Homeಮುಖಪುಟಮೋದಿಯವರ ಶೈಕ್ಷಣಿಕ ಕೊರತೆ ಭಾರತಕ್ಕೆ ಅಪಾಯಕಾರಿ: ಸಿಸೋಡಿಯಾ ಬಹಿರಂಗ ಪತ್ರ

ಮೋದಿಯವರ ಶೈಕ್ಷಣಿಕ ಕೊರತೆ ಭಾರತಕ್ಕೆ ಅಪಾಯಕಾರಿ: ಸಿಸೋಡಿಯಾ ಬಹಿರಂಗ ಪತ್ರ

- Advertisement -
- Advertisement -

ಜೈಲಿನಲ್ಲಿರುವ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಅವರು ಶುಕ್ರವಾರ ಬರೆದಿರುವ ಬಹಿರಂಗ ಪತ್ರದಲ್ಲಿ “ಪ್ರಧಾನಿ ನರೇಂದ್ರ ಮೋದಿಯವರ ಶೈಕ್ಷಣಿಕ ಅರ್ಹತೆಯ ಕೊರತೆ ಭಾರತಕ್ಕೆ ಅಪಾಯಕಾರಿ” ಎಂದಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಟ್ವಿಟರ್‌ನಲ್ಲಿ ಪತ್ರವನ್ನು ಹಂಚಿಕೊಂಡಿದ್ದು, “ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದೇಶಾದ್ಯಂತ 60,000 ಸರ್ಕಾರಿ ಶಾಲೆಗಳನ್ನು ಮುಚ್ಚಿದೆ” ಎಂದು ಮನೀಶ್‌ ಸಿಸೋಡಿಯಾ ಆರೋಪಿಸಿದ್ದಾರೆ.

“[ನರೇಂದ್ರ] ಮೋದಿಯವರಿಗೆ ವಿಜ್ಞಾನ ಅರ್ಥವಾಗುತ್ತಿಲ್ಲ…” ಎಂದು ಸಿಸೋಡಿಯಾ ಆರೋಪಿಸಿದ್ದಾರೆ. “ಅವರಿಗೆ ಶಿಕ್ಷಣದ ಮಹತ್ವ ಅರ್ಥವಾಗುತ್ತಿಲ್ಲ. ಭಾರತದ ಪ್ರಗತಿಗೆ ಒಬ್ಬ ವಿದ್ಯಾವಂತ ಪ್ರಧಾನ ಮಂತ್ರಿ ಇರುವುದು ಅವಶ್ಯ” ಎಂದಿದ್ದಾರೆ.

ದೆಹಲಿ ಕ್ಯಾಬಿನೆಟ್‌ನಲ್ಲಿ ಶಿಕ್ಷಣ ಸಚಿವರಾಗಿದ್ದ ಸಿಸೋಡಿಯಾ ಅವರನ್ನು ಅಕ್ರಮ ಮದ್ಯ ನೀತಿಯಡಿ ಭ್ರಷ್ಟಾಚಾರ ಎಸಗಿದ ಆರೋಪದ ಮೇಲೆ  ಫೆಬ್ರವರಿ 26 ರಂದು ಕೇಂದ್ರೀಯ ತನಿಖಾ ದಳವು ಬಂಧಿಸಿತು. ಅವರು ಬಂಧನದ ನಂತರ ಸಚಿವ ಸಂಪುಟವನ್ನು ತೊರೆದ್ದಾರೆ ಮತ್ತು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಮೋದಿ ಅವರ ಶೈಕ್ಷಣಿಕ ಅರ್ಹತೆಗಳ ಬಗ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ವಿವರಗಳನ್ನು ನೀಡುವಂತೆ ಗುಜರಾತ್ ವಿಶ್ವವಿದ್ಯಾಲಯಕ್ಕೆ ನಿರ್ದೇಶಿಸಿದ 2016 ರ ಆದೇಶವನ್ನು ಗುಜರಾತ್ ಹೈಕೋರ್ಟ್ ರದ್ದುಗೊಳಿಸಿದ ಒಂದು ವಾರದ ನಂತರ ಮನೀಶ್ ಸಿಸೋಡಿಯಾ ಅವರ ಪತ್ರ ಬಂದಿದೆ. ಕೇಜ್ರಿವಾಲ್‌ಗೆ 25,000 ರೂಪಾಯಿ ದಂಡವನ್ನೂ ನ್ಯಾಯಾಲಯ ವಿಧಿಸಿದೆ.

1978 ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ಕಲಾ ಪದವಿ ಮತ್ತು 1983 ರಲ್ಲಿ ಗುಜರಾತ್ ವಿಶ್ವವಿದ್ಯಾನಿಲಯದಿಂದ ಮಾಸ್ಟರ್ ಆಫ್ ಆರ್ಟ್ಸ್ ಪದವಿಯನ್ನು ಮೋದಿ ಪಡೆದಿದ್ದಾರೆ ಎಂದು ಬಿಜೆಪಿ ಹೇಳುತ್ತದೆ. ಆದರೆ, ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷವು ಈ ಪದವಿಗಳು ನಕಲಿ ಎಂದು ಆರೋಪಿಸಿದೆ.

ಸಿಸೋಡಿಯಾ ತಮ್ಮ ಪತ್ರದಲ್ಲಿ ಮೋದಿಯವರ ಕೆಲವು ಮಾತುಗಳನ್ನು ಉಲ್ಲೇಖಿಸಿ ಟೀಕೆಗಳನ್ನು ಮಾಡಿದ್ದಾರೆ.

“ಜಗತ್ತು ಕೃತಕ ಬುದ್ಧಿಮತ್ತೆಯ ಬಗ್ಗೆ ಮಾತನಾಡುತ್ತಿದೆ … ಒಳಚರಂಡಿಯಲ್ಲಿ ಹರಿಯುವ ಕೊಳಕು ಅನಿಲವನ್ನು ಚಹಾ ಅಥವಾ ಆಹಾರವನ್ನು ತಯಾರಿಸಲು ಬಳಸಬಹುದು ಎಂದು ಪ್ರಧಾನಿ ಹೇಳುವುದನ್ನು ಕೇಳಿದಾಗ, ನನ್ನ ಹೃದಯ ಮರುಗುತ್ತದೆ” ಎಂದು ಸಿಸೋಡಿಯಾ ಹೇಳಿದರು. “ಇವರು ಪ್ರಪಂಚದಾದ್ಯಂತ ಹಾಸ್ಯದ ವಿಷಯವಾಗಿದ್ದಾರೆ. ಮೋಡಗಳ ಹಿಂದೆ ಇರುವ ವಿಮಾನವನ್ನು ರಾಡಾರ್‌ಗಳು ಪತ್ತೆ ಹಚ್ಚುವುದಿಲ್ಲ ಎಂದು ಇವರು ಹೇಳಿದಾಗ ಶಾಲಾ ಕಾಲೇಜಿನ ಮಕ್ಕಳು ಇವರನ್ನು ಗೇಲಿ ಮಾಡುತ್ತಾರೆ” ಎಂದಿದ್ದಾರೆ.

2018ರಲ್ಲಿ ಮೋದಿಯವರು ನೀಡಿದ ಹೇಳಿಕೆಯನ್ನು ಸಿಸೋಡಿಯಾ ಉಲ್ಲೇಖಿಸಿದ್ದಾರೆ. ಚಹಾ ಮಾರಾಟಗಾರನೊಬ್ಬ ಗಟರ್‌ನಿಂದ ಹೊರಹೊಮ್ಮುವ ಅನಿಲವನ್ನು ಇಂಧನವಾಗಿ ಬಳಸಿರುವ ಬಗ್ಗೆ ಓದಿದ್ದೇನೆ ಎಂದು ಹೇಳಿದ್ದರು. 2019ರ ಸಂದರ್ಶನವೊಂದರಲ್ಲಿ ಬಾಲಾಕೋಟ್ ವೈಮಾನಿಕ ದಾಳಿಯ ಕುರಿತು ಮಾತನಾಡಿದ್ದ ಮೋದಿಯವರು, “ನಮ್ಮ ವಿಮಾನಗಳು ರಾಡಾರ್‌ಗಳಿಂದ ತಪ್ಪಿಸಿಕೊಳ್ಳಲು ಮೋಡಗಳು ಸಹಾಯ ಮಾಡುತ್ತವೆ” ಎಂದು ಹೇಳಿದ್ದರು.

ಇದನ್ನೂ ಓದಿರಿ: ಚುನಾವಣೆ ಎದುರಿಸಲು ಬಿಜೆಪಿ ರೌಡಿಗಳ ಮೊರೆ ಹೋಗುತ್ತಿದೆ: ಕಾಂಗ್ರೆಸ್ ಆರೋಪ

ಇದರ ನಡುವೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ, “ಪ್ರಧಾನಿಯವರ ಶೈಕ್ಷಣಿಕ ಅರ್ಹತೆಗಳನ್ನು ಪ್ರಶ್ನಿಸಿ ಸಿಸೋಡಿಯಾ ಅವರು ಬರೆದಿರುವ ಪತ್ರ ವಿಷಾದನೀಯ” ಎಂದಿದೆ.

ದೆಹಲಿ ಬಿಜೆಪಿ ವಕ್ತಾರ ಹರೀಶ್ ಖುರಾನಾ ಪ್ರತಿಕ್ರಿಯಿಸಿ, “ನಾನು ಸಿಸೋಡಿಯಾ ಅವರಿಗೆ ಹೇಳಲು ಬಯಸುತ್ತೇನೆ, ಒಬ್ಬ ವ್ಯಕ್ತಿಯನ್ನು ಅವರ ಪದವಿಗಳ ಆಧಾರದ ಮೇಲೆ ನಿರ್ಣಯಿಸಲಾಗುವುದಿಲ್ಲ, ಆದರೆ ಅವರ ಪ್ರಬುದ್ಧತೆ, ಬುದ್ಧಿವಂತಿಕೆ, ಅವರ ಆಲೋಚನೆ ಮತ್ತು ಸಮಸ್ಯೆಗಳ ಬಗ್ಗೆ ಅವರ ತಿಳಿವಳಿಕೆ ಇದೆಲ್ಲದರ ಮೇಲೆ ನಿರ್ಧರಿಸಲಾಗುತ್ತದೆ” ಎಂದು  ಹೇಳಿದ್ದಾರೆ. ದಿ ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ ಖುರಾನಾ ಹೇಳಿದರು.

ಖುರಾನಾ ಅವರು ಸಿಸೋಡಿಯಾ ಅವರ ಶೈಕ್ಷಣಿಕ ಅರ್ಹತೆಗಳನ್ನು ಸಹ ಪ್ರಶ್ನಿಸಿದ್ದಾರೆ.

“ನೀವು ಕೇವಲ ಡಿಪ್ಲೊಮಾ-ಹೋಲ್ಡರ್ ಆಗಿದ್ದೀರಿ ಮತ್ತು ನೀವು ಎಂಎ ಪದವಿಯನ್ನು ಪ್ರಶ್ನಿಸುತ್ತಿದ್ದೀರಿ. ನಿಮಗೆ ಸಮಸ್ಯೆಗಳ ಬಗ್ಗೆ ಬುದ್ಧಿವಂತಿಕೆ ಅಥವಾ ಅಗತ್ಯ ತಿಳುವಳಿಕೆ ಇಲ್ಲ. ದೇಶವು ಹೆಮ್ಮೆಪಡುವ ಮತ್ತು ಜಗತ್ತೇ ಭಾರತವನ್ನು ಗೌರವಿಸಲು ಕಾರಣವಾಗಿರುವ ಪ್ರಧಾನಿಯನ್ನು ಪ್ರಶ್ನಿಸುತ್ತಿದ್ದೀರಾ? ಇದು ನನಗೆ ಆಶ್ಚರ್ಯ ತಂದಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. If Modi really uneducated thats fine but now a days Educated are becoming more corrupt and no mercy and no ethics and no value for relationship all frauds created by educated only but uneducated are fare better they have ethics in their life and they give value to relationships

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...