Homeಮುಖಪುಟಮೋದಿ ಆಡಳಿತದಲ್ಲಿ ಭಾರತದ ಇಮೇಜ್‌ ಜಾಗತಿಕವಾಗಿ ಸುಧಾರಿಸಿಲ್ಲ: ವರದಿ

ಮೋದಿ ಆಡಳಿತದಲ್ಲಿ ಭಾರತದ ಇಮೇಜ್‌ ಜಾಗತಿಕವಾಗಿ ಸುಧಾರಿಸಿಲ್ಲ: ವರದಿ

- Advertisement -
- Advertisement -

ಕಳೆದ ಒಂದು ದಶಕದಲ್ಲಿ ಅಂದರೆ ಮೋದಿ ಆಡಳಿತದಲ್ಲಿ ‘ಭಾರತದ ಜಾಗತಿಕ ಖ್ಯಾತಿಯು ಸುಧಾರಣೆಯನ್ನು ಕಂಡಿಲ್ಲ’ ಎಂಬ ಮಹತ್ವದ ಅಂಶವನ್ನು ವರದಿಯೊಂದು ಬಹಿರಂಗ ಮಾಡಿದೆ. ಈ ವರದಿಯನ್ನು ಅಂತರಾಷ್ಟ್ರೀಯ ಖ್ಯಾತಿಯ ಎರಡು ಪ್ರಮುಖ ಶಿಕ್ಷಣ ತಜ್ಞರು ಸಮೀಕ್ಷೆಗಳು ಮತ್ತು ಅಭಿಪ್ರಾಯ ಸಂಗ್ರಹಣೆ ಮೂಲಕ ಸಿದ್ದಪಡಿಸಿದ್ದಾರೆ. ಈ ವರದಿಯು ಮೋದಿಯನ್ನು ‘ವಿಶ್ವಗುರು’ ಎಂದು ಹೇಳುತ್ತಿರುವ ಬಿಜೆಪಿಗೆ ಮತ್ತು ಕೆಲ ಮಾಧ್ಯಮಗಳಿಗೆ ದೊಡ್ಡ ಹಿನ್ನೆಡೆ ಉಂಟುಮಾಡಿದೆ.

‘ದಿ ಮೋದಿ ಮಿರಾಜ್: ಇಲ್ಯೂಷನ್ಸ್ ಅಂಡ್ ರಿಯಾಲಿಟಿ ಆಫ್ ಇಂಡಿಯಾಸ್ ಗ್ಲೋಬಲ್ ಸ್ಟ್ಯಾಂಡಿಂಗ್ ಅಂಡ್ ರೆಪ್ಯೂಟೇಶನ್’ ಎಂಬ ವರದಿಯನ್ನು ಜಾರ್ಜ್‌ಟೌನ್ ವಿಶ್ವವಿದ್ಯಾಲಯದ ಪ್ರೊಫೆಸರ್ ಇರ್ಫಾನ್ ನೂರುದ್ದೀನ್ ಮತ್ತು ನೆದರ್‌ಲ್ಯಾಂಡ್‌ನ ಗ್ರೋನಿಂಗನ್ ವಿಶ್ವವಿದ್ಯಾಲಯದ ಡಾ.ರೀತುಂಬ್ರಾ ಮನುವಿ ಸಿದ್ದಪಡಿಸಿದ್ದಾರೆ. ಇದಲ್ಲದೆ ಲಂಡನ್ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಓರಿಯಂಟಲ್ ಮತ್ತು ಆಫ್ರಿಕನ್ ಸ್ಟಡೀಸ್‌ನ ಡಾ ಸುಬೀರ್ ಸಿನ್ಹಾ ಅವರು ವರದಿ ಸಿದ್ದಪಡಿಸುವ ವೇಳೆ ಪ್ರಧಾನ ಸಲಹೆಗಾರರಾಗಿದ್ದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾರತದ ಜಾಗತಿಕ ಸ್ಥಾನಮಾನವನ್ನು ಹೆಚ್ಚಿಸಿದ್ದಾರೆ, ಮೋದಿ ಜಗತ್ತಿನಲ್ಲಿ ಭಾರೀ ಪ್ರಭಾವ ಬೀರಿದ್ದಾರೆ, ಮೋದಿ ಅಡಳಿತದಲ್ಲಿ ಭಾರತದ ಇಮೇಜ್‌ ಜಾಗತಿಕವಾಗಿ ಹೆಚ್ಚಾಗಿದೆ ಎಂದು ಆಡಳಿತ ಪಕ್ಷವು ಆಗಾಗ್ಗೆ ಪ್ರತಿಪಾದಿಸುತ್ತಿದೆ ಎಂದು ವರದಿಯಲ್ಲಿ ಲೇಖಕರು ಉಲ್ಲೇಖಿಸಿದ್ದು, ಈ ನಿರೂಪಣೆಯನ್ನು ಭಾರತೀಯ ಮಾಧ್ಯಮಗಳು ಹೆಚ್ಚಾಗಿ ಪ್ರಚಾರ ಮಾಡುತ್ತಿದೆ ಎಂದು ಹೇಳಿದೆ.

ಭಾರತೀಯರು ತಮ್ಮ ದೇಶದ ಜಾಗತಿಕ ಖ್ಯಾತಿಯ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಾರೆ, ಆದ್ದರಿಂದ ಭಾರತವು ಇತಿಹಾಸದಲ್ಲಿ ಅತಿದೊಡ್ಡ ಚುನಾವಣೆಯನ್ನು ಪ್ರಾರಂಭಿಸುತ್ತಿರುವಾಗ ಮೋದಿ ಈ ವಿಷಯದಲ್ಲಿ ಯಶಸ್ವಿಯಾಗಿದ್ದಾರೆಯೇ ಅಥವಾ ಇಲ್ಲವೇ ಎಂಬುವುದು ಬಹಳ ಮಹತ್ವದ್ದಾಗಿದೆ ಎಂದು ವರದಿ ಹೇಳಿದೆ.

ವರದಿಯು, 2023ರ ಪ್ಯೂ ಗ್ಲೋಬಲ್ ಆಟಿಟ್ಯೂಡ್ಸ್ ಸಮೀಕ್ಷೆಯ ವರದಿಯ ಡೇಟಾವನ್ನು ಉಲ್ಲೇಖಿಸಿದೆ. 23 ದೇಶಗಳಲ್ಲಿ 46% ವಯಸ್ಕರು ಭಾರತದ ಬಗ್ಗೆ ಉತ್ತಮ ದೃಷ್ಟಿಕೋನ, ಅಭಿಪ್ರಾಯ ಹೊಂದಿದ್ದಾರೆ ಎಂದು ಬಹಿರಂಗಪಡಿಸಿದೆ. ಇದಕ್ಕೆ ವಿರುದ್ಧವಾಗಿ 34% ಜನರು ಉತ್ತಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿಲ್ಲ ಎಂದು ವರದಿ ತಿಳಿಸಿದೆ.

ಸಮೀಕ್ಷೆ ನಡೆಸಿದ 12 ದೇಶಗಳಲ್ಲಿ ಕೇವಲ 37% ವಯಸ್ಕರು ಮೋದಿಯ ಬಗ್ಗೆ ವಿಶ್ವಾಸ, ನಂಬಿಕೆ ಹೊಂದಿರುವ ಬಗ್ಗೆ ಹೇಳಿದ್ದು, ಹೆಚ್ಚಿನ 40% ಜನರು ಮೋದಿಯ ಬಗ್ಗೆ ವಿಶ್ವಾಸ ನಮಗೆ ಇಲ್ಲ ಎಂದು ಹೇಳಿದ್ದಾರೆ.

2008ರಲ್ಲಿ ನಡೆಸಿದ ಇದೇ ರೀತಿಯ ಸಮೀಕ್ಷೆಯಲ್ಲಿ, ಭಾರತದ ಬಗ್ಗೆ ಸಕಾರಾತ್ಮಕ ಅಭಿಪ್ರಾಯ ಹೊರ ಬಂದಿತ್ತು. ಯುರೋಪಿಯನ್ನರಿಗೆ ಭಾರತದ ಬಗ್ಗೆ ಸಕಾರಾತ್ಮಕ ಅಭಿಪ್ರಾಯವಿತ್ತು. 15 ವರ್ಷಗಳ ನಂತರ ಯುರೋಪಿಯನ್ ರಾಷ್ಟ್ರಗಳಲ್ಲಿ ಸುಮಾರು 10 ಶೇಕಡಾ ಪಾಯಿಂಟ್‌ಗಳ ಗಮನಾರ್ಹ ಕುಸಿತ ಕಂಡುಬಂದಿದೆ. 2008ರಲ್ಲಿ ಫ್ರಾನ್ಸ್‌ನಲ್ಲಿ 70% ವಯಸ್ಕರು ಭಾರತದ ಬಗ್ಗೆ ಉತ್ತಮ ಅಭಿಪ್ರಾಯ ಹೊಂದಿದ್ದರು. 2023ಕ್ಕೆ ಇದರ ಅಂಕಿ-ಅಂಶಗಳು 39%ಕ್ಕೆ ಇಳಿಕೆಯಾಗಿದೆ.

ಯುನೈಟೆಡ್ ಸ್ಟೇಟ್ಸ್‌ನಲ್ಲಿ 2008ರಲ್ಲಿ 63% ಜನರು ಭಾರತದ ಬಗ್ಗೆ ಅನುಕೂಲಕರ ದೃಷ್ಟಿಕೋನವನ್ನು ಹೊಂದಿದ್ದರು ಇದು 2023ರಲ್ಲಿ 51%ಕ್ಕೆ ಇಳಿದಿದೆ. ಕಳೆದ ವರ್ಷದ ಸಮೀಕ್ಷೆಯ ಪ್ರಕಾರ, ಕೇವಲ 23% ಅಮೆರಿಕನ್ನರು ಜಾಗತಿಕ ಮಟ್ಟದಲ್ಲಿ ಭಾರತದ ಪ್ರಭಾವವು ಇದೆ ಎಂದು ನಂಬಿದ್ದರು. ಸುಮಾರು 40% ಅಮೆರಿಕನ್ನರು 2023ರಲ್ಲಿ ಮೋದಿಯ ಬಗ್ಗೆ ನಾವು ಕೇಳಿಲ್ಲ ಎಂದು ಹೇಳಿದ್ದಾರೆ. 37% ಅಮೆರಿಕನ್ನರು  ಮೋದಿಯ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯದ ಬಗೆಗಿನ ವಿಶ್ವಾಸ ಸ್ವಲ್ಪ ಇದೆ ಅಥವಾ ಇಲ್ಲ ಎಂಬ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

ಮಾರ್ಚ್ 2024ರ ಯುಗೋವ್ ಸಮೀಕ್ಷೆಯ ಅತ್ಯಂತ ಜನಪ್ರಿಯ ವಿದೇಶಿ ರಾಜಕಾರಣಿಯ ಪಟ್ಟಿಯಲ್ಲಿ ಮೋದಿ 26ನೇ ಸ್ಥಾನದಲ್ಲಿದ್ದಾರೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರಿಗಿಂತ ಮೋದಿ ಹಿಂದಿದ್ದಾರೆ.  ಸಮೀಕ್ಷೆಯ ಪ್ರಕಾರ, 51% ಅಮೆರಿಕನ್ನರು ಮೋದಿಯವರ ಬಗ್ಗೆ ಕೇಳಿದ್ದಾರೆ. ಅವರಲ್ಲಿ ಕೇವಲ 22% ಜನರು ಮಾತ್ರ ಅವರ ಬಗ್ಗೆ ಸಕಾರಾತ್ಮಕ ದೃಷ್ಟಿಕೋನವನ್ನು ಹೊಂದಿದ್ದಾರೆ.

GlobeScan ನಡೆಸಿದ ಇತ್ತೀಚಿನ ಆನ್‌ಲೈನ್ ಸಮೀಕ್ಷೆಯಲ್ಲಿ 84% ರಷ್ಟು ಜನರು ಮೋದಿ ಸರ್ಕಾರ ಮಾನವ ಹಕ್ಕುಗಳ ಬಗ್ಗೆ ಸಮರ್ಥಿಸಬೇಕೆಂದು ನಂಬುತ್ತಾರೆ. ಸುಮಾರು 90% ರಷ್ಟು ಅಮೆರಿಕಾದಲ್ಲಿ ಸಿಖ್‌ ಪ್ರತ್ಯೇಕತಾವಾದಿ ನಾಯಕ ಪನ್ನೂನ್‌ ಹತ್ಯೆ ಸಂಚಿನ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಮೋದಿ ಜಗತ್ತಿನಲ್ಲಿ ಪ್ರಭಾವ ಬೀರಿದ್ದಾರೆಂದು ಭ್ರಮೆ ಹರಡುವಲ್ಲಿ ಭಾರತೀಯ ಮಾಧ್ಯಮಗಳು ಸಹಭಾಗಿತ್ವವನ್ನು ಹೊಂದಿರಬಹುದು ಎಂದು ವರದಿಯು ಹೇಳಿದೆ, ಮಾನವ ಹಕ್ಕುಗಳು ಮತ್ತು ಪ್ರಜಾಸತ್ತಾತ್ಮಕ ಮಾನದಂಡಗಳಿಗೆ ಹೆಚ್ಚಿನ ಗೌರವದ ಕಡೆಗೆ ತನ್ನ ಮಾರ್ಗವನ್ನು ಬದಲಾಯಿಸಿದರೆ ಜಾಗತಿಕವಾಗಿ ಭಾರತದ ಪ್ರಭಾವವು ತ್ವರಿತವಾಗಿ ಬದಲಾಗಬಹುದು ಎಂದು ಲೇಖಕರು ಹೇಳಿದ್ದಾರೆ.

ಇದನ್ನು ಓದಿ: ಬಿಎಸ್ಪಿ ಉತ್ತರಾಧಿಕಾರಿ ಸ್ಥಾನದಿಂದ ಸೋದರಳಿಯ ಆಕಾಶ್ ಆನಂದ್‌ಗೆ ವಜಾ ಮಾಡಿದ ಮಾಯಾವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...

ಏಳು ವರ್ಷಗಳಲ್ಲಿ ಮೊದಲ ಬಾರಿಗೆ ಇರಾನ್‌ನಿಂದ ತೈಲ ಖರೀದಿಸಿದ ಭಾರತ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಹಾರ್ಮುಜ್ ಜಲಸಂಧಿಯ ಮೂಲಕ ಸರಬರಾಜಿನಲ್ಲಿ ಅಡ್ಡಿ ಉಂಟಾಗಿರುವ ಮಧ್ಯೆ, ಭಾರತೀಯ ಸಂಸ್ಕರಣಾಗಾರರು ಇರಾನ್ ತೈಲವನ್ನು ಖರೀದಿಸಿದ್ದಾರೆ ಎಂದು ತೈಲ ಸಚಿವಾಲಯ ಶನಿವಾರ (ಏ.4) ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ. ವಿಶ್ವದ...

ಉತ್ತರ ಪ್ರದೇಶ: ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರ ಬಂಧನ

ಹತ್ತು ವರ್ಷದ ವಿದ್ಯಾರ್ಥಿಯೊಬ್ಬನನ್ನು ಥಳಿಸಿದ ಆರೋಪದ ಮೇಲೆ ಇಬ್ಬರು ಮದರಸಾ ಶಿಕ್ಷಕರನ್ನು ಬಂಧಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಶನಿವಾರ ತಿಳಿಸಿದ್ದಾರೆ.  ಈ ಸಂಬಂಧ ವೀಡಿಯೊ ಅಂತರ್ಜಾಲದಲ್ಲಿ ವೈರಲ್ ಆಗಿದ್ದು, ದಿನಾಂಕವಿಲ್ಲದ ವೀಡಿಯೊದಲ್ಲಿ ಒಬ್ಬ ಮದರಸಾ...

ಕೊಡಗು | ಚಾರಣಕ್ಕೆ ತೆರಳಿದ್ದ ಯುವತಿ ನಾಪತ್ತೆ ಪ್ರಕರಣ : 3 ದಿನ ಕಳೆದರೂ ಸಿಗದ ಸುಳಿವು, ಎಎನ್‌ಎಫ್‌ನಿಂದ ತೀವ್ರ ಶೋಧ

ಕೊಡಗು ಜಿಲ್ಲೆಯ ಕಕ್ಕಬ್ಬೆ ಸಮೀಪದ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿದ್ದ ಕೇರಳ ಮೂಲದ ಯುವತಿಯೊಬ್ಬರು ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು, ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ನಾಪತ್ತೆಯಾಗಿರುವ ಯುವತಿಯನ್ನು ಕೇರಳದ...