Homeಮುಖಪುಟಮೋದಿಯವರ 20 ಲಕ್ಷ ಕೋಟಿ ಎಂಬುದು ಜುಮ್ಲಾ ಪ್ಯಾಕೇಜ್‌ : ಆಮ್‌ ಆದ್ಮಿ ಪಕ್ಷ

ಮೋದಿಯವರ 20 ಲಕ್ಷ ಕೋಟಿ ಎಂಬುದು ಜುಮ್ಲಾ ಪ್ಯಾಕೇಜ್‌ : ಆಮ್‌ ಆದ್ಮಿ ಪಕ್ಷ

- Advertisement -
- Advertisement -

ಲಾಕ್‌ಡೌನ್ ಮಾಡಿದ ಪರಿಣಾಮ ದೇಶದಲ್ಲಿ ಸಾಕಷ್ಟು ಸರಕುಗಳು ಖರ್ಚಾಗದೇ ಉಳಿದಿದೆ. ಈಗಾಗಲೇ ಪೂರೈಕೆ ಸಾಕಷ್ಟು ಇದ್ದರೂ ಸಹ ಗ್ರಾಹಕರಿಂದ ಬೇಡಿಕೆ ಇಲ್ಲದಾಗಿದೆ. ಈ ಸಂದರ್ಭದಲ್ಲಿ ಬೇಡಿಕೆಯನ್ನು ಹೆಚ್ಚಳ ಮಾಡುವಂತಹ ಯೋಜನೆಗಳನ್ನು ಘೋಷಿಸಿ ಎಂದರೆ ಕೇವಲ ಸಾಲ ಮಾಡಿ ಅದಕ್ಕೆ ಕೇಂದ್ರ ದುಡ್ಡು ನೀಡುವುದು ಎನ್ನುವುದು ಯಾವ ರೀತಿಯ ಲೆಕ್ಕಾಚಾರ ಎನ್ನವುದು ತಿಳಿಯುತ್ತಿಲ್ಲ ಎಂದು ಕರ್ನಾಟಕ ಆಮ್‌ ಆದ್ಮಿ ಪಕ್ಷ ಟೀಕಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕರಾದ ಜಗದೀಶ್ ವಿ ಸದಂ,  “ಕೊರೊನಾದಿಂದ ಉಂಟಾದ ಸಂಕಷ್ಟಕ್ಕೆ ಮದ್ದು ನೀಡುವುದಾಗಿ ಹೇಳಿದ ಮಾನ್ಯ ಪ್ರಧಾನಿಗಳು ಖಾಲಿ ಹಾಳೆಯಂತಹ ಸುಮಾರು 20 ಲಕ್ಷ ಕೋಟಿಯ ದೊಡ್ಡ ಮೊತ್ತದ ಪ್ಯಾಕೇಜ್ ಘೋಷಿಸಿದರು. ಈ ಖಾಲಿ ಹಾಳೆಯನ್ನು ತುಂಬಿಸುವಂತೆ ಯಾವ ಯಾವ ವಲಯಕ್ಕೆ ಎಷ್ಟು ಹಣ ಮೀಸಲು ಎನ್ನುವುದನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವರದಿ ಒಪ್ಪಿಸಿದರೇ ಹೊರತು ನಯಾ ಪೈಸೆಯಷ್ಟು ಹಣವನ್ನು ಜನರಿಗೆ ನೀಡದೆ ದಾರಿ ತಪ್ಪಿಸುವ ಪ್ಯಾಕೇಜ್ ಎಂದು ಇದನ್ನು ಕರೆಯಬಹುದು” ಎಂದಿದ್ದಾರೆ.

ಎಂಎಸ್ಎಂಇಗಳಿಗೆ 3 ಲಕ್ಷ ಕೋಟಿ ಸಾಲ ನೀಡುವುದಕ್ಕೆ ಮೀಸಲು ಹಾಗೂ ನಿಮಗೆ ನೀಡುವ ಸಾಲಕ್ಕೆ ಕೇಂದ್ರ ಸರ್ಕಾರವೇ ಗ್ಯಾರಂಟಿ ಎಂದು ಹೇಳಿದ್ದೀರಿ. ಇದನ್ನು ಸೂಕ್ಷ್ಮವಾಗಿ ಗಮನಿಸಿದರೆ ಇದರಿಂದ ಒಂದೂ ನಯಾ ಪೈಸೆಯೂ ಸಹ ಸರ್ಕಾರದ ಬೊಕ್ಕಸದಿಂದ ಖರ್ಚಾಗುವುದಿಲ್ಲ, ಇಲ್ಲಿ ಮತ್ತೆ ಉದ್ದಿಮೆದಾರ ಸಾಲದ ಸುಳಿಗೆ ಸಿಲುಕುವಂತಾಗುತ್ತದೆ ಎಂದು ಹೇಳಿಕೆಯಲ್ಲಿ ಆರೋಪಿಸಲಾಗಿದೆ.

ಉದಾಹರಣೆಗೆ ಒಬ್ಬ ಉದ್ದಿಮೆದಾರ ಒಂದು ಕೋಟಿ ಸಾಲ ಮಾಡಿದರೆ ಆ 1 ಕೋಟಿಯಲ್ಲಿನ ಪ್ರತಿಶತ 20 ರಷ್ಟು ಅಂದರೆ 20 ಲಕ್ಷಕ್ಕೆ ಮಾತ್ರ ಕೇಂದ್ರ ಸರ್ಕಾರ ಗ್ಯಾರಂಟಿ ನೀಡಲಾಗುವುದೆಂದು ಘೋಷಿಸಿದ್ದಾರೆ. ಉಳಿದ 80 ಲಕ್ಷಕ್ಕೆ ಮಾಲೀಕನೇ ಗ್ಯಾರಂಟಿ ನೀಡಿ ಸಾಲವನ್ನು ಪಡೆದುಕೊಳ್ಳಬೇಕಾಗಿದೆ. ಇದಲ್ಲದೆ ಬ್ಯಾಂಕುಗಳು ಸಾಮಾನ್ಯವಾಗಿ ಗರಿಷ್ಠವೆಂದರೆ 80% ಮಾತ್ರ ಸಾಲವನ್ನು ನೀಡುತ್ತದೆ. ಈ ವ್ಯವಹಾರಗಳಲ್ಲಿ ಕೇಂದ್ರ ಸರ್ಕಾರದ ಯಾವ ಸಹಾಯ ಧನವೂ ಸಹ ಲಭ್ಯವಾಗುವುದಿಲ್ಲ ಎಂದು ಟೀಕಿಸಲಾಗಿದೆ.

ಕೇಂದ್ರ ಸರ್ಕಾರ ಗ್ಯಾರಂಟಿ ನೀಡಿರುವ 20 ಲಕ್ಷ ಕೈಗೆ ಸಿಗುವುದೇ ಇಲ್ಲ. ಒಂದೂ ನಯಾಪೈಸೆಯೂ ಯಾರ ಜೇಬಿಗೂ ಹೋಗುವುದಿಲ್ಲ. ಈ ಮೊತ್ತದ ಉಪಯೋಗ ಆಗಬೇಕು ಎಂದರೆ ಮಾಲೀಕನು ತನ್ನ ಉದ್ಯಮವನ್ನು ಮುಚ್ಚಬೇಕಷ್ಟೇ. ಇದು ಸಂಪೂರ್ಣವಾಗಿ ದಿಕ್ಕು ತಪ್ಪಿಸುವಂತಹ ಕೇಂದ್ರ ಬಜೆಟ್ಟಿನ ಮುಂದುವರೆದ ವರದಿ ಮಾತ್ರ ಎಂದು ಹೇಳಿಕೆಯಲ್ಲಿ ಹೇಳಲಾಗಿದೆ.

ಸಾಲ ಮಾಡುವ ಶಕ್ತಿ ಇದ್ದಿದ್ದರೆ ಜನರು ಏಕೆ ಪ್ಯಾಕೇಜ್ ಕೇಳುತ್ತಿದ್ದರು. ಸದ್ಯದ ಪರಿಸ್ಥಿತಿಯಲ್ಲಿ ಇರುವ ಸಾಲವನ್ನೆ ತೀರಿಸಲು ಸಾದ್ಯವಿಲ್ಲ. ಎನ್ನುವ ಪರಿಸ್ಥಿತಿ ಇರುವಾಗ ಸಾಲ ತೀರಿಸಲು ಏನಾದರೂ ಸಹಾಯ ಮಾಡಿ ಎಂದರೆ ಮತ್ತಷ್ಟು ಸಾಲ ಮಾಡಿ ಎಂದು ಹೇಳುವುದು ಯಾವ ರೀತಿಯ ಲೆಕ್ಕಾಚಾರ ಎನ್ನುವುದನ್ನು ಕೇಂದ್ರ ಸರ್ಕಾರ ಬಿಡಿಸಿ ಹೇಳಬೇಕು ಎಂದು ಆಪ್‌ ಆಗ್ರಹಿಸಿದೆ.

ಶೇ 25 ರಷ್ಟು ಟಿಡಿಎಸ್ ಖಡಿತಗೊಳ್ಳುವುದು ಎಂದು ತಿಳಿಸಲಾಗಿದೆ.‌ ಅಂದರೆ ನಾವು 1 ಲಕ್ಷ ಹಣದಲ್ಲಿ 10 ಸಾವಿರ ಕಡಿತಗೊಂಡರೆ ಅದರಲ್ಲಿನ ಎರಡುವರೆ ಸಾವಿರ ಹಣಕ್ಕೆ ಮಾತ್ರ ವಿನಾಯಿತಿ. ಈ ವಿನಾಯಿತಿಗೊಂಡ ಹಣವನ್ನು ಆದಾಯ ತೆರಿಗೆ ಕಟ್ಟುವ ವೇಳೆ ಮತ್ತೆ ಜಮಾ ಮಾಡಬೇಕು. ಹಾಗಾದರೆ ಇದರಿಂದ ಏನು ಲಾಭ? ಎಂದರೆ ಬರೀ ಶೂನ್ಯ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ಮೇಲಿನ ಎಲ್ಲಾ ಸೌಲಭ್ಯ ಕೇವಲ 6 ತಿಂಗಳು ಮಾತ್ರ. ಹಳ್ಳ ಹಿಡಿದಿರುವ ಆರ್ಥಿಕತೆಯನ್ನು ಮೇಲೆತ್ತಲು ಕೇವಲ 6 ತಿಂಗಳ ಕಾಲಾವಕಾಶ ಸಾಕೇ? ಆದಾಯ ತೆರಿಗೆ ವಿನಾಯತಿ, GST ಕಡಿತ, EMI ಮನ್ನಾ/ಬಡ್ಡಿ ಮನ್ನಾ ಇಲ್ಲ ಎಂದು ಆರೋಪಿಸಲಾಗಿದೆ.

ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳಲ್ಲಿ ದುಡಿಯುವ ಕಾರ್ಮಿಕರ ಸಂಕಷ್ಟಕ್ಕೆ ಮಿಡಿಯದ ಪ್ಯಾಕೇಜ್ ಎನ್ನಬಹುದು. ಸಣ್ಣ/ಮಧ್ಯಮ ವರ್ಗದ ವ್ಯಾಪಾರಸ್ಥರಿಗೆ ಸಹಾಯ ಧನ, ಅಸಂಘಟಿತ ಕಾರ್ಮಿಕ ವಲಯಕ್ಕೆ ಉತ್ತೇಜನ ನೀಡುವಲ್ಲಿ ಈ ಪ್ಯಾಕೇಜ್ ನಿರ್ಲಕ್ಷಿಸಿದೆ ಎಂದಿದ್ದಾರೆ.

ಈ ₹20 ಲಕ್ಷ ಕೋಟಿ ಎನ್ನುವ ಜುಮ್ಲಾ ಪ್ಯಾಕೇಜ್‌ನಿಂದ ಶೇ 99 ರಷ್ಟು ಭಾರತೀಯರಿಗೆ ನಯಾಪೈಸೆಯಷ್ಟು ಲಾಭ ಇಲ್ಲ ಎನ್ನುವುದು ಸ್ಪಷ್ಟ. ಬಿಗ್ ಬಾಸ್ಕೆಟ್, ಓಯೋ ಹೀಗೆ ಅನೇಕ ಕಂಪನಿಗಳು ಚೀನಾದಲ್ಲೂ ಬಂಡವಾಳ ಹೂಡಿವೆ ಈ ಕಂಪೆನಿಗಳು ಬಂಡವಾಳ ಹಿಂಪಡೆದರೆ ಅವುಗಳ ಉತ್ತೇಜನಕ್ಕೆ ಯಾವ ಯೋಜನೆ ಇದೆ ಎನ್ನುವುದು ಸ್ಪಷ್ಟತೆ ಇಲ್ಲ ಎಂದು ಟೀಕಿಸಲಾಗಿದೆ.

ಕೈಬಿಚ್ಚಿ ಸಹಾಯ ಹಸ್ತ ಕೊಡದೆ ಮತ್ತಷ್ಟು ಸಾಲದ ಸುಳಿಗೆ ಜನರನ್ನು ದೂಡುವ ಅವೈಜ್ಞಾನಿಕ ಪ್ಯಾಕೇಜ್.
ಇನ್ನಾದರೂ ಮುಂದಿನ ಪ್ಯಾಕೇಜ್ ಗಳಲ್ಲಿ ಆದರೂ ಬೇಡಿಕೆ ಹೆಚ್ಚಳ ಮಾಡುವಂತಹ ಯೋಜನೆಗಳು ಘೋಷಿಸಲಿ, ಕೈ ಬಿಚ್ಚಿ ದುಡ್ಡು ಹಂಚಿಕೆ ಮಾಡಲಿ ಎಂದು ಆಮ್ ಆದ್ಮಿ ಪಕ್ಷ ಆಗ್ರಹಿಸಿದೆ.


ಇದನ್ನೂ ಓದಿ: ಪ್ರಧಾನಿಯ 20 ಲಕ್ಷ ಕೋಟಿ ಪ್ಯಾಕೇಜ್: ಮೊದಲ ಕಂತಲ್ಲಿ ಕೊಡ್ತಿರೋದು ಕೇವಲ 2500 ಕೋಟಿ ಅಷ್ಟೆ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...