Homeಮುಖಪುಟಮೋದಿ ಆಡಳಿತದಲ್ಲಿ ಭಾರತದ ಇಮೇಜ್‌ ಜಾಗತಿಕವಾಗಿ ಸುಧಾರಿಸಿಲ್ಲ: ವರದಿ

ಮೋದಿ ಆಡಳಿತದಲ್ಲಿ ಭಾರತದ ಇಮೇಜ್‌ ಜಾಗತಿಕವಾಗಿ ಸುಧಾರಿಸಿಲ್ಲ: ವರದಿ

- Advertisement -
- Advertisement -

ಕಳೆದ ಒಂದು ದಶಕದಲ್ಲಿ ಅಂದರೆ ಮೋದಿ ಆಡಳಿತದಲ್ಲಿ ‘ಭಾರತದ ಜಾಗತಿಕ ಖ್ಯಾತಿಯು ಸುಧಾರಣೆಯನ್ನು ಕಂಡಿಲ್ಲ’ ಎಂಬ ಮಹತ್ವದ ಅಂಶವನ್ನು ವರದಿಯೊಂದು ಬಹಿರಂಗ ಮಾಡಿದೆ. ಈ ವರದಿಯನ್ನು ಅಂತರಾಷ್ಟ್ರೀಯ ಖ್ಯಾತಿಯ ಎರಡು ಪ್ರಮುಖ ಶಿಕ್ಷಣ ತಜ್ಞರು ಸಮೀಕ್ಷೆಗಳು ಮತ್ತು ಅಭಿಪ್ರಾಯ ಸಂಗ್ರಹಣೆ ಮೂಲಕ ಸಿದ್ದಪಡಿಸಿದ್ದಾರೆ. ಈ ವರದಿಯು ಮೋದಿಯನ್ನು ‘ವಿಶ್ವಗುರು’ ಎಂದು ಹೇಳುತ್ತಿರುವ ಬಿಜೆಪಿಗೆ ಮತ್ತು ಕೆಲ ಮಾಧ್ಯಮಗಳಿಗೆ ದೊಡ್ಡ ಹಿನ್ನೆಡೆ ಉಂಟುಮಾಡಿದೆ.

‘ದಿ ಮೋದಿ ಮಿರಾಜ್: ಇಲ್ಯೂಷನ್ಸ್ ಅಂಡ್ ರಿಯಾಲಿಟಿ ಆಫ್ ಇಂಡಿಯಾಸ್ ಗ್ಲೋಬಲ್ ಸ್ಟ್ಯಾಂಡಿಂಗ್ ಅಂಡ್ ರೆಪ್ಯೂಟೇಶನ್’ ಎಂಬ ವರದಿಯನ್ನು ಜಾರ್ಜ್‌ಟೌನ್ ವಿಶ್ವವಿದ್ಯಾಲಯದ ಪ್ರೊಫೆಸರ್ ಇರ್ಫಾನ್ ನೂರುದ್ದೀನ್ ಮತ್ತು ನೆದರ್‌ಲ್ಯಾಂಡ್‌ನ ಗ್ರೋನಿಂಗನ್ ವಿಶ್ವವಿದ್ಯಾಲಯದ ಡಾ.ರೀತುಂಬ್ರಾ ಮನುವಿ ಸಿದ್ದಪಡಿಸಿದ್ದಾರೆ. ಇದಲ್ಲದೆ ಲಂಡನ್ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಓರಿಯಂಟಲ್ ಮತ್ತು ಆಫ್ರಿಕನ್ ಸ್ಟಡೀಸ್‌ನ ಡಾ ಸುಬೀರ್ ಸಿನ್ಹಾ ಅವರು ವರದಿ ಸಿದ್ದಪಡಿಸುವ ವೇಳೆ ಪ್ರಧಾನ ಸಲಹೆಗಾರರಾಗಿದ್ದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾರತದ ಜಾಗತಿಕ ಸ್ಥಾನಮಾನವನ್ನು ಹೆಚ್ಚಿಸಿದ್ದಾರೆ, ಮೋದಿ ಜಗತ್ತಿನಲ್ಲಿ ಭಾರೀ ಪ್ರಭಾವ ಬೀರಿದ್ದಾರೆ, ಮೋದಿ ಅಡಳಿತದಲ್ಲಿ ಭಾರತದ ಇಮೇಜ್‌ ಜಾಗತಿಕವಾಗಿ ಹೆಚ್ಚಾಗಿದೆ ಎಂದು ಆಡಳಿತ ಪಕ್ಷವು ಆಗಾಗ್ಗೆ ಪ್ರತಿಪಾದಿಸುತ್ತಿದೆ ಎಂದು ವರದಿಯಲ್ಲಿ ಲೇಖಕರು ಉಲ್ಲೇಖಿಸಿದ್ದು, ಈ ನಿರೂಪಣೆಯನ್ನು ಭಾರತೀಯ ಮಾಧ್ಯಮಗಳು ಹೆಚ್ಚಾಗಿ ಪ್ರಚಾರ ಮಾಡುತ್ತಿದೆ ಎಂದು ಹೇಳಿದೆ.

ಭಾರತೀಯರು ತಮ್ಮ ದೇಶದ ಜಾಗತಿಕ ಖ್ಯಾತಿಯ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಾರೆ, ಆದ್ದರಿಂದ ಭಾರತವು ಇತಿಹಾಸದಲ್ಲಿ ಅತಿದೊಡ್ಡ ಚುನಾವಣೆಯನ್ನು ಪ್ರಾರಂಭಿಸುತ್ತಿರುವಾಗ ಮೋದಿ ಈ ವಿಷಯದಲ್ಲಿ ಯಶಸ್ವಿಯಾಗಿದ್ದಾರೆಯೇ ಅಥವಾ ಇಲ್ಲವೇ ಎಂಬುವುದು ಬಹಳ ಮಹತ್ವದ್ದಾಗಿದೆ ಎಂದು ವರದಿ ಹೇಳಿದೆ.

ವರದಿಯು, 2023ರ ಪ್ಯೂ ಗ್ಲೋಬಲ್ ಆಟಿಟ್ಯೂಡ್ಸ್ ಸಮೀಕ್ಷೆಯ ವರದಿಯ ಡೇಟಾವನ್ನು ಉಲ್ಲೇಖಿಸಿದೆ. 23 ದೇಶಗಳಲ್ಲಿ 46% ವಯಸ್ಕರು ಭಾರತದ ಬಗ್ಗೆ ಉತ್ತಮ ದೃಷ್ಟಿಕೋನ, ಅಭಿಪ್ರಾಯ ಹೊಂದಿದ್ದಾರೆ ಎಂದು ಬಹಿರಂಗಪಡಿಸಿದೆ. ಇದಕ್ಕೆ ವಿರುದ್ಧವಾಗಿ 34% ಜನರು ಉತ್ತಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿಲ್ಲ ಎಂದು ವರದಿ ತಿಳಿಸಿದೆ.

ಸಮೀಕ್ಷೆ ನಡೆಸಿದ 12 ದೇಶಗಳಲ್ಲಿ ಕೇವಲ 37% ವಯಸ್ಕರು ಮೋದಿಯ ಬಗ್ಗೆ ವಿಶ್ವಾಸ, ನಂಬಿಕೆ ಹೊಂದಿರುವ ಬಗ್ಗೆ ಹೇಳಿದ್ದು, ಹೆಚ್ಚಿನ 40% ಜನರು ಮೋದಿಯ ಬಗ್ಗೆ ವಿಶ್ವಾಸ ನಮಗೆ ಇಲ್ಲ ಎಂದು ಹೇಳಿದ್ದಾರೆ.

2008ರಲ್ಲಿ ನಡೆಸಿದ ಇದೇ ರೀತಿಯ ಸಮೀಕ್ಷೆಯಲ್ಲಿ, ಭಾರತದ ಬಗ್ಗೆ ಸಕಾರಾತ್ಮಕ ಅಭಿಪ್ರಾಯ ಹೊರ ಬಂದಿತ್ತು. ಯುರೋಪಿಯನ್ನರಿಗೆ ಭಾರತದ ಬಗ್ಗೆ ಸಕಾರಾತ್ಮಕ ಅಭಿಪ್ರಾಯವಿತ್ತು. 15 ವರ್ಷಗಳ ನಂತರ ಯುರೋಪಿಯನ್ ರಾಷ್ಟ್ರಗಳಲ್ಲಿ ಸುಮಾರು 10 ಶೇಕಡಾ ಪಾಯಿಂಟ್‌ಗಳ ಗಮನಾರ್ಹ ಕುಸಿತ ಕಂಡುಬಂದಿದೆ. 2008ರಲ್ಲಿ ಫ್ರಾನ್ಸ್‌ನಲ್ಲಿ 70% ವಯಸ್ಕರು ಭಾರತದ ಬಗ್ಗೆ ಉತ್ತಮ ಅಭಿಪ್ರಾಯ ಹೊಂದಿದ್ದರು. 2023ಕ್ಕೆ ಇದರ ಅಂಕಿ-ಅಂಶಗಳು 39%ಕ್ಕೆ ಇಳಿಕೆಯಾಗಿದೆ.

ಯುನೈಟೆಡ್ ಸ್ಟೇಟ್ಸ್‌ನಲ್ಲಿ 2008ರಲ್ಲಿ 63% ಜನರು ಭಾರತದ ಬಗ್ಗೆ ಅನುಕೂಲಕರ ದೃಷ್ಟಿಕೋನವನ್ನು ಹೊಂದಿದ್ದರು ಇದು 2023ರಲ್ಲಿ 51%ಕ್ಕೆ ಇಳಿದಿದೆ. ಕಳೆದ ವರ್ಷದ ಸಮೀಕ್ಷೆಯ ಪ್ರಕಾರ, ಕೇವಲ 23% ಅಮೆರಿಕನ್ನರು ಜಾಗತಿಕ ಮಟ್ಟದಲ್ಲಿ ಭಾರತದ ಪ್ರಭಾವವು ಇದೆ ಎಂದು ನಂಬಿದ್ದರು. ಸುಮಾರು 40% ಅಮೆರಿಕನ್ನರು 2023ರಲ್ಲಿ ಮೋದಿಯ ಬಗ್ಗೆ ನಾವು ಕೇಳಿಲ್ಲ ಎಂದು ಹೇಳಿದ್ದಾರೆ. 37% ಅಮೆರಿಕನ್ನರು  ಮೋದಿಯ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯದ ಬಗೆಗಿನ ವಿಶ್ವಾಸ ಸ್ವಲ್ಪ ಇದೆ ಅಥವಾ ಇಲ್ಲ ಎಂಬ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

ಮಾರ್ಚ್ 2024ರ ಯುಗೋವ್ ಸಮೀಕ್ಷೆಯ ಅತ್ಯಂತ ಜನಪ್ರಿಯ ವಿದೇಶಿ ರಾಜಕಾರಣಿಯ ಪಟ್ಟಿಯಲ್ಲಿ ಮೋದಿ 26ನೇ ಸ್ಥಾನದಲ್ಲಿದ್ದಾರೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರಿಗಿಂತ ಮೋದಿ ಹಿಂದಿದ್ದಾರೆ.  ಸಮೀಕ್ಷೆಯ ಪ್ರಕಾರ, 51% ಅಮೆರಿಕನ್ನರು ಮೋದಿಯವರ ಬಗ್ಗೆ ಕೇಳಿದ್ದಾರೆ. ಅವರಲ್ಲಿ ಕೇವಲ 22% ಜನರು ಮಾತ್ರ ಅವರ ಬಗ್ಗೆ ಸಕಾರಾತ್ಮಕ ದೃಷ್ಟಿಕೋನವನ್ನು ಹೊಂದಿದ್ದಾರೆ.

GlobeScan ನಡೆಸಿದ ಇತ್ತೀಚಿನ ಆನ್‌ಲೈನ್ ಸಮೀಕ್ಷೆಯಲ್ಲಿ 84% ರಷ್ಟು ಜನರು ಮೋದಿ ಸರ್ಕಾರ ಮಾನವ ಹಕ್ಕುಗಳ ಬಗ್ಗೆ ಸಮರ್ಥಿಸಬೇಕೆಂದು ನಂಬುತ್ತಾರೆ. ಸುಮಾರು 90% ರಷ್ಟು ಅಮೆರಿಕಾದಲ್ಲಿ ಸಿಖ್‌ ಪ್ರತ್ಯೇಕತಾವಾದಿ ನಾಯಕ ಪನ್ನೂನ್‌ ಹತ್ಯೆ ಸಂಚಿನ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಮೋದಿ ಜಗತ್ತಿನಲ್ಲಿ ಪ್ರಭಾವ ಬೀರಿದ್ದಾರೆಂದು ಭ್ರಮೆ ಹರಡುವಲ್ಲಿ ಭಾರತೀಯ ಮಾಧ್ಯಮಗಳು ಸಹಭಾಗಿತ್ವವನ್ನು ಹೊಂದಿರಬಹುದು ಎಂದು ವರದಿಯು ಹೇಳಿದೆ, ಮಾನವ ಹಕ್ಕುಗಳು ಮತ್ತು ಪ್ರಜಾಸತ್ತಾತ್ಮಕ ಮಾನದಂಡಗಳಿಗೆ ಹೆಚ್ಚಿನ ಗೌರವದ ಕಡೆಗೆ ತನ್ನ ಮಾರ್ಗವನ್ನು ಬದಲಾಯಿಸಿದರೆ ಜಾಗತಿಕವಾಗಿ ಭಾರತದ ಪ್ರಭಾವವು ತ್ವರಿತವಾಗಿ ಬದಲಾಗಬಹುದು ಎಂದು ಲೇಖಕರು ಹೇಳಿದ್ದಾರೆ.

ಇದನ್ನು ಓದಿ: ಬಿಎಸ್ಪಿ ಉತ್ತರಾಧಿಕಾರಿ ಸ್ಥಾನದಿಂದ ಸೋದರಳಿಯ ಆಕಾಶ್ ಆನಂದ್‌ಗೆ ವಜಾ ಮಾಡಿದ ಮಾಯಾವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...