ್ದರು.

ಇದೇ ರೀತಿಯ ಮತ್ತೊಂದು ಹಗರಣವು ಬೆಳಕಿಗೆ ಬಂದಿದ್ದು, ಬಲೂಂದ್ರ ಗ್ರಾಮದಲ್ಲಿ ಸುಮಾರು 500 ಜನರು MGNREGA ದೈನಂದಿನ ವೇತನದ ಕೆಲಸಕ್ಕೆ ಹೋಗಿಲ್ಲ. ಆದರೂ ಅವರು ಕೆಲಸ ಮಾಡುತ್ತಿದ್ದಾರೆಂದು ತೋರಿಸಲಾಗಿದೆ. ಅವರ ಜಾಬ್ ಕಾರ್ಡ್‌ಗಳನ್ನು ತಯಾರಿಸಿ, ಅವರ ಹೆಸರಿನಲ್ಲಿ ಬ್ಯಾಂಕ್ ಖಾತೆಗಳನ್ನು ತೆರೆದು ಹಣ ಹೊಡೆದಿದ್ದಾರೆ ಎಂದು ಮೇವಾನಿ ತಿಳಿಸಿದ್ದರು.

“ಇದು ರಾಜ್ಯದಾದ್ಯಂತ ನಡೆಯುತ್ತಿರುವ ಹಗರಣವಾಗಿದ್ದು, ಸತ್ತ ಜನರ ಹೆಸರಿನಲ್ಲಿ ಸುಳ್ಳು ಜಾಬ್ ಕಾರ್ಡ್‌ಗಳನ್ನು ತಯಾರಿಸಿ, ಬಡ ಜನರಿಗೆ ಕಳುಹಿಸಿದ ಹಣವನ್ನು ಬಿಜೆಪಿ ಸರ್ಕಾರದ ಕಣ್ಗಾವಲಿನಲ್ಲಿರುವ ಸರ್ಕಾರಿ ಅಧಿಕಾರಿಗಳು ಕದ್ದಿದ್ದಾರೆ. ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಇವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು” ಎಂದು ಮೇವಾನಿ ಆಗ್ರಹಿಸಿದರು.

ಪೊಲೀಸ್ ನಿಷ್ಕ್ರಿಯತೆಯ ಬಗ್ಗೆ ತಮ್ಮ ದುಃಖವನ್ನು ವ್ಯಕ್ತಪಡಿಸಿದ ಮೇವಾನಿ, ಹಗರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದ್ದರೂ, ಇಲ್ಲಿಯವರೆಗೆ ಯಾರನ್ನೂ ಬಂಧಿಸಲಾಗಿಲ್ಲ ಎಂದು ದೂರವಾಣಿಯಲ್ಲಿ ನ್ಯಾಷನಲ್ ಹೆರಾಲ್ಡ್ ಗೆ ತಿಳಿಸಿದ್ದಾರೆ.

“ಇದು ಕೇವಲ ಹಣದ ವಿಷಯ ಅಲ್ಲ. ಆದರೆ, ಸಂವಿಧಾನ ನಮಗೆ ಒದಗಿಸಿರುವ ಜೀವನೋಪಾಯದ ಹಕ್ಕುಗಳನ್ನು ದೋಚುತ್ತಿರುವ ಭ್ರಷ್ಟ ಅಧಿಕಾರಿಗಳು ಮತ್ತು ರಾಜಕೀಯ ನಾಯಕರು, ಬಿಜೆಪಿಯ ಉನ್ನತ ನಾಯಕರ ನೇರ ಪ್ರೋತ್ಸಾಹವನ್ನು ಪಡೆಯುತ್ತಿದ್ದಾರೆ” ಎಂದು ಮೇವಾನಿ ಹೇಳಿದರು.


ಇದನ್ನೂ ಓದಿ: MGNREGA ಯೋಜನೆಯಲ್ಲಿ ಬಹು ಕೋಟಿ ಹಗರಣ: ಜಿಗ್ನೇಶ್ ಮೇವಾನಿ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...