Homeಮುಖಪುಟಮೋದಿಯವರ 20 ಲಕ್ಷ ಕೋಟಿ ಎಂಬುದು ಜುಮ್ಲಾ ಪ್ಯಾಕೇಜ್‌ : ಆಮ್‌ ಆದ್ಮಿ ಪಕ್ಷ

ಮೋದಿಯವರ 20 ಲಕ್ಷ ಕೋಟಿ ಎಂಬುದು ಜುಮ್ಲಾ ಪ್ಯಾಕೇಜ್‌ : ಆಮ್‌ ಆದ್ಮಿ ಪಕ್ಷ

- Advertisement -
- Advertisement -

ಲಾಕ್‌ಡೌನ್ ಮಾಡಿದ ಪರಿಣಾಮ ದೇಶದಲ್ಲಿ ಸಾಕಷ್ಟು ಸರಕುಗಳು ಖರ್ಚಾಗದೇ ಉಳಿದಿದೆ. ಈಗಾಗಲೇ ಪೂರೈಕೆ ಸಾಕಷ್ಟು ಇದ್ದರೂ ಸಹ ಗ್ರಾಹಕರಿಂದ ಬೇಡಿಕೆ ಇಲ್ಲದಾಗಿದೆ. ಈ ಸಂದರ್ಭದಲ್ಲಿ ಬೇಡಿಕೆಯನ್ನು ಹೆಚ್ಚಳ ಮಾಡುವಂತಹ ಯೋಜನೆಗಳನ್ನು ಘೋಷಿಸಿ ಎಂದರೆ ಕೇವಲ ಸಾಲ ಮಾಡಿ ಅದಕ್ಕೆ ಕೇಂದ್ರ ದುಡ್ಡು ನೀಡುವುದು ಎನ್ನುವುದು ಯಾವ ರೀತಿಯ ಲೆಕ್ಕಾಚಾರ ಎನ್ನವುದು ತಿಳಿಯುತ್ತಿಲ್ಲ ಎಂದು ಕರ್ನಾಟಕ ಆಮ್‌ ಆದ್ಮಿ ಪಕ್ಷ ಟೀಕಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕರಾದ ಜಗದೀಶ್ ವಿ ಸದಂ,  “ಕೊರೊನಾದಿಂದ ಉಂಟಾದ ಸಂಕಷ್ಟಕ್ಕೆ ಮದ್ದು ನೀಡುವುದಾಗಿ ಹೇಳಿದ ಮಾನ್ಯ ಪ್ರಧಾನಿಗಳು ಖಾಲಿ ಹಾಳೆಯಂತಹ ಸುಮಾರು 20 ಲಕ್ಷ ಕೋಟಿಯ ದೊಡ್ಡ ಮೊತ್ತದ ಪ್ಯಾಕೇಜ್ ಘೋಷಿಸಿದರು. ಈ ಖಾಲಿ ಹಾಳೆಯನ್ನು ತುಂಬಿಸುವಂತೆ ಯಾವ ಯಾವ ವಲಯಕ್ಕೆ ಎಷ್ಟು ಹಣ ಮೀಸಲು ಎನ್ನುವುದನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವರದಿ ಒಪ್ಪಿಸಿದರೇ ಹೊರತು ನಯಾ ಪೈಸೆಯಷ್ಟು ಹಣವನ್ನು ಜನರಿಗೆ ನೀಡದೆ ದಾರಿ ತಪ್ಪಿಸುವ ಪ್ಯಾಕೇಜ್ ಎಂದು ಇದನ್ನು ಕರೆಯಬಹುದು” ಎಂದಿದ್ದಾರೆ.

ಎಂಎಸ್ಎಂಇಗಳಿಗೆ 3 ಲಕ್ಷ ಕೋಟಿ ಸಾಲ ನೀಡುವುದಕ್ಕೆ ಮೀಸಲು ಹಾಗೂ ನಿಮಗೆ ನೀಡುವ ಸಾಲಕ್ಕೆ ಕೇಂದ್ರ ಸರ್ಕಾರವೇ ಗ್ಯಾರಂಟಿ ಎಂದು ಹೇಳಿದ್ದೀರಿ. ಇದನ್ನು ಸೂಕ್ಷ್ಮವಾಗಿ ಗಮನಿಸಿದರೆ ಇದರಿಂದ ಒಂದೂ ನಯಾ ಪೈಸೆಯೂ ಸಹ ಸರ್ಕಾರದ ಬೊಕ್ಕಸದಿಂದ ಖರ್ಚಾಗುವುದಿಲ್ಲ, ಇಲ್ಲಿ ಮತ್ತೆ ಉದ್ದಿಮೆದಾರ ಸಾಲದ ಸುಳಿಗೆ ಸಿಲುಕುವಂತಾಗುತ್ತದೆ ಎಂದು ಹೇಳಿಕೆಯಲ್ಲಿ ಆರೋಪಿಸಲಾಗಿದೆ.

ಉದಾಹರಣೆಗೆ ಒಬ್ಬ ಉದ್ದಿಮೆದಾರ ಒಂದು ಕೋಟಿ ಸಾಲ ಮಾಡಿದರೆ ಆ 1 ಕೋಟಿಯಲ್ಲಿನ ಪ್ರತಿಶತ 20 ರಷ್ಟು ಅಂದರೆ 20 ಲಕ್ಷಕ್ಕೆ ಮಾತ್ರ ಕೇಂದ್ರ ಸರ್ಕಾರ ಗ್ಯಾರಂಟಿ ನೀಡಲಾಗುವುದೆಂದು ಘೋಷಿಸಿದ್ದಾರೆ. ಉಳಿದ 80 ಲಕ್ಷಕ್ಕೆ ಮಾಲೀಕನೇ ಗ್ಯಾರಂಟಿ ನೀಡಿ ಸಾಲವನ್ನು ಪಡೆದುಕೊಳ್ಳಬೇಕಾಗಿದೆ. ಇದಲ್ಲದೆ ಬ್ಯಾಂಕುಗಳು ಸಾಮಾನ್ಯವಾಗಿ ಗರಿಷ್ಠವೆಂದರೆ 80% ಮಾತ್ರ ಸಾಲವನ್ನು ನೀಡುತ್ತದೆ. ಈ ವ್ಯವಹಾರಗಳಲ್ಲಿ ಕೇಂದ್ರ ಸರ್ಕಾರದ ಯಾವ ಸಹಾಯ ಧನವೂ ಸಹ ಲಭ್ಯವಾಗುವುದಿಲ್ಲ ಎಂದು ಟೀಕಿಸಲಾಗಿದೆ.

ಕೇಂದ್ರ ಸರ್ಕಾರ ಗ್ಯಾರಂಟಿ ನೀಡಿರುವ 20 ಲಕ್ಷ ಕೈಗೆ ಸಿಗುವುದೇ ಇಲ್ಲ. ಒಂದೂ ನಯಾಪೈಸೆಯೂ ಯಾರ ಜೇಬಿಗೂ ಹೋಗುವುದಿಲ್ಲ. ಈ ಮೊತ್ತದ ಉಪಯೋಗ ಆಗಬೇಕು ಎಂದರೆ ಮಾಲೀಕನು ತನ್ನ ಉದ್ಯಮವನ್ನು ಮುಚ್ಚಬೇಕಷ್ಟೇ. ಇದು ಸಂಪೂರ್ಣವಾಗಿ ದಿಕ್ಕು ತಪ್ಪಿಸುವಂತಹ ಕೇಂದ್ರ ಬಜೆಟ್ಟಿನ ಮುಂದುವರೆದ ವರದಿ ಮಾತ್ರ ಎಂದು ಹೇಳಿಕೆಯಲ್ಲಿ ಹೇಳಲಾಗಿದೆ.

ಸಾಲ ಮಾಡುವ ಶಕ್ತಿ ಇದ್ದಿದ್ದರೆ ಜನರು ಏಕೆ ಪ್ಯಾಕೇಜ್ ಕೇಳುತ್ತಿದ್ದರು. ಸದ್ಯದ ಪರಿಸ್ಥಿತಿಯಲ್ಲಿ ಇರುವ ಸಾಲವನ್ನೆ ತೀರಿಸಲು ಸಾದ್ಯವಿಲ್ಲ. ಎನ್ನುವ ಪರಿಸ್ಥಿತಿ ಇರುವಾಗ ಸಾಲ ತೀರಿಸಲು ಏನಾದರೂ ಸಹಾಯ ಮಾಡಿ ಎಂದರೆ ಮತ್ತಷ್ಟು ಸಾಲ ಮಾಡಿ ಎಂದು ಹೇಳುವುದು ಯಾವ ರೀತಿಯ ಲೆಕ್ಕಾಚಾರ ಎನ್ನುವುದನ್ನು ಕೇಂದ್ರ ಸರ್ಕಾರ ಬಿಡಿಸಿ ಹೇಳಬೇಕು ಎಂದು ಆಪ್‌ ಆಗ್ರಹಿಸಿದೆ.

ಶೇ 25 ರಷ್ಟು ಟಿಡಿಎಸ್ ಖಡಿತಗೊಳ್ಳುವುದು ಎಂದು ತಿಳಿಸಲಾಗಿದೆ.‌ ಅಂದರೆ ನಾವು 1 ಲಕ್ಷ ಹಣದಲ್ಲಿ 10 ಸಾವಿರ ಕಡಿತಗೊಂಡರೆ ಅದರಲ್ಲಿನ ಎರಡುವರೆ ಸಾವಿರ ಹಣಕ್ಕೆ ಮಾತ್ರ ವಿನಾಯಿತಿ. ಈ ವಿನಾಯಿತಿಗೊಂಡ ಹಣವನ್ನು ಆದಾಯ ತೆರಿಗೆ ಕಟ್ಟುವ ವೇಳೆ ಮತ್ತೆ ಜಮಾ ಮಾಡಬೇಕು. ಹಾಗಾದರೆ ಇದರಿಂದ ಏನು ಲಾಭ? ಎಂದರೆ ಬರೀ ಶೂನ್ಯ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ಮೇಲಿನ ಎಲ್ಲಾ ಸೌಲಭ್ಯ ಕೇವಲ 6 ತಿಂಗಳು ಮಾತ್ರ. ಹಳ್ಳ ಹಿಡಿದಿರುವ ಆರ್ಥಿಕತೆಯನ್ನು ಮೇಲೆತ್ತಲು ಕೇವಲ 6 ತಿಂಗಳ ಕಾಲಾವಕಾಶ ಸಾಕೇ? ಆದಾಯ ತೆರಿಗೆ ವಿನಾಯತಿ, GST ಕಡಿತ, EMI ಮನ್ನಾ/ಬಡ್ಡಿ ಮನ್ನಾ ಇಲ್ಲ ಎಂದು ಆರೋಪಿಸಲಾಗಿದೆ.

ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳಲ್ಲಿ ದುಡಿಯುವ ಕಾರ್ಮಿಕರ ಸಂಕಷ್ಟಕ್ಕೆ ಮಿಡಿಯದ ಪ್ಯಾಕೇಜ್ ಎನ್ನಬಹುದು. ಸಣ್ಣ/ಮಧ್ಯಮ ವರ್ಗದ ವ್ಯಾಪಾರಸ್ಥರಿಗೆ ಸಹಾಯ ಧನ, ಅಸಂಘಟಿತ ಕಾರ್ಮಿಕ ವಲಯಕ್ಕೆ ಉತ್ತೇಜನ ನೀಡುವಲ್ಲಿ ಈ ಪ್ಯಾಕೇಜ್ ನಿರ್ಲಕ್ಷಿಸಿದೆ ಎಂದಿದ್ದಾರೆ.

ಈ ₹20 ಲಕ್ಷ ಕೋಟಿ ಎನ್ನುವ ಜುಮ್ಲಾ ಪ್ಯಾಕೇಜ್‌ನಿಂದ ಶೇ 99 ರಷ್ಟು ಭಾರತೀಯರಿಗೆ ನಯಾಪೈಸೆಯಷ್ಟು ಲಾಭ ಇಲ್ಲ ಎನ್ನುವುದು ಸ್ಪಷ್ಟ. ಬಿಗ್ ಬಾಸ್ಕೆಟ್, ಓಯೋ ಹೀಗೆ ಅನೇಕ ಕಂಪನಿಗಳು ಚೀನಾದಲ್ಲೂ ಬಂಡವಾಳ ಹೂಡಿವೆ ಈ ಕಂಪೆನಿಗಳು ಬಂಡವಾಳ ಹಿಂಪಡೆದರೆ ಅವುಗಳ ಉತ್ತೇಜನಕ್ಕೆ ಯಾವ ಯೋಜನೆ ಇದೆ ಎನ್ನುವುದು ಸ್ಪಷ್ಟತೆ ಇಲ್ಲ ಎಂದು ಟೀಕಿಸಲಾಗಿದೆ.

ಕೈಬಿಚ್ಚಿ ಸಹಾಯ ಹಸ್ತ ಕೊಡದೆ ಮತ್ತಷ್ಟು ಸಾಲದ ಸುಳಿಗೆ ಜನರನ್ನು ದೂಡುವ ಅವೈಜ್ಞಾನಿಕ ಪ್ಯಾಕೇಜ್.
ಇನ್ನಾದರೂ ಮುಂದಿನ ಪ್ಯಾಕೇಜ್ ಗಳಲ್ಲಿ ಆದರೂ ಬೇಡಿಕೆ ಹೆಚ್ಚಳ ಮಾಡುವಂತಹ ಯೋಜನೆಗಳು ಘೋಷಿಸಲಿ, ಕೈ ಬಿಚ್ಚಿ ದುಡ್ಡು ಹಂಚಿಕೆ ಮಾಡಲಿ ಎಂದು ಆಮ್ ಆದ್ಮಿ ಪಕ್ಷ ಆಗ್ರಹಿಸಿದೆ.


ಇದನ್ನೂ ಓದಿ: ಪ್ರಧಾನಿಯ 20 ಲಕ್ಷ ಕೋಟಿ ಪ್ಯಾಕೇಜ್: ಮೊದಲ ಕಂತಲ್ಲಿ ಕೊಡ್ತಿರೋದು ಕೇವಲ 2500 ಕೋಟಿ ಅಷ್ಟೆ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...