Homeಕೊರೊನಾ12 ಕೋಟಿ ಮೌಲ್ಯದ ಕಾರು ಖರೀದಿ: ಮೋದಿ ತಮ್ಮನ್ನು ತಾವು ಫಕೀರ ಎಂದು ಕರೆದುಕೊಳ್ಳಬಾರದು -...

12 ಕೋಟಿ ಮೌಲ್ಯದ ಕಾರು ಖರೀದಿ: ಮೋದಿ ತಮ್ಮನ್ನು ತಾವು ಫಕೀರ ಎಂದು ಕರೆದುಕೊಳ್ಳಬಾರದು – ಸಂಜಯ್ ರಾವುತ್

- Advertisement -
- Advertisement -

“ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಬೆಂಗಾವಲಿನಲ್ಲಿ “12 ಕೋಟಿ” ಮೌಲ್ಯದ ಕಾರನ್ನು ಹೊಂದಿದ್ದು, ತಮ್ಮನ್ನು ತಾವು ‘ಫಕೀರ’ ಎಂದು ಕರೆದುಕೊಳ್ಳಬಾರದು” ಎಂದು ಶಿವಸೇನೆಯ ಸಂಸದ ಸಂಜಯ್‌ ರಾವುತ್ ಭಾನುವಾರ ಹೇಳಿದ್ದಾರೆ.

ಶಿವಸೇನೆಯ ಮುಖವಾಣಿ ಸಾಮ್ನಾದ ತಮ್ಮ ಸಾಪ್ತಾಹಿಕ ಅಂಕಣ ’ರೋಖ್‌ಥೋಕ್‌’ದಲ್ಲಿ ಈ ಕುರಿತು ಬರೆದಿರುವ ಅವರು, ಜವಾಹರಲಾಲ್ ನೆಹರೂ ಯಾವಾಗಲೂ ದೇಶೀಯ ನಿರ್ಮಿತ ಕಾರನ್ನು ಬಳಸುತ್ತಿದ್ದದ್ದು ಮತ್ತು ಇಂದಿರಾ ಗಾಂಧಿ ಅವರು ತಮ್ಮ ಜೀವ ಬೆದರಿಕೆಯ ಹೊರತಾಗಿಯೂ ತಮ್ಮ ಭದ್ರತಾ ಸಿಬ್ಬಂದಿಯನ್ನು ಬದಲಾಯಿಸದಿದ್ದಕ್ಕಾಗಿ ಹೊಗಳಿದ್ದಾರೆ.

“ಡಿಸೆಂಬರ್ 28 ರಂದು ಮಾಧ್ಯಮಗಳು ಪ್ರಧಾನಿ ಮೋದಿಯವರ 12 ಕೋಟಿ ರೂಪಾಯಿಯ ಕಾರಿನ ಚಿತ್ರಗಳನ್ನು ವರದಿ ಮಾಡಿವೆ. ತನ್ನನ್ನು ತಾನು ಫಕೀರ್, ಪ್ರಧಾನ ಸೇವಕ ಎಂದು ಕರೆದುಕೊಳ್ಳುವ ವ್ಯಕ್ತಿ ವಿದೇಶಿ ನಿರ್ಮಿತ ಕಾರನ್ನು ಬಳಸುತ್ತಾರೆ” ಎಂದು ರಾವುತ್ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: 12 ಕೋಟಿ ಮೌಲ್ಯದ ಪ್ರಧಾನಿ ಮೋದಿಯವರ ಹೊಸ ಕಾರು: ವಿಶೇಷತೆಗಳು ಇಲ್ಲಿವೆ

“ಪ್ರಧಾನಿಯವರ ಭದ್ರತೆ ಮತ್ತು ಸೌಕರ್ಯಗಳು ಮುಖ್ಯ, ಆದರೆ ಇನ್ನು ಮುಂದೆ, ಪ್ರಧಾನ ಸೇವಕರು ತಾನು ಫಕೀರ (ಸನ್ಯಾಸಿ) ಎಂದು ಪುನರುಚ್ಚರಿಸಬಾರದು. ‘ಮೇಕ್ ಇನ್ ಇಂಡಿಯಾ’ ಮತ್ತು ‘ಸ್ಟಾರ್ಟ್-ಅಪ್ ಇಂಡಿಯಾ’ ನಂತಹ ‘ಸ್ವದೇಶಿ’ ಕಾರ್ಯಕ್ರಮಗಳನ್ನು ಪ್ರಾರಂಭಿಸಿದ ಮೋದಿ ಅವರು ವಿದೇಶಿ ಉತ್ಪಾದನೆಯ ಕಾರನ್ನು ಬಳಸುತ್ತಿದ್ದಾರೆ” ಎಂದು ರಾಜ್ಯಸಭಾ ಸದಸ್ಯ ರಾವುತ್ ಹೇಳಿದ್ದಾರೆ.

ಜವಾಹರಲಾಲ್ ನೆಹರೂ ಅವರನ್ನು ಶ್ಲಾಘಿಸಿರುವ ಶಿವಸೇನೆಯ ವಕ್ತಾರ ರಾವುತ್, ’ದೇಶ ವಿಭಜನೆಯ ನಂತರ ದೇಶದ ಮೊದಲ ಪ್ರಧಾನಿಯವರು ಭದ್ರತಾ ಬೆದರಿಕೆಯ ನಡುವೆಯೂ ಯಾವಾಗಲೂ ಭಾರತೀಯ ನಿರ್ಮಿತ ಅಂಬಾಸಿಡರ್ ಕಾರನ್ನು ಬಳಸುತ್ತಿದ್ದರು’ ಎಂದಿದ್ದಾರೆ.

’ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು ತಮ್ಮ ಜೀವ ಬೆದರಿಕೆಯ ಹೊರತಾಗಿಯೂ ತಮ್ಮ ಭದ್ರತೆಗಾಗಿ ನಿಯೋಜಿಸಲಾದ ಸಿಖ್ ಭದ್ರತಾ ಸಿಬ್ಬಂದಿಯನ್ನು ಬದಲಾಯಿಸಲಿಲ್ಲ. ಅಲ್ಲದೆ, ಮಾಜಿ ಪ್ರಧಾನಿ ರಾಜೀವ್ ಗಾಂಧಿ ತಮಿಳುನಾಡಿನಲ್ಲಿ ಜನಸಂದಣಿಯೊಂದಿಗೆ ಬೆರೆತು ಎಲ್‌ಟಿಟಿಇಯಿಂದ ಕೊಲ್ಲಲ್ಪಟ್ಟರು’ ಎಂದು ಹೇಳಿದ್ದಾರೆ.

ಅತ್ಯಧಿಕವಾಗಿ ನವೀಕೃತಗೊಂಡಿರುವ ಹೊಸ ಮರ್ಸಿಡಿಸ್-ಮೇಬ್ಯಾಕ್ S 650 ಗಾರ್ಡ್ (Mercedes-Maybach S 650 Guard) ಕಾರನ್ನು ಪ್ರಧಾನಿ ನರೇಂದ್ರ ಮೋದಿ ಈಗ ಬಳಸುತ್ತಿದ್ದಾರೆ. ಇದು ರೇಂಜ್ ರೋವರ್ ವೋಗ್ ಮತ್ತು ಟೊಯೋಟಾ ಲ್ಯಾಂಡ್ ಕ್ರೂಸರ್‌ಗಿಂತ ಉತ್ತಮವಾಗಿ ನವೀಕರಣಗೊಂಡಿದೆ.

ಈ ಕಾರಿನ ಬೆಲೆ 12 ಕೋಟಿ ರೂಪಾಯಿಯಾಗಿದ್ದು, ವಿಪಕ್ಷಗಳು ಸೇರಿದಂತೆ ನೆಟ್ಟಿಗರು ಕೊರೊನಾ ಲಾಕ್‌ಡೌನ್‌‌ನಿಂದ ಜನ ಪರದಾಡಿ, ಈಗಲೂ ಜೀವನ ಕಟಟಿಕೊಳ್ಳು ಒದ್ದಾಡುತ್ತಿದ್ದಾರೆ. ಹೊಸ ಸೋಂಕು ದೇಶವನ್ನು ಆವರಿಸುತ್ತಿರುವ ಹೊತ್ತಿನಲ್ಲಿ ಪ್ರಧಾನಿಯವರು ಇಷ್ಟು ದುಂದುವೆಚ್ಚ ಮಾಡಬಹುದೇ ಎಂದು ಆಕ್ರೋಶ ಹೊರಹಾಕಿದ್ದಾರೆ.


ಇದನ್ನೂ ಓದಿ: 12 ಕೋಟಿ ಮೌಲ್ಯದ ಪ್ರಧಾನಿ ಮೋದಿ ಕಾರು: ಟ್ವಿಟರ್‌ನಲ್ಲಿ ’ಬ್ರಾಂಡೆಡ್ ಫಕೀರ್‌’ ಟ್ರೆಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...