Homeಕರ್ನಾಟಕಪ್ರವಾಹ ಸಂತ್ರಸ್ತರ ಬಗ್ಗೆ ಒಂದೂ ಮಾತಾಡದೇ ಮೋದಿ ಬರೀ ಸುಳ್ಳು ಹೇಳಿದ್ದಾರೆ: ಸಿದ್ದರಾಮಯ್ಯ ವಾಗ್ದಾಳಿ

ಪ್ರವಾಹ ಸಂತ್ರಸ್ತರ ಬಗ್ಗೆ ಒಂದೂ ಮಾತಾಡದೇ ಮೋದಿ ಬರೀ ಸುಳ್ಳು ಹೇಳಿದ್ದಾರೆ: ಸಿದ್ದರಾಮಯ್ಯ ವಾಗ್ದಾಳಿ

- Advertisement -
- Advertisement -

ನಿನ್ನೆ ಮತ್ತು ಇಂದ ಕರ್ನಾಟಕಕ್ಕೆ ಬಂದ ಪ್ರಧಾನಿ ಮೋದಿಯವರು ಪ್ರವಾಹ ಸಂತ್ರಸ್ತರ ಬಗ್ಗೆ ಒಂದೂ ಮಾತಾಡದೇ ಮೋದಿ ಬರೀ ಸುಳ್ಳು ಹೇಳಿದ್ದಾರೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಮೋದಿಯವರು ಪ್ರವಾಹ ಪರಿಹಾರಕ್ಕೆ ಹಣ ಘೋಷಣೆ ಮಾಡುತ್ತಾರೆ ಎಂದು ನಿರೀಕ್ಷೆ ಇತ್ತು. ಆದರೆ ಅವರು ಅದರ ಬಗ್ಗೆ ಪರೀಶೀಲನೆ ಮಾಡುತ್ತೇನೆ ಎಂದೂ ಸಹ ಹೇಳಲಿಲ್ಲ. ಇದರಿಂದ ಕರ್ನಾಟಕದ ಬಗ್ಗೆ ಅವರಿಗಿರುವ ಅಸಡ್ಡೆ, ನಿರ್ಲಕ್ಷ್ಯ ಎಷ್ಟು ಎಂಬುದು ಅರಿವಾಗಲಿದೆ. ಅವರ ನಡವಳಿಕೆಯಿಂದ ಸ್ಪಷ್ಟವಾಗಿ ಗೊತ್ತಾಗಲಿದೆ ಎಂದು ಕಿಡಿಕಾರಿದ್ದಾರೆ.

ಪ್ರವಾಹ ಪೀಡಿತರಿಗೆ ಪರಿಹಾರ ಕೊಡಲು ನಮ್ಮ ಬಳಿ ಹಣವಿಲ್ಲ, ದಯವಿಟ್ಟು ಕೇಂದ್ರದಿಂದ ಹಣ ಕೊಡಿ ಮುಖ್ಯಮಂತ್ರಿ ಯಡಿಯೂರಪ್ಪನವರು ಗೋಗೆರೆಯುತ್ತಿದ್ದಾರೆ. ಆದರೂ ಮೋದಿ ಪ್ರತಿಕ್ರಿಯಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಲೋಕಸಭೆ ಚುನಾವಣೆಗೆ ಮೊದಲು ಕರ್ನಾಟಕದ ಬಿಜೆಪಿಯ 28 ಬಿಜೆಪಿ ಅಭ್ಯರ್ಥಿಗಳು ನಮಗೆ ಓಟು ಕೊಡಬೇಡಿ, ನರೇಂದ್ರ ಮೋದಿಯವರಿಗೆ ಓಟು ಕೊಡಿ ಎಂದು ಕೇಳಿದ್ದರು. ರಾಜ್ಯದ ಜನ ನರೇಂದ್ರ ಮೋದಿಯವರ ಮುಖ ನೋಡಿ ಓಟು ಹಾಕಿಬಿಟ್ರು. ಆದರೆ ಇವತ್ತು ಮೋದಿ ಕರ್ನಾಟಕ್ಕೆ ದೊಡ್ಡ ದ್ರೋಹ ಮಾಡಿದ್ದಾರೆ ಎಂದು ಸಿದ್ದು ಆರೋಪಿಸಿದ್ದಾರೆ.

ನಾನು ಇದನ್ನು ಹೇಳಿದರೆ ಬಿಜೆಪಿಯವರಿಗೆ ಕೋಪ ಬರುತ್ತದೆ. ಆದರೆ ಮೋದಿಯವರು ಶಾಲಾಮಕ್ಕಳ ಜೊತೆಗೆ ಏನು ಮಾತಾಡಬೇಕು? ವಿದ್ಯಾಭ್ಯಾಸ, ಅವರ ಭವಿಷ್ಯದ ಬಗ್ಗೆ ಮಾತಾಡಬೇಕು. ಅಲ್ಲಿ ಹೋಗಿ ರಾಜಕೀಯ ಭಾಷಣ ಮಾಡಿದರೆ ಹೇಗೆ? ಸಿಎಎ, ಎನ್‌ಆರ್‌ಸಿ ಬಗ್ಗೆ ಮಾತಾಡುವುದು ಎಷ್ಟು ಔಚಿತ್ಯ, ಸಮರ್ಪಕ? ಎಂದು ಸಿದ್ದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್‌ನವರು ಮತ್ತು ಮಿತ್ರಪಕ್ಷಗಳು ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಮಾತಾಡಿ ಎಂದು ಮೋದಿ ಹೇಳಿದ್ದಾರೆ. ಪಾಕಿಸ್ತಾನ ಒಂದು ದುಷ್ಟ ರಾಷ್ಟ್ರ ಎಂದು ನಾನು ಒಪ್ಪಿಕೊಳ್ಳುತ್ತೇನೆ. ಅಲ್ಲಿ ಅವರು ಅಲ್ಪಸಂಖ್ಯಾತರರಿಗೆ ತೊಂದರೆ ಕೊಡುತ್ತಿದ್ದಾರೆ ಸರಿ. ಆದರೆ ಭಾರತದಲ್ಲಿರುವ ಅಲ್ಪಸಂಖ್ಯಾತರರ ಮೇಲೆ ನೀವು ಏನು ಮಾಡುತ್ತಿದ್ದೀರಿ ನರೇಂದ್ರ ಮೋದಿಯವರೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಸಂವಿಧಾನದ ವಿರುದ್ಧವಾಗಿ ಸಿಎಎ ಕಾನೂನು ಮಾಡುವುದು ಸರಿಯೇ? ದೇಶವನ್ನು ಧರ್ಮದ ಆಧಾರದಲ್ಲಿ ವಿಭಜನೆ ಮಾಡುವುದು ಸರಿಯೇ? ಮಕ್ಕಳ ಮುಂದೆ ರಾಜಕೀಯ ಭಾಷಣ ಮಾಡಬಹುದೆ? ಎಂದ ಅವರು, ಒಬ್ಬ ಪ್ರಧಾನ ಮಂತ್ರಿಯಾಗಿ ಮೋದಿ ಭಾಷಣದಲ್ಲಿ ಶೂರರು. ಅದರಲ್ಲಿ ಎರಡು ಮಾತಿಲ್ಲ. ಆದರೆ ಅವರು ವಿದ್ಯಾರ್ಥಿಗಳ ಮುಂದೆಯೂ, ಸಾರ್ವಜನಿಕರ ಮುಂದೆಯೂ, ರೈತರ ಬಗ್ಗೆಯೂ ಅದೇ ಭಾಷಣ ಮಾಡಿದರೆ ಅದು ಸಲ್ಲದು ಎಂದಿದ್ದಾರೆ.

ನೀವು ದೇಶದ ಸಮಸ್ಯೆಗಳ ಬಗ್ಗೆ ಮಾತಾಡಬೇಕು. ಆರ್ಥಿಕ ಪರಿಸ್ಥಿತಿ ಏನಾಗಿದೆ, ನೀವು ಕೊಟ್ಟ ಭರವಸೆಗಳು ಏನಾಗಿವೆ. ವರ್ಷಕ್ಕೆ ಎರಡು ಕೋಟಿ ಉದ್ಯೋಗಗಳ ಸೃಷ್ಟಿ ಏನಾಯಿತು, ರೈತರ ಆದಾಯ ದುಪ್ಪಟ್ಟು ಮಾಡುವುದು ಏನಾಯ್ತು? 2020ಕ್ಕೆ ರೈತರ ಆದಾಯ ದುಪ್ಪಟ್ಟು ಆಗಿದೆಯೇ? ಇದಕ್ಕೆ ಉತ್ತರಕೊಡಿ. ರೈತರ ಸಂಕಷ್ಟ ದುಪ್ಪಟ್ಟು ಆಗಿದೆಯೇ ಹೊರತು ಆದಾಯವಲ್ಲ. ರೈತರು ಆತ್ಮಹತ್ಯೆ ಮಾಡಿಕೊಳ್ಳುವುದು ಮುಂದುವರೆದಿದೆ. ರೈತರ ಸಾಲಾಮನ್ನ ಆಗಿಲ್ಲ. ಮಹಾದಾಯಿ ವಿವಾದ ಬಗೆಹರಿದಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನರೇಂದ್ರ ಮೋದಿ, ಜಾವಡೇಕರ್‌ ಸಹ ಸುಳ್ಳು ಹೇಳುತ್ತಾರೆ. ಅವರು ಬಾಯಿ ಬಿಟ್ಟರೆ ಬರೀ ಸುಳ್ಳು.. ಮೋದಿಯವರು ಕೊಟ್ಟ 90% ಭರವಸೆಗಳನ್ನು ಈಡೇರಿಸಿಲ್ಲ. ಕರ್ನಾಟಕಕ್ಕೆ ಬಂದಾಗಲೆಲ್ಲ ಸುಳ್ಳು ಹೇಳುತ್ತಾರೆ. ಸುಳ್ಳುಗಳಿಂದ ಸ್ವರ್ಗ ಸೃಷ್ಟಿ ಮಾಡಿಬಿಡುತ್ತಾರೆ. ಆದರೆ ನರೇಂದ್ರ ಮೋದಿಯವರ ಇಂತಹ ಮಾತುಗಲಿಂದ ಜನರ ಹೊಟ್ಟೆತುಂಬುವುದಿಲ್ಲ.. ನಿರುದ್ಯೋಗ ಬಗೆಹರಿಯುವುದಿಲ್ಲ ಅಲ್ಲವೇ ಎಂದಿದ್ದಾರೆ.

ಇಂದು ಜಿಡಿಪಿ ಅತ್ಯಂತ ತಳಮಟ್ಟಕ್ಕೆ ಹೋಗಿಬಿಟ್ಟಿದೆ. ಅವರು 4.5 ಇದೆ ಅನ್ನುತ್ತಿದ್ದಾರೆ. ಆದರೆ ನನ್ನ ಪ್ರಕಾರ ಅದು 2.5 ಅಷ್ಟೇ ಇರುವುದು. ಮನಮೋಹನ್‌ ಸಿಂಗ್‌ ಕಾಲದಲ್ಲಿ ಜಿಡಿಪಿ 8-9 ಇತ್ತು. ಮೋದಿಯವರು ಅಧಿಕಾರಕ್ಕೆ ಬಂದ ಮೇಲೆ ಐದುವರೆ ವರ್ಷಗಳಲ್ಲಿ ಆರ್ಥಿಕ ಪರಿಸ್ಥಿತಿಯನ್ನು ದಿವಾಳಿಯತ್ತ ತೆಗೆದುಕೊಂಡು ಹೋಗಿದ್ದಾರೆ. ಜಿಎಸ್‌ಟಿ ಪರಿಹಾರ ಬಂದಿಲ್ಲ. ಕುಡಿಯುವ ನೀರಿನ ಹಣ ಬಂದಿಲ್ಲ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...