Homeಕರ್ನಾಟಕಪ್ರವಾಹ ಸಂತ್ರಸ್ತರ ಬಗ್ಗೆ ಒಂದೂ ಮಾತಾಡದೇ ಮೋದಿ ಬರೀ ಸುಳ್ಳು ಹೇಳಿದ್ದಾರೆ: ಸಿದ್ದರಾಮಯ್ಯ ವಾಗ್ದಾಳಿ

ಪ್ರವಾಹ ಸಂತ್ರಸ್ತರ ಬಗ್ಗೆ ಒಂದೂ ಮಾತಾಡದೇ ಮೋದಿ ಬರೀ ಸುಳ್ಳು ಹೇಳಿದ್ದಾರೆ: ಸಿದ್ದರಾಮಯ್ಯ ವಾಗ್ದಾಳಿ

- Advertisement -
- Advertisement -

ನಿನ್ನೆ ಮತ್ತು ಇಂದ ಕರ್ನಾಟಕಕ್ಕೆ ಬಂದ ಪ್ರಧಾನಿ ಮೋದಿಯವರು ಪ್ರವಾಹ ಸಂತ್ರಸ್ತರ ಬಗ್ಗೆ ಒಂದೂ ಮಾತಾಡದೇ ಮೋದಿ ಬರೀ ಸುಳ್ಳು ಹೇಳಿದ್ದಾರೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಮೋದಿಯವರು ಪ್ರವಾಹ ಪರಿಹಾರಕ್ಕೆ ಹಣ ಘೋಷಣೆ ಮಾಡುತ್ತಾರೆ ಎಂದು ನಿರೀಕ್ಷೆ ಇತ್ತು. ಆದರೆ ಅವರು ಅದರ ಬಗ್ಗೆ ಪರೀಶೀಲನೆ ಮಾಡುತ್ತೇನೆ ಎಂದೂ ಸಹ ಹೇಳಲಿಲ್ಲ. ಇದರಿಂದ ಕರ್ನಾಟಕದ ಬಗ್ಗೆ ಅವರಿಗಿರುವ ಅಸಡ್ಡೆ, ನಿರ್ಲಕ್ಷ್ಯ ಎಷ್ಟು ಎಂಬುದು ಅರಿವಾಗಲಿದೆ. ಅವರ ನಡವಳಿಕೆಯಿಂದ ಸ್ಪಷ್ಟವಾಗಿ ಗೊತ್ತಾಗಲಿದೆ ಎಂದು ಕಿಡಿಕಾರಿದ್ದಾರೆ.

ಪ್ರವಾಹ ಪೀಡಿತರಿಗೆ ಪರಿಹಾರ ಕೊಡಲು ನಮ್ಮ ಬಳಿ ಹಣವಿಲ್ಲ, ದಯವಿಟ್ಟು ಕೇಂದ್ರದಿಂದ ಹಣ ಕೊಡಿ ಮುಖ್ಯಮಂತ್ರಿ ಯಡಿಯೂರಪ್ಪನವರು ಗೋಗೆರೆಯುತ್ತಿದ್ದಾರೆ. ಆದರೂ ಮೋದಿ ಪ್ರತಿಕ್ರಿಯಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಲೋಕಸಭೆ ಚುನಾವಣೆಗೆ ಮೊದಲು ಕರ್ನಾಟಕದ ಬಿಜೆಪಿಯ 28 ಬಿಜೆಪಿ ಅಭ್ಯರ್ಥಿಗಳು ನಮಗೆ ಓಟು ಕೊಡಬೇಡಿ, ನರೇಂದ್ರ ಮೋದಿಯವರಿಗೆ ಓಟು ಕೊಡಿ ಎಂದು ಕೇಳಿದ್ದರು. ರಾಜ್ಯದ ಜನ ನರೇಂದ್ರ ಮೋದಿಯವರ ಮುಖ ನೋಡಿ ಓಟು ಹಾಕಿಬಿಟ್ರು. ಆದರೆ ಇವತ್ತು ಮೋದಿ ಕರ್ನಾಟಕ್ಕೆ ದೊಡ್ಡ ದ್ರೋಹ ಮಾಡಿದ್ದಾರೆ ಎಂದು ಸಿದ್ದು ಆರೋಪಿಸಿದ್ದಾರೆ.

ನಾನು ಇದನ್ನು ಹೇಳಿದರೆ ಬಿಜೆಪಿಯವರಿಗೆ ಕೋಪ ಬರುತ್ತದೆ. ಆದರೆ ಮೋದಿಯವರು ಶಾಲಾಮಕ್ಕಳ ಜೊತೆಗೆ ಏನು ಮಾತಾಡಬೇಕು? ವಿದ್ಯಾಭ್ಯಾಸ, ಅವರ ಭವಿಷ್ಯದ ಬಗ್ಗೆ ಮಾತಾಡಬೇಕು. ಅಲ್ಲಿ ಹೋಗಿ ರಾಜಕೀಯ ಭಾಷಣ ಮಾಡಿದರೆ ಹೇಗೆ? ಸಿಎಎ, ಎನ್‌ಆರ್‌ಸಿ ಬಗ್ಗೆ ಮಾತಾಡುವುದು ಎಷ್ಟು ಔಚಿತ್ಯ, ಸಮರ್ಪಕ? ಎಂದು ಸಿದ್ದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್‌ನವರು ಮತ್ತು ಮಿತ್ರಪಕ್ಷಗಳು ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಮಾತಾಡಿ ಎಂದು ಮೋದಿ ಹೇಳಿದ್ದಾರೆ. ಪಾಕಿಸ್ತಾನ ಒಂದು ದುಷ್ಟ ರಾಷ್ಟ್ರ ಎಂದು ನಾನು ಒಪ್ಪಿಕೊಳ್ಳುತ್ತೇನೆ. ಅಲ್ಲಿ ಅವರು ಅಲ್ಪಸಂಖ್ಯಾತರರಿಗೆ ತೊಂದರೆ ಕೊಡುತ್ತಿದ್ದಾರೆ ಸರಿ. ಆದರೆ ಭಾರತದಲ್ಲಿರುವ ಅಲ್ಪಸಂಖ್ಯಾತರರ ಮೇಲೆ ನೀವು ಏನು ಮಾಡುತ್ತಿದ್ದೀರಿ ನರೇಂದ್ರ ಮೋದಿಯವರೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಸಂವಿಧಾನದ ವಿರುದ್ಧವಾಗಿ ಸಿಎಎ ಕಾನೂನು ಮಾಡುವುದು ಸರಿಯೇ? ದೇಶವನ್ನು ಧರ್ಮದ ಆಧಾರದಲ್ಲಿ ವಿಭಜನೆ ಮಾಡುವುದು ಸರಿಯೇ? ಮಕ್ಕಳ ಮುಂದೆ ರಾಜಕೀಯ ಭಾಷಣ ಮಾಡಬಹುದೆ? ಎಂದ ಅವರು, ಒಬ್ಬ ಪ್ರಧಾನ ಮಂತ್ರಿಯಾಗಿ ಮೋದಿ ಭಾಷಣದಲ್ಲಿ ಶೂರರು. ಅದರಲ್ಲಿ ಎರಡು ಮಾತಿಲ್ಲ. ಆದರೆ ಅವರು ವಿದ್ಯಾರ್ಥಿಗಳ ಮುಂದೆಯೂ, ಸಾರ್ವಜನಿಕರ ಮುಂದೆಯೂ, ರೈತರ ಬಗ್ಗೆಯೂ ಅದೇ ಭಾಷಣ ಮಾಡಿದರೆ ಅದು ಸಲ್ಲದು ಎಂದಿದ್ದಾರೆ.

ನೀವು ದೇಶದ ಸಮಸ್ಯೆಗಳ ಬಗ್ಗೆ ಮಾತಾಡಬೇಕು. ಆರ್ಥಿಕ ಪರಿಸ್ಥಿತಿ ಏನಾಗಿದೆ, ನೀವು ಕೊಟ್ಟ ಭರವಸೆಗಳು ಏನಾಗಿವೆ. ವರ್ಷಕ್ಕೆ ಎರಡು ಕೋಟಿ ಉದ್ಯೋಗಗಳ ಸೃಷ್ಟಿ ಏನಾಯಿತು, ರೈತರ ಆದಾಯ ದುಪ್ಪಟ್ಟು ಮಾಡುವುದು ಏನಾಯ್ತು? 2020ಕ್ಕೆ ರೈತರ ಆದಾಯ ದುಪ್ಪಟ್ಟು ಆಗಿದೆಯೇ? ಇದಕ್ಕೆ ಉತ್ತರಕೊಡಿ. ರೈತರ ಸಂಕಷ್ಟ ದುಪ್ಪಟ್ಟು ಆಗಿದೆಯೇ ಹೊರತು ಆದಾಯವಲ್ಲ. ರೈತರು ಆತ್ಮಹತ್ಯೆ ಮಾಡಿಕೊಳ್ಳುವುದು ಮುಂದುವರೆದಿದೆ. ರೈತರ ಸಾಲಾಮನ್ನ ಆಗಿಲ್ಲ. ಮಹಾದಾಯಿ ವಿವಾದ ಬಗೆಹರಿದಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನರೇಂದ್ರ ಮೋದಿ, ಜಾವಡೇಕರ್‌ ಸಹ ಸುಳ್ಳು ಹೇಳುತ್ತಾರೆ. ಅವರು ಬಾಯಿ ಬಿಟ್ಟರೆ ಬರೀ ಸುಳ್ಳು.. ಮೋದಿಯವರು ಕೊಟ್ಟ 90% ಭರವಸೆಗಳನ್ನು ಈಡೇರಿಸಿಲ್ಲ. ಕರ್ನಾಟಕಕ್ಕೆ ಬಂದಾಗಲೆಲ್ಲ ಸುಳ್ಳು ಹೇಳುತ್ತಾರೆ. ಸುಳ್ಳುಗಳಿಂದ ಸ್ವರ್ಗ ಸೃಷ್ಟಿ ಮಾಡಿಬಿಡುತ್ತಾರೆ. ಆದರೆ ನರೇಂದ್ರ ಮೋದಿಯವರ ಇಂತಹ ಮಾತುಗಲಿಂದ ಜನರ ಹೊಟ್ಟೆತುಂಬುವುದಿಲ್ಲ.. ನಿರುದ್ಯೋಗ ಬಗೆಹರಿಯುವುದಿಲ್ಲ ಅಲ್ಲವೇ ಎಂದಿದ್ದಾರೆ.

ಇಂದು ಜಿಡಿಪಿ ಅತ್ಯಂತ ತಳಮಟ್ಟಕ್ಕೆ ಹೋಗಿಬಿಟ್ಟಿದೆ. ಅವರು 4.5 ಇದೆ ಅನ್ನುತ್ತಿದ್ದಾರೆ. ಆದರೆ ನನ್ನ ಪ್ರಕಾರ ಅದು 2.5 ಅಷ್ಟೇ ಇರುವುದು. ಮನಮೋಹನ್‌ ಸಿಂಗ್‌ ಕಾಲದಲ್ಲಿ ಜಿಡಿಪಿ 8-9 ಇತ್ತು. ಮೋದಿಯವರು ಅಧಿಕಾರಕ್ಕೆ ಬಂದ ಮೇಲೆ ಐದುವರೆ ವರ್ಷಗಳಲ್ಲಿ ಆರ್ಥಿಕ ಪರಿಸ್ಥಿತಿಯನ್ನು ದಿವಾಳಿಯತ್ತ ತೆಗೆದುಕೊಂಡು ಹೋಗಿದ್ದಾರೆ. ಜಿಎಸ್‌ಟಿ ಪರಿಹಾರ ಬಂದಿಲ್ಲ. ಕುಡಿಯುವ ನೀರಿನ ಹಣ ಬಂದಿಲ್ಲ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...