Homeಕರ್ನಾಟಕಪ್ರವಾಹ ಸಂತ್ರಸ್ತರ ಬಗ್ಗೆ ಒಂದೂ ಮಾತಾಡದೇ ಮೋದಿ ಬರೀ ಸುಳ್ಳು ಹೇಳಿದ್ದಾರೆ: ಸಿದ್ದರಾಮಯ್ಯ ವಾಗ್ದಾಳಿ

ಪ್ರವಾಹ ಸಂತ್ರಸ್ತರ ಬಗ್ಗೆ ಒಂದೂ ಮಾತಾಡದೇ ಮೋದಿ ಬರೀ ಸುಳ್ಳು ಹೇಳಿದ್ದಾರೆ: ಸಿದ್ದರಾಮಯ್ಯ ವಾಗ್ದಾಳಿ

- Advertisement -
- Advertisement -

ನಿನ್ನೆ ಮತ್ತು ಇಂದ ಕರ್ನಾಟಕಕ್ಕೆ ಬಂದ ಪ್ರಧಾನಿ ಮೋದಿಯವರು ಪ್ರವಾಹ ಸಂತ್ರಸ್ತರ ಬಗ್ಗೆ ಒಂದೂ ಮಾತಾಡದೇ ಮೋದಿ ಬರೀ ಸುಳ್ಳು ಹೇಳಿದ್ದಾರೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಮೋದಿಯವರು ಪ್ರವಾಹ ಪರಿಹಾರಕ್ಕೆ ಹಣ ಘೋಷಣೆ ಮಾಡುತ್ತಾರೆ ಎಂದು ನಿರೀಕ್ಷೆ ಇತ್ತು. ಆದರೆ ಅವರು ಅದರ ಬಗ್ಗೆ ಪರೀಶೀಲನೆ ಮಾಡುತ್ತೇನೆ ಎಂದೂ ಸಹ ಹೇಳಲಿಲ್ಲ. ಇದರಿಂದ ಕರ್ನಾಟಕದ ಬಗ್ಗೆ ಅವರಿಗಿರುವ ಅಸಡ್ಡೆ, ನಿರ್ಲಕ್ಷ್ಯ ಎಷ್ಟು ಎಂಬುದು ಅರಿವಾಗಲಿದೆ. ಅವರ ನಡವಳಿಕೆಯಿಂದ ಸ್ಪಷ್ಟವಾಗಿ ಗೊತ್ತಾಗಲಿದೆ ಎಂದು ಕಿಡಿಕಾರಿದ್ದಾರೆ.

ಪ್ರವಾಹ ಪೀಡಿತರಿಗೆ ಪರಿಹಾರ ಕೊಡಲು ನಮ್ಮ ಬಳಿ ಹಣವಿಲ್ಲ, ದಯವಿಟ್ಟು ಕೇಂದ್ರದಿಂದ ಹಣ ಕೊಡಿ ಮುಖ್ಯಮಂತ್ರಿ ಯಡಿಯೂರಪ್ಪನವರು ಗೋಗೆರೆಯುತ್ತಿದ್ದಾರೆ. ಆದರೂ ಮೋದಿ ಪ್ರತಿಕ್ರಿಯಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಲೋಕಸಭೆ ಚುನಾವಣೆಗೆ ಮೊದಲು ಕರ್ನಾಟಕದ ಬಿಜೆಪಿಯ 28 ಬಿಜೆಪಿ ಅಭ್ಯರ್ಥಿಗಳು ನಮಗೆ ಓಟು ಕೊಡಬೇಡಿ, ನರೇಂದ್ರ ಮೋದಿಯವರಿಗೆ ಓಟು ಕೊಡಿ ಎಂದು ಕೇಳಿದ್ದರು. ರಾಜ್ಯದ ಜನ ನರೇಂದ್ರ ಮೋದಿಯವರ ಮುಖ ನೋಡಿ ಓಟು ಹಾಕಿಬಿಟ್ರು. ಆದರೆ ಇವತ್ತು ಮೋದಿ ಕರ್ನಾಟಕ್ಕೆ ದೊಡ್ಡ ದ್ರೋಹ ಮಾಡಿದ್ದಾರೆ ಎಂದು ಸಿದ್ದು ಆರೋಪಿಸಿದ್ದಾರೆ.

ನಾನು ಇದನ್ನು ಹೇಳಿದರೆ ಬಿಜೆಪಿಯವರಿಗೆ ಕೋಪ ಬರುತ್ತದೆ. ಆದರೆ ಮೋದಿಯವರು ಶಾಲಾಮಕ್ಕಳ ಜೊತೆಗೆ ಏನು ಮಾತಾಡಬೇಕು? ವಿದ್ಯಾಭ್ಯಾಸ, ಅವರ ಭವಿಷ್ಯದ ಬಗ್ಗೆ ಮಾತಾಡಬೇಕು. ಅಲ್ಲಿ ಹೋಗಿ ರಾಜಕೀಯ ಭಾಷಣ ಮಾಡಿದರೆ ಹೇಗೆ? ಸಿಎಎ, ಎನ್‌ಆರ್‌ಸಿ ಬಗ್ಗೆ ಮಾತಾಡುವುದು ಎಷ್ಟು ಔಚಿತ್ಯ, ಸಮರ್ಪಕ? ಎಂದು ಸಿದ್ದು ಪ್ರಶ್ನಿಸಿದ್ದಾರೆ.

ಕಾಂಗ್ರೆಸ್‌ನವರು ಮತ್ತು ಮಿತ್ರಪಕ್ಷಗಳು ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರರ ಮೇಲೆ ನಡೆಯುತ್ತಿರುವ ದೌರ್ಜನ್ಯದ ಬಗ್ಗೆ ಮಾತಾಡಿ ಎಂದು ಮೋದಿ ಹೇಳಿದ್ದಾರೆ. ಪಾಕಿಸ್ತಾನ ಒಂದು ದುಷ್ಟ ರಾಷ್ಟ್ರ ಎಂದು ನಾನು ಒಪ್ಪಿಕೊಳ್ಳುತ್ತೇನೆ. ಅಲ್ಲಿ ಅವರು ಅಲ್ಪಸಂಖ್ಯಾತರರಿಗೆ ತೊಂದರೆ ಕೊಡುತ್ತಿದ್ದಾರೆ ಸರಿ. ಆದರೆ ಭಾರತದಲ್ಲಿರುವ ಅಲ್ಪಸಂಖ್ಯಾತರರ ಮೇಲೆ ನೀವು ಏನು ಮಾಡುತ್ತಿದ್ದೀರಿ ನರೇಂದ್ರ ಮೋದಿಯವರೆ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಸಂವಿಧಾನದ ವಿರುದ್ಧವಾಗಿ ಸಿಎಎ ಕಾನೂನು ಮಾಡುವುದು ಸರಿಯೇ? ದೇಶವನ್ನು ಧರ್ಮದ ಆಧಾರದಲ್ಲಿ ವಿಭಜನೆ ಮಾಡುವುದು ಸರಿಯೇ? ಮಕ್ಕಳ ಮುಂದೆ ರಾಜಕೀಯ ಭಾಷಣ ಮಾಡಬಹುದೆ? ಎಂದ ಅವರು, ಒಬ್ಬ ಪ್ರಧಾನ ಮಂತ್ರಿಯಾಗಿ ಮೋದಿ ಭಾಷಣದಲ್ಲಿ ಶೂರರು. ಅದರಲ್ಲಿ ಎರಡು ಮಾತಿಲ್ಲ. ಆದರೆ ಅವರು ವಿದ್ಯಾರ್ಥಿಗಳ ಮುಂದೆಯೂ, ಸಾರ್ವಜನಿಕರ ಮುಂದೆಯೂ, ರೈತರ ಬಗ್ಗೆಯೂ ಅದೇ ಭಾಷಣ ಮಾಡಿದರೆ ಅದು ಸಲ್ಲದು ಎಂದಿದ್ದಾರೆ.

ನೀವು ದೇಶದ ಸಮಸ್ಯೆಗಳ ಬಗ್ಗೆ ಮಾತಾಡಬೇಕು. ಆರ್ಥಿಕ ಪರಿಸ್ಥಿತಿ ಏನಾಗಿದೆ, ನೀವು ಕೊಟ್ಟ ಭರವಸೆಗಳು ಏನಾಗಿವೆ. ವರ್ಷಕ್ಕೆ ಎರಡು ಕೋಟಿ ಉದ್ಯೋಗಗಳ ಸೃಷ್ಟಿ ಏನಾಯಿತು, ರೈತರ ಆದಾಯ ದುಪ್ಪಟ್ಟು ಮಾಡುವುದು ಏನಾಯ್ತು? 2020ಕ್ಕೆ ರೈತರ ಆದಾಯ ದುಪ್ಪಟ್ಟು ಆಗಿದೆಯೇ? ಇದಕ್ಕೆ ಉತ್ತರಕೊಡಿ. ರೈತರ ಸಂಕಷ್ಟ ದುಪ್ಪಟ್ಟು ಆಗಿದೆಯೇ ಹೊರತು ಆದಾಯವಲ್ಲ. ರೈತರು ಆತ್ಮಹತ್ಯೆ ಮಾಡಿಕೊಳ್ಳುವುದು ಮುಂದುವರೆದಿದೆ. ರೈತರ ಸಾಲಾಮನ್ನ ಆಗಿಲ್ಲ. ಮಹಾದಾಯಿ ವಿವಾದ ಬಗೆಹರಿದಿಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನರೇಂದ್ರ ಮೋದಿ, ಜಾವಡೇಕರ್‌ ಸಹ ಸುಳ್ಳು ಹೇಳುತ್ತಾರೆ. ಅವರು ಬಾಯಿ ಬಿಟ್ಟರೆ ಬರೀ ಸುಳ್ಳು.. ಮೋದಿಯವರು ಕೊಟ್ಟ 90% ಭರವಸೆಗಳನ್ನು ಈಡೇರಿಸಿಲ್ಲ. ಕರ್ನಾಟಕಕ್ಕೆ ಬಂದಾಗಲೆಲ್ಲ ಸುಳ್ಳು ಹೇಳುತ್ತಾರೆ. ಸುಳ್ಳುಗಳಿಂದ ಸ್ವರ್ಗ ಸೃಷ್ಟಿ ಮಾಡಿಬಿಡುತ್ತಾರೆ. ಆದರೆ ನರೇಂದ್ರ ಮೋದಿಯವರ ಇಂತಹ ಮಾತುಗಲಿಂದ ಜನರ ಹೊಟ್ಟೆತುಂಬುವುದಿಲ್ಲ.. ನಿರುದ್ಯೋಗ ಬಗೆಹರಿಯುವುದಿಲ್ಲ ಅಲ್ಲವೇ ಎಂದಿದ್ದಾರೆ.

ಇಂದು ಜಿಡಿಪಿ ಅತ್ಯಂತ ತಳಮಟ್ಟಕ್ಕೆ ಹೋಗಿಬಿಟ್ಟಿದೆ. ಅವರು 4.5 ಇದೆ ಅನ್ನುತ್ತಿದ್ದಾರೆ. ಆದರೆ ನನ್ನ ಪ್ರಕಾರ ಅದು 2.5 ಅಷ್ಟೇ ಇರುವುದು. ಮನಮೋಹನ್‌ ಸಿಂಗ್‌ ಕಾಲದಲ್ಲಿ ಜಿಡಿಪಿ 8-9 ಇತ್ತು. ಮೋದಿಯವರು ಅಧಿಕಾರಕ್ಕೆ ಬಂದ ಮೇಲೆ ಐದುವರೆ ವರ್ಷಗಳಲ್ಲಿ ಆರ್ಥಿಕ ಪರಿಸ್ಥಿತಿಯನ್ನು ದಿವಾಳಿಯತ್ತ ತೆಗೆದುಕೊಂಡು ಹೋಗಿದ್ದಾರೆ. ಜಿಎಸ್‌ಟಿ ಪರಿಹಾರ ಬಂದಿಲ್ಲ. ಕುಡಿಯುವ ನೀರಿನ ಹಣ ಬಂದಿಲ್ಲ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...