Homeಮುಖಪುಟಮೋದಿಯವರ ಪಕ್ಷ, ಸಂಘಪರಿವಾರ ಅತಿ ಹೆಚ್ಚು ದ್ವೇಷ ಭಾಷಣಗಳಲ್ಲಿ ತೊಡಗಿವೆ: ವರದಿ

ಮೋದಿಯವರ ಪಕ್ಷ, ಸಂಘಪರಿವಾರ ಅತಿ ಹೆಚ್ಚು ದ್ವೇಷ ಭಾಷಣಗಳಲ್ಲಿ ತೊಡಗಿವೆ: ವರದಿ

- Advertisement -
- Advertisement -

2014 ರಲ್ಲಿ ಮೋದಿ ಅಧಿಕಾರಕ್ಕೆ ಬಂದ ನಂತರ ದೇಶದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಎತ್ತಿ ತೋರಿಸುವ ವರದಿಯೊಂದು ಬಿಡುಗಡೆಯಾಗಿದೆ. ವರದಿ ಪ್ರಕಾರ, ಈ ವರ್ಷದ ಮೊದಲಾರ್ಧದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಮತ್ತು ಅಂಗಸಂಸ್ಥೆ ಗುಂಪುಗಳು ಹೆಚ್ಚಿನ ದ್ವೇಷ ಭಾಷಣಗಳನ್ನು ಮಾಡಿವೆ ಎಂದು ಹೇಳಿದೆ.

ವಾಷಿಂಗ್ಟನ್ ಡಿಸಿ ಮೂಲದ ಸಂಶೋಧನಾ ಸಂಸ್ಥೆಯು ಭಾರತದಲ್ಲಿ ಅಲ್ಪಸಂಖ್ಯಾತರ ವಿರುದ್ಧದ ದ್ವೇಷ ಭಾಷಣ ಮತ್ತು ಅಪರಾಧಗಳನ್ನು ಪತ್ತೆಹಚ್ಚುವ ”ಹಿಂದುತ್ವ ವಾಚ್” ಎನ್ನುವ ವರದಿಯನ್ನು ಸೋಮವಾರ ಬಿಡುಗಡೆ ಮಾಡಿದೆ.

2014ರಲ್ಲಿ ಮೋದಿ ಅಧಿಕಾರಕ್ಕೆ ಬಂದ ನಂತರ ಭಾರತದಲ್ಲಿ ಮುಸ್ಲಿಂ ವಿರೋಧಿ ಭಾಷಣಗಳು ಹೆಚ್ಚಾಗಿವೆ ಎಂದು ಸಂಶೋಧಕರು ಬರೆದಿದ್ದಾರೆ. ಈ ವರ್ಷ ದಾಖಲಿತ ಘಟನೆಗಳಲ್ಲಿ ಅರ್ಧಕ್ಕಿಂತ ಹೆಚ್ಚು ಪ್ರಕರಣಗಳು ಆಡಳಿತಾರೂಢ ಬಿಜೆಪಿ ಮತ್ತು ಬಜರಂಗ ದಳ ಸೇರಿದಂತೆ ಅಂಗಸಂಸ್ಥೆಗಳು ದ್ವೇಷಭಾಷಣ ಮಾಡುವೆ ಎಂದು ವರದಿಯು ಕಂಡುಹಿಡಿದಿದೆ. ಬಿಜೆಪಿಯ ಸೈದ್ಧಾಂತಿಕ ಪೋಷಕರಾದ ವಿಶ್ವ ಹಿಂದೂ ಪರಿಷತ್, ಸಕಲ ಹಿಂದೂ ಸಮಾಜ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ ಅಥವಾ ಆರ್‌ಎಸ್‌ಎಸ್‌ ಇಂತಹ ಹೇಳಿಕೆಗಳನ್ನು ಹೆಚ್ಚಾಗಿ ನೀಡುತ್ತವೆ ಎಂದು ವರದಿ ಹೇಳಿದೆ.

ಈ ವರದಿಯಲ್ಲಿ ಮುಸ್ಲಿಮರ ವಿರುದ್ಧ ದಾಖಲಾದ 255 ದ್ವೇಷದ ಭಾಷಣಗಳಲ್ಲಿ ಶೇಕಡಾ 80ರಷ್ಟು ಪ್ರಕರಣಗಳು ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಸಂಭವಿಸಿವೆ ಎಂದು ಬಹಿರಂಗಪಡಿಸಿದೆಬ ಎಂದು ಬ್ಲೂಮ್‌ಬರ್ಗ್ ವರದಿ ಮಾಡಿದೆ.

ಬಿಜೆಪಿಯ ನಾಯಕತ್ವದಲ್ಲಿ, ಭಾರತದ ಮುಸ್ಲಿಮರು ಜನಸಂಖ್ಯೆಯು ತಾರತಮ್ಯ ಮತ್ತು ಧಾರ್ಮಿಕ ಕಿರುಕುಳವನ್ನು ಎದುರಿಸುತ್ತಿದೆ ಎಂದು ವರದಿ ಹೇಳಿದೆ. ಬಿಜೆಪಿ ಹಾಗೂ ಅದರ ಅಂಗಸಂಸ್ಥೆಗಳ ಕಾರ್ಯಸೂಚಿಯ ಭಾಗವಾಗಿ ಮುಸ್ಲಿಮರನ್ನು ಕೊನೆಯ ದರ್ಜೆಯ ಪ್ರಜೆಗಳನ್ನಾಗಿಸುವುದು ಮತ್ತು ಭಾರತವನ್ನು ಹಿಂದೂ ರಾಷ್ಟ್ರವಾಗಿ ಸ್ಥಾಪಿಸುವುದಾಗಿದೆ.

ಇದನ್ನೂ ಓದಿ: ಬಿಜೆಪಿ-ಜೆಡಿಎಸ್ ಮೈತ್ರಿ: ದಳದಲ್ಲಿ ಭಿನ್ನಮತ, ರಾಜೀನಾಮೆಗೆ ಮುಂದಾದ್ರಾ ಮುಸ್ಲಿ ಮುಖಂಡರು?

2017ರಲ್ಲಿ ಭಾರತದ ಕ್ರೈಮ್ ಬ್ಯೂರೋ ದ್ವೇಷದ ಅಪರಾಧದ ಡೇಟಾವನ್ನು ಸಂಗ್ರಹಿಸುವುದನ್ನು ನಿಲ್ಲಿಸಲಾಯಿತು. ಅದಾದ ಬಳಿಕ ಮುಸ್ಲಿಂ ವಿರೋಧಿ ಭಾಷಣದ ನಿದರ್ಶನಗಳನ್ನು ದಾಖಲಿಸಿರುವ ಮೊದಲ ವರದಿ ಇದಾಗಿದೆ.

ಹಿಂದುತ್ವ ವಾಚ್ ಡೇಟಾವನ್ನು ಸಂಗ್ರಹಿಸುವಲ್ಲಿ ಸಾಮಾಜಿಕ ಮಾಧ್ಯಮ ಮತ್ತು ಸುದ್ದಿವಾಹಿನಿಗಳನ್ನು ಅವಲಂಬಿಸಿದೆ. ಇದು ದ್ವೇಷ ಭಾಷಣದ ಘಟನೆಗಳ ಪರಿಶೀಲಿಸಬಹುದಾದ ವೀಡಿಯೊಗಳನ್ನು ಪತ್ತೆಹಚ್ಚಲು ಡೇಟಾ ಸ್ಕ್ರ್ಯಾಪಿಂಗ್ ತಂತ್ರಗಳನ್ನು ಬಳಸಿತು ಮತ್ತು ನಂತರ ಪತ್ರಕರ್ತರು ಮತ್ತು ಸಂಶೋಧಕರ ಮೂಲಕ ಘಟನೆಗಳ ಆಳವಾದ ತನಿಖೆಯನ್ನು ನಡೆಸಿತು.

ದ್ವೇಷದ ಭಾಷಣಕ್ಕೆ ಭಾರತವು ಅಧಿಕೃತ ವ್ಯಾಖ್ಯಾನವನ್ನು ಹೊಂದಿಲ್ಲವಾದರೂ, ಸಂಶೋಧನಾ ಗುಂಪು ವಿಶ್ವಸಂಸ್ಥೆಯ ಭಾಷೆಯನ್ನು ಬಳಸಿದೆ. ಇದು ದ್ವೇಷದ ಭಾಷಣವನ್ನು “ಯಾವುದೇ ರೀತಿಯ” ಸಂವಹನ ಎಂದು ನಿರೂಪಿಸುತ್ತದೆ, ಅದು ಧರ್ಮ, ಜನಾಂಗೀಯತೆ, ರಾಷ್ಟ್ರೀಯತೆ ಮತ್ತು ಜನಾಂಗದ ಪೂರ್ವಾಗ್ರಹ ಪೀಡಿತ ಅಥವಾ ತಾರತಮ್ಯದ ಭಾಷೆಯನ್ನು ಒಂದು ಧಾರ್ಮದ ವಿರುದ್ಧ ಬಳಸುತ್ತದೆ.

ಮಹಾರಾಷ್ಟ್ರ, ಕರ್ನಾಟಕ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಗುಜರಾತ್‌ನಲ್ಲಿ ದ್ವೇಷಪೂರಿತ ಭಾಷಣಗಳ ಹೆಚ್ಚಿನ ಸಂಖ್ಯೆಯ ಸಭೆಗಳು ನಡೆದಿವೆ ಎಂದು ವರದಿಯು ಕಂಡುಹಿಡಿದಿದೆ. ಹಿಂದುತ್ವ ವಾಚ್ 15 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಲ್ಲಿನ ಚಟುವಟಿಕೆಗಳನ್ನು ಮೇಲ್ವಿಚಾರಣೆ ಮಾಡಿದೆ. ಸುಮಾರು 64 ಪ್ರತಿಶತ ಘಟನೆಗಳು ಮುಸ್ಲಿಂ ವಿರೋಧಿ “ಪಿತೂರಿ ಸಿದ್ಧಾಂತಗಳನ್ನು” ಪ್ರಚಾರ ಮಾಡಿದೆ ಎಂದು ವರದಿ ಮಾಡಿದೆ. ಮುಸ್ಲಿಮರು ಹಿಂದೂ ಮಹಿಳೆಯರನ್ನು ಮತಾಂತರಿಸಲು ಮದುವೆಗೆ ಆಮಿಷ ಒಡ್ಡುತ್ತಿದ್ದಾರೆ ಎಂಬ ಹೇಳಿಕೆಯೂ ಸೇರಿದೆ.

33 ಪ್ರತಿಶತ ಘಟನೆಗಳಲ್ಲಿ ಮುಸ್ಲಿಮರ ವಿರುದ್ಧ ಹಿಂಸಾಚಾರವನ್ನು ಉಂಟುಮಾಡಲು ಒಂದು ರ್ಯಾಲಿಗೂ ಕರೆ ನೀಡಲಾಗಿತ್ತು ಎಂದು ವರದಿ ಹೇಳಿದೆ ಮತ್ತು 11% ಹಿಂದೂಗಳು ಮುಸ್ಲಿಮರನ್ನು ಬಹಿಷ್ಕರಿಸಲು ಮನವಿಗಳನ್ನು ಒಳಗೊಂಡಿದೆ. ಉಳಿದ ಪ್ರಕರಣಗಳಲ್ಲಿ ಮುಸ್ಲಿಂ ಮಹಿಳೆಯರನ್ನು ಗುರಿಯಾಗಿಸಿಕೊಂಡು “ದ್ವೇಷ ತುಂಬಿದ ಮತ್ತು ಲೈಂಗಿಕತೆಯ ಭಾಷಣ”ಗಳನ್ನು ಮಾಡಲಾಗಿದೆ ಎಂದು ವರದಿ ತಿಳಿಸಿದೆ.

”ದ್ವೇಷದ ಭಾಷಣವನ್ನು ತಡೆಯಬೇಕಿದ್ದ ಸರ್ಕಾರಿ ಅಧಿಕಾರಿಗಳು, ತಾವು ಅವರೊಂದಿಗೆ ಸೇರಿಕೊಂಡಿದ್ದಾರೆ” ಎಂದು ವರದಿ ಹೇಳಿದೆ. ಈ ವರದಿಯು ದಾಖಲಿಸಿರುವಂತೆ, ದ್ವೇಷದ ಭಾಷಣದ ಕೆಲವು ಪ್ರಚಾರಕರಲ್ಲಿ ಮುಖ್ಯಮಂತ್ರಿಗಳು, ಶಾಸಕರು ಮತ್ತು ಆಡಳಿತಾರೂಢ ಬಿಜೆಪಿಯ ಹಿರಿಯ ನಾಯಕರು ಸೇರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...