Homeಮುಖಪುಟಮೋದಿಯವರ 20 ಲಕ್ಷ ಕೋಟಿ ಎಂಬುದು ಜುಮ್ಲಾ ಪ್ಯಾಕೇಜ್‌ : ಆಮ್‌ ಆದ್ಮಿ ಪಕ್ಷ

ಮೋದಿಯವರ 20 ಲಕ್ಷ ಕೋಟಿ ಎಂಬುದು ಜುಮ್ಲಾ ಪ್ಯಾಕೇಜ್‌ : ಆಮ್‌ ಆದ್ಮಿ ಪಕ್ಷ

- Advertisement -
- Advertisement -

ಲಾಕ್‌ಡೌನ್ ಮಾಡಿದ ಪರಿಣಾಮ ದೇಶದಲ್ಲಿ ಸಾಕಷ್ಟು ಸರಕುಗಳು ಖರ್ಚಾಗದೇ ಉಳಿದಿದೆ. ಈಗಾಗಲೇ ಪೂರೈಕೆ ಸಾಕಷ್ಟು ಇದ್ದರೂ ಸಹ ಗ್ರಾಹಕರಿಂದ ಬೇಡಿಕೆ ಇಲ್ಲದಾಗಿದೆ. ಈ ಸಂದರ್ಭದಲ್ಲಿ ಬೇಡಿಕೆಯನ್ನು ಹೆಚ್ಚಳ ಮಾಡುವಂತಹ ಯೋಜನೆಗಳನ್ನು ಘೋಷಿಸಿ ಎಂದರೆ ಕೇವಲ ಸಾಲ ಮಾಡಿ ಅದಕ್ಕೆ ಕೇಂದ್ರ ದುಡ್ಡು ನೀಡುವುದು ಎನ್ನುವುದು ಯಾವ ರೀತಿಯ ಲೆಕ್ಕಾಚಾರ ಎನ್ನವುದು ತಿಳಿಯುತ್ತಿಲ್ಲ ಎಂದು ಕರ್ನಾಟಕ ಆಮ್‌ ಆದ್ಮಿ ಪಕ್ಷ ಟೀಕಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕರಾದ ಜಗದೀಶ್ ವಿ ಸದಂ,  “ಕೊರೊನಾದಿಂದ ಉಂಟಾದ ಸಂಕಷ್ಟಕ್ಕೆ ಮದ್ದು ನೀಡುವುದಾಗಿ ಹೇಳಿದ ಮಾನ್ಯ ಪ್ರಧಾನಿಗಳು ಖಾಲಿ ಹಾಳೆಯಂತಹ ಸುಮಾರು 20 ಲಕ್ಷ ಕೋಟಿಯ ದೊಡ್ಡ ಮೊತ್ತದ ಪ್ಯಾಕೇಜ್ ಘೋಷಿಸಿದರು. ಈ ಖಾಲಿ ಹಾಳೆಯನ್ನು ತುಂಬಿಸುವಂತೆ ಯಾವ ಯಾವ ವಲಯಕ್ಕೆ ಎಷ್ಟು ಹಣ ಮೀಸಲು ಎನ್ನುವುದನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವರದಿ ಒಪ್ಪಿಸಿದರೇ ಹೊರತು ನಯಾ ಪೈಸೆಯಷ್ಟು ಹಣವನ್ನು ಜನರಿಗೆ ನೀಡದೆ ದಾರಿ ತಪ್ಪಿಸುವ ಪ್ಯಾಕೇಜ್ ಎಂದು ಇದನ್ನು ಕರೆಯಬಹುದು” ಎಂದಿದ್ದಾರೆ.

ಎಂಎಸ್ಎಂಇಗಳಿಗೆ 3 ಲಕ್ಷ ಕೋಟಿ ಸಾಲ ನೀಡುವುದಕ್ಕೆ ಮೀಸಲು ಹಾಗೂ ನಿಮಗೆ ನೀಡುವ ಸಾಲಕ್ಕೆ ಕೇಂದ್ರ ಸರ್ಕಾರವೇ ಗ್ಯಾರಂಟಿ ಎಂದು ಹೇಳಿದ್ದೀರಿ. ಇದನ್ನು ಸೂಕ್ಷ್ಮವಾಗಿ ಗಮನಿಸಿದರೆ ಇದರಿಂದ ಒಂದೂ ನಯಾ ಪೈಸೆಯೂ ಸಹ ಸರ್ಕಾರದ ಬೊಕ್ಕಸದಿಂದ ಖರ್ಚಾಗುವುದಿಲ್ಲ, ಇಲ್ಲಿ ಮತ್ತೆ ಉದ್ದಿಮೆದಾರ ಸಾಲದ ಸುಳಿಗೆ ಸಿಲುಕುವಂತಾಗುತ್ತದೆ ಎಂದು ಹೇಳಿಕೆಯಲ್ಲಿ ಆರೋಪಿಸಲಾಗಿದೆ.

ಉದಾಹರಣೆಗೆ ಒಬ್ಬ ಉದ್ದಿಮೆದಾರ ಒಂದು ಕೋಟಿ ಸಾಲ ಮಾಡಿದರೆ ಆ 1 ಕೋಟಿಯಲ್ಲಿನ ಪ್ರತಿಶತ 20 ರಷ್ಟು ಅಂದರೆ 20 ಲಕ್ಷಕ್ಕೆ ಮಾತ್ರ ಕೇಂದ್ರ ಸರ್ಕಾರ ಗ್ಯಾರಂಟಿ ನೀಡಲಾಗುವುದೆಂದು ಘೋಷಿಸಿದ್ದಾರೆ. ಉಳಿದ 80 ಲಕ್ಷಕ್ಕೆ ಮಾಲೀಕನೇ ಗ್ಯಾರಂಟಿ ನೀಡಿ ಸಾಲವನ್ನು ಪಡೆದುಕೊಳ್ಳಬೇಕಾಗಿದೆ. ಇದಲ್ಲದೆ ಬ್ಯಾಂಕುಗಳು ಸಾಮಾನ್ಯವಾಗಿ ಗರಿಷ್ಠವೆಂದರೆ 80% ಮಾತ್ರ ಸಾಲವನ್ನು ನೀಡುತ್ತದೆ. ಈ ವ್ಯವಹಾರಗಳಲ್ಲಿ ಕೇಂದ್ರ ಸರ್ಕಾರದ ಯಾವ ಸಹಾಯ ಧನವೂ ಸಹ ಲಭ್ಯವಾಗುವುದಿಲ್ಲ ಎಂದು ಟೀಕಿಸಲಾಗಿದೆ.

ಕೇಂದ್ರ ಸರ್ಕಾರ ಗ್ಯಾರಂಟಿ ನೀಡಿರುವ 20 ಲಕ್ಷ ಕೈಗೆ ಸಿಗುವುದೇ ಇಲ್ಲ. ಒಂದೂ ನಯಾಪೈಸೆಯೂ ಯಾರ ಜೇಬಿಗೂ ಹೋಗುವುದಿಲ್ಲ. ಈ ಮೊತ್ತದ ಉಪಯೋಗ ಆಗಬೇಕು ಎಂದರೆ ಮಾಲೀಕನು ತನ್ನ ಉದ್ಯಮವನ್ನು ಮುಚ್ಚಬೇಕಷ್ಟೇ. ಇದು ಸಂಪೂರ್ಣವಾಗಿ ದಿಕ್ಕು ತಪ್ಪಿಸುವಂತಹ ಕೇಂದ್ರ ಬಜೆಟ್ಟಿನ ಮುಂದುವರೆದ ವರದಿ ಮಾತ್ರ ಎಂದು ಹೇಳಿಕೆಯಲ್ಲಿ ಹೇಳಲಾಗಿದೆ.

ಸಾಲ ಮಾಡುವ ಶಕ್ತಿ ಇದ್ದಿದ್ದರೆ ಜನರು ಏಕೆ ಪ್ಯಾಕೇಜ್ ಕೇಳುತ್ತಿದ್ದರು. ಸದ್ಯದ ಪರಿಸ್ಥಿತಿಯಲ್ಲಿ ಇರುವ ಸಾಲವನ್ನೆ ತೀರಿಸಲು ಸಾದ್ಯವಿಲ್ಲ. ಎನ್ನುವ ಪರಿಸ್ಥಿತಿ ಇರುವಾಗ ಸಾಲ ತೀರಿಸಲು ಏನಾದರೂ ಸಹಾಯ ಮಾಡಿ ಎಂದರೆ ಮತ್ತಷ್ಟು ಸಾಲ ಮಾಡಿ ಎಂದು ಹೇಳುವುದು ಯಾವ ರೀತಿಯ ಲೆಕ್ಕಾಚಾರ ಎನ್ನುವುದನ್ನು ಕೇಂದ್ರ ಸರ್ಕಾರ ಬಿಡಿಸಿ ಹೇಳಬೇಕು ಎಂದು ಆಪ್‌ ಆಗ್ರಹಿಸಿದೆ.

ಶೇ 25 ರಷ್ಟು ಟಿಡಿಎಸ್ ಖಡಿತಗೊಳ್ಳುವುದು ಎಂದು ತಿಳಿಸಲಾಗಿದೆ.‌ ಅಂದರೆ ನಾವು 1 ಲಕ್ಷ ಹಣದಲ್ಲಿ 10 ಸಾವಿರ ಕಡಿತಗೊಂಡರೆ ಅದರಲ್ಲಿನ ಎರಡುವರೆ ಸಾವಿರ ಹಣಕ್ಕೆ ಮಾತ್ರ ವಿನಾಯಿತಿ. ಈ ವಿನಾಯಿತಿಗೊಂಡ ಹಣವನ್ನು ಆದಾಯ ತೆರಿಗೆ ಕಟ್ಟುವ ವೇಳೆ ಮತ್ತೆ ಜಮಾ ಮಾಡಬೇಕು. ಹಾಗಾದರೆ ಇದರಿಂದ ಏನು ಲಾಭ? ಎಂದರೆ ಬರೀ ಶೂನ್ಯ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ಮೇಲಿನ ಎಲ್ಲಾ ಸೌಲಭ್ಯ ಕೇವಲ 6 ತಿಂಗಳು ಮಾತ್ರ. ಹಳ್ಳ ಹಿಡಿದಿರುವ ಆರ್ಥಿಕತೆಯನ್ನು ಮೇಲೆತ್ತಲು ಕೇವಲ 6 ತಿಂಗಳ ಕಾಲಾವಕಾಶ ಸಾಕೇ? ಆದಾಯ ತೆರಿಗೆ ವಿನಾಯತಿ, GST ಕಡಿತ, EMI ಮನ್ನಾ/ಬಡ್ಡಿ ಮನ್ನಾ ಇಲ್ಲ ಎಂದು ಆರೋಪಿಸಲಾಗಿದೆ.

ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳಲ್ಲಿ ದುಡಿಯುವ ಕಾರ್ಮಿಕರ ಸಂಕಷ್ಟಕ್ಕೆ ಮಿಡಿಯದ ಪ್ಯಾಕೇಜ್ ಎನ್ನಬಹುದು. ಸಣ್ಣ/ಮಧ್ಯಮ ವರ್ಗದ ವ್ಯಾಪಾರಸ್ಥರಿಗೆ ಸಹಾಯ ಧನ, ಅಸಂಘಟಿತ ಕಾರ್ಮಿಕ ವಲಯಕ್ಕೆ ಉತ್ತೇಜನ ನೀಡುವಲ್ಲಿ ಈ ಪ್ಯಾಕೇಜ್ ನಿರ್ಲಕ್ಷಿಸಿದೆ ಎಂದಿದ್ದಾರೆ.

ಈ ₹20 ಲಕ್ಷ ಕೋಟಿ ಎನ್ನುವ ಜುಮ್ಲಾ ಪ್ಯಾಕೇಜ್‌ನಿಂದ ಶೇ 99 ರಷ್ಟು ಭಾರತೀಯರಿಗೆ ನಯಾಪೈಸೆಯಷ್ಟು ಲಾಭ ಇಲ್ಲ ಎನ್ನುವುದು ಸ್ಪಷ್ಟ. ಬಿಗ್ ಬಾಸ್ಕೆಟ್, ಓಯೋ ಹೀಗೆ ಅನೇಕ ಕಂಪನಿಗಳು ಚೀನಾದಲ್ಲೂ ಬಂಡವಾಳ ಹೂಡಿವೆ ಈ ಕಂಪೆನಿಗಳು ಬಂಡವಾಳ ಹಿಂಪಡೆದರೆ ಅವುಗಳ ಉತ್ತೇಜನಕ್ಕೆ ಯಾವ ಯೋಜನೆ ಇದೆ ಎನ್ನುವುದು ಸ್ಪಷ್ಟತೆ ಇಲ್ಲ ಎಂದು ಟೀಕಿಸಲಾಗಿದೆ.

ಕೈಬಿಚ್ಚಿ ಸಹಾಯ ಹಸ್ತ ಕೊಡದೆ ಮತ್ತಷ್ಟು ಸಾಲದ ಸುಳಿಗೆ ಜನರನ್ನು ದೂಡುವ ಅವೈಜ್ಞಾನಿಕ ಪ್ಯಾಕೇಜ್.
ಇನ್ನಾದರೂ ಮುಂದಿನ ಪ್ಯಾಕೇಜ್ ಗಳಲ್ಲಿ ಆದರೂ ಬೇಡಿಕೆ ಹೆಚ್ಚಳ ಮಾಡುವಂತಹ ಯೋಜನೆಗಳು ಘೋಷಿಸಲಿ, ಕೈ ಬಿಚ್ಚಿ ದುಡ್ಡು ಹಂಚಿಕೆ ಮಾಡಲಿ ಎಂದು ಆಮ್ ಆದ್ಮಿ ಪಕ್ಷ ಆಗ್ರಹಿಸಿದೆ.


ಇದನ್ನೂ ಓದಿ: ಪ್ರಧಾನಿಯ 20 ಲಕ್ಷ ಕೋಟಿ ಪ್ಯಾಕೇಜ್: ಮೊದಲ ಕಂತಲ್ಲಿ ಕೊಡ್ತಿರೋದು ಕೇವಲ 2500 ಕೋಟಿ ಅಷ್ಟೆ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...