Homeಕೊರೊನಾ12 ಕೋಟಿ ಮೌಲ್ಯದ ಕಾರು ಖರೀದಿ: ಮೋದಿ ತಮ್ಮನ್ನು ತಾವು ಫಕೀರ ಎಂದು ಕರೆದುಕೊಳ್ಳಬಾರದು -...

12 ಕೋಟಿ ಮೌಲ್ಯದ ಕಾರು ಖರೀದಿ: ಮೋದಿ ತಮ್ಮನ್ನು ತಾವು ಫಕೀರ ಎಂದು ಕರೆದುಕೊಳ್ಳಬಾರದು – ಸಂಜಯ್ ರಾವುತ್

- Advertisement -
- Advertisement -

“ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಬೆಂಗಾವಲಿನಲ್ಲಿ “12 ಕೋಟಿ” ಮೌಲ್ಯದ ಕಾರನ್ನು ಹೊಂದಿದ್ದು, ತಮ್ಮನ್ನು ತಾವು ‘ಫಕೀರ’ ಎಂದು ಕರೆದುಕೊಳ್ಳಬಾರದು” ಎಂದು ಶಿವಸೇನೆಯ ಸಂಸದ ಸಂಜಯ್‌ ರಾವುತ್ ಭಾನುವಾರ ಹೇಳಿದ್ದಾರೆ.

ಶಿವಸೇನೆಯ ಮುಖವಾಣಿ ಸಾಮ್ನಾದ ತಮ್ಮ ಸಾಪ್ತಾಹಿಕ ಅಂಕಣ ’ರೋಖ್‌ಥೋಕ್‌’ದಲ್ಲಿ ಈ ಕುರಿತು ಬರೆದಿರುವ ಅವರು, ಜವಾಹರಲಾಲ್ ನೆಹರೂ ಯಾವಾಗಲೂ ದೇಶೀಯ ನಿರ್ಮಿತ ಕಾರನ್ನು ಬಳಸುತ್ತಿದ್ದದ್ದು ಮತ್ತು ಇಂದಿರಾ ಗಾಂಧಿ ಅವರು ತಮ್ಮ ಜೀವ ಬೆದರಿಕೆಯ ಹೊರತಾಗಿಯೂ ತಮ್ಮ ಭದ್ರತಾ ಸಿಬ್ಬಂದಿಯನ್ನು ಬದಲಾಯಿಸದಿದ್ದಕ್ಕಾಗಿ ಹೊಗಳಿದ್ದಾರೆ.

“ಡಿಸೆಂಬರ್ 28 ರಂದು ಮಾಧ್ಯಮಗಳು ಪ್ರಧಾನಿ ಮೋದಿಯವರ 12 ಕೋಟಿ ರೂಪಾಯಿಯ ಕಾರಿನ ಚಿತ್ರಗಳನ್ನು ವರದಿ ಮಾಡಿವೆ. ತನ್ನನ್ನು ತಾನು ಫಕೀರ್, ಪ್ರಧಾನ ಸೇವಕ ಎಂದು ಕರೆದುಕೊಳ್ಳುವ ವ್ಯಕ್ತಿ ವಿದೇಶಿ ನಿರ್ಮಿತ ಕಾರನ್ನು ಬಳಸುತ್ತಾರೆ” ಎಂದು ರಾವುತ್ ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: 12 ಕೋಟಿ ಮೌಲ್ಯದ ಪ್ರಧಾನಿ ಮೋದಿಯವರ ಹೊಸ ಕಾರು: ವಿಶೇಷತೆಗಳು ಇಲ್ಲಿವೆ

“ಪ್ರಧಾನಿಯವರ ಭದ್ರತೆ ಮತ್ತು ಸೌಕರ್ಯಗಳು ಮುಖ್ಯ, ಆದರೆ ಇನ್ನು ಮುಂದೆ, ಪ್ರಧಾನ ಸೇವಕರು ತಾನು ಫಕೀರ (ಸನ್ಯಾಸಿ) ಎಂದು ಪುನರುಚ್ಚರಿಸಬಾರದು. ‘ಮೇಕ್ ಇನ್ ಇಂಡಿಯಾ’ ಮತ್ತು ‘ಸ್ಟಾರ್ಟ್-ಅಪ್ ಇಂಡಿಯಾ’ ನಂತಹ ‘ಸ್ವದೇಶಿ’ ಕಾರ್ಯಕ್ರಮಗಳನ್ನು ಪ್ರಾರಂಭಿಸಿದ ಮೋದಿ ಅವರು ವಿದೇಶಿ ಉತ್ಪಾದನೆಯ ಕಾರನ್ನು ಬಳಸುತ್ತಿದ್ದಾರೆ” ಎಂದು ರಾಜ್ಯಸಭಾ ಸದಸ್ಯ ರಾವುತ್ ಹೇಳಿದ್ದಾರೆ.

ಜವಾಹರಲಾಲ್ ನೆಹರೂ ಅವರನ್ನು ಶ್ಲಾಘಿಸಿರುವ ಶಿವಸೇನೆಯ ವಕ್ತಾರ ರಾವುತ್, ’ದೇಶ ವಿಭಜನೆಯ ನಂತರ ದೇಶದ ಮೊದಲ ಪ್ರಧಾನಿಯವರು ಭದ್ರತಾ ಬೆದರಿಕೆಯ ನಡುವೆಯೂ ಯಾವಾಗಲೂ ಭಾರತೀಯ ನಿರ್ಮಿತ ಅಂಬಾಸಿಡರ್ ಕಾರನ್ನು ಬಳಸುತ್ತಿದ್ದರು’ ಎಂದಿದ್ದಾರೆ.

’ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು ತಮ್ಮ ಜೀವ ಬೆದರಿಕೆಯ ಹೊರತಾಗಿಯೂ ತಮ್ಮ ಭದ್ರತೆಗಾಗಿ ನಿಯೋಜಿಸಲಾದ ಸಿಖ್ ಭದ್ರತಾ ಸಿಬ್ಬಂದಿಯನ್ನು ಬದಲಾಯಿಸಲಿಲ್ಲ. ಅಲ್ಲದೆ, ಮಾಜಿ ಪ್ರಧಾನಿ ರಾಜೀವ್ ಗಾಂಧಿ ತಮಿಳುನಾಡಿನಲ್ಲಿ ಜನಸಂದಣಿಯೊಂದಿಗೆ ಬೆರೆತು ಎಲ್‌ಟಿಟಿಇಯಿಂದ ಕೊಲ್ಲಲ್ಪಟ್ಟರು’ ಎಂದು ಹೇಳಿದ್ದಾರೆ.

ಅತ್ಯಧಿಕವಾಗಿ ನವೀಕೃತಗೊಂಡಿರುವ ಹೊಸ ಮರ್ಸಿಡಿಸ್-ಮೇಬ್ಯಾಕ್ S 650 ಗಾರ್ಡ್ (Mercedes-Maybach S 650 Guard) ಕಾರನ್ನು ಪ್ರಧಾನಿ ನರೇಂದ್ರ ಮೋದಿ ಈಗ ಬಳಸುತ್ತಿದ್ದಾರೆ. ಇದು ರೇಂಜ್ ರೋವರ್ ವೋಗ್ ಮತ್ತು ಟೊಯೋಟಾ ಲ್ಯಾಂಡ್ ಕ್ರೂಸರ್‌ಗಿಂತ ಉತ್ತಮವಾಗಿ ನವೀಕರಣಗೊಂಡಿದೆ.

ಈ ಕಾರಿನ ಬೆಲೆ 12 ಕೋಟಿ ರೂಪಾಯಿಯಾಗಿದ್ದು, ವಿಪಕ್ಷಗಳು ಸೇರಿದಂತೆ ನೆಟ್ಟಿಗರು ಕೊರೊನಾ ಲಾಕ್‌ಡೌನ್‌‌ನಿಂದ ಜನ ಪರದಾಡಿ, ಈಗಲೂ ಜೀವನ ಕಟಟಿಕೊಳ್ಳು ಒದ್ದಾಡುತ್ತಿದ್ದಾರೆ. ಹೊಸ ಸೋಂಕು ದೇಶವನ್ನು ಆವರಿಸುತ್ತಿರುವ ಹೊತ್ತಿನಲ್ಲಿ ಪ್ರಧಾನಿಯವರು ಇಷ್ಟು ದುಂದುವೆಚ್ಚ ಮಾಡಬಹುದೇ ಎಂದು ಆಕ್ರೋಶ ಹೊರಹಾಕಿದ್ದಾರೆ.


ಇದನ್ನೂ ಓದಿ: 12 ಕೋಟಿ ಮೌಲ್ಯದ ಪ್ರಧಾನಿ ಮೋದಿ ಕಾರು: ಟ್ವಿಟರ್‌ನಲ್ಲಿ ’ಬ್ರಾಂಡೆಡ್ ಫಕೀರ್‌’ ಟ್ರೆಂಡ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...