Homeಮುಖಪುಟಮೋದಿಯವರ ಪಕ್ಷ, ಸಂಘಪರಿವಾರ ಅತಿ ಹೆಚ್ಚು ದ್ವೇಷ ಭಾಷಣಗಳಲ್ಲಿ ತೊಡಗಿವೆ: ವರದಿ

ಮೋದಿಯವರ ಪಕ್ಷ, ಸಂಘಪರಿವಾರ ಅತಿ ಹೆಚ್ಚು ದ್ವೇಷ ಭಾಷಣಗಳಲ್ಲಿ ತೊಡಗಿವೆ: ವರದಿ

- Advertisement -
- Advertisement -

2014 ರಲ್ಲಿ ಮೋದಿ ಅಧಿಕಾರಕ್ಕೆ ಬಂದ ನಂತರ ದೇಶದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಎತ್ತಿ ತೋರಿಸುವ ವರದಿಯೊಂದು ಬಿಡುಗಡೆಯಾಗಿದೆ. ವರದಿ ಪ್ರಕಾರ, ಈ ವರ್ಷದ ಮೊದಲಾರ್ಧದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಮತ್ತು ಅಂಗಸಂಸ್ಥೆ ಗುಂಪುಗಳು ಹೆಚ್ಚಿನ ದ್ವೇಷ ಭಾಷಣಗಳನ್ನು ಮಾಡಿವೆ ಎಂದು ಹೇಳಿದೆ.

ವಾಷಿಂಗ್ಟನ್ ಡಿಸಿ ಮೂಲದ ಸಂಶೋಧನಾ ಸಂಸ್ಥೆಯು ಭಾರತದಲ್ಲಿ ಅಲ್ಪಸಂಖ್ಯಾತರ ವಿರುದ್ಧದ ದ್ವೇಷ ಭಾಷಣ ಮತ್ತು ಅಪರಾಧಗಳನ್ನು ಪತ್ತೆಹಚ್ಚುವ ”ಹಿಂದುತ್ವ ವಾಚ್” ಎನ್ನುವ ವರದಿಯನ್ನು ಸೋಮವಾರ ಬಿಡುಗಡೆ ಮಾಡಿದೆ.

2014ರಲ್ಲಿ ಮೋದಿ ಅಧಿಕಾರಕ್ಕೆ ಬಂದ ನಂತರ ಭಾರತದಲ್ಲಿ ಮುಸ್ಲಿಂ ವಿರೋಧಿ ಭಾಷಣಗಳು ಹೆಚ್ಚಾಗಿವೆ ಎಂದು ಸಂಶೋಧಕರು ಬರೆದಿದ್ದಾರೆ. ಈ ವರ್ಷ ದಾಖಲಿತ ಘಟನೆಗಳಲ್ಲಿ ಅರ್ಧಕ್ಕಿಂತ ಹೆಚ್ಚು ಪ್ರಕರಣಗಳು ಆಡಳಿತಾರೂಢ ಬಿಜೆಪಿ ಮತ್ತು ಬಜರಂಗ ದಳ ಸೇರಿದಂತೆ ಅಂಗಸಂಸ್ಥೆಗಳು ದ್ವೇಷಭಾಷಣ ಮಾಡುವೆ ಎಂದು ವರದಿಯು ಕಂಡುಹಿಡಿದಿದೆ. ಬಿಜೆಪಿಯ ಸೈದ್ಧಾಂತಿಕ ಪೋಷಕರಾದ ವಿಶ್ವ ಹಿಂದೂ ಪರಿಷತ್, ಸಕಲ ಹಿಂದೂ ಸಮಾಜ ಮತ್ತು ರಾಷ್ಟ್ರೀಯ ಸ್ವಯಂಸೇವಕ ಸಂಘ ಅಥವಾ ಆರ್‌ಎಸ್‌ಎಸ್‌ ಇಂತಹ ಹೇಳಿಕೆಗಳನ್ನು ಹೆಚ್ಚಾಗಿ ನೀಡುತ್ತವೆ ಎಂದು ವರದಿ ಹೇಳಿದೆ.

ಈ ವರದಿಯಲ್ಲಿ ಮುಸ್ಲಿಮರ ವಿರುದ್ಧ ದಾಖಲಾದ 255 ದ್ವೇಷದ ಭಾಷಣಗಳಲ್ಲಿ ಶೇಕಡಾ 80ರಷ್ಟು ಪ್ರಕರಣಗಳು ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಸಂಭವಿಸಿವೆ ಎಂದು ಬಹಿರಂಗಪಡಿಸಿದೆಬ ಎಂದು ಬ್ಲೂಮ್‌ಬರ್ಗ್ ವರದಿ ಮಾಡಿದೆ.

ಬಿಜೆಪಿಯ ನಾಯಕತ್ವದಲ್ಲಿ, ಭಾರತದ ಮುಸ್ಲಿಮರು ಜನಸಂಖ್ಯೆಯು ತಾರತಮ್ಯ ಮತ್ತು ಧಾರ್ಮಿಕ ಕಿರುಕುಳವನ್ನು ಎದುರಿಸುತ್ತಿದೆ ಎಂದು ವರದಿ ಹೇಳಿದೆ. ಬಿಜೆಪಿ ಹಾಗೂ ಅದರ ಅಂಗಸಂಸ್ಥೆಗಳ ಕಾರ್ಯಸೂಚಿಯ ಭಾಗವಾಗಿ ಮುಸ್ಲಿಮರನ್ನು ಕೊನೆಯ ದರ್ಜೆಯ ಪ್ರಜೆಗಳನ್ನಾಗಿಸುವುದು ಮತ್ತು ಭಾರತವನ್ನು ಹಿಂದೂ ರಾಷ್ಟ್ರವಾಗಿ ಸ್ಥಾಪಿಸುವುದಾಗಿದೆ.

ಇದನ್ನೂ ಓದಿ: ಬಿಜೆಪಿ-ಜೆಡಿಎಸ್ ಮೈತ್ರಿ: ದಳದಲ್ಲಿ ಭಿನ್ನಮತ, ರಾಜೀನಾಮೆಗೆ ಮುಂದಾದ್ರಾ ಮುಸ್ಲಿ ಮುಖಂಡರು?

2017ರಲ್ಲಿ ಭಾರತದ ಕ್ರೈಮ್ ಬ್ಯೂರೋ ದ್ವೇಷದ ಅಪರಾಧದ ಡೇಟಾವನ್ನು ಸಂಗ್ರಹಿಸುವುದನ್ನು ನಿಲ್ಲಿಸಲಾಯಿತು. ಅದಾದ ಬಳಿಕ ಮುಸ್ಲಿಂ ವಿರೋಧಿ ಭಾಷಣದ ನಿದರ್ಶನಗಳನ್ನು ದಾಖಲಿಸಿರುವ ಮೊದಲ ವರದಿ ಇದಾಗಿದೆ.

ಹಿಂದುತ್ವ ವಾಚ್ ಡೇಟಾವನ್ನು ಸಂಗ್ರಹಿಸುವಲ್ಲಿ ಸಾಮಾಜಿಕ ಮಾಧ್ಯಮ ಮತ್ತು ಸುದ್ದಿವಾಹಿನಿಗಳನ್ನು ಅವಲಂಬಿಸಿದೆ. ಇದು ದ್ವೇಷ ಭಾಷಣದ ಘಟನೆಗಳ ಪರಿಶೀಲಿಸಬಹುದಾದ ವೀಡಿಯೊಗಳನ್ನು ಪತ್ತೆಹಚ್ಚಲು ಡೇಟಾ ಸ್ಕ್ರ್ಯಾಪಿಂಗ್ ತಂತ್ರಗಳನ್ನು ಬಳಸಿತು ಮತ್ತು ನಂತರ ಪತ್ರಕರ್ತರು ಮತ್ತು ಸಂಶೋಧಕರ ಮೂಲಕ ಘಟನೆಗಳ ಆಳವಾದ ತನಿಖೆಯನ್ನು ನಡೆಸಿತು.

ದ್ವೇಷದ ಭಾಷಣಕ್ಕೆ ಭಾರತವು ಅಧಿಕೃತ ವ್ಯಾಖ್ಯಾನವನ್ನು ಹೊಂದಿಲ್ಲವಾದರೂ, ಸಂಶೋಧನಾ ಗುಂಪು ವಿಶ್ವಸಂಸ್ಥೆಯ ಭಾಷೆಯನ್ನು ಬಳಸಿದೆ. ಇದು ದ್ವೇಷದ ಭಾಷಣವನ್ನು “ಯಾವುದೇ ರೀತಿಯ” ಸಂವಹನ ಎಂದು ನಿರೂಪಿಸುತ್ತದೆ, ಅದು ಧರ್ಮ, ಜನಾಂಗೀಯತೆ, ರಾಷ್ಟ್ರೀಯತೆ ಮತ್ತು ಜನಾಂಗದ ಪೂರ್ವಾಗ್ರಹ ಪೀಡಿತ ಅಥವಾ ತಾರತಮ್ಯದ ಭಾಷೆಯನ್ನು ಒಂದು ಧಾರ್ಮದ ವಿರುದ್ಧ ಬಳಸುತ್ತದೆ.

ಮಹಾರಾಷ್ಟ್ರ, ಕರ್ನಾಟಕ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಗುಜರಾತ್‌ನಲ್ಲಿ ದ್ವೇಷಪೂರಿತ ಭಾಷಣಗಳ ಹೆಚ್ಚಿನ ಸಂಖ್ಯೆಯ ಸಭೆಗಳು ನಡೆದಿವೆ ಎಂದು ವರದಿಯು ಕಂಡುಹಿಡಿದಿದೆ. ಹಿಂದುತ್ವ ವಾಚ್ 15 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳಲ್ಲಿನ ಚಟುವಟಿಕೆಗಳನ್ನು ಮೇಲ್ವಿಚಾರಣೆ ಮಾಡಿದೆ. ಸುಮಾರು 64 ಪ್ರತಿಶತ ಘಟನೆಗಳು ಮುಸ್ಲಿಂ ವಿರೋಧಿ “ಪಿತೂರಿ ಸಿದ್ಧಾಂತಗಳನ್ನು” ಪ್ರಚಾರ ಮಾಡಿದೆ ಎಂದು ವರದಿ ಮಾಡಿದೆ. ಮುಸ್ಲಿಮರು ಹಿಂದೂ ಮಹಿಳೆಯರನ್ನು ಮತಾಂತರಿಸಲು ಮದುವೆಗೆ ಆಮಿಷ ಒಡ್ಡುತ್ತಿದ್ದಾರೆ ಎಂಬ ಹೇಳಿಕೆಯೂ ಸೇರಿದೆ.

33 ಪ್ರತಿಶತ ಘಟನೆಗಳಲ್ಲಿ ಮುಸ್ಲಿಮರ ವಿರುದ್ಧ ಹಿಂಸಾಚಾರವನ್ನು ಉಂಟುಮಾಡಲು ಒಂದು ರ್ಯಾಲಿಗೂ ಕರೆ ನೀಡಲಾಗಿತ್ತು ಎಂದು ವರದಿ ಹೇಳಿದೆ ಮತ್ತು 11% ಹಿಂದೂಗಳು ಮುಸ್ಲಿಮರನ್ನು ಬಹಿಷ್ಕರಿಸಲು ಮನವಿಗಳನ್ನು ಒಳಗೊಂಡಿದೆ. ಉಳಿದ ಪ್ರಕರಣಗಳಲ್ಲಿ ಮುಸ್ಲಿಂ ಮಹಿಳೆಯರನ್ನು ಗುರಿಯಾಗಿಸಿಕೊಂಡು “ದ್ವೇಷ ತುಂಬಿದ ಮತ್ತು ಲೈಂಗಿಕತೆಯ ಭಾಷಣ”ಗಳನ್ನು ಮಾಡಲಾಗಿದೆ ಎಂದು ವರದಿ ತಿಳಿಸಿದೆ.

”ದ್ವೇಷದ ಭಾಷಣವನ್ನು ತಡೆಯಬೇಕಿದ್ದ ಸರ್ಕಾರಿ ಅಧಿಕಾರಿಗಳು, ತಾವು ಅವರೊಂದಿಗೆ ಸೇರಿಕೊಂಡಿದ್ದಾರೆ” ಎಂದು ವರದಿ ಹೇಳಿದೆ. ಈ ವರದಿಯು ದಾಖಲಿಸಿರುವಂತೆ, ದ್ವೇಷದ ಭಾಷಣದ ಕೆಲವು ಪ್ರಚಾರಕರಲ್ಲಿ ಮುಖ್ಯಮಂತ್ರಿಗಳು, ಶಾಸಕರು ಮತ್ತು ಆಡಳಿತಾರೂಢ ಬಿಜೆಪಿಯ ಹಿರಿಯ ನಾಯಕರು ಸೇರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...