Homeಮುಖಪುಟಮೋದಿ ಆಡಳಿತದಲ್ಲಿ ಭಾರತದ ಇಮೇಜ್‌ ಜಾಗತಿಕವಾಗಿ ಸುಧಾರಿಸಿಲ್ಲ: ವರದಿ

ಮೋದಿ ಆಡಳಿತದಲ್ಲಿ ಭಾರತದ ಇಮೇಜ್‌ ಜಾಗತಿಕವಾಗಿ ಸುಧಾರಿಸಿಲ್ಲ: ವರದಿ

- Advertisement -
- Advertisement -

ಕಳೆದ ಒಂದು ದಶಕದಲ್ಲಿ ಅಂದರೆ ಮೋದಿ ಆಡಳಿತದಲ್ಲಿ ‘ಭಾರತದ ಜಾಗತಿಕ ಖ್ಯಾತಿಯು ಸುಧಾರಣೆಯನ್ನು ಕಂಡಿಲ್ಲ’ ಎಂಬ ಮಹತ್ವದ ಅಂಶವನ್ನು ವರದಿಯೊಂದು ಬಹಿರಂಗ ಮಾಡಿದೆ. ಈ ವರದಿಯನ್ನು ಅಂತರಾಷ್ಟ್ರೀಯ ಖ್ಯಾತಿಯ ಎರಡು ಪ್ರಮುಖ ಶಿಕ್ಷಣ ತಜ್ಞರು ಸಮೀಕ್ಷೆಗಳು ಮತ್ತು ಅಭಿಪ್ರಾಯ ಸಂಗ್ರಹಣೆ ಮೂಲಕ ಸಿದ್ದಪಡಿಸಿದ್ದಾರೆ. ಈ ವರದಿಯು ಮೋದಿಯನ್ನು ‘ವಿಶ್ವಗುರು’ ಎಂದು ಹೇಳುತ್ತಿರುವ ಬಿಜೆಪಿಗೆ ಮತ್ತು ಕೆಲ ಮಾಧ್ಯಮಗಳಿಗೆ ದೊಡ್ಡ ಹಿನ್ನೆಡೆ ಉಂಟುಮಾಡಿದೆ.

‘ದಿ ಮೋದಿ ಮಿರಾಜ್: ಇಲ್ಯೂಷನ್ಸ್ ಅಂಡ್ ರಿಯಾಲಿಟಿ ಆಫ್ ಇಂಡಿಯಾಸ್ ಗ್ಲೋಬಲ್ ಸ್ಟ್ಯಾಂಡಿಂಗ್ ಅಂಡ್ ರೆಪ್ಯೂಟೇಶನ್’ ಎಂಬ ವರದಿಯನ್ನು ಜಾರ್ಜ್‌ಟೌನ್ ವಿಶ್ವವಿದ್ಯಾಲಯದ ಪ್ರೊಫೆಸರ್ ಇರ್ಫಾನ್ ನೂರುದ್ದೀನ್ ಮತ್ತು ನೆದರ್‌ಲ್ಯಾಂಡ್‌ನ ಗ್ರೋನಿಂಗನ್ ವಿಶ್ವವಿದ್ಯಾಲಯದ ಡಾ.ರೀತುಂಬ್ರಾ ಮನುವಿ ಸಿದ್ದಪಡಿಸಿದ್ದಾರೆ. ಇದಲ್ಲದೆ ಲಂಡನ್ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಓರಿಯಂಟಲ್ ಮತ್ತು ಆಫ್ರಿಕನ್ ಸ್ಟಡೀಸ್‌ನ ಡಾ ಸುಬೀರ್ ಸಿನ್ಹಾ ಅವರು ವರದಿ ಸಿದ್ದಪಡಿಸುವ ವೇಳೆ ಪ್ರಧಾನ ಸಲಹೆಗಾರರಾಗಿದ್ದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾರತದ ಜಾಗತಿಕ ಸ್ಥಾನಮಾನವನ್ನು ಹೆಚ್ಚಿಸಿದ್ದಾರೆ, ಮೋದಿ ಜಗತ್ತಿನಲ್ಲಿ ಭಾರೀ ಪ್ರಭಾವ ಬೀರಿದ್ದಾರೆ, ಮೋದಿ ಅಡಳಿತದಲ್ಲಿ ಭಾರತದ ಇಮೇಜ್‌ ಜಾಗತಿಕವಾಗಿ ಹೆಚ್ಚಾಗಿದೆ ಎಂದು ಆಡಳಿತ ಪಕ್ಷವು ಆಗಾಗ್ಗೆ ಪ್ರತಿಪಾದಿಸುತ್ತಿದೆ ಎಂದು ವರದಿಯಲ್ಲಿ ಲೇಖಕರು ಉಲ್ಲೇಖಿಸಿದ್ದು, ಈ ನಿರೂಪಣೆಯನ್ನು ಭಾರತೀಯ ಮಾಧ್ಯಮಗಳು ಹೆಚ್ಚಾಗಿ ಪ್ರಚಾರ ಮಾಡುತ್ತಿದೆ ಎಂದು ಹೇಳಿದೆ.

ಭಾರತೀಯರು ತಮ್ಮ ದೇಶದ ಜಾಗತಿಕ ಖ್ಯಾತಿಯ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಾರೆ, ಆದ್ದರಿಂದ ಭಾರತವು ಇತಿಹಾಸದಲ್ಲಿ ಅತಿದೊಡ್ಡ ಚುನಾವಣೆಯನ್ನು ಪ್ರಾರಂಭಿಸುತ್ತಿರುವಾಗ ಮೋದಿ ಈ ವಿಷಯದಲ್ಲಿ ಯಶಸ್ವಿಯಾಗಿದ್ದಾರೆಯೇ ಅಥವಾ ಇಲ್ಲವೇ ಎಂಬುವುದು ಬಹಳ ಮಹತ್ವದ್ದಾಗಿದೆ ಎಂದು ವರದಿ ಹೇಳಿದೆ.

ವರದಿಯು, 2023ರ ಪ್ಯೂ ಗ್ಲೋಬಲ್ ಆಟಿಟ್ಯೂಡ್ಸ್ ಸಮೀಕ್ಷೆಯ ವರದಿಯ ಡೇಟಾವನ್ನು ಉಲ್ಲೇಖಿಸಿದೆ. 23 ದೇಶಗಳಲ್ಲಿ 46% ವಯಸ್ಕರು ಭಾರತದ ಬಗ್ಗೆ ಉತ್ತಮ ದೃಷ್ಟಿಕೋನ, ಅಭಿಪ್ರಾಯ ಹೊಂದಿದ್ದಾರೆ ಎಂದು ಬಹಿರಂಗಪಡಿಸಿದೆ. ಇದಕ್ಕೆ ವಿರುದ್ಧವಾಗಿ 34% ಜನರು ಉತ್ತಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿಲ್ಲ ಎಂದು ವರದಿ ತಿಳಿಸಿದೆ.

ಸಮೀಕ್ಷೆ ನಡೆಸಿದ 12 ದೇಶಗಳಲ್ಲಿ ಕೇವಲ 37% ವಯಸ್ಕರು ಮೋದಿಯ ಬಗ್ಗೆ ವಿಶ್ವಾಸ, ನಂಬಿಕೆ ಹೊಂದಿರುವ ಬಗ್ಗೆ ಹೇಳಿದ್ದು, ಹೆಚ್ಚಿನ 40% ಜನರು ಮೋದಿಯ ಬಗ್ಗೆ ವಿಶ್ವಾಸ ನಮಗೆ ಇಲ್ಲ ಎಂದು ಹೇಳಿದ್ದಾರೆ.

2008ರಲ್ಲಿ ನಡೆಸಿದ ಇದೇ ರೀತಿಯ ಸಮೀಕ್ಷೆಯಲ್ಲಿ, ಭಾರತದ ಬಗ್ಗೆ ಸಕಾರಾತ್ಮಕ ಅಭಿಪ್ರಾಯ ಹೊರ ಬಂದಿತ್ತು. ಯುರೋಪಿಯನ್ನರಿಗೆ ಭಾರತದ ಬಗ್ಗೆ ಸಕಾರಾತ್ಮಕ ಅಭಿಪ್ರಾಯವಿತ್ತು. 15 ವರ್ಷಗಳ ನಂತರ ಯುರೋಪಿಯನ್ ರಾಷ್ಟ್ರಗಳಲ್ಲಿ ಸುಮಾರು 10 ಶೇಕಡಾ ಪಾಯಿಂಟ್‌ಗಳ ಗಮನಾರ್ಹ ಕುಸಿತ ಕಂಡುಬಂದಿದೆ. 2008ರಲ್ಲಿ ಫ್ರಾನ್ಸ್‌ನಲ್ಲಿ 70% ವಯಸ್ಕರು ಭಾರತದ ಬಗ್ಗೆ ಉತ್ತಮ ಅಭಿಪ್ರಾಯ ಹೊಂದಿದ್ದರು. 2023ಕ್ಕೆ ಇದರ ಅಂಕಿ-ಅಂಶಗಳು 39%ಕ್ಕೆ ಇಳಿಕೆಯಾಗಿದೆ.

ಯುನೈಟೆಡ್ ಸ್ಟೇಟ್ಸ್‌ನಲ್ಲಿ 2008ರಲ್ಲಿ 63% ಜನರು ಭಾರತದ ಬಗ್ಗೆ ಅನುಕೂಲಕರ ದೃಷ್ಟಿಕೋನವನ್ನು ಹೊಂದಿದ್ದರು ಇದು 2023ರಲ್ಲಿ 51%ಕ್ಕೆ ಇಳಿದಿದೆ. ಕಳೆದ ವರ್ಷದ ಸಮೀಕ್ಷೆಯ ಪ್ರಕಾರ, ಕೇವಲ 23% ಅಮೆರಿಕನ್ನರು ಜಾಗತಿಕ ಮಟ್ಟದಲ್ಲಿ ಭಾರತದ ಪ್ರಭಾವವು ಇದೆ ಎಂದು ನಂಬಿದ್ದರು. ಸುಮಾರು 40% ಅಮೆರಿಕನ್ನರು 2023ರಲ್ಲಿ ಮೋದಿಯ ಬಗ್ಗೆ ನಾವು ಕೇಳಿಲ್ಲ ಎಂದು ಹೇಳಿದ್ದಾರೆ. 37% ಅಮೆರಿಕನ್ನರು  ಮೋದಿಯ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯದ ಬಗೆಗಿನ ವಿಶ್ವಾಸ ಸ್ವಲ್ಪ ಇದೆ ಅಥವಾ ಇಲ್ಲ ಎಂಬ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

ಮಾರ್ಚ್ 2024ರ ಯುಗೋವ್ ಸಮೀಕ್ಷೆಯ ಅತ್ಯಂತ ಜನಪ್ರಿಯ ವಿದೇಶಿ ರಾಜಕಾರಣಿಯ ಪಟ್ಟಿಯಲ್ಲಿ ಮೋದಿ 26ನೇ ಸ್ಥಾನದಲ್ಲಿದ್ದಾರೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರಿಗಿಂತ ಮೋದಿ ಹಿಂದಿದ್ದಾರೆ.  ಸಮೀಕ್ಷೆಯ ಪ್ರಕಾರ, 51% ಅಮೆರಿಕನ್ನರು ಮೋದಿಯವರ ಬಗ್ಗೆ ಕೇಳಿದ್ದಾರೆ. ಅವರಲ್ಲಿ ಕೇವಲ 22% ಜನರು ಮಾತ್ರ ಅವರ ಬಗ್ಗೆ ಸಕಾರಾತ್ಮಕ ದೃಷ್ಟಿಕೋನವನ್ನು ಹೊಂದಿದ್ದಾರೆ.

GlobeScan ನಡೆಸಿದ ಇತ್ತೀಚಿನ ಆನ್‌ಲೈನ್ ಸಮೀಕ್ಷೆಯಲ್ಲಿ 84% ರಷ್ಟು ಜನರು ಮೋದಿ ಸರ್ಕಾರ ಮಾನವ ಹಕ್ಕುಗಳ ಬಗ್ಗೆ ಸಮರ್ಥಿಸಬೇಕೆಂದು ನಂಬುತ್ತಾರೆ. ಸುಮಾರು 90% ರಷ್ಟು ಅಮೆರಿಕಾದಲ್ಲಿ ಸಿಖ್‌ ಪ್ರತ್ಯೇಕತಾವಾದಿ ನಾಯಕ ಪನ್ನೂನ್‌ ಹತ್ಯೆ ಸಂಚಿನ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಮೋದಿ ಜಗತ್ತಿನಲ್ಲಿ ಪ್ರಭಾವ ಬೀರಿದ್ದಾರೆಂದು ಭ್ರಮೆ ಹರಡುವಲ್ಲಿ ಭಾರತೀಯ ಮಾಧ್ಯಮಗಳು ಸಹಭಾಗಿತ್ವವನ್ನು ಹೊಂದಿರಬಹುದು ಎಂದು ವರದಿಯು ಹೇಳಿದೆ, ಮಾನವ ಹಕ್ಕುಗಳು ಮತ್ತು ಪ್ರಜಾಸತ್ತಾತ್ಮಕ ಮಾನದಂಡಗಳಿಗೆ ಹೆಚ್ಚಿನ ಗೌರವದ ಕಡೆಗೆ ತನ್ನ ಮಾರ್ಗವನ್ನು ಬದಲಾಯಿಸಿದರೆ ಜಾಗತಿಕವಾಗಿ ಭಾರತದ ಪ್ರಭಾವವು ತ್ವರಿತವಾಗಿ ಬದಲಾಗಬಹುದು ಎಂದು ಲೇಖಕರು ಹೇಳಿದ್ದಾರೆ.

ಇದನ್ನು ಓದಿ: ಬಿಎಸ್ಪಿ ಉತ್ತರಾಧಿಕಾರಿ ಸ್ಥಾನದಿಂದ ಸೋದರಳಿಯ ಆಕಾಶ್ ಆನಂದ್‌ಗೆ ವಜಾ ಮಾಡಿದ ಮಾಯಾವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...