Homeಕರ್ನಾಟಕಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಮೋದಿ ಆರ್‌ಎಸ್‌ಎಸ್‌ ಹೊಗಳಿರುವುದು ಸಂವಿಧಾನದ ಆಶಯಗಳಿಗೆ ಮಾಡಿರುವ ಅವಮಾನ: ಸಿಎಂ ಸಿದ್ದರಾಮಯ್ಯ

ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಮೋದಿ ಆರ್‌ಎಸ್‌ಎಸ್‌ ಹೊಗಳಿರುವುದು ಸಂವಿಧಾನದ ಆಶಯಗಳಿಗೆ ಮಾಡಿರುವ ಅವಮಾನ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಸ್ವಾತಂತ್ರ್ಯೋತ್ಸವದ ದಿನ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡುತ್ತಾ ಆರ್‌ಎಸ್‌ಎಸ್‌ ಅನ್ನು ಹಾಡಿ ಹೊಗಳಿರುವುದು ಸ್ವಾತಂತ್ರ್ಯ ಹೋರಾಟ, ರಾಷ್ಟ್ರಧ‍್ವಜ ಮತ್ತು ಸಂವಿಧಾನದ ನಿಜ ಆಶಯಗಳಿಗೆ ಮಾಡಿರುವ ಅವಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೋದಿ ಭಾಷಣಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಸಿಎಂ, “ಸ್ವಾತಂತ್ರ್ಯಹೋರಾಟದಲ್ಲಿ ಎಂದೂ ಭಾಗವಹಿಸದೆ ಇದ್ದ ಮತ್ತು ಇತ್ತೀಚಿನವರೆಗೆ ನಮ್ಮ ಹೆಮ್ಮೆಯ ತ್ರಿವರ್ಣ ರಾಷ್ಟ್ರಧ್ವಜವನ್ನು ತಮ್ಮ ಕಚೇರಿಯಲ್ಲಿ ಆರೋಹಣ ಮಾಡಲು ನಿರಾಕರಿಸಿದ್ದ ಆರ್‌ಎಸ್‌ಎಸ್‌ಗೆ ಅಭಿನಂದನೆ ಸಲ್ಲಿಸುವ ಮೂಲಕ ಮೋದಿಯವರು ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪವಿತ್ರವಾದ ವೇದಿಕೆಯನ್ನು ತಮ್ಮ ಸ್ಥಾನದ ಮೂಲಕ ದುರುಪಯೋಗ ಮಾಡಿಕೊಂಡಿದ್ದಾರೆ ಎಂದಿದ್ದಾರೆ.

ಸ್ವತಂತ್ರ ಭಾರತದಲ್ಲಿ ಬಿಜೆಪಿ ಸೇರಿದಂತೆ ಯಾವ ಪಕ್ಷಗಳ ಪ್ರಧಾನ ಮಂತ್ರಿಯವರೂ ಈ ರೀತಿ ಸ್ವಾತಂತ್ರ್ಯೋತ್ಸವದ ವೇದಿಕೆಯನ್ನು ರಾಜಕೀಯವಾಗಿ ದುರುಪಯೋಗಪಡಿಸಿಕೊಂಡಿಲ್ಲ. ನರೇಂದ್ರ ಮೋದಿಯವರು ದೇಶದ ಜನ ಗೌರವಿಸುವ ಈ ವೇದಿಕೆಯ ಘನತೆ-ಗೌರವಗಳನ್ನು ಮಣ್ಣು ಪಾಲು ಮಾಡಿದ್ದಾರೆ ಎಂದು ಸಿಎಂ ಬೇಸರ ಹೊರ ಹಾಕಿದ್ದಾರೆ.

ಆರ್‌ಎಸ್‌ಎಸ್ ನಾಯಕರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದಕ್ಕೆ ಇತಿಹಾಸದ ಪುಟಗಳಲ್ಲಿ ದಾಖಲೆಗಳೇ ಇಲ್ಲ. ಅದೇ ರೀತಿ ನಾಗಪುರದಲ್ಲಿರುವ ಆರ್‌ಎಸ್‌ಎಸ್‌ನ ಕೇಂದ್ರ ಕಚೇರಿಯಲ್ಲಿ 2001ರ ವರೆಗೆ ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯೋತ್ಸವದ ದಿನಗಳಲ್ಲಿ ರಾಷ್ಟ್ರ ಧ್ವಜದ ಆರೋಹಣ ಮಾಡಿರಲೇ ಇಲ್ಲ. 2001ರಲ್ಲಿ ಧ್ವಜಾರೋಹಣ ಮಾಡಿದ್ದ ತಮ್ಮದೇ ಸಂಘಟನೆಯ ಯುವಕರ ವಿರುದ್ಧ ಆರ್‌ಎಸ್‌ಎಸ್ ದೂರು ಕೊಟ್ಟು ಜೈಲಿಗೆ ಅಟ್ಟಿತ್ತು ಎನ್ನುವುದನ್ನು ದೇಶದ ಜನ ಮರೆತಿಲ್ಲ ಎಂದಿದ್ದಾರೆ.

ಕೆಂಪುಕೋಟೆ ಭಾರತೀಯ ಜನತಾ ಪಕ್ಷದ ರಾಜಕೀಯ ವೇದಿಕೆ ಅಲ್ಲ, ಆ ಸ್ಥಳದಲ್ಲಿ ಪಕ್ಷಾತೀತವಾಗಿ ಆಚರಿಸಲಾಗುವ ಸ್ವಾತಂತ್ರ್ಯತ್ಸೋವದಲ್ಲಿ ಎಲ್ಲ ಜಾತಿ-ಧರ್ಮ, ಪಕ್ಷ-ಪಂಥಗಳ ಜನ ಭಾಗವಹಿಸುತ್ತಾರೆ. ಅಂತಹ ಪವಿತ್ರ ವೇದಿಕೆಯಲ್ಲಿ ನರೇಂದ್ರ ಮೋದಿಯವರು ಪ್ರಧಾನಿಯಾಗಿ ಮಾತನಾಡದೆ ಆರ್‌ಎಸ್‌ಎಸ್ ಪ್ರಚಾರಕನಂತೆ ಮಾತನಾಡಿರುವುದು ದುರದೃಷ್ಟಕರ ಎಂದು ಸಿಎಂ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಕಳೆದ ಹನ್ನೊಂದು ವರ್ಷಗಳಲ್ಲಿ ಸ್ವಾತಂತ್ರ್ಯೋತ್ಸವದ ದಿನ ಆರ್‌ಎಸ್‌ಎಸ್ ಅನ್ನು ನೆನಪು ಮಾಡಿಕೊಳ್ಳದ ಪ್ರಧಾನಿ ನರೇಂದ್ರ ಮೋದಿಯವರು, ಈ ಬಾರಿ ಆರ್‌ಎಸ್‌ಎಸ್ ಸೇವೆಯನ್ನು ಸ್ಮರಿಸಿಕೊಂಡಿರುವುದು ಖಂಡಿತ ಅದರ ಮೇಲಿನ ಅಭಿಮಾನದಿಂದ ಅಲ್ಲ. ಇದಕ್ಕೆ ಮುಖ್ಯ ಕಾರಣ ಕುಸಿಯುತ್ತಿರುವ ಜನಪ್ರಿಯತೆಯಿಂದಾಗಿ ಅವರಲ್ಲಿ ಹುಟ್ಟಿರುವ ಅಭದ್ರತೆ. ಕಳೆದ ಚುನಾವಣೆಯಲ್ಲಿನ ಹಿನ್ನಡೆಯ ನಂತರ ಮೋದಿಯವರು ತಮ್ಮ ಮಾತೃಸಂಸ್ಥೆಗೆ ಸಾಷ್ಟಾಂಗ ನಮಸ್ಕಾರ ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ.

ವಿಶ್ವದ ಅತಿ ದೊಡ್ಡ ಸರ್ಕಾರೇತರ ಸೇವಾ ಸಂಸ್ಥೆ ಎಂದು ನರೇಂದ್ರ ಮೋದಿ ಅವರು ಬಣ್ಣಿಸಿರುವ ಆರ್‌ಎಸ್‌ಎಸ್, ಇಂದಿನವರೆಗೂ ಅಧಿಕೃತವಾಗಿ ನೋಂದಣಿಯಾಗದ, ಸಾರ್ವಜನಿಕ ದೇಣಿಗೆ ಸಂಗ್ರಹಿಸಿದರೂ ತೆರಿಗೆ ಪಾವತಿ ಮಾಡದ ಮತ್ತು ಸಂವಿಧಾನ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಸಂಘಟನೆಯಾಗಿದೆ. ಪಾರದರ್ಶಕತೆಯಾಗಲಿ, ಉತ್ತರದಾಯಿತ್ವವಾಗಲಿ ಇಲ್ಲದ ಆರ್‌ಎಸ್‌ಎಸ್ ರಹಸ್ಯ ಸಂಘಟನೆಯಾಗಿಯೇ ಕೆಲಸ ಮಾಡುತ್ತಿರುವುದನ್ನು ದೇಶದ ಜನತೆ ಗಮನಿಸದ್ದಾರೆ ಎಂದಿದ್ದಾರೆ.

ಕೋಮುವಾದವನ್ನೇ ಉಸಿರಾಗಿಸಿಕೊಂಡ ಆರ್‌ಎಸ್‌ಎಸ್ ಹಿಂದೂ ಧರ್ಮವನ್ನು ರಾಜಕೀಯ ಆಯುಧವಾಗಿ ಬಳಸಿಕೊಂಡು ಭಾರತೀಯರನ್ನು ಒಡೆದು ಹಾಕಿ ಭಾರತೀಯ ಜನತಾ ಪಕ್ಷವನ್ನು ರಾಜಕೀಯವಾಗಿ ಬಲಪಡಿಸಲು ಹಗಲು-ರಾತ್ರಿ ಶ್ರಮಿಸುತ್ತಿದೆ. ಇವರಿಗೆ ದೇಶದ ಬಗ್ಗೆಯಾಗಲಿ, ಹಿಂದೂ ಧರ್ಮದ ಬಗ್ಗೆಯಾಗಲಿ ಯಾವ ಪ್ರೀತಿ-ಅಭಿಮಾನ, ಬದ್ಧತೆಯಾಗಲಿ ಇಲ್ಲ ಎನ್ನುವುದು ಸಾಬೀತಾಗಿದೆ ಎಂದು ಸಿಎಂ ಕಿಡಿಕಾರಿದ್ದಾರೆ.

ಸ್ವಾತಂತ್ರ್ಯದಿನಾಚರಣೆಯ ವೇದಿಕೆಯನ್ನು ಆರ್‌ಎಸ್‌ಎಸ್‌ಗೆ ಅಭಿನಂದನೆ ಸಲ್ಲಿಸಲು ದುರುಪಯೋಗ ಮಾಡಿಕೊಂಡ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಮಾತುಗಳನ್ನು ಹಿಂದಕ್ಕೆ ಪಡೆದು ದೇಶದ ಜನತೆಯಲ್ಲಿ ಕ್ಷಮೆ ಕೇಳಬೇಕು ಎಂದು ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಭಾರತದ ಕಲ್ಪನೆ ನಾಶಮಾಡುವ ಪ್ರಯತ್ನವನ್ನು ಕೋಮುವಾದಿ ಶಕ್ತಿಗಳು ಬಲಪಡಿಸುತ್ತಿವೆ: ಪಿಣರಾಯಿ ವಿಜಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...