Homeಕರ್ನಾಟಕಪ್ರವಾಹ ಸಂತ್ರಸ್ತರ ಬಗ್ಗೆ ಒಂದೂ ಮಾತಾಡದೇ ಮೋದಿ ಬರೀ ಸುಳ್ಳು ಹೇಳಿದ್ದಾರೆ: ಸಿದ್ದರಾಮಯ್ಯ ವಾಗ್ದಾಳಿ

ಪ್ರವಾಹ ಸಂತ್ರಸ್ತರ ಬಗ್ಗೆ ಒಂದೂ ಮಾತಾಡದೇ ಮೋದಿ ಬರೀ ಸುಳ್ಳು ಹೇಳಿದ್ದಾರೆ: ಸಿದ್ದರಾಮಯ್ಯ ವಾಗ್ದಾಳಿ

- Advertisement -
- Advertisement -

ನಿನ್ನೆ ಮತ್ತು ಇಂದ ಕರ್ನಾಟಕಕ್ಕೆ ಬಂದ ಪ್ರಧಾನಿ ಮೋದಿಯವರು ಪ್ರವಾಹ ಸಂತ್ರಸ್ತರ ಬಗ್ಗೆ ಒಂದೂ ಮಾತಾಡದೇ ಮೋದಿ ಬರೀ ಸುಳ್ಳು ಹೇಳಿದ್ದಾರೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಮೋದಿಯವರು ಪ್ರವಾಹ ಪರಿಹಾರಕ್ಕೆ ಹಣ ಘೋಷಣೆ ಮಾಡುತ್ತಾರೆ ಎಂದು ನಿರೀಕ್ಷೆ ಇತ್ತು. ಆದರೆ ಅವರು ಅದರ ಬಗ್ಗೆ ಪರೀಶೀಲನೆ ಮಾಡುತ್ತೇನೆ ಎಂದೂ ಸಹ ಹೇಳಲಿಲ್ಲ. ಇದರಿಂದ ಕರ್ನಾಟಕದ ಬಗ್ಗೆ ಅವರಿಗಿರುವ ಅಸಡ್ಡೆ, ನಿರ್ಲಕ್ಷ್ಯ ಎಷ್ಟು ಎಂಬುದು ಅರಿವಾಗಲಿದೆ. ಅವರ ನಡವಳಿಕೆಯಿಂದ ಸ್ಪಷ್ಟವಾಗಿ ಗೊತ್ತಾಗಲಿದೆ ಎಂದು ಕಿಡಿಕಾರಿದ್ದಾರೆ.

ಪ್ರವಾಹ ಪೀಡಿತರಿಗೆ ಪರಿಹಾರ ಕೊಡಲು ನಮ್ಮ ಬಳಿ ಹಣವಿಲ್ಲ, ದಯವಿಟ್ಟು ಕೇಂದ್ರದಿಂದ ಹಣ ಕೊಡಿ ಮುಖ್ಯಮಂತ್ರಿ ಯಡಿಯೂರಪ್ಪನವರು ಗೋಗೆರೆಯುತ್ತಿದ್ದಾರೆ. ಆದರೂ ಮೋದಿ ಪ್ರತಿಕ್ರಿಯಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಲೋಕಸಭೆ ಚುನಾವಣೆಗೆ ಮೊದಲು ಕರ್ನಾಟಕದ ಬಿಜೆಪಿಯ 28 ಬಿಜೆಪಿ ಅಭ್ಯರ್ಥಿಗಳು ನಮಗೆ ಓಟು ಕೊಡಬೇಡಿ, ನರೇಂದ್ರ ಮೋದಿಯವರಿಗೆ ಓಟು ಕೊಡಿ ಎಂದು ಕೇಳಿದ್ದರು. ರಾಜ್ಯದ ಜನ ನರೇಂದ್ರ ಮೋದಿಯವರ ಮುಖ ನೋಡಿ ಓಟು ಹಾಕಿಬಿಟ್ರು. ಆದರೆ ಇವತ್ತು ಮೋದಿ ಕರ್ನಾಟಕ್ಕೆ ದೊಡ್ಡ ದ್ರೋಹ ಮಾಡಿದ್ದಾರೆ ಎಂದು ಸಿದ್ದು ಆರೋಪಿಸಿದ್ದಾರೆ.

ನಾನು ಇದನ್ನು ಹೇಳಿದರೆ ಬಿಜೆಪಿಯವರಿಗೆ ಕೋಪ ಬರುತ್ತದೆ. ಆದರೆ ಮೋದಿಯವರು ಶಾಲಾಮಕ್ಕಳ ಜೊತೆಗೆ ಏನು ಮಾತಾಡಬೇಕು? ವಿದ್ಯಾಭ್ಯಾಸ, ಅವರ ಭವಿಷ್ಯದ ಬಗ್ಗೆ ಮಾತಾಡಬೇಕು. ಅಲ್ಲಿ ಹೋಗಿ ರಾಜಕೀಯ ಭಾಷಣ ಮಾಡಿದರೆ ಹೇಗೆ? ಸಿಎಎ, ಎನ್‌ಆರ್‌ಸಿ ಬಗ್ಗೆ ಮಾತಾಡುವುದು ಎಷ್ಟು ಔಚಿತ್ಯ, ಸಮರ್ಪಕ? ಎಂದು ಸಿದ್ದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್‌ನವರು ಮತ್ತು ಮಿತ್ರಪಕ್ಷಗಳು ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಮಾತಾಡಿ ಎಂದು ಮೋದಿ ಹೇಳಿದ್ದಾರೆ. ಪಾಕಿಸ್ತಾನ ಒಂದು ದುಷ್ಟ ರಾಷ್ಟ್ರ ಎಂದು ನಾನು ಒಪ್ಪಿಕೊಳ್ಳುತ್ತೇನೆ. ಅಲ್ಲಿ ಅವರು ಅಲ್ಪಸಂಖ್ಯಾತರರಿಗೆ ತೊಂದರೆ ಕೊಡುತ್ತಿದ್ದಾರೆ ಸರಿ. ಆದರೆ ಭಾರತದಲ್ಲಿರುವ ಅಲ್ಪಸಂಖ್ಯಾತರರ ಮೇಲೆ ನೀವು ಏನು ಮಾಡುತ್ತಿದ್ದೀರಿ ನರೇಂದ್ರ ಮೋದಿಯವರೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಸಂವಿಧಾನದ ವಿರುದ್ಧವಾಗಿ ಸಿಎಎ ಕಾನೂನು ಮಾಡುವುದು ಸರಿಯೇ? ದೇಶವನ್ನು ಧರ್ಮದ ಆಧಾರದಲ್ಲಿ ವಿಭಜನೆ ಮಾಡುವುದು ಸರಿಯೇ? ಮಕ್ಕಳ ಮುಂದೆ ರಾಜಕೀಯ ಭಾಷಣ ಮಾಡಬಹುದೆ? ಎಂದ ಅವರು, ಒಬ್ಬ ಪ್ರಧಾನ ಮಂತ್ರಿಯಾಗಿ ಮೋದಿ ಭಾಷಣದಲ್ಲಿ ಶೂರರು. ಅದರಲ್ಲಿ ಎರಡು ಮಾತಿಲ್ಲ. ಆದರೆ ಅವರು ವಿದ್ಯಾರ್ಥಿಗಳ ಮುಂದೆಯೂ, ಸಾರ್ವಜನಿಕರ ಮುಂದೆಯೂ, ರೈತರ ಬಗ್ಗೆಯೂ ಅದೇ ಭಾಷಣ ಮಾಡಿದರೆ ಅದು ಸಲ್ಲದು ಎಂದಿದ್ದಾರೆ.

ನೀವು ದೇಶದ ಸಮಸ್ಯೆಗಳ ಬಗ್ಗೆ ಮಾತಾಡಬೇಕು. ಆರ್ಥಿಕ ಪರಿಸ್ಥಿತಿ ಏನಾಗಿದೆ, ನೀವು ಕೊಟ್ಟ ಭರವಸೆಗಳು ಏನಾಗಿವೆ. ವರ್ಷಕ್ಕೆ ಎರಡು ಕೋಟಿ ಉದ್ಯೋಗಗಳ ಸೃಷ್ಟಿ ಏನಾಯಿತು, ರೈತರ ಆದಾಯ ದುಪ್ಪಟ್ಟು ಮಾಡುವುದು ಏನಾಯ್ತು? 2020ಕ್ಕೆ ರೈತರ ಆದಾಯ ದುಪ್ಪಟ್ಟು ಆಗಿದೆಯೇ? ಇದಕ್ಕೆ ಉತ್ತರಕೊಡಿ. ರೈತರ ಸಂಕಷ್ಟ ದುಪ್ಪಟ್ಟು ಆಗಿದೆಯೇ ಹೊರತು ಆದಾಯವಲ್ಲ. ರೈತರು ಆತ್ಮಹತ್ಯೆ ಮಾಡಿಕೊಳ್ಳುವುದು ಮುಂದುವರೆದಿದೆ. ರೈತರ ಸಾಲಾಮನ್ನ ಆಗಿಲ್ಲ. ಮಹಾದಾಯಿ ವಿವಾದ ಬಗೆಹರಿದಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನರೇಂದ್ರ ಮೋದಿ, ಜಾವಡೇಕರ್‌ ಸಹ ಸುಳ್ಳು ಹೇಳುತ್ತಾರೆ. ಅವರು ಬಾಯಿ ಬಿಟ್ಟರೆ ಬರೀ ಸುಳ್ಳು.. ಮೋದಿಯವರು ಕೊಟ್ಟ 90% ಭರವಸೆಗಳನ್ನು ಈಡೇರಿಸಿಲ್ಲ. ಕರ್ನಾಟಕಕ್ಕೆ ಬಂದಾಗಲೆಲ್ಲ ಸುಳ್ಳು ಹೇಳುತ್ತಾರೆ. ಸುಳ್ಳುಗಳಿಂದ ಸ್ವರ್ಗ ಸೃಷ್ಟಿ ಮಾಡಿಬಿಡುತ್ತಾರೆ. ಆದರೆ ನರೇಂದ್ರ ಮೋದಿಯವರ ಇಂತಹ ಮಾತುಗಲಿಂದ ಜನರ ಹೊಟ್ಟೆತುಂಬುವುದಿಲ್ಲ.. ನಿರುದ್ಯೋಗ ಬಗೆಹರಿಯುವುದಿಲ್ಲ ಅಲ್ಲವೇ ಎಂದಿದ್ದಾರೆ.

ಇಂದು ಜಿಡಿಪಿ ಅತ್ಯಂತ ತಳಮಟ್ಟಕ್ಕೆ ಹೋಗಿಬಿಟ್ಟಿದೆ. ಅವರು 4.5 ಇದೆ ಅನ್ನುತ್ತಿದ್ದಾರೆ. ಆದರೆ ನನ್ನ ಪ್ರಕಾರ ಅದು 2.5 ಅಷ್ಟೇ ಇರುವುದು. ಮನಮೋಹನ್‌ ಸಿಂಗ್‌ ಕಾಲದಲ್ಲಿ ಜಿಡಿಪಿ 8-9 ಇತ್ತು. ಮೋದಿಯವರು ಅಧಿಕಾರಕ್ಕೆ ಬಂದ ಮೇಲೆ ಐದುವರೆ ವರ್ಷಗಳಲ್ಲಿ ಆರ್ಥಿಕ ಪರಿಸ್ಥಿತಿಯನ್ನು ದಿವಾಳಿಯತ್ತ ತೆಗೆದುಕೊಂಡು ಹೋಗಿದ್ದಾರೆ. ಜಿಎಸ್‌ಟಿ ಪರಿಹಾರ ಬಂದಿಲ್ಲ. ಕುಡಿಯುವ ನೀರಿನ ಹಣ ಬಂದಿಲ್ಲ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...