Homeಕರ್ನಾಟಕಪ್ರವಾಹ ಸಂತ್ರಸ್ತರ ಬಗ್ಗೆ ಒಂದೂ ಮಾತಾಡದೇ ಮೋದಿ ಬರೀ ಸುಳ್ಳು ಹೇಳಿದ್ದಾರೆ: ಸಿದ್ದರಾಮಯ್ಯ ವಾಗ್ದಾಳಿ

ಪ್ರವಾಹ ಸಂತ್ರಸ್ತರ ಬಗ್ಗೆ ಒಂದೂ ಮಾತಾಡದೇ ಮೋದಿ ಬರೀ ಸುಳ್ಳು ಹೇಳಿದ್ದಾರೆ: ಸಿದ್ದರಾಮಯ್ಯ ವಾಗ್ದಾಳಿ

- Advertisement -
- Advertisement -

ನಿನ್ನೆ ಮತ್ತು ಇಂದ ಕರ್ನಾಟಕಕ್ಕೆ ಬಂದ ಪ್ರಧಾನಿ ಮೋದಿಯವರು ಪ್ರವಾಹ ಸಂತ್ರಸ್ತರ ಬಗ್ಗೆ ಒಂದೂ ಮಾತಾಡದೇ ಮೋದಿ ಬರೀ ಸುಳ್ಳು ಹೇಳಿದ್ದಾರೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಮೋದಿಯವರು ಪ್ರವಾಹ ಪರಿಹಾರಕ್ಕೆ ಹಣ ಘೋಷಣೆ ಮಾಡುತ್ತಾರೆ ಎಂದು ನಿರೀಕ್ಷೆ ಇತ್ತು. ಆದರೆ ಅವರು ಅದರ ಬಗ್ಗೆ ಪರೀಶೀಲನೆ ಮಾಡುತ್ತೇನೆ ಎಂದೂ ಸಹ ಹೇಳಲಿಲ್ಲ. ಇದರಿಂದ ಕರ್ನಾಟಕದ ಬಗ್ಗೆ ಅವರಿಗಿರುವ ಅಸಡ್ಡೆ, ನಿರ್ಲಕ್ಷ್ಯ ಎಷ್ಟು ಎಂಬುದು ಅರಿವಾಗಲಿದೆ. ಅವರ ನಡವಳಿಕೆಯಿಂದ ಸ್ಪಷ್ಟವಾಗಿ ಗೊತ್ತಾಗಲಿದೆ ಎಂದು ಕಿಡಿಕಾರಿದ್ದಾರೆ.

ಪ್ರವಾಹ ಪೀಡಿತರಿಗೆ ಪರಿಹಾರ ಕೊಡಲು ನಮ್ಮ ಬಳಿ ಹಣವಿಲ್ಲ, ದಯವಿಟ್ಟು ಕೇಂದ್ರದಿಂದ ಹಣ ಕೊಡಿ ಮುಖ್ಯಮಂತ್ರಿ ಯಡಿಯೂರಪ್ಪನವರು ಗೋಗೆರೆಯುತ್ತಿದ್ದಾರೆ. ಆದರೂ ಮೋದಿ ಪ್ರತಿಕ್ರಿಯಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಲೋಕಸಭೆ ಚುನಾವಣೆಗೆ ಮೊದಲು ಕರ್ನಾಟಕದ ಬಿಜೆಪಿಯ 28 ಬಿಜೆಪಿ ಅಭ್ಯರ್ಥಿಗಳು ನಮಗೆ ಓಟು ಕೊಡಬೇಡಿ, ನರೇಂದ್ರ ಮೋದಿಯವರಿಗೆ ಓಟು ಕೊಡಿ ಎಂದು ಕೇಳಿದ್ದರು. ರಾಜ್ಯದ ಜನ ನರೇಂದ್ರ ಮೋದಿಯವರ ಮುಖ ನೋಡಿ ಓಟು ಹಾಕಿಬಿಟ್ರು. ಆದರೆ ಇವತ್ತು ಮೋದಿ ಕರ್ನಾಟಕ್ಕೆ ದೊಡ್ಡ ದ್ರೋಹ ಮಾಡಿದ್ದಾರೆ ಎಂದು ಸಿದ್ದು ಆರೋಪಿಸಿದ್ದಾರೆ.

ನಾನು ಇದನ್ನು ಹೇಳಿದರೆ ಬಿಜೆಪಿಯವರಿಗೆ ಕೋಪ ಬರುತ್ತದೆ. ಆದರೆ ಮೋದಿಯವರು ಶಾಲಾಮಕ್ಕಳ ಜೊತೆಗೆ ಏನು ಮಾತಾಡಬೇಕು? ವಿದ್ಯಾಭ್ಯಾಸ, ಅವರ ಭವಿಷ್ಯದ ಬಗ್ಗೆ ಮಾತಾಡಬೇಕು. ಅಲ್ಲಿ ಹೋಗಿ ರಾಜಕೀಯ ಭಾಷಣ ಮಾಡಿದರೆ ಹೇಗೆ? ಸಿಎಎ, ಎನ್‌ಆರ್‌ಸಿ ಬಗ್ಗೆ ಮಾತಾಡುವುದು ಎಷ್ಟು ಔಚಿತ್ಯ, ಸಮರ್ಪಕ? ಎಂದು ಸಿದ್ದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್‌ನವರು ಮತ್ತು ಮಿತ್ರಪಕ್ಷಗಳು ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಮಾತಾಡಿ ಎಂದು ಮೋದಿ ಹೇಳಿದ್ದಾರೆ. ಪಾಕಿಸ್ತಾನ ಒಂದು ದುಷ್ಟ ರಾಷ್ಟ್ರ ಎಂದು ನಾನು ಒಪ್ಪಿಕೊಳ್ಳುತ್ತೇನೆ. ಅಲ್ಲಿ ಅವರು ಅಲ್ಪಸಂಖ್ಯಾತರರಿಗೆ ತೊಂದರೆ ಕೊಡುತ್ತಿದ್ದಾರೆ ಸರಿ. ಆದರೆ ಭಾರತದಲ್ಲಿರುವ ಅಲ್ಪಸಂಖ್ಯಾತರರ ಮೇಲೆ ನೀವು ಏನು ಮಾಡುತ್ತಿದ್ದೀರಿ ನರೇಂದ್ರ ಮೋದಿಯವರೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಸಂವಿಧಾನದ ವಿರುದ್ಧವಾಗಿ ಸಿಎಎ ಕಾನೂನು ಮಾಡುವುದು ಸರಿಯೇ? ದೇಶವನ್ನು ಧರ್ಮದ ಆಧಾರದಲ್ಲಿ ವಿಭಜನೆ ಮಾಡುವುದು ಸರಿಯೇ? ಮಕ್ಕಳ ಮುಂದೆ ರಾಜಕೀಯ ಭಾಷಣ ಮಾಡಬಹುದೆ? ಎಂದ ಅವರು, ಒಬ್ಬ ಪ್ರಧಾನ ಮಂತ್ರಿಯಾಗಿ ಮೋದಿ ಭಾಷಣದಲ್ಲಿ ಶೂರರು. ಅದರಲ್ಲಿ ಎರಡು ಮಾತಿಲ್ಲ. ಆದರೆ ಅವರು ವಿದ್ಯಾರ್ಥಿಗಳ ಮುಂದೆಯೂ, ಸಾರ್ವಜನಿಕರ ಮುಂದೆಯೂ, ರೈತರ ಬಗ್ಗೆಯೂ ಅದೇ ಭಾಷಣ ಮಾಡಿದರೆ ಅದು ಸಲ್ಲದು ಎಂದಿದ್ದಾರೆ.

ನೀವು ದೇಶದ ಸಮಸ್ಯೆಗಳ ಬಗ್ಗೆ ಮಾತಾಡಬೇಕು. ಆರ್ಥಿಕ ಪರಿಸ್ಥಿತಿ ಏನಾಗಿದೆ, ನೀವು ಕೊಟ್ಟ ಭರವಸೆಗಳು ಏನಾಗಿವೆ. ವರ್ಷಕ್ಕೆ ಎರಡು ಕೋಟಿ ಉದ್ಯೋಗಗಳ ಸೃಷ್ಟಿ ಏನಾಯಿತು, ರೈತರ ಆದಾಯ ದುಪ್ಪಟ್ಟು ಮಾಡುವುದು ಏನಾಯ್ತು? 2020ಕ್ಕೆ ರೈತರ ಆದಾಯ ದುಪ್ಪಟ್ಟು ಆಗಿದೆಯೇ? ಇದಕ್ಕೆ ಉತ್ತರಕೊಡಿ. ರೈತರ ಸಂಕಷ್ಟ ದುಪ್ಪಟ್ಟು ಆಗಿದೆಯೇ ಹೊರತು ಆದಾಯವಲ್ಲ. ರೈತರು ಆತ್ಮಹತ್ಯೆ ಮಾಡಿಕೊಳ್ಳುವುದು ಮುಂದುವರೆದಿದೆ. ರೈತರ ಸಾಲಾಮನ್ನ ಆಗಿಲ್ಲ. ಮಹಾದಾಯಿ ವಿವಾದ ಬಗೆಹರಿದಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನರೇಂದ್ರ ಮೋದಿ, ಜಾವಡೇಕರ್‌ ಸಹ ಸುಳ್ಳು ಹೇಳುತ್ತಾರೆ. ಅವರು ಬಾಯಿ ಬಿಟ್ಟರೆ ಬರೀ ಸುಳ್ಳು.. ಮೋದಿಯವರು ಕೊಟ್ಟ 90% ಭರವಸೆಗಳನ್ನು ಈಡೇರಿಸಿಲ್ಲ. ಕರ್ನಾಟಕಕ್ಕೆ ಬಂದಾಗಲೆಲ್ಲ ಸುಳ್ಳು ಹೇಳುತ್ತಾರೆ. ಸುಳ್ಳುಗಳಿಂದ ಸ್ವರ್ಗ ಸೃಷ್ಟಿ ಮಾಡಿಬಿಡುತ್ತಾರೆ. ಆದರೆ ನರೇಂದ್ರ ಮೋದಿಯವರ ಇಂತಹ ಮಾತುಗಲಿಂದ ಜನರ ಹೊಟ್ಟೆತುಂಬುವುದಿಲ್ಲ.. ನಿರುದ್ಯೋಗ ಬಗೆಹರಿಯುವುದಿಲ್ಲ ಅಲ್ಲವೇ ಎಂದಿದ್ದಾರೆ.

ಇಂದು ಜಿಡಿಪಿ ಅತ್ಯಂತ ತಳಮಟ್ಟಕ್ಕೆ ಹೋಗಿಬಿಟ್ಟಿದೆ. ಅವರು 4.5 ಇದೆ ಅನ್ನುತ್ತಿದ್ದಾರೆ. ಆದರೆ ನನ್ನ ಪ್ರಕಾರ ಅದು 2.5 ಅಷ್ಟೇ ಇರುವುದು. ಮನಮೋಹನ್‌ ಸಿಂಗ್‌ ಕಾಲದಲ್ಲಿ ಜಿಡಿಪಿ 8-9 ಇತ್ತು. ಮೋದಿಯವರು ಅಧಿಕಾರಕ್ಕೆ ಬಂದ ಮೇಲೆ ಐದುವರೆ ವರ್ಷಗಳಲ್ಲಿ ಆರ್ಥಿಕ ಪರಿಸ್ಥಿತಿಯನ್ನು ದಿವಾಳಿಯತ್ತ ತೆಗೆದುಕೊಂಡು ಹೋಗಿದ್ದಾರೆ. ಜಿಎಸ್‌ಟಿ ಪರಿಹಾರ ಬಂದಿಲ್ಲ. ಕುಡಿಯುವ ನೀರಿನ ಹಣ ಬಂದಿಲ್ಲ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...