Homeಮುಖಪುಟಮೋದಿಯವರ ಶೈಕ್ಷಣಿಕ ಕೊರತೆ ಭಾರತಕ್ಕೆ ಅಪಾಯಕಾರಿ: ಸಿಸೋಡಿಯಾ ಬಹಿರಂಗ ಪತ್ರ

ಮೋದಿಯವರ ಶೈಕ್ಷಣಿಕ ಕೊರತೆ ಭಾರತಕ್ಕೆ ಅಪಾಯಕಾರಿ: ಸಿಸೋಡಿಯಾ ಬಹಿರಂಗ ಪತ್ರ

- Advertisement -
- Advertisement -

ಜೈಲಿನಲ್ಲಿರುವ ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಅವರು ಶುಕ್ರವಾರ ಬರೆದಿರುವ ಬಹಿರಂಗ ಪತ್ರದಲ್ಲಿ “ಪ್ರಧಾನಿ ನರೇಂದ್ರ ಮೋದಿಯವರ ಶೈಕ್ಷಣಿಕ ಅರ್ಹತೆಯ ಕೊರತೆ ಭಾರತಕ್ಕೆ ಅಪಾಯಕಾರಿ” ಎಂದಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಟ್ವಿಟರ್‌ನಲ್ಲಿ ಪತ್ರವನ್ನು ಹಂಚಿಕೊಂಡಿದ್ದು, “ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದೇಶಾದ್ಯಂತ 60,000 ಸರ್ಕಾರಿ ಶಾಲೆಗಳನ್ನು ಮುಚ್ಚಿದೆ” ಎಂದು ಮನೀಶ್‌ ಸಿಸೋಡಿಯಾ ಆರೋಪಿಸಿದ್ದಾರೆ.

“[ನರೇಂದ್ರ] ಮೋದಿಯವರಿಗೆ ವಿಜ್ಞಾನ ಅರ್ಥವಾಗುತ್ತಿಲ್ಲ…” ಎಂದು ಸಿಸೋಡಿಯಾ ಆರೋಪಿಸಿದ್ದಾರೆ. “ಅವರಿಗೆ ಶಿಕ್ಷಣದ ಮಹತ್ವ ಅರ್ಥವಾಗುತ್ತಿಲ್ಲ. ಭಾರತದ ಪ್ರಗತಿಗೆ ಒಬ್ಬ ವಿದ್ಯಾವಂತ ಪ್ರಧಾನ ಮಂತ್ರಿ ಇರುವುದು ಅವಶ್ಯ” ಎಂದಿದ್ದಾರೆ.

ದೆಹಲಿ ಕ್ಯಾಬಿನೆಟ್‌ನಲ್ಲಿ ಶಿಕ್ಷಣ ಸಚಿವರಾಗಿದ್ದ ಸಿಸೋಡಿಯಾ ಅವರನ್ನು ಅಕ್ರಮ ಮದ್ಯ ನೀತಿಯಡಿ ಭ್ರಷ್ಟಾಚಾರ ಎಸಗಿದ ಆರೋಪದ ಮೇಲೆ  ಫೆಬ್ರವರಿ 26 ರಂದು ಕೇಂದ್ರೀಯ ತನಿಖಾ ದಳವು ಬಂಧಿಸಿತು. ಅವರು ಬಂಧನದ ನಂತರ ಸಚಿವ ಸಂಪುಟವನ್ನು ತೊರೆದ್ದಾರೆ ಮತ್ತು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಮೋದಿ ಅವರ ಶೈಕ್ಷಣಿಕ ಅರ್ಹತೆಗಳ ಬಗ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ವಿವರಗಳನ್ನು ನೀಡುವಂತೆ ಗುಜರಾತ್ ವಿಶ್ವವಿದ್ಯಾಲಯಕ್ಕೆ ನಿರ್ದೇಶಿಸಿದ 2016 ರ ಆದೇಶವನ್ನು ಗುಜರಾತ್ ಹೈಕೋರ್ಟ್ ರದ್ದುಗೊಳಿಸಿದ ಒಂದು ವಾರದ ನಂತರ ಮನೀಶ್ ಸಿಸೋಡಿಯಾ ಅವರ ಪತ್ರ ಬಂದಿದೆ. ಕೇಜ್ರಿವಾಲ್‌ಗೆ 25,000 ರೂಪಾಯಿ ದಂಡವನ್ನೂ ನ್ಯಾಯಾಲಯ ವಿಧಿಸಿದೆ.

1978 ರಲ್ಲಿ ದೆಹಲಿ ವಿಶ್ವವಿದ್ಯಾಲಯದಿಂದ ಕಲಾ ಪದವಿ ಮತ್ತು 1983 ರಲ್ಲಿ ಗುಜರಾತ್ ವಿಶ್ವವಿದ್ಯಾನಿಲಯದಿಂದ ಮಾಸ್ಟರ್ ಆಫ್ ಆರ್ಟ್ಸ್ ಪದವಿಯನ್ನು ಮೋದಿ ಪಡೆದಿದ್ದಾರೆ ಎಂದು ಬಿಜೆಪಿ ಹೇಳುತ್ತದೆ. ಆದರೆ, ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷವು ಈ ಪದವಿಗಳು ನಕಲಿ ಎಂದು ಆರೋಪಿಸಿದೆ.

ಸಿಸೋಡಿಯಾ ತಮ್ಮ ಪತ್ರದಲ್ಲಿ ಮೋದಿಯವರ ಕೆಲವು ಮಾತುಗಳನ್ನು ಉಲ್ಲೇಖಿಸಿ ಟೀಕೆಗಳನ್ನು ಮಾಡಿದ್ದಾರೆ.

“ಜಗತ್ತು ಕೃತಕ ಬುದ್ಧಿಮತ್ತೆಯ ಬಗ್ಗೆ ಮಾತನಾಡುತ್ತಿದೆ … ಒಳಚರಂಡಿಯಲ್ಲಿ ಹರಿಯುವ ಕೊಳಕು ಅನಿಲವನ್ನು ಚಹಾ ಅಥವಾ ಆಹಾರವನ್ನು ತಯಾರಿಸಲು ಬಳಸಬಹುದು ಎಂದು ಪ್ರಧಾನಿ ಹೇಳುವುದನ್ನು ಕೇಳಿದಾಗ, ನನ್ನ ಹೃದಯ ಮರುಗುತ್ತದೆ” ಎಂದು ಸಿಸೋಡಿಯಾ ಹೇಳಿದರು. “ಇವರು ಪ್ರಪಂಚದಾದ್ಯಂತ ಹಾಸ್ಯದ ವಿಷಯವಾಗಿದ್ದಾರೆ. ಮೋಡಗಳ ಹಿಂದೆ ಇರುವ ವಿಮಾನವನ್ನು ರಾಡಾರ್‌ಗಳು ಪತ್ತೆ ಹಚ್ಚುವುದಿಲ್ಲ ಎಂದು ಇವರು ಹೇಳಿದಾಗ ಶಾಲಾ ಕಾಲೇಜಿನ ಮಕ್ಕಳು ಇವರನ್ನು ಗೇಲಿ ಮಾಡುತ್ತಾರೆ” ಎಂದಿದ್ದಾರೆ.

2018ರಲ್ಲಿ ಮೋದಿಯವರು ನೀಡಿದ ಹೇಳಿಕೆಯನ್ನು ಸಿಸೋಡಿಯಾ ಉಲ್ಲೇಖಿಸಿದ್ದಾರೆ. ಚಹಾ ಮಾರಾಟಗಾರನೊಬ್ಬ ಗಟರ್‌ನಿಂದ ಹೊರಹೊಮ್ಮುವ ಅನಿಲವನ್ನು ಇಂಧನವಾಗಿ ಬಳಸಿರುವ ಬಗ್ಗೆ ಓದಿದ್ದೇನೆ ಎಂದು ಹೇಳಿದ್ದರು. 2019ರ ಸಂದರ್ಶನವೊಂದರಲ್ಲಿ ಬಾಲಾಕೋಟ್ ವೈಮಾನಿಕ ದಾಳಿಯ ಕುರಿತು ಮಾತನಾಡಿದ್ದ ಮೋದಿಯವರು, “ನಮ್ಮ ವಿಮಾನಗಳು ರಾಡಾರ್‌ಗಳಿಂದ ತಪ್ಪಿಸಿಕೊಳ್ಳಲು ಮೋಡಗಳು ಸಹಾಯ ಮಾಡುತ್ತವೆ” ಎಂದು ಹೇಳಿದ್ದರು.

ಇದನ್ನೂ ಓದಿರಿ: ಚುನಾವಣೆ ಎದುರಿಸಲು ಬಿಜೆಪಿ ರೌಡಿಗಳ ಮೊರೆ ಹೋಗುತ್ತಿದೆ: ಕಾಂಗ್ರೆಸ್ ಆರೋಪ

ಇದರ ನಡುವೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ, “ಪ್ರಧಾನಿಯವರ ಶೈಕ್ಷಣಿಕ ಅರ್ಹತೆಗಳನ್ನು ಪ್ರಶ್ನಿಸಿ ಸಿಸೋಡಿಯಾ ಅವರು ಬರೆದಿರುವ ಪತ್ರ ವಿಷಾದನೀಯ” ಎಂದಿದೆ.

ದೆಹಲಿ ಬಿಜೆಪಿ ವಕ್ತಾರ ಹರೀಶ್ ಖುರಾನಾ ಪ್ರತಿಕ್ರಿಯಿಸಿ, “ನಾನು ಸಿಸೋಡಿಯಾ ಅವರಿಗೆ ಹೇಳಲು ಬಯಸುತ್ತೇನೆ, ಒಬ್ಬ ವ್ಯಕ್ತಿಯನ್ನು ಅವರ ಪದವಿಗಳ ಆಧಾರದ ಮೇಲೆ ನಿರ್ಣಯಿಸಲಾಗುವುದಿಲ್ಲ, ಆದರೆ ಅವರ ಪ್ರಬುದ್ಧತೆ, ಬುದ್ಧಿವಂತಿಕೆ, ಅವರ ಆಲೋಚನೆ ಮತ್ತು ಸಮಸ್ಯೆಗಳ ಬಗ್ಗೆ ಅವರ ತಿಳಿವಳಿಕೆ ಇದೆಲ್ಲದರ ಮೇಲೆ ನಿರ್ಧರಿಸಲಾಗುತ್ತದೆ” ಎಂದು  ಹೇಳಿದ್ದಾರೆ. ದಿ ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ ಖುರಾನಾ ಹೇಳಿದರು.

ಖುರಾನಾ ಅವರು ಸಿಸೋಡಿಯಾ ಅವರ ಶೈಕ್ಷಣಿಕ ಅರ್ಹತೆಗಳನ್ನು ಸಹ ಪ್ರಶ್ನಿಸಿದ್ದಾರೆ.

“ನೀವು ಕೇವಲ ಡಿಪ್ಲೊಮಾ-ಹೋಲ್ಡರ್ ಆಗಿದ್ದೀರಿ ಮತ್ತು ನೀವು ಎಂಎ ಪದವಿಯನ್ನು ಪ್ರಶ್ನಿಸುತ್ತಿದ್ದೀರಿ. ನಿಮಗೆ ಸಮಸ್ಯೆಗಳ ಬಗ್ಗೆ ಬುದ್ಧಿವಂತಿಕೆ ಅಥವಾ ಅಗತ್ಯ ತಿಳುವಳಿಕೆ ಇಲ್ಲ. ದೇಶವು ಹೆಮ್ಮೆಪಡುವ ಮತ್ತು ಜಗತ್ತೇ ಭಾರತವನ್ನು ಗೌರವಿಸಲು ಕಾರಣವಾಗಿರುವ ಪ್ರಧಾನಿಯನ್ನು ಪ್ರಶ್ನಿಸುತ್ತಿದ್ದೀರಾ? ಇದು ನನಗೆ ಆಶ್ಚರ್ಯ ತಂದಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. If Modi really uneducated thats fine but now a days Educated are becoming more corrupt and no mercy and no ethics and no value for relationship all frauds created by educated only but uneducated are fare better they have ethics in their life and they give value to relationships

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...