Homeಮುಖಪುಟಮೋದಿಯವರ 20 ಲಕ್ಷ ಕೋಟಿ ಎಂಬುದು ಜುಮ್ಲಾ ಪ್ಯಾಕೇಜ್‌ : ಆಮ್‌ ಆದ್ಮಿ ಪಕ್ಷ

ಮೋದಿಯವರ 20 ಲಕ್ಷ ಕೋಟಿ ಎಂಬುದು ಜುಮ್ಲಾ ಪ್ಯಾಕೇಜ್‌ : ಆಮ್‌ ಆದ್ಮಿ ಪಕ್ಷ

- Advertisement -
- Advertisement -

ಲಾಕ್‌ಡೌನ್ ಮಾಡಿದ ಪರಿಣಾಮ ದೇಶದಲ್ಲಿ ಸಾಕಷ್ಟು ಸರಕುಗಳು ಖರ್ಚಾಗದೇ ಉಳಿದಿದೆ. ಈಗಾಗಲೇ ಪೂರೈಕೆ ಸಾಕಷ್ಟು ಇದ್ದರೂ ಸಹ ಗ್ರಾಹಕರಿಂದ ಬೇಡಿಕೆ ಇಲ್ಲದಾಗಿದೆ. ಈ ಸಂದರ್ಭದಲ್ಲಿ ಬೇಡಿಕೆಯನ್ನು ಹೆಚ್ಚಳ ಮಾಡುವಂತಹ ಯೋಜನೆಗಳನ್ನು ಘೋಷಿಸಿ ಎಂದರೆ ಕೇವಲ ಸಾಲ ಮಾಡಿ ಅದಕ್ಕೆ ಕೇಂದ್ರ ದುಡ್ಡು ನೀಡುವುದು ಎನ್ನುವುದು ಯಾವ ರೀತಿಯ ಲೆಕ್ಕಾಚಾರ ಎನ್ನವುದು ತಿಳಿಯುತ್ತಿಲ್ಲ ಎಂದು ಕರ್ನಾಟಕ ಆಮ್‌ ಆದ್ಮಿ ಪಕ್ಷ ಟೀಕಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕರಾದ ಜಗದೀಶ್ ವಿ ಸದಂ,  “ಕೊರೊನಾದಿಂದ ಉಂಟಾದ ಸಂಕಷ್ಟಕ್ಕೆ ಮದ್ದು ನೀಡುವುದಾಗಿ ಹೇಳಿದ ಮಾನ್ಯ ಪ್ರಧಾನಿಗಳು ಖಾಲಿ ಹಾಳೆಯಂತಹ ಸುಮಾರು 20 ಲಕ್ಷ ಕೋಟಿಯ ದೊಡ್ಡ ಮೊತ್ತದ ಪ್ಯಾಕೇಜ್ ಘೋಷಿಸಿದರು. ಈ ಖಾಲಿ ಹಾಳೆಯನ್ನು ತುಂಬಿಸುವಂತೆ ಯಾವ ಯಾವ ವಲಯಕ್ಕೆ ಎಷ್ಟು ಹಣ ಮೀಸಲು ಎನ್ನುವುದನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವರದಿ ಒಪ್ಪಿಸಿದರೇ ಹೊರತು ನಯಾ ಪೈಸೆಯಷ್ಟು ಹಣವನ್ನು ಜನರಿಗೆ ನೀಡದೆ ದಾರಿ ತಪ್ಪಿಸುವ ಪ್ಯಾಕೇಜ್ ಎಂದು ಇದನ್ನು ಕರೆಯಬಹುದು” ಎಂದಿದ್ದಾರೆ.

ಎಂಎಸ್ಎಂಇಗಳಿಗೆ 3 ಲಕ್ಷ ಕೋಟಿ ಸಾಲ ನೀಡುವುದಕ್ಕೆ ಮೀಸಲು ಹಾಗೂ ನಿಮಗೆ ನೀಡುವ ಸಾಲಕ್ಕೆ ಕೇಂದ್ರ ಸರ್ಕಾರವೇ ಗ್ಯಾರಂಟಿ ಎಂದು ಹೇಳಿದ್ದೀರಿ. ಇದನ್ನು ಸೂಕ್ಷ್ಮವಾಗಿ ಗಮನಿಸಿದರೆ ಇದರಿಂದ ಒಂದೂ ನಯಾ ಪೈಸೆಯೂ ಸಹ ಸರ್ಕಾರದ ಬೊಕ್ಕಸದಿಂದ ಖರ್ಚಾಗುವುದಿಲ್ಲ, ಇಲ್ಲಿ ಮತ್ತೆ ಉದ್ದಿಮೆದಾರ ಸಾಲದ ಸುಳಿಗೆ ಸಿಲುಕುವಂತಾಗುತ್ತದೆ ಎಂದು ಹೇಳಿಕೆಯಲ್ಲಿ ಆರೋಪಿಸಲಾಗಿದೆ.

ಉದಾಹರಣೆಗೆ ಒಬ್ಬ ಉದ್ದಿಮೆದಾರ ಒಂದು ಕೋಟಿ ಸಾಲ ಮಾಡಿದರೆ ಆ 1 ಕೋಟಿಯಲ್ಲಿನ ಪ್ರತಿಶತ 20 ರಷ್ಟು ಅಂದರೆ 20 ಲಕ್ಷಕ್ಕೆ ಮಾತ್ರ ಕೇಂದ್ರ ಸರ್ಕಾರ ಗ್ಯಾರಂಟಿ ನೀಡಲಾಗುವುದೆಂದು ಘೋಷಿಸಿದ್ದಾರೆ. ಉಳಿದ 80 ಲಕ್ಷಕ್ಕೆ ಮಾಲೀಕನೇ ಗ್ಯಾರಂಟಿ ನೀಡಿ ಸಾಲವನ್ನು ಪಡೆದುಕೊಳ್ಳಬೇಕಾಗಿದೆ. ಇದಲ್ಲದೆ ಬ್ಯಾಂಕುಗಳು ಸಾಮಾನ್ಯವಾಗಿ ಗರಿಷ್ಠವೆಂದರೆ 80% ಮಾತ್ರ ಸಾಲವನ್ನು ನೀಡುತ್ತದೆ. ಈ ವ್ಯವಹಾರಗಳಲ್ಲಿ ಕೇಂದ್ರ ಸರ್ಕಾರದ ಯಾವ ಸಹಾಯ ಧನವೂ ಸಹ ಲಭ್ಯವಾಗುವುದಿಲ್ಲ ಎಂದು ಟೀಕಿಸಲಾಗಿದೆ.

ಕೇಂದ್ರ ಸರ್ಕಾರ ಗ್ಯಾರಂಟಿ ನೀಡಿರುವ 20 ಲಕ್ಷ ಕೈಗೆ ಸಿಗುವುದೇ ಇಲ್ಲ. ಒಂದೂ ನಯಾಪೈಸೆಯೂ ಯಾರ ಜೇಬಿಗೂ ಹೋಗುವುದಿಲ್ಲ. ಈ ಮೊತ್ತದ ಉಪಯೋಗ ಆಗಬೇಕು ಎಂದರೆ ಮಾಲೀಕನು ತನ್ನ ಉದ್ಯಮವನ್ನು ಮುಚ್ಚಬೇಕಷ್ಟೇ. ಇದು ಸಂಪೂರ್ಣವಾಗಿ ದಿಕ್ಕು ತಪ್ಪಿಸುವಂತಹ ಕೇಂದ್ರ ಬಜೆಟ್ಟಿನ ಮುಂದುವರೆದ ವರದಿ ಮಾತ್ರ ಎಂದು ಹೇಳಿಕೆಯಲ್ಲಿ ಹೇಳಲಾಗಿದೆ.

ಸಾಲ ಮಾಡುವ ಶಕ್ತಿ ಇದ್ದಿದ್ದರೆ ಜನರು ಏಕೆ ಪ್ಯಾಕೇಜ್ ಕೇಳುತ್ತಿದ್ದರು. ಸದ್ಯದ ಪರಿಸ್ಥಿತಿಯಲ್ಲಿ ಇರುವ ಸಾಲವನ್ನೆ ತೀರಿಸಲು ಸಾದ್ಯವಿಲ್ಲ. ಎನ್ನುವ ಪರಿಸ್ಥಿತಿ ಇರುವಾಗ ಸಾಲ ತೀರಿಸಲು ಏನಾದರೂ ಸಹಾಯ ಮಾಡಿ ಎಂದರೆ ಮತ್ತಷ್ಟು ಸಾಲ ಮಾಡಿ ಎಂದು ಹೇಳುವುದು ಯಾವ ರೀತಿಯ ಲೆಕ್ಕಾಚಾರ ಎನ್ನುವುದನ್ನು ಕೇಂದ್ರ ಸರ್ಕಾರ ಬಿಡಿಸಿ ಹೇಳಬೇಕು ಎಂದು ಆಪ್‌ ಆಗ್ರಹಿಸಿದೆ.

ಶೇ 25 ರಷ್ಟು ಟಿಡಿಎಸ್ ಖಡಿತಗೊಳ್ಳುವುದು ಎಂದು ತಿಳಿಸಲಾಗಿದೆ.‌ ಅಂದರೆ ನಾವು 1 ಲಕ್ಷ ಹಣದಲ್ಲಿ 10 ಸಾವಿರ ಕಡಿತಗೊಂಡರೆ ಅದರಲ್ಲಿನ ಎರಡುವರೆ ಸಾವಿರ ಹಣಕ್ಕೆ ಮಾತ್ರ ವಿನಾಯಿತಿ. ಈ ವಿನಾಯಿತಿಗೊಂಡ ಹಣವನ್ನು ಆದಾಯ ತೆರಿಗೆ ಕಟ್ಟುವ ವೇಳೆ ಮತ್ತೆ ಜಮಾ ಮಾಡಬೇಕು. ಹಾಗಾದರೆ ಇದರಿಂದ ಏನು ಲಾಭ? ಎಂದರೆ ಬರೀ ಶೂನ್ಯ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ಮೇಲಿನ ಎಲ್ಲಾ ಸೌಲಭ್ಯ ಕೇವಲ 6 ತಿಂಗಳು ಮಾತ್ರ. ಹಳ್ಳ ಹಿಡಿದಿರುವ ಆರ್ಥಿಕತೆಯನ್ನು ಮೇಲೆತ್ತಲು ಕೇವಲ 6 ತಿಂಗಳ ಕಾಲಾವಕಾಶ ಸಾಕೇ? ಆದಾಯ ತೆರಿಗೆ ವಿನಾಯತಿ, GST ಕಡಿತ, EMI ಮನ್ನಾ/ಬಡ್ಡಿ ಮನ್ನಾ ಇಲ್ಲ ಎಂದು ಆರೋಪಿಸಲಾಗಿದೆ.

ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳಲ್ಲಿ ದುಡಿಯುವ ಕಾರ್ಮಿಕರ ಸಂಕಷ್ಟಕ್ಕೆ ಮಿಡಿಯದ ಪ್ಯಾಕೇಜ್ ಎನ್ನಬಹುದು. ಸಣ್ಣ/ಮಧ್ಯಮ ವರ್ಗದ ವ್ಯಾಪಾರಸ್ಥರಿಗೆ ಸಹಾಯ ಧನ, ಅಸಂಘಟಿತ ಕಾರ್ಮಿಕ ವಲಯಕ್ಕೆ ಉತ್ತೇಜನ ನೀಡುವಲ್ಲಿ ಈ ಪ್ಯಾಕೇಜ್ ನಿರ್ಲಕ್ಷಿಸಿದೆ ಎಂದಿದ್ದಾರೆ.

ಈ ₹20 ಲಕ್ಷ ಕೋಟಿ ಎನ್ನುವ ಜುಮ್ಲಾ ಪ್ಯಾಕೇಜ್‌ನಿಂದ ಶೇ 99 ರಷ್ಟು ಭಾರತೀಯರಿಗೆ ನಯಾಪೈಸೆಯಷ್ಟು ಲಾಭ ಇಲ್ಲ ಎನ್ನುವುದು ಸ್ಪಷ್ಟ. ಬಿಗ್ ಬಾಸ್ಕೆಟ್, ಓಯೋ ಹೀಗೆ ಅನೇಕ ಕಂಪನಿಗಳು ಚೀನಾದಲ್ಲೂ ಬಂಡವಾಳ ಹೂಡಿವೆ ಈ ಕಂಪೆನಿಗಳು ಬಂಡವಾಳ ಹಿಂಪಡೆದರೆ ಅವುಗಳ ಉತ್ತೇಜನಕ್ಕೆ ಯಾವ ಯೋಜನೆ ಇದೆ ಎನ್ನುವುದು ಸ್ಪಷ್ಟತೆ ಇಲ್ಲ ಎಂದು ಟೀಕಿಸಲಾಗಿದೆ.

ಕೈಬಿಚ್ಚಿ ಸಹಾಯ ಹಸ್ತ ಕೊಡದೆ ಮತ್ತಷ್ಟು ಸಾಲದ ಸುಳಿಗೆ ಜನರನ್ನು ದೂಡುವ ಅವೈಜ್ಞಾನಿಕ ಪ್ಯಾಕೇಜ್.
ಇನ್ನಾದರೂ ಮುಂದಿನ ಪ್ಯಾಕೇಜ್ ಗಳಲ್ಲಿ ಆದರೂ ಬೇಡಿಕೆ ಹೆಚ್ಚಳ ಮಾಡುವಂತಹ ಯೋಜನೆಗಳು ಘೋಷಿಸಲಿ, ಕೈ ಬಿಚ್ಚಿ ದುಡ್ಡು ಹಂಚಿಕೆ ಮಾಡಲಿ ಎಂದು ಆಮ್ ಆದ್ಮಿ ಪಕ್ಷ ಆಗ್ರಹಿಸಿದೆ.


ಇದನ್ನೂ ಓದಿ: ಪ್ರಧಾನಿಯ 20 ಲಕ್ಷ ಕೋಟಿ ಪ್ಯಾಕೇಜ್: ಮೊದಲ ಕಂತಲ್ಲಿ ಕೊಡ್ತಿರೋದು ಕೇವಲ 2500 ಕೋಟಿ ಅಷ್ಟೆ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...