Homeಕರ್ನಾಟಕಪ್ರವಾಹ ಸಂತ್ರಸ್ತರ ಬಗ್ಗೆ ಒಂದೂ ಮಾತಾಡದೇ ಮೋದಿ ಬರೀ ಸುಳ್ಳು ಹೇಳಿದ್ದಾರೆ: ಸಿದ್ದರಾಮಯ್ಯ ವಾಗ್ದಾಳಿ

ಪ್ರವಾಹ ಸಂತ್ರಸ್ತರ ಬಗ್ಗೆ ಒಂದೂ ಮಾತಾಡದೇ ಮೋದಿ ಬರೀ ಸುಳ್ಳು ಹೇಳಿದ್ದಾರೆ: ಸಿದ್ದರಾಮಯ್ಯ ವಾಗ್ದಾಳಿ

- Advertisement -
- Advertisement -

ನಿನ್ನೆ ಮತ್ತು ಇಂದ ಕರ್ನಾಟಕಕ್ಕೆ ಬಂದ ಪ್ರಧಾನಿ ಮೋದಿಯವರು ಪ್ರವಾಹ ಸಂತ್ರಸ್ತರ ಬಗ್ಗೆ ಒಂದೂ ಮಾತಾಡದೇ ಮೋದಿ ಬರೀ ಸುಳ್ಳು ಹೇಳಿದ್ದಾರೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಮೋದಿಯವರು ಪ್ರವಾಹ ಪರಿಹಾರಕ್ಕೆ ಹಣ ಘೋಷಣೆ ಮಾಡುತ್ತಾರೆ ಎಂದು ನಿರೀಕ್ಷೆ ಇತ್ತು. ಆದರೆ ಅವರು ಅದರ ಬಗ್ಗೆ ಪರೀಶೀಲನೆ ಮಾಡುತ್ತೇನೆ ಎಂದೂ ಸಹ ಹೇಳಲಿಲ್ಲ. ಇದರಿಂದ ಕರ್ನಾಟಕದ ಬಗ್ಗೆ ಅವರಿಗಿರುವ ಅಸಡ್ಡೆ, ನಿರ್ಲಕ್ಷ್ಯ ಎಷ್ಟು ಎಂಬುದು ಅರಿವಾಗಲಿದೆ. ಅವರ ನಡವಳಿಕೆಯಿಂದ ಸ್ಪಷ್ಟವಾಗಿ ಗೊತ್ತಾಗಲಿದೆ ಎಂದು ಕಿಡಿಕಾರಿದ್ದಾರೆ.

ಪ್ರವಾಹ ಪೀಡಿತರಿಗೆ ಪರಿಹಾರ ಕೊಡಲು ನಮ್ಮ ಬಳಿ ಹಣವಿಲ್ಲ, ದಯವಿಟ್ಟು ಕೇಂದ್ರದಿಂದ ಹಣ ಕೊಡಿ ಮುಖ್ಯಮಂತ್ರಿ ಯಡಿಯೂರಪ್ಪನವರು ಗೋಗೆರೆಯುತ್ತಿದ್ದಾರೆ. ಆದರೂ ಮೋದಿ ಪ್ರತಿಕ್ರಿಯಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಲೋಕಸಭೆ ಚುನಾವಣೆಗೆ ಮೊದಲು ಕರ್ನಾಟಕದ ಬಿಜೆಪಿಯ 28 ಬಿಜೆಪಿ ಅಭ್ಯರ್ಥಿಗಳು ನಮಗೆ ಓಟು ಕೊಡಬೇಡಿ, ನರೇಂದ್ರ ಮೋದಿಯವರಿಗೆ ಓಟು ಕೊಡಿ ಎಂದು ಕೇಳಿದ್ದರು. ರಾಜ್ಯದ ಜನ ನರೇಂದ್ರ ಮೋದಿಯವರ ಮುಖ ನೋಡಿ ಓಟು ಹಾಕಿಬಿಟ್ರು. ಆದರೆ ಇವತ್ತು ಮೋದಿ ಕರ್ನಾಟಕ್ಕೆ ದೊಡ್ಡ ದ್ರೋಹ ಮಾಡಿದ್ದಾರೆ ಎಂದು ಸಿದ್ದು ಆರೋಪಿಸಿದ್ದಾರೆ.

ನಾನು ಇದನ್ನು ಹೇಳಿದರೆ ಬಿಜೆಪಿಯವರಿಗೆ ಕೋಪ ಬರುತ್ತದೆ. ಆದರೆ ಮೋದಿಯವರು ಶಾಲಾಮಕ್ಕಳ ಜೊತೆಗೆ ಏನು ಮಾತಾಡಬೇಕು? ವಿದ್ಯಾಭ್ಯಾಸ, ಅವರ ಭವಿಷ್ಯದ ಬಗ್ಗೆ ಮಾತಾಡಬೇಕು. ಅಲ್ಲಿ ಹೋಗಿ ರಾಜಕೀಯ ಭಾಷಣ ಮಾಡಿದರೆ ಹೇಗೆ? ಸಿಎಎ, ಎನ್‌ಆರ್‌ಸಿ ಬಗ್ಗೆ ಮಾತಾಡುವುದು ಎಷ್ಟು ಔಚಿತ್ಯ, ಸಮರ್ಪಕ? ಎಂದು ಸಿದ್ದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್‌ನವರು ಮತ್ತು ಮಿತ್ರಪಕ್ಷಗಳು ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಮಾತಾಡಿ ಎಂದು ಮೋದಿ ಹೇಳಿದ್ದಾರೆ. ಪಾಕಿಸ್ತಾನ ಒಂದು ದುಷ್ಟ ರಾಷ್ಟ್ರ ಎಂದು ನಾನು ಒಪ್ಪಿಕೊಳ್ಳುತ್ತೇನೆ. ಅಲ್ಲಿ ಅವರು ಅಲ್ಪಸಂಖ್ಯಾತರರಿಗೆ ತೊಂದರೆ ಕೊಡುತ್ತಿದ್ದಾರೆ ಸರಿ. ಆದರೆ ಭಾರತದಲ್ಲಿರುವ ಅಲ್ಪಸಂಖ್ಯಾತರರ ಮೇಲೆ ನೀವು ಏನು ಮಾಡುತ್ತಿದ್ದೀರಿ ನರೇಂದ್ರ ಮೋದಿಯವರೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಸಂವಿಧಾನದ ವಿರುದ್ಧವಾಗಿ ಸಿಎಎ ಕಾನೂನು ಮಾಡುವುದು ಸರಿಯೇ? ದೇಶವನ್ನು ಧರ್ಮದ ಆಧಾರದಲ್ಲಿ ವಿಭಜನೆ ಮಾಡುವುದು ಸರಿಯೇ? ಮಕ್ಕಳ ಮುಂದೆ ರಾಜಕೀಯ ಭಾಷಣ ಮಾಡಬಹುದೆ? ಎಂದ ಅವರು, ಒಬ್ಬ ಪ್ರಧಾನ ಮಂತ್ರಿಯಾಗಿ ಮೋದಿ ಭಾಷಣದಲ್ಲಿ ಶೂರರು. ಅದರಲ್ಲಿ ಎರಡು ಮಾತಿಲ್ಲ. ಆದರೆ ಅವರು ವಿದ್ಯಾರ್ಥಿಗಳ ಮುಂದೆಯೂ, ಸಾರ್ವಜನಿಕರ ಮುಂದೆಯೂ, ರೈತರ ಬಗ್ಗೆಯೂ ಅದೇ ಭಾಷಣ ಮಾಡಿದರೆ ಅದು ಸಲ್ಲದು ಎಂದಿದ್ದಾರೆ.

ನೀವು ದೇಶದ ಸಮಸ್ಯೆಗಳ ಬಗ್ಗೆ ಮಾತಾಡಬೇಕು. ಆರ್ಥಿಕ ಪರಿಸ್ಥಿತಿ ಏನಾಗಿದೆ, ನೀವು ಕೊಟ್ಟ ಭರವಸೆಗಳು ಏನಾಗಿವೆ. ವರ್ಷಕ್ಕೆ ಎರಡು ಕೋಟಿ ಉದ್ಯೋಗಗಳ ಸೃಷ್ಟಿ ಏನಾಯಿತು, ರೈತರ ಆದಾಯ ದುಪ್ಪಟ್ಟು ಮಾಡುವುದು ಏನಾಯ್ತು? 2020ಕ್ಕೆ ರೈತರ ಆದಾಯ ದುಪ್ಪಟ್ಟು ಆಗಿದೆಯೇ? ಇದಕ್ಕೆ ಉತ್ತರಕೊಡಿ. ರೈತರ ಸಂಕಷ್ಟ ದುಪ್ಪಟ್ಟು ಆಗಿದೆಯೇ ಹೊರತು ಆದಾಯವಲ್ಲ. ರೈತರು ಆತ್ಮಹತ್ಯೆ ಮಾಡಿಕೊಳ್ಳುವುದು ಮುಂದುವರೆದಿದೆ. ರೈತರ ಸಾಲಾಮನ್ನ ಆಗಿಲ್ಲ. ಮಹಾದಾಯಿ ವಿವಾದ ಬಗೆಹರಿದಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನರೇಂದ್ರ ಮೋದಿ, ಜಾವಡೇಕರ್‌ ಸಹ ಸುಳ್ಳು ಹೇಳುತ್ತಾರೆ. ಅವರು ಬಾಯಿ ಬಿಟ್ಟರೆ ಬರೀ ಸುಳ್ಳು.. ಮೋದಿಯವರು ಕೊಟ್ಟ 90% ಭರವಸೆಗಳನ್ನು ಈಡೇರಿಸಿಲ್ಲ. ಕರ್ನಾಟಕಕ್ಕೆ ಬಂದಾಗಲೆಲ್ಲ ಸುಳ್ಳು ಹೇಳುತ್ತಾರೆ. ಸುಳ್ಳುಗಳಿಂದ ಸ್ವರ್ಗ ಸೃಷ್ಟಿ ಮಾಡಿಬಿಡುತ್ತಾರೆ. ಆದರೆ ನರೇಂದ್ರ ಮೋದಿಯವರ ಇಂತಹ ಮಾತುಗಲಿಂದ ಜನರ ಹೊಟ್ಟೆತುಂಬುವುದಿಲ್ಲ.. ನಿರುದ್ಯೋಗ ಬಗೆಹರಿಯುವುದಿಲ್ಲ ಅಲ್ಲವೇ ಎಂದಿದ್ದಾರೆ.

ಇಂದು ಜಿಡಿಪಿ ಅತ್ಯಂತ ತಳಮಟ್ಟಕ್ಕೆ ಹೋಗಿಬಿಟ್ಟಿದೆ. ಅವರು 4.5 ಇದೆ ಅನ್ನುತ್ತಿದ್ದಾರೆ. ಆದರೆ ನನ್ನ ಪ್ರಕಾರ ಅದು 2.5 ಅಷ್ಟೇ ಇರುವುದು. ಮನಮೋಹನ್‌ ಸಿಂಗ್‌ ಕಾಲದಲ್ಲಿ ಜಿಡಿಪಿ 8-9 ಇತ್ತು. ಮೋದಿಯವರು ಅಧಿಕಾರಕ್ಕೆ ಬಂದ ಮೇಲೆ ಐದುವರೆ ವರ್ಷಗಳಲ್ಲಿ ಆರ್ಥಿಕ ಪರಿಸ್ಥಿತಿಯನ್ನು ದಿವಾಳಿಯತ್ತ ತೆಗೆದುಕೊಂಡು ಹೋಗಿದ್ದಾರೆ. ಜಿಎಸ್‌ಟಿ ಪರಿಹಾರ ಬಂದಿಲ್ಲ. ಕುಡಿಯುವ ನೀರಿನ ಹಣ ಬಂದಿಲ್ಲ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...