Homeಮುಖಪುಟಮೋದಿಯವರ 20 ಲಕ್ಷ ಕೋಟಿ ಎಂಬುದು ಜುಮ್ಲಾ ಪ್ಯಾಕೇಜ್‌ : ಆಮ್‌ ಆದ್ಮಿ ಪಕ್ಷ

ಮೋದಿಯವರ 20 ಲಕ್ಷ ಕೋಟಿ ಎಂಬುದು ಜುಮ್ಲಾ ಪ್ಯಾಕೇಜ್‌ : ಆಮ್‌ ಆದ್ಮಿ ಪಕ್ಷ

- Advertisement -
- Advertisement -

ಲಾಕ್‌ಡೌನ್ ಮಾಡಿದ ಪರಿಣಾಮ ದೇಶದಲ್ಲಿ ಸಾಕಷ್ಟು ಸರಕುಗಳು ಖರ್ಚಾಗದೇ ಉಳಿದಿದೆ. ಈಗಾಗಲೇ ಪೂರೈಕೆ ಸಾಕಷ್ಟು ಇದ್ದರೂ ಸಹ ಗ್ರಾಹಕರಿಂದ ಬೇಡಿಕೆ ಇಲ್ಲದಾಗಿದೆ. ಈ ಸಂದರ್ಭದಲ್ಲಿ ಬೇಡಿಕೆಯನ್ನು ಹೆಚ್ಚಳ ಮಾಡುವಂತಹ ಯೋಜನೆಗಳನ್ನು ಘೋಷಿಸಿ ಎಂದರೆ ಕೇವಲ ಸಾಲ ಮಾಡಿ ಅದಕ್ಕೆ ಕೇಂದ್ರ ದುಡ್ಡು ನೀಡುವುದು ಎನ್ನುವುದು ಯಾವ ರೀತಿಯ ಲೆಕ್ಕಾಚಾರ ಎನ್ನವುದು ತಿಳಿಯುತ್ತಿಲ್ಲ ಎಂದು ಕರ್ನಾಟಕ ಆಮ್‌ ಆದ್ಮಿ ಪಕ್ಷ ಟೀಕಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕರಾದ ಜಗದೀಶ್ ವಿ ಸದಂ,  “ಕೊರೊನಾದಿಂದ ಉಂಟಾದ ಸಂಕಷ್ಟಕ್ಕೆ ಮದ್ದು ನೀಡುವುದಾಗಿ ಹೇಳಿದ ಮಾನ್ಯ ಪ್ರಧಾನಿಗಳು ಖಾಲಿ ಹಾಳೆಯಂತಹ ಸುಮಾರು 20 ಲಕ್ಷ ಕೋಟಿಯ ದೊಡ್ಡ ಮೊತ್ತದ ಪ್ಯಾಕೇಜ್ ಘೋಷಿಸಿದರು. ಈ ಖಾಲಿ ಹಾಳೆಯನ್ನು ತುಂಬಿಸುವಂತೆ ಯಾವ ಯಾವ ವಲಯಕ್ಕೆ ಎಷ್ಟು ಹಣ ಮೀಸಲು ಎನ್ನುವುದನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವರದಿ ಒಪ್ಪಿಸಿದರೇ ಹೊರತು ನಯಾ ಪೈಸೆಯಷ್ಟು ಹಣವನ್ನು ಜನರಿಗೆ ನೀಡದೆ ದಾರಿ ತಪ್ಪಿಸುವ ಪ್ಯಾಕೇಜ್ ಎಂದು ಇದನ್ನು ಕರೆಯಬಹುದು” ಎಂದಿದ್ದಾರೆ.

ಎಂಎಸ್ಎಂಇಗಳಿಗೆ 3 ಲಕ್ಷ ಕೋಟಿ ಸಾಲ ನೀಡುವುದಕ್ಕೆ ಮೀಸಲು ಹಾಗೂ ನಿಮಗೆ ನೀಡುವ ಸಾಲಕ್ಕೆ ಕೇಂದ್ರ ಸರ್ಕಾರವೇ ಗ್ಯಾರಂಟಿ ಎಂದು ಹೇಳಿದ್ದೀರಿ. ಇದನ್ನು ಸೂಕ್ಷ್ಮವಾಗಿ ಗಮನಿಸಿದರೆ ಇದರಿಂದ ಒಂದೂ ನಯಾ ಪೈಸೆಯೂ ಸಹ ಸರ್ಕಾರದ ಬೊಕ್ಕಸದಿಂದ ಖರ್ಚಾಗುವುದಿಲ್ಲ, ಇಲ್ಲಿ ಮತ್ತೆ ಉದ್ದಿಮೆದಾರ ಸಾಲದ ಸುಳಿಗೆ ಸಿಲುಕುವಂತಾಗುತ್ತದೆ ಎಂದು ಹೇಳಿಕೆಯಲ್ಲಿ ಆರೋಪಿಸಲಾಗಿದೆ.

ಉದಾಹರಣೆಗೆ ಒಬ್ಬ ಉದ್ದಿಮೆದಾರ ಒಂದು ಕೋಟಿ ಸಾಲ ಮಾಡಿದರೆ ಆ 1 ಕೋಟಿಯಲ್ಲಿನ ಪ್ರತಿಶತ 20 ರಷ್ಟು ಅಂದರೆ 20 ಲಕ್ಷಕ್ಕೆ ಮಾತ್ರ ಕೇಂದ್ರ ಸರ್ಕಾರ ಗ್ಯಾರಂಟಿ ನೀಡಲಾಗುವುದೆಂದು ಘೋಷಿಸಿದ್ದಾರೆ. ಉಳಿದ 80 ಲಕ್ಷಕ್ಕೆ ಮಾಲೀಕನೇ ಗ್ಯಾರಂಟಿ ನೀಡಿ ಸಾಲವನ್ನು ಪಡೆದುಕೊಳ್ಳಬೇಕಾಗಿದೆ. ಇದಲ್ಲದೆ ಬ್ಯಾಂಕುಗಳು ಸಾಮಾನ್ಯವಾಗಿ ಗರಿಷ್ಠವೆಂದರೆ 80% ಮಾತ್ರ ಸಾಲವನ್ನು ನೀಡುತ್ತದೆ. ಈ ವ್ಯವಹಾರಗಳಲ್ಲಿ ಕೇಂದ್ರ ಸರ್ಕಾರದ ಯಾವ ಸಹಾಯ ಧನವೂ ಸಹ ಲಭ್ಯವಾಗುವುದಿಲ್ಲ ಎಂದು ಟೀಕಿಸಲಾಗಿದೆ.

ಕೇಂದ್ರ ಸರ್ಕಾರ ಗ್ಯಾರಂಟಿ ನೀಡಿರುವ 20 ಲಕ್ಷ ಕೈಗೆ ಸಿಗುವುದೇ ಇಲ್ಲ. ಒಂದೂ ನಯಾಪೈಸೆಯೂ ಯಾರ ಜೇಬಿಗೂ ಹೋಗುವುದಿಲ್ಲ. ಈ ಮೊತ್ತದ ಉಪಯೋಗ ಆಗಬೇಕು ಎಂದರೆ ಮಾಲೀಕನು ತನ್ನ ಉದ್ಯಮವನ್ನು ಮುಚ್ಚಬೇಕಷ್ಟೇ. ಇದು ಸಂಪೂರ್ಣವಾಗಿ ದಿಕ್ಕು ತಪ್ಪಿಸುವಂತಹ ಕೇಂದ್ರ ಬಜೆಟ್ಟಿನ ಮುಂದುವರೆದ ವರದಿ ಮಾತ್ರ ಎಂದು ಹೇಳಿಕೆಯಲ್ಲಿ ಹೇಳಲಾಗಿದೆ.

ಸಾಲ ಮಾಡುವ ಶಕ್ತಿ ಇದ್ದಿದ್ದರೆ ಜನರು ಏಕೆ ಪ್ಯಾಕೇಜ್ ಕೇಳುತ್ತಿದ್ದರು. ಸದ್ಯದ ಪರಿಸ್ಥಿತಿಯಲ್ಲಿ ಇರುವ ಸಾಲವನ್ನೆ ತೀರಿಸಲು ಸಾದ್ಯವಿಲ್ಲ. ಎನ್ನುವ ಪರಿಸ್ಥಿತಿ ಇರುವಾಗ ಸಾಲ ತೀರಿಸಲು ಏನಾದರೂ ಸಹಾಯ ಮಾಡಿ ಎಂದರೆ ಮತ್ತಷ್ಟು ಸಾಲ ಮಾಡಿ ಎಂದು ಹೇಳುವುದು ಯಾವ ರೀತಿಯ ಲೆಕ್ಕಾಚಾರ ಎನ್ನುವುದನ್ನು ಕೇಂದ್ರ ಸರ್ಕಾರ ಬಿಡಿಸಿ ಹೇಳಬೇಕು ಎಂದು ಆಪ್‌ ಆಗ್ರಹಿಸಿದೆ.

ಶೇ 25 ರಷ್ಟು ಟಿಡಿಎಸ್ ಖಡಿತಗೊಳ್ಳುವುದು ಎಂದು ತಿಳಿಸಲಾಗಿದೆ.‌ ಅಂದರೆ ನಾವು 1 ಲಕ್ಷ ಹಣದಲ್ಲಿ 10 ಸಾವಿರ ಕಡಿತಗೊಂಡರೆ ಅದರಲ್ಲಿನ ಎರಡುವರೆ ಸಾವಿರ ಹಣಕ್ಕೆ ಮಾತ್ರ ವಿನಾಯಿತಿ. ಈ ವಿನಾಯಿತಿಗೊಂಡ ಹಣವನ್ನು ಆದಾಯ ತೆರಿಗೆ ಕಟ್ಟುವ ವೇಳೆ ಮತ್ತೆ ಜಮಾ ಮಾಡಬೇಕು. ಹಾಗಾದರೆ ಇದರಿಂದ ಏನು ಲಾಭ? ಎಂದರೆ ಬರೀ ಶೂನ್ಯ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ಮೇಲಿನ ಎಲ್ಲಾ ಸೌಲಭ್ಯ ಕೇವಲ 6 ತಿಂಗಳು ಮಾತ್ರ. ಹಳ್ಳ ಹಿಡಿದಿರುವ ಆರ್ಥಿಕತೆಯನ್ನು ಮೇಲೆತ್ತಲು ಕೇವಲ 6 ತಿಂಗಳ ಕಾಲಾವಕಾಶ ಸಾಕೇ? ಆದಾಯ ತೆರಿಗೆ ವಿನಾಯತಿ, GST ಕಡಿತ, EMI ಮನ್ನಾ/ಬಡ್ಡಿ ಮನ್ನಾ ಇಲ್ಲ ಎಂದು ಆರೋಪಿಸಲಾಗಿದೆ.

ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳಲ್ಲಿ ದುಡಿಯುವ ಕಾರ್ಮಿಕರ ಸಂಕಷ್ಟಕ್ಕೆ ಮಿಡಿಯದ ಪ್ಯಾಕೇಜ್ ಎನ್ನಬಹುದು. ಸಣ್ಣ/ಮಧ್ಯಮ ವರ್ಗದ ವ್ಯಾಪಾರಸ್ಥರಿಗೆ ಸಹಾಯ ಧನ, ಅಸಂಘಟಿತ ಕಾರ್ಮಿಕ ವಲಯಕ್ಕೆ ಉತ್ತೇಜನ ನೀಡುವಲ್ಲಿ ಈ ಪ್ಯಾಕೇಜ್ ನಿರ್ಲಕ್ಷಿಸಿದೆ ಎಂದಿದ್ದಾರೆ.

ಈ ₹20 ಲಕ್ಷ ಕೋಟಿ ಎನ್ನುವ ಜುಮ್ಲಾ ಪ್ಯಾಕೇಜ್‌ನಿಂದ ಶೇ 99 ರಷ್ಟು ಭಾರತೀಯರಿಗೆ ನಯಾಪೈಸೆಯಷ್ಟು ಲಾಭ ಇಲ್ಲ ಎನ್ನುವುದು ಸ್ಪಷ್ಟ. ಬಿಗ್ ಬಾಸ್ಕೆಟ್, ಓಯೋ ಹೀಗೆ ಅನೇಕ ಕಂಪನಿಗಳು ಚೀನಾದಲ್ಲೂ ಬಂಡವಾಳ ಹೂಡಿವೆ ಈ ಕಂಪೆನಿಗಳು ಬಂಡವಾಳ ಹಿಂಪಡೆದರೆ ಅವುಗಳ ಉತ್ತೇಜನಕ್ಕೆ ಯಾವ ಯೋಜನೆ ಇದೆ ಎನ್ನುವುದು ಸ್ಪಷ್ಟತೆ ಇಲ್ಲ ಎಂದು ಟೀಕಿಸಲಾಗಿದೆ.

ಕೈಬಿಚ್ಚಿ ಸಹಾಯ ಹಸ್ತ ಕೊಡದೆ ಮತ್ತಷ್ಟು ಸಾಲದ ಸುಳಿಗೆ ಜನರನ್ನು ದೂಡುವ ಅವೈಜ್ಞಾನಿಕ ಪ್ಯಾಕೇಜ್.
ಇನ್ನಾದರೂ ಮುಂದಿನ ಪ್ಯಾಕೇಜ್ ಗಳಲ್ಲಿ ಆದರೂ ಬೇಡಿಕೆ ಹೆಚ್ಚಳ ಮಾಡುವಂತಹ ಯೋಜನೆಗಳು ಘೋಷಿಸಲಿ, ಕೈ ಬಿಚ್ಚಿ ದುಡ್ಡು ಹಂಚಿಕೆ ಮಾಡಲಿ ಎಂದು ಆಮ್ ಆದ್ಮಿ ಪಕ್ಷ ಆಗ್ರಹಿಸಿದೆ.


ಇದನ್ನೂ ಓದಿ: ಪ್ರಧಾನಿಯ 20 ಲಕ್ಷ ಕೋಟಿ ಪ್ಯಾಕೇಜ್: ಮೊದಲ ಕಂತಲ್ಲಿ ಕೊಡ್ತಿರೋದು ಕೇವಲ 2500 ಕೋಟಿ ಅಷ್ಟೆ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...