Homeಕರ್ನಾಟಕಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಮೋದಿ ಆರ್‌ಎಸ್‌ಎಸ್‌ ಹೊಗಳಿರುವುದು ಸಂವಿಧಾನದ ಆಶಯಗಳಿಗೆ ಮಾಡಿರುವ ಅವಮಾನ: ಸಿಎಂ ಸಿದ್ದರಾಮಯ್ಯ

ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಮೋದಿ ಆರ್‌ಎಸ್‌ಎಸ್‌ ಹೊಗಳಿರುವುದು ಸಂವಿಧಾನದ ಆಶಯಗಳಿಗೆ ಮಾಡಿರುವ ಅವಮಾನ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಸ್ವಾತಂತ್ರ್ಯೋತ್ಸವದ ದಿನ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡುತ್ತಾ ಆರ್‌ಎಸ್‌ಎಸ್‌ ಅನ್ನು ಹಾಡಿ ಹೊಗಳಿರುವುದು ಸ್ವಾತಂತ್ರ್ಯ ಹೋರಾಟ, ರಾಷ್ಟ್ರಧ‍್ವಜ ಮತ್ತು ಸಂವಿಧಾನದ ನಿಜ ಆಶಯಗಳಿಗೆ ಮಾಡಿರುವ ಅವಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೋದಿ ಭಾಷಣಕ್ಕೆ ಆಕ್ಷೇಪ ವ್ಯಕ್ತಪಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಸಿಎಂ, “ಸ್ವಾತಂತ್ರ್ಯಹೋರಾಟದಲ್ಲಿ ಎಂದೂ ಭಾಗವಹಿಸದೆ ಇದ್ದ ಮತ್ತು ಇತ್ತೀಚಿನವರೆಗೆ ನಮ್ಮ ಹೆಮ್ಮೆಯ ತ್ರಿವರ್ಣ ರಾಷ್ಟ್ರಧ್ವಜವನ್ನು ತಮ್ಮ ಕಚೇರಿಯಲ್ಲಿ ಆರೋಹಣ ಮಾಡಲು ನಿರಾಕರಿಸಿದ್ದ ಆರ್‌ಎಸ್‌ಎಸ್‌ಗೆ ಅಭಿನಂದನೆ ಸಲ್ಲಿಸುವ ಮೂಲಕ ಮೋದಿಯವರು ಸ್ವಾತಂತ್ರ್ಯೋತ್ಸವ ದಿನಾಚರಣೆಯ ಪವಿತ್ರವಾದ ವೇದಿಕೆಯನ್ನು ತಮ್ಮ ಸ್ಥಾನದ ಮೂಲಕ ದುರುಪಯೋಗ ಮಾಡಿಕೊಂಡಿದ್ದಾರೆ ಎಂದಿದ್ದಾರೆ.

ಸ್ವತಂತ್ರ ಭಾರತದಲ್ಲಿ ಬಿಜೆಪಿ ಸೇರಿದಂತೆ ಯಾವ ಪಕ್ಷಗಳ ಪ್ರಧಾನ ಮಂತ್ರಿಯವರೂ ಈ ರೀತಿ ಸ್ವಾತಂತ್ರ್ಯೋತ್ಸವದ ವೇದಿಕೆಯನ್ನು ರಾಜಕೀಯವಾಗಿ ದುರುಪಯೋಗಪಡಿಸಿಕೊಂಡಿಲ್ಲ. ನರೇಂದ್ರ ಮೋದಿಯವರು ದೇಶದ ಜನ ಗೌರವಿಸುವ ಈ ವೇದಿಕೆಯ ಘನತೆ-ಗೌರವಗಳನ್ನು ಮಣ್ಣು ಪಾಲು ಮಾಡಿದ್ದಾರೆ ಎಂದು ಸಿಎಂ ಬೇಸರ ಹೊರ ಹಾಕಿದ್ದಾರೆ.

ಆರ್‌ಎಸ್‌ಎಸ್ ನಾಯಕರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದಕ್ಕೆ ಇತಿಹಾಸದ ಪುಟಗಳಲ್ಲಿ ದಾಖಲೆಗಳೇ ಇಲ್ಲ. ಅದೇ ರೀತಿ ನಾಗಪುರದಲ್ಲಿರುವ ಆರ್‌ಎಸ್‌ಎಸ್‌ನ ಕೇಂದ್ರ ಕಚೇರಿಯಲ್ಲಿ 2001ರ ವರೆಗೆ ಗಣರಾಜ್ಯೋತ್ಸವ ಮತ್ತು ಸ್ವಾತಂತ್ರ್ಯೋತ್ಸವದ ದಿನಗಳಲ್ಲಿ ರಾಷ್ಟ್ರ ಧ್ವಜದ ಆರೋಹಣ ಮಾಡಿರಲೇ ಇಲ್ಲ. 2001ರಲ್ಲಿ ಧ್ವಜಾರೋಹಣ ಮಾಡಿದ್ದ ತಮ್ಮದೇ ಸಂಘಟನೆಯ ಯುವಕರ ವಿರುದ್ಧ ಆರ್‌ಎಸ್‌ಎಸ್ ದೂರು ಕೊಟ್ಟು ಜೈಲಿಗೆ ಅಟ್ಟಿತ್ತು ಎನ್ನುವುದನ್ನು ದೇಶದ ಜನ ಮರೆತಿಲ್ಲ ಎಂದಿದ್ದಾರೆ.

ಕೆಂಪುಕೋಟೆ ಭಾರತೀಯ ಜನತಾ ಪಕ್ಷದ ರಾಜಕೀಯ ವೇದಿಕೆ ಅಲ್ಲ, ಆ ಸ್ಥಳದಲ್ಲಿ ಪಕ್ಷಾತೀತವಾಗಿ ಆಚರಿಸಲಾಗುವ ಸ್ವಾತಂತ್ರ್ಯತ್ಸೋವದಲ್ಲಿ ಎಲ್ಲ ಜಾತಿ-ಧರ್ಮ, ಪಕ್ಷ-ಪಂಥಗಳ ಜನ ಭಾಗವಹಿಸುತ್ತಾರೆ. ಅಂತಹ ಪವಿತ್ರ ವೇದಿಕೆಯಲ್ಲಿ ನರೇಂದ್ರ ಮೋದಿಯವರು ಪ್ರಧಾನಿಯಾಗಿ ಮಾತನಾಡದೆ ಆರ್‌ಎಸ್‌ಎಸ್ ಪ್ರಚಾರಕನಂತೆ ಮಾತನಾಡಿರುವುದು ದುರದೃಷ್ಟಕರ ಎಂದು ಸಿಎಂ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಕಳೆದ ಹನ್ನೊಂದು ವರ್ಷಗಳಲ್ಲಿ ಸ್ವಾತಂತ್ರ್ಯೋತ್ಸವದ ದಿನ ಆರ್‌ಎಸ್‌ಎಸ್ ಅನ್ನು ನೆನಪು ಮಾಡಿಕೊಳ್ಳದ ಪ್ರಧಾನಿ ನರೇಂದ್ರ ಮೋದಿಯವರು, ಈ ಬಾರಿ ಆರ್‌ಎಸ್‌ಎಸ್ ಸೇವೆಯನ್ನು ಸ್ಮರಿಸಿಕೊಂಡಿರುವುದು ಖಂಡಿತ ಅದರ ಮೇಲಿನ ಅಭಿಮಾನದಿಂದ ಅಲ್ಲ. ಇದಕ್ಕೆ ಮುಖ್ಯ ಕಾರಣ ಕುಸಿಯುತ್ತಿರುವ ಜನಪ್ರಿಯತೆಯಿಂದಾಗಿ ಅವರಲ್ಲಿ ಹುಟ್ಟಿರುವ ಅಭದ್ರತೆ. ಕಳೆದ ಚುನಾವಣೆಯಲ್ಲಿನ ಹಿನ್ನಡೆಯ ನಂತರ ಮೋದಿಯವರು ತಮ್ಮ ಮಾತೃಸಂಸ್ಥೆಗೆ ಸಾಷ್ಟಾಂಗ ನಮಸ್ಕಾರ ಹಾಕುತ್ತಿದ್ದಾರೆ ಎಂದು ಹೇಳಿದ್ದಾರೆ.

ವಿಶ್ವದ ಅತಿ ದೊಡ್ಡ ಸರ್ಕಾರೇತರ ಸೇವಾ ಸಂಸ್ಥೆ ಎಂದು ನರೇಂದ್ರ ಮೋದಿ ಅವರು ಬಣ್ಣಿಸಿರುವ ಆರ್‌ಎಸ್‌ಎಸ್, ಇಂದಿನವರೆಗೂ ಅಧಿಕೃತವಾಗಿ ನೋಂದಣಿಯಾಗದ, ಸಾರ್ವಜನಿಕ ದೇಣಿಗೆ ಸಂಗ್ರಹಿಸಿದರೂ ತೆರಿಗೆ ಪಾವತಿ ಮಾಡದ ಮತ್ತು ಸಂವಿಧಾನ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ಸಂಘಟನೆಯಾಗಿದೆ. ಪಾರದರ್ಶಕತೆಯಾಗಲಿ, ಉತ್ತರದಾಯಿತ್ವವಾಗಲಿ ಇಲ್ಲದ ಆರ್‌ಎಸ್‌ಎಸ್ ರಹಸ್ಯ ಸಂಘಟನೆಯಾಗಿಯೇ ಕೆಲಸ ಮಾಡುತ್ತಿರುವುದನ್ನು ದೇಶದ ಜನತೆ ಗಮನಿಸದ್ದಾರೆ ಎಂದಿದ್ದಾರೆ.

ಕೋಮುವಾದವನ್ನೇ ಉಸಿರಾಗಿಸಿಕೊಂಡ ಆರ್‌ಎಸ್‌ಎಸ್ ಹಿಂದೂ ಧರ್ಮವನ್ನು ರಾಜಕೀಯ ಆಯುಧವಾಗಿ ಬಳಸಿಕೊಂಡು ಭಾರತೀಯರನ್ನು ಒಡೆದು ಹಾಕಿ ಭಾರತೀಯ ಜನತಾ ಪಕ್ಷವನ್ನು ರಾಜಕೀಯವಾಗಿ ಬಲಪಡಿಸಲು ಹಗಲು-ರಾತ್ರಿ ಶ್ರಮಿಸುತ್ತಿದೆ. ಇವರಿಗೆ ದೇಶದ ಬಗ್ಗೆಯಾಗಲಿ, ಹಿಂದೂ ಧರ್ಮದ ಬಗ್ಗೆಯಾಗಲಿ ಯಾವ ಪ್ರೀತಿ-ಅಭಿಮಾನ, ಬದ್ಧತೆಯಾಗಲಿ ಇಲ್ಲ ಎನ್ನುವುದು ಸಾಬೀತಾಗಿದೆ ಎಂದು ಸಿಎಂ ಕಿಡಿಕಾರಿದ್ದಾರೆ.

ಸ್ವಾತಂತ್ರ್ಯದಿನಾಚರಣೆಯ ವೇದಿಕೆಯನ್ನು ಆರ್‌ಎಸ್‌ಎಸ್‌ಗೆ ಅಭಿನಂದನೆ ಸಲ್ಲಿಸಲು ದುರುಪಯೋಗ ಮಾಡಿಕೊಂಡ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಮಾತುಗಳನ್ನು ಹಿಂದಕ್ಕೆ ಪಡೆದು ದೇಶದ ಜನತೆಯಲ್ಲಿ ಕ್ಷಮೆ ಕೇಳಬೇಕು ಎಂದು ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಭಾರತದ ಕಲ್ಪನೆ ನಾಶಮಾಡುವ ಪ್ರಯತ್ನವನ್ನು ಕೋಮುವಾದಿ ಶಕ್ತಿಗಳು ಬಲಪಡಿಸುತ್ತಿವೆ: ಪಿಣರಾಯಿ ವಿಜಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...