Homeಮುಖಪುಟಮೋದಿಯವರ 20 ಲಕ್ಷ ಕೋಟಿ ಎಂಬುದು ಜುಮ್ಲಾ ಪ್ಯಾಕೇಜ್‌ : ಆಮ್‌ ಆದ್ಮಿ ಪಕ್ಷ

ಮೋದಿಯವರ 20 ಲಕ್ಷ ಕೋಟಿ ಎಂಬುದು ಜುಮ್ಲಾ ಪ್ಯಾಕೇಜ್‌ : ಆಮ್‌ ಆದ್ಮಿ ಪಕ್ಷ

- Advertisement -
- Advertisement -

ಲಾಕ್‌ಡೌನ್ ಮಾಡಿದ ಪರಿಣಾಮ ದೇಶದಲ್ಲಿ ಸಾಕಷ್ಟು ಸರಕುಗಳು ಖರ್ಚಾಗದೇ ಉಳಿದಿದೆ. ಈಗಾಗಲೇ ಪೂರೈಕೆ ಸಾಕಷ್ಟು ಇದ್ದರೂ ಸಹ ಗ್ರಾಹಕರಿಂದ ಬೇಡಿಕೆ ಇಲ್ಲದಾಗಿದೆ. ಈ ಸಂದರ್ಭದಲ್ಲಿ ಬೇಡಿಕೆಯನ್ನು ಹೆಚ್ಚಳ ಮಾಡುವಂತಹ ಯೋಜನೆಗಳನ್ನು ಘೋಷಿಸಿ ಎಂದರೆ ಕೇವಲ ಸಾಲ ಮಾಡಿ ಅದಕ್ಕೆ ಕೇಂದ್ರ ದುಡ್ಡು ನೀಡುವುದು ಎನ್ನುವುದು ಯಾವ ರೀತಿಯ ಲೆಕ್ಕಾಚಾರ ಎನ್ನವುದು ತಿಳಿಯುತ್ತಿಲ್ಲ ಎಂದು ಕರ್ನಾಟಕ ಆಮ್‌ ಆದ್ಮಿ ಪಕ್ಷ ಟೀಕಿಸಿದೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕರಾದ ಜಗದೀಶ್ ವಿ ಸದಂ,  “ಕೊರೊನಾದಿಂದ ಉಂಟಾದ ಸಂಕಷ್ಟಕ್ಕೆ ಮದ್ದು ನೀಡುವುದಾಗಿ ಹೇಳಿದ ಮಾನ್ಯ ಪ್ರಧಾನಿಗಳು ಖಾಲಿ ಹಾಳೆಯಂತಹ ಸುಮಾರು 20 ಲಕ್ಷ ಕೋಟಿಯ ದೊಡ್ಡ ಮೊತ್ತದ ಪ್ಯಾಕೇಜ್ ಘೋಷಿಸಿದರು. ಈ ಖಾಲಿ ಹಾಳೆಯನ್ನು ತುಂಬಿಸುವಂತೆ ಯಾವ ಯಾವ ವಲಯಕ್ಕೆ ಎಷ್ಟು ಹಣ ಮೀಸಲು ಎನ್ನುವುದನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವರದಿ ಒಪ್ಪಿಸಿದರೇ ಹೊರತು ನಯಾ ಪೈಸೆಯಷ್ಟು ಹಣವನ್ನು ಜನರಿಗೆ ನೀಡದೆ ದಾರಿ ತಪ್ಪಿಸುವ ಪ್ಯಾಕೇಜ್ ಎಂದು ಇದನ್ನು ಕರೆಯಬಹುದು” ಎಂದಿದ್ದಾರೆ.

ಎಂಎಸ್ಎಂಇಗಳಿಗೆ 3 ಲಕ್ಷ ಕೋಟಿ ಸಾಲ ನೀಡುವುದಕ್ಕೆ ಮೀಸಲು ಹಾಗೂ ನಿಮಗೆ ನೀಡುವ ಸಾಲಕ್ಕೆ ಕೇಂದ್ರ ಸರ್ಕಾರವೇ ಗ್ಯಾರಂಟಿ ಎಂದು ಹೇಳಿದ್ದೀರಿ. ಇದನ್ನು ಸೂಕ್ಷ್ಮವಾಗಿ ಗಮನಿಸಿದರೆ ಇದರಿಂದ ಒಂದೂ ನಯಾ ಪೈಸೆಯೂ ಸಹ ಸರ್ಕಾರದ ಬೊಕ್ಕಸದಿಂದ ಖರ್ಚಾಗುವುದಿಲ್ಲ, ಇಲ್ಲಿ ಮತ್ತೆ ಉದ್ದಿಮೆದಾರ ಸಾಲದ ಸುಳಿಗೆ ಸಿಲುಕುವಂತಾಗುತ್ತದೆ ಎಂದು ಹೇಳಿಕೆಯಲ್ಲಿ ಆರೋಪಿಸಲಾಗಿದೆ.

ಉದಾಹರಣೆಗೆ ಒಬ್ಬ ಉದ್ದಿಮೆದಾರ ಒಂದು ಕೋಟಿ ಸಾಲ ಮಾಡಿದರೆ ಆ 1 ಕೋಟಿಯಲ್ಲಿನ ಪ್ರತಿಶತ 20 ರಷ್ಟು ಅಂದರೆ 20 ಲಕ್ಷಕ್ಕೆ ಮಾತ್ರ ಕೇಂದ್ರ ಸರ್ಕಾರ ಗ್ಯಾರಂಟಿ ನೀಡಲಾಗುವುದೆಂದು ಘೋಷಿಸಿದ್ದಾರೆ. ಉಳಿದ 80 ಲಕ್ಷಕ್ಕೆ ಮಾಲೀಕನೇ ಗ್ಯಾರಂಟಿ ನೀಡಿ ಸಾಲವನ್ನು ಪಡೆದುಕೊಳ್ಳಬೇಕಾಗಿದೆ. ಇದಲ್ಲದೆ ಬ್ಯಾಂಕುಗಳು ಸಾಮಾನ್ಯವಾಗಿ ಗರಿಷ್ಠವೆಂದರೆ 80% ಮಾತ್ರ ಸಾಲವನ್ನು ನೀಡುತ್ತದೆ. ಈ ವ್ಯವಹಾರಗಳಲ್ಲಿ ಕೇಂದ್ರ ಸರ್ಕಾರದ ಯಾವ ಸಹಾಯ ಧನವೂ ಸಹ ಲಭ್ಯವಾಗುವುದಿಲ್ಲ ಎಂದು ಟೀಕಿಸಲಾಗಿದೆ.

ಕೇಂದ್ರ ಸರ್ಕಾರ ಗ್ಯಾರಂಟಿ ನೀಡಿರುವ 20 ಲಕ್ಷ ಕೈಗೆ ಸಿಗುವುದೇ ಇಲ್ಲ. ಒಂದೂ ನಯಾಪೈಸೆಯೂ ಯಾರ ಜೇಬಿಗೂ ಹೋಗುವುದಿಲ್ಲ. ಈ ಮೊತ್ತದ ಉಪಯೋಗ ಆಗಬೇಕು ಎಂದರೆ ಮಾಲೀಕನು ತನ್ನ ಉದ್ಯಮವನ್ನು ಮುಚ್ಚಬೇಕಷ್ಟೇ. ಇದು ಸಂಪೂರ್ಣವಾಗಿ ದಿಕ್ಕು ತಪ್ಪಿಸುವಂತಹ ಕೇಂದ್ರ ಬಜೆಟ್ಟಿನ ಮುಂದುವರೆದ ವರದಿ ಮಾತ್ರ ಎಂದು ಹೇಳಿಕೆಯಲ್ಲಿ ಹೇಳಲಾಗಿದೆ.

ಸಾಲ ಮಾಡುವ ಶಕ್ತಿ ಇದ್ದಿದ್ದರೆ ಜನರು ಏಕೆ ಪ್ಯಾಕೇಜ್ ಕೇಳುತ್ತಿದ್ದರು. ಸದ್ಯದ ಪರಿಸ್ಥಿತಿಯಲ್ಲಿ ಇರುವ ಸಾಲವನ್ನೆ ತೀರಿಸಲು ಸಾದ್ಯವಿಲ್ಲ. ಎನ್ನುವ ಪರಿಸ್ಥಿತಿ ಇರುವಾಗ ಸಾಲ ತೀರಿಸಲು ಏನಾದರೂ ಸಹಾಯ ಮಾಡಿ ಎಂದರೆ ಮತ್ತಷ್ಟು ಸಾಲ ಮಾಡಿ ಎಂದು ಹೇಳುವುದು ಯಾವ ರೀತಿಯ ಲೆಕ್ಕಾಚಾರ ಎನ್ನುವುದನ್ನು ಕೇಂದ್ರ ಸರ್ಕಾರ ಬಿಡಿಸಿ ಹೇಳಬೇಕು ಎಂದು ಆಪ್‌ ಆಗ್ರಹಿಸಿದೆ.

ಶೇ 25 ರಷ್ಟು ಟಿಡಿಎಸ್ ಖಡಿತಗೊಳ್ಳುವುದು ಎಂದು ತಿಳಿಸಲಾಗಿದೆ.‌ ಅಂದರೆ ನಾವು 1 ಲಕ್ಷ ಹಣದಲ್ಲಿ 10 ಸಾವಿರ ಕಡಿತಗೊಂಡರೆ ಅದರಲ್ಲಿನ ಎರಡುವರೆ ಸಾವಿರ ಹಣಕ್ಕೆ ಮಾತ್ರ ವಿನಾಯಿತಿ. ಈ ವಿನಾಯಿತಿಗೊಂಡ ಹಣವನ್ನು ಆದಾಯ ತೆರಿಗೆ ಕಟ್ಟುವ ವೇಳೆ ಮತ್ತೆ ಜಮಾ ಮಾಡಬೇಕು. ಹಾಗಾದರೆ ಇದರಿಂದ ಏನು ಲಾಭ? ಎಂದರೆ ಬರೀ ಶೂನ್ಯ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ಮೇಲಿನ ಎಲ್ಲಾ ಸೌಲಭ್ಯ ಕೇವಲ 6 ತಿಂಗಳು ಮಾತ್ರ. ಹಳ್ಳ ಹಿಡಿದಿರುವ ಆರ್ಥಿಕತೆಯನ್ನು ಮೇಲೆತ್ತಲು ಕೇವಲ 6 ತಿಂಗಳ ಕಾಲಾವಕಾಶ ಸಾಕೇ? ಆದಾಯ ತೆರಿಗೆ ವಿನಾಯತಿ, GST ಕಡಿತ, EMI ಮನ್ನಾ/ಬಡ್ಡಿ ಮನ್ನಾ ಇಲ್ಲ ಎಂದು ಆರೋಪಿಸಲಾಗಿದೆ.

ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳಲ್ಲಿ ದುಡಿಯುವ ಕಾರ್ಮಿಕರ ಸಂಕಷ್ಟಕ್ಕೆ ಮಿಡಿಯದ ಪ್ಯಾಕೇಜ್ ಎನ್ನಬಹುದು. ಸಣ್ಣ/ಮಧ್ಯಮ ವರ್ಗದ ವ್ಯಾಪಾರಸ್ಥರಿಗೆ ಸಹಾಯ ಧನ, ಅಸಂಘಟಿತ ಕಾರ್ಮಿಕ ವಲಯಕ್ಕೆ ಉತ್ತೇಜನ ನೀಡುವಲ್ಲಿ ಈ ಪ್ಯಾಕೇಜ್ ನಿರ್ಲಕ್ಷಿಸಿದೆ ಎಂದಿದ್ದಾರೆ.

ಈ ₹20 ಲಕ್ಷ ಕೋಟಿ ಎನ್ನುವ ಜುಮ್ಲಾ ಪ್ಯಾಕೇಜ್‌ನಿಂದ ಶೇ 99 ರಷ್ಟು ಭಾರತೀಯರಿಗೆ ನಯಾಪೈಸೆಯಷ್ಟು ಲಾಭ ಇಲ್ಲ ಎನ್ನುವುದು ಸ್ಪಷ್ಟ. ಬಿಗ್ ಬಾಸ್ಕೆಟ್, ಓಯೋ ಹೀಗೆ ಅನೇಕ ಕಂಪನಿಗಳು ಚೀನಾದಲ್ಲೂ ಬಂಡವಾಳ ಹೂಡಿವೆ ಈ ಕಂಪೆನಿಗಳು ಬಂಡವಾಳ ಹಿಂಪಡೆದರೆ ಅವುಗಳ ಉತ್ತೇಜನಕ್ಕೆ ಯಾವ ಯೋಜನೆ ಇದೆ ಎನ್ನುವುದು ಸ್ಪಷ್ಟತೆ ಇಲ್ಲ ಎಂದು ಟೀಕಿಸಲಾಗಿದೆ.

ಕೈಬಿಚ್ಚಿ ಸಹಾಯ ಹಸ್ತ ಕೊಡದೆ ಮತ್ತಷ್ಟು ಸಾಲದ ಸುಳಿಗೆ ಜನರನ್ನು ದೂಡುವ ಅವೈಜ್ಞಾನಿಕ ಪ್ಯಾಕೇಜ್.
ಇನ್ನಾದರೂ ಮುಂದಿನ ಪ್ಯಾಕೇಜ್ ಗಳಲ್ಲಿ ಆದರೂ ಬೇಡಿಕೆ ಹೆಚ್ಚಳ ಮಾಡುವಂತಹ ಯೋಜನೆಗಳು ಘೋಷಿಸಲಿ, ಕೈ ಬಿಚ್ಚಿ ದುಡ್ಡು ಹಂಚಿಕೆ ಮಾಡಲಿ ಎಂದು ಆಮ್ ಆದ್ಮಿ ಪಕ್ಷ ಆಗ್ರಹಿಸಿದೆ.


ಇದನ್ನೂ ಓದಿ: ಪ್ರಧಾನಿಯ 20 ಲಕ್ಷ ಕೋಟಿ ಪ್ಯಾಕೇಜ್: ಮೊದಲ ಕಂತಲ್ಲಿ ಕೊಡ್ತಿರೋದು ಕೇವಲ 2500 ಕೋಟಿ ಅಷ್ಟೆ! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...