Homeಮುಖಪುಟಮೋದಿಯವರ ಪಕ್ಷ, ಸಂಘಪರಿವಾರ ಅತಿ ಹೆಚ್ಚು ದ್ವೇಷ ಭಾಷಣಗಳಲ್ಲಿ ತೊಡಗಿವೆ: ವರದಿ

ಮೋದಿಯವರ ಪಕ್ಷ, ಸಂಘಪರಿವಾರ ಅತಿ ಹೆಚ್ಚು ದ್ವೇಷ ಭಾಷಣಗಳಲ್ಲಿ ತೊಡಗಿವೆ: ವರದಿ

- Advertisement -
- Advertisement -

2014 ರಲ್ಲಿ ಮೋದಿ ಅಧಿಕಾರಕ್ಕೆ ಬಂದ ನಂತರ ದೇಶದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಎತ್ತಿ ತೋರಿಸುವ ವರದಿಯೊಂದು ಬಿಡುಗಡೆಯಾಗಿದೆ. ವರದಿ ಪ್ರಕಾರ, ಈ ವರ್ಷದ ಮೊದಲಾರ್ಧದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಮತ್ತು ಅಂಗಸಂಸ್ಥೆ ಗುಂಪುಗಳು ಹೆಚ್ಚಿನ ದ್ವೇಷ ಭಾಷಣಗಳನ್ನು ಮಾಡಿವೆ ಎಂದು ಹೇಳಿದೆ.

ವಾಷಿಂಗ್ಟನ್ ಡಿಸಿ ಮೂಲದ ಸಂಶೋಧನಾ ಸಂಸ್ಥೆಯು ಭಾರತದಲ್ಲಿ ಅಲ್ಪಸಂಖ್ಯಾತರ ವಿರುದ್ಧದ ದ್ವೇಷ ಭಾಷಣ ಮತ್ತು ಅಪರಾಧಗಳನ್ನು ಪತ್ತೆಹಚ್ಚುವ ”ಹಿಂದುತ್ವ ವಾಚ್” ಎನ್ನುವ ವರದಿಯನ್ನು ಸೋಮವಾರ ಬಿಡುಗಡೆ ಮಾಡಿದೆ.

2014ರಲ್ಲಿ ಮೋದಿ ಅಧಿಕಾರಕ್ಕೆ ಬಂದ ನಂತರ ಭಾರತದಲ್ಲಿ ಮುಸ್ಲಿಂ ವಿರೋಧಿ ಭಾಷಣಗಳು ಹೆಚ್ಚಾಗಿವೆ ಎಂದು ಸಂಶೋಧಕರು ಬರೆದಿದ್ದಾರೆ. ಈ ವರ್ಷ ದಾಖಲಿತ ಘಟನೆಗಳಲ್ಲಿ ಅರ್ಧಕ್ಕಿಂತ ಹೆಚ್ಚು ಪ್ರಕರಣಗಳು ಆಡಳಿತಾರೂಢ ಬಿಜೆಪಿ ಮತ್ತು ಬಜರಂಗ ದಳ ಸೇರಿದಂತೆ ಅಂಗಸಂಸ್ಥೆಗಳು ದ್ವೇಷಭಾಷಣ ಮಾಡುವೆ ಎಂದು ವರದಿಯು ಕಂಡುಹಿಡಿದಿದೆ. ಬಿಜೆಪಿಯ ಸೈದ್ಧಾಂತಿಕ ಪೋಷಕರಾದ ವಿಶ್ವ ಹಿಂದೂ ಪರಿಷತ್, ಸಕಲ ಹಿಂದೂ ಸಮಾಜ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ ಅಥವಾ ಆರ್‌ಎಸ್‌ಎಸ್‌ ಇಂತಹ ಹೇಳಿಕೆಗಳನ್ನು ಹೆಚ್ಚಾಗಿ ನೀಡುತ್ತವೆ ಎಂದು ವರದಿ ಹೇಳಿದೆ.

ಈ ವರದಿಯಲ್ಲಿ ಮುಸ್ಲಿಮರ ವಿರುದ್ಧ ದಾಖಲಾದ 255 ದ್ವೇಷದ ಭಾಷಣಗಳಲ್ಲಿ ಶೇಕಡಾ 80ರಷ್ಟು ಪ್ರಕರಣಗಳು ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಸಂಭವಿಸಿವೆ ಎಂದು ಬಹಿರಂಗಪಡಿಸಿದೆಬ ಎಂದು ಬ್ಲೂಮ್‌ಬರ್ಗ್ ವರದಿ ಮಾಡಿದೆ.

ಬಿಜೆಪಿಯ ನಾಯಕತ್ವದಲ್ಲಿ, ಭಾರತದ ಮುಸ್ಲಿಮರು ಜನಸಂಖ್ಯೆಯು ತಾರತಮ್ಯ ಮತ್ತು ಧಾರ್ಮಿಕ ಕಿರುಕುಳವನ್ನು ಎದುರಿಸುತ್ತಿದೆ ಎಂದು ವರದಿ ಹೇಳಿದೆ. ಬಿಜೆಪಿ ಹಾಗೂ ಅದರ ಅಂಗಸಂಸ್ಥೆಗಳ ಕಾರ್ಯಸೂಚಿಯ ಭಾಗವಾಗಿ ಮುಸ್ಲಿಮರನ್ನು ಕೊನೆಯ ದರ್ಜೆಯ ಪ್ರಜೆಗಳನ್ನಾಗಿಸುವುದು ಮತ್ತು ಭಾರತವನ್ನು ಹಿಂದೂ ರಾಷ್ಟ್ರವಾಗಿ ಸ್ಥಾಪಿಸುವುದಾಗಿದೆ.

ಇದನ್ನೂ ಓದಿ: ಬಿಜೆಪಿ-ಜೆಡಿಎಸ್ ಮೈತ್ರಿ: ದಳದಲ್ಲಿ ಭಿನ್ನಮತ, ರಾಜೀನಾಮೆಗೆ ಮುಂದಾದ್ರಾ ಮುಸ್ಲಿ ಮುಖಂಡರು?

2017ರಲ್ಲಿ ಭಾರತದ ಕ್ರೈಮ್ ಬ್ಯೂರೋ ದ್ವೇಷದ ಅಪರಾಧದ ಡೇಟಾವನ್ನು ಸಂಗ್ರಹಿಸುವುದನ್ನು ನಿಲ್ಲಿಸಲಾಯಿತು. ಅದಾದ ಬಳಿಕ ಮುಸ್ಲಿಂ ವಿರೋಧಿ ಭಾಷಣದ ನಿದರ್ಶನಗಳನ್ನು ದಾಖಲಿಸಿರುವ ಮೊದಲ ವರದಿ ಇದಾಗಿದೆ.

ಹಿಂದುತ್ವ ವಾಚ್ ಡೇಟಾವನ್ನು ಸಂಗ್ರಹಿಸುವಲ್ಲಿ ಸಾಮಾಜಿಕ ಮಾಧ್ಯಮ ಮತ್ತು ಸುದ್ದಿವಾಹಿನಿಗಳನ್ನು ಅವಲಂಬಿಸಿದೆ. ಇದು ದ್ವೇಷ ಭಾಷಣದ ಘಟನೆಗಳ ಪರಿಶೀಲಿಸಬಹುದಾದ ವೀಡಿಯೊಗಳನ್ನು ಪತ್ತೆಹಚ್ಚಲು ಡೇಟಾ ಸ್ಕ್ರ್ಯಾಪಿಂಗ್ ತಂತ್ರಗಳನ್ನು ಬಳಸಿತು ಮತ್ತು ನಂತರ ಪತ್ರಕರ್ತರು ಮತ್ತು ಸಂಶೋಧಕರ ಮೂಲಕ ಘಟನೆಗಳ ಆಳವಾದ ತನಿಖೆಯನ್ನು ನಡೆಸಿತು.

ದ್ವೇಷದ ಭಾಷಣಕ್ಕೆ ಭಾರತವು ಅಧಿಕೃತ ವ್ಯಾಖ್ಯಾನವನ್ನು ಹೊಂದಿಲ್ಲವಾದರೂ, ಸಂಶೋಧನಾ ಗುಂಪು ವಿಶ್ವಸಂಸ್ಥೆಯ ಭಾಷೆಯನ್ನು ಬಳಸಿದೆ. ಇದು ದ್ವೇಷದ ಭಾಷಣವನ್ನು “ಯಾವುದೇ ರೀತಿಯ” ಸಂವಹನ ಎಂದು ನಿರೂಪಿಸುತ್ತದೆ, ಅದು ಧರ್ಮ, ಜನಾಂಗೀಯತೆ, ರಾಷ್ಟ್ರೀಯತೆ ಮತ್ತು ಜನಾಂಗದ ಪೂರ್ವಾಗ್ರಹ ಪೀಡಿತ ಅಥವಾ ತಾರತಮ್ಯದ ಭಾಷೆಯನ್ನು ಒಂದು ಧಾರ್ಮದ ವಿರುದ್ಧ ಬಳಸುತ್ತದೆ.

ಮಹಾರಾಷ್ಟ್ರ, ಕರ್ನಾಟಕ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಗುಜರಾತ್‌ನಲ್ಲಿ ದ್ವೇಷಪೂರಿತ ಭಾಷಣಗಳ ಹೆಚ್ಚಿನ ಸಂಖ್ಯೆಯ ಸಭೆಗಳು ನಡೆದಿವೆ ಎಂದು ವರದಿಯು ಕಂಡುಹಿಡಿದಿದೆ. ಹಿಂದುತ್ವ ವಾಚ್ 15 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಲ್ಲಿನ ಚಟುವಟಿಕೆಗಳನ್ನು ಮೇಲ್ವಿಚಾರಣೆ ಮಾಡಿದೆ. ಸುಮಾರು 64 ಪ್ರತಿಶತ ಘಟನೆಗಳು ಮುಸ್ಲಿಂ ವಿರೋಧಿ “ಪಿತೂರಿ ಸಿದ್ಧಾಂತಗಳನ್ನು” ಪ್ರಚಾರ ಮಾಡಿದೆ ಎಂದು ವರದಿ ಮಾಡಿದೆ. ಮುಸ್ಲಿಮರು ಹಿಂದೂ ಮಹಿಳೆಯರನ್ನು ಮತಾಂತರಿಸಲು ಮದುವೆಗೆ ಆಮಿಷ ಒಡ್ಡುತ್ತಿದ್ದಾರೆ ಎಂಬ ಹೇಳಿಕೆಯೂ ಸೇರಿದೆ.

33 ಪ್ರತಿಶತ ಘಟನೆಗಳಲ್ಲಿ ಮುಸ್ಲಿಮರ ವಿರುದ್ಧ ಹಿಂಸಾಚಾರವನ್ನು ಉಂಟುಮಾಡಲು ಒಂದು ರ್ಯಾಲಿಗೂ ಕರೆ ನೀಡಲಾಗಿತ್ತು ಎಂದು ವರದಿ ಹೇಳಿದೆ ಮತ್ತು 11% ಹಿಂದೂಗಳು ಮುಸ್ಲಿಮರನ್ನು ಬಹಿಷ್ಕರಿಸಲು ಮನವಿಗಳನ್ನು ಒಳಗೊಂಡಿದೆ. ಉಳಿದ ಪ್ರಕರಣಗಳಲ್ಲಿ ಮುಸ್ಲಿಂ ಮಹಿಳೆಯರನ್ನು ಗುರಿಯಾಗಿಸಿಕೊಂಡು “ದ್ವೇಷ ತುಂಬಿದ ಮತ್ತು ಲೈಂಗಿಕತೆಯ ಭಾಷಣ”ಗಳನ್ನು ಮಾಡಲಾಗಿದೆ ಎಂದು ವರದಿ ತಿಳಿಸಿದೆ.

”ದ್ವೇಷದ ಭಾಷಣವನ್ನು ತಡೆಯಬೇಕಿದ್ದ ಸರ್ಕಾರಿ ಅಧಿಕಾರಿಗಳು, ತಾವು ಅವರೊಂದಿಗೆ ಸೇರಿಕೊಂಡಿದ್ದಾರೆ” ಎಂದು ವರದಿ ಹೇಳಿದೆ. ಈ ವರದಿಯು ದಾಖಲಿಸಿರುವಂತೆ, ದ್ವೇಷದ ಭಾಷಣದ ಕೆಲವು ಪ್ರಚಾರಕರಲ್ಲಿ ಮುಖ್ಯಮಂತ್ರಿಗಳು, ಶಾಸಕರು ಮತ್ತು ಆಡಳಿತಾರೂಢ ಬಿಜೆಪಿಯ ಹಿರಿಯ ನಾಯಕರು ಸೇರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...