Homeಮುಖಪುಟಮೋದಿ ಆಡಳಿತದಲ್ಲಿ ಭಾರತದ ಇಮೇಜ್‌ ಜಾಗತಿಕವಾಗಿ ಸುಧಾರಿಸಿಲ್ಲ: ವರದಿ

ಮೋದಿ ಆಡಳಿತದಲ್ಲಿ ಭಾರತದ ಇಮೇಜ್‌ ಜಾಗತಿಕವಾಗಿ ಸುಧಾರಿಸಿಲ್ಲ: ವರದಿ

- Advertisement -
- Advertisement -

ಕಳೆದ ಒಂದು ದಶಕದಲ್ಲಿ ಅಂದರೆ ಮೋದಿ ಆಡಳಿತದಲ್ಲಿ ‘ಭಾರತದ ಜಾಗತಿಕ ಖ್ಯಾತಿಯು ಸುಧಾರಣೆಯನ್ನು ಕಂಡಿಲ್ಲ’ ಎಂಬ ಮಹತ್ವದ ಅಂಶವನ್ನು ವರದಿಯೊಂದು ಬಹಿರಂಗ ಮಾಡಿದೆ. ಈ ವರದಿಯನ್ನು ಅಂತರಾಷ್ಟ್ರೀಯ ಖ್ಯಾತಿಯ ಎರಡು ಪ್ರಮುಖ ಶಿಕ್ಷಣ ತಜ್ಞರು ಸಮೀಕ್ಷೆಗಳು ಮತ್ತು ಅಭಿಪ್ರಾಯ ಸಂಗ್ರಹಣೆ ಮೂಲಕ ಸಿದ್ದಪಡಿಸಿದ್ದಾರೆ. ಈ ವರದಿಯು ಮೋದಿಯನ್ನು ‘ವಿಶ್ವಗುರು’ ಎಂದು ಹೇಳುತ್ತಿರುವ ಬಿಜೆಪಿಗೆ ಮತ್ತು ಕೆಲ ಮಾಧ್ಯಮಗಳಿಗೆ ದೊಡ್ಡ ಹಿನ್ನೆಡೆ ಉಂಟುಮಾಡಿದೆ.

‘ದಿ ಮೋದಿ ಮಿರಾಜ್: ಇಲ್ಯೂಷನ್ಸ್ ಅಂಡ್ ರಿಯಾಲಿಟಿ ಆಫ್ ಇಂಡಿಯಾಸ್ ಗ್ಲೋಬಲ್ ಸ್ಟ್ಯಾಂಡಿಂಗ್ ಅಂಡ್ ರೆಪ್ಯೂಟೇಶನ್’ ಎಂಬ ವರದಿಯನ್ನು ಜಾರ್ಜ್‌ಟೌನ್ ವಿಶ್ವವಿದ್ಯಾಲಯದ ಪ್ರೊಫೆಸರ್ ಇರ್ಫಾನ್ ನೂರುದ್ದೀನ್ ಮತ್ತು ನೆದರ್‌ಲ್ಯಾಂಡ್‌ನ ಗ್ರೋನಿಂಗನ್ ವಿಶ್ವವಿದ್ಯಾಲಯದ ಡಾ.ರೀತುಂಬ್ರಾ ಮನುವಿ ಸಿದ್ದಪಡಿಸಿದ್ದಾರೆ. ಇದಲ್ಲದೆ ಲಂಡನ್ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಓರಿಯಂಟಲ್ ಮತ್ತು ಆಫ್ರಿಕನ್ ಸ್ಟಡೀಸ್‌ನ ಡಾ ಸುಬೀರ್ ಸಿನ್ಹಾ ಅವರು ವರದಿ ಸಿದ್ದಪಡಿಸುವ ವೇಳೆ ಪ್ರಧಾನ ಸಲಹೆಗಾರರಾಗಿದ್ದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾರತದ ಜಾಗತಿಕ ಸ್ಥಾನಮಾನವನ್ನು ಹೆಚ್ಚಿಸಿದ್ದಾರೆ, ಮೋದಿ ಜಗತ್ತಿನಲ್ಲಿ ಭಾರೀ ಪ್ರಭಾವ ಬೀರಿದ್ದಾರೆ, ಮೋದಿ ಅಡಳಿತದಲ್ಲಿ ಭಾರತದ ಇಮೇಜ್‌ ಜಾಗತಿಕವಾಗಿ ಹೆಚ್ಚಾಗಿದೆ ಎಂದು ಆಡಳಿತ ಪಕ್ಷವು ಆಗಾಗ್ಗೆ ಪ್ರತಿಪಾದಿಸುತ್ತಿದೆ ಎಂದು ವರದಿಯಲ್ಲಿ ಲೇಖಕರು ಉಲ್ಲೇಖಿಸಿದ್ದು, ಈ ನಿರೂಪಣೆಯನ್ನು ಭಾರತೀಯ ಮಾಧ್ಯಮಗಳು ಹೆಚ್ಚಾಗಿ ಪ್ರಚಾರ ಮಾಡುತ್ತಿದೆ ಎಂದು ಹೇಳಿದೆ.

ಭಾರತೀಯರು ತಮ್ಮ ದೇಶದ ಜಾಗತಿಕ ಖ್ಯಾತಿಯ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಾರೆ, ಆದ್ದರಿಂದ ಭಾರತವು ಇತಿಹಾಸದಲ್ಲಿ ಅತಿದೊಡ್ಡ ಚುನಾವಣೆಯನ್ನು ಪ್ರಾರಂಭಿಸುತ್ತಿರುವಾಗ ಮೋದಿ ಈ ವಿಷಯದಲ್ಲಿ ಯಶಸ್ವಿಯಾಗಿದ್ದಾರೆಯೇ ಅಥವಾ ಇಲ್ಲವೇ ಎಂಬುವುದು ಬಹಳ ಮಹತ್ವದ್ದಾಗಿದೆ ಎಂದು ವರದಿ ಹೇಳಿದೆ.

ವರದಿಯು, 2023ರ ಪ್ಯೂ ಗ್ಲೋಬಲ್ ಆಟಿಟ್ಯೂಡ್ಸ್ ಸಮೀಕ್ಷೆಯ ವರದಿಯ ಡೇಟಾವನ್ನು ಉಲ್ಲೇಖಿಸಿದೆ. 23 ದೇಶಗಳಲ್ಲಿ 46% ವಯಸ್ಕರು ಭಾರತದ ಬಗ್ಗೆ ಉತ್ತಮ ದೃಷ್ಟಿಕೋನ, ಅಭಿಪ್ರಾಯ ಹೊಂದಿದ್ದಾರೆ ಎಂದು ಬಹಿರಂಗಪಡಿಸಿದೆ. ಇದಕ್ಕೆ ವಿರುದ್ಧವಾಗಿ 34% ಜನರು ಉತ್ತಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿಲ್ಲ ಎಂದು ವರದಿ ತಿಳಿಸಿದೆ.

ಸಮೀಕ್ಷೆ ನಡೆಸಿದ 12 ದೇಶಗಳಲ್ಲಿ ಕೇವಲ 37% ವಯಸ್ಕರು ಮೋದಿಯ ಬಗ್ಗೆ ವಿಶ್ವಾಸ, ನಂಬಿಕೆ ಹೊಂದಿರುವ ಬಗ್ಗೆ ಹೇಳಿದ್ದು, ಹೆಚ್ಚಿನ 40% ಜನರು ಮೋದಿಯ ಬಗ್ಗೆ ವಿಶ್ವಾಸ ನಮಗೆ ಇಲ್ಲ ಎಂದು ಹೇಳಿದ್ದಾರೆ.

2008ರಲ್ಲಿ ನಡೆಸಿದ ಇದೇ ರೀತಿಯ ಸಮೀಕ್ಷೆಯಲ್ಲಿ, ಭಾರತದ ಬಗ್ಗೆ ಸಕಾರಾತ್ಮಕ ಅಭಿಪ್ರಾಯ ಹೊರ ಬಂದಿತ್ತು. ಯುರೋಪಿಯನ್ನರಿಗೆ ಭಾರತದ ಬಗ್ಗೆ ಸಕಾರಾತ್ಮಕ ಅಭಿಪ್ರಾಯವಿತ್ತು. 15 ವರ್ಷಗಳ ನಂತರ ಯುರೋಪಿಯನ್ ರಾಷ್ಟ್ರಗಳಲ್ಲಿ ಸುಮಾರು 10 ಶೇಕಡಾ ಪಾಯಿಂಟ್‌ಗಳ ಗಮನಾರ್ಹ ಕುಸಿತ ಕಂಡುಬಂದಿದೆ. 2008ರಲ್ಲಿ ಫ್ರಾನ್ಸ್‌ನಲ್ಲಿ 70% ವಯಸ್ಕರು ಭಾರತದ ಬಗ್ಗೆ ಉತ್ತಮ ಅಭಿಪ್ರಾಯ ಹೊಂದಿದ್ದರು. 2023ಕ್ಕೆ ಇದರ ಅಂಕಿ-ಅಂಶಗಳು 39%ಕ್ಕೆ ಇಳಿಕೆಯಾಗಿದೆ.

ಯುನೈಟೆಡ್ ಸ್ಟೇಟ್ಸ್‌ನಲ್ಲಿ 2008ರಲ್ಲಿ 63% ಜನರು ಭಾರತದ ಬಗ್ಗೆ ಅನುಕೂಲಕರ ದೃಷ್ಟಿಕೋನವನ್ನು ಹೊಂದಿದ್ದರು ಇದು 2023ರಲ್ಲಿ 51%ಕ್ಕೆ ಇಳಿದಿದೆ. ಕಳೆದ ವರ್ಷದ ಸಮೀಕ್ಷೆಯ ಪ್ರಕಾರ, ಕೇವಲ 23% ಅಮೆರಿಕನ್ನರು ಜಾಗತಿಕ ಮಟ್ಟದಲ್ಲಿ ಭಾರತದ ಪ್ರಭಾವವು ಇದೆ ಎಂದು ನಂಬಿದ್ದರು. ಸುಮಾರು 40% ಅಮೆರಿಕನ್ನರು 2023ರಲ್ಲಿ ಮೋದಿಯ ಬಗ್ಗೆ ನಾವು ಕೇಳಿಲ್ಲ ಎಂದು ಹೇಳಿದ್ದಾರೆ. 37% ಅಮೆರಿಕನ್ನರು  ಮೋದಿಯ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯದ ಬಗೆಗಿನ ವಿಶ್ವಾಸ ಸ್ವಲ್ಪ ಇದೆ ಅಥವಾ ಇಲ್ಲ ಎಂಬ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

ಮಾರ್ಚ್ 2024ರ ಯುಗೋವ್ ಸಮೀಕ್ಷೆಯ ಅತ್ಯಂತ ಜನಪ್ರಿಯ ವಿದೇಶಿ ರಾಜಕಾರಣಿಯ ಪಟ್ಟಿಯಲ್ಲಿ ಮೋದಿ 26ನೇ ಸ್ಥಾನದಲ್ಲಿದ್ದಾರೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರಿಗಿಂತ ಮೋದಿ ಹಿಂದಿದ್ದಾರೆ.  ಸಮೀಕ್ಷೆಯ ಪ್ರಕಾರ, 51% ಅಮೆರಿಕನ್ನರು ಮೋದಿಯವರ ಬಗ್ಗೆ ಕೇಳಿದ್ದಾರೆ. ಅವರಲ್ಲಿ ಕೇವಲ 22% ಜನರು ಮಾತ್ರ ಅವರ ಬಗ್ಗೆ ಸಕಾರಾತ್ಮಕ ದೃಷ್ಟಿಕೋನವನ್ನು ಹೊಂದಿದ್ದಾರೆ.

GlobeScan ನಡೆಸಿದ ಇತ್ತೀಚಿನ ಆನ್‌ಲೈನ್ ಸಮೀಕ್ಷೆಯಲ್ಲಿ 84% ರಷ್ಟು ಜನರು ಮೋದಿ ಸರ್ಕಾರ ಮಾನವ ಹಕ್ಕುಗಳ ಬಗ್ಗೆ ಸಮರ್ಥಿಸಬೇಕೆಂದು ನಂಬುತ್ತಾರೆ. ಸುಮಾರು 90% ರಷ್ಟು ಅಮೆರಿಕಾದಲ್ಲಿ ಸಿಖ್‌ ಪ್ರತ್ಯೇಕತಾವಾದಿ ನಾಯಕ ಪನ್ನೂನ್‌ ಹತ್ಯೆ ಸಂಚಿನ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಮೋದಿ ಜಗತ್ತಿನಲ್ಲಿ ಪ್ರಭಾವ ಬೀರಿದ್ದಾರೆಂದು ಭ್ರಮೆ ಹರಡುವಲ್ಲಿ ಭಾರತೀಯ ಮಾಧ್ಯಮಗಳು ಸಹಭಾಗಿತ್ವವನ್ನು ಹೊಂದಿರಬಹುದು ಎಂದು ವರದಿಯು ಹೇಳಿದೆ, ಮಾನವ ಹಕ್ಕುಗಳು ಮತ್ತು ಪ್ರಜಾಸತ್ತಾತ್ಮಕ ಮಾನದಂಡಗಳಿಗೆ ಹೆಚ್ಚಿನ ಗೌರವದ ಕಡೆಗೆ ತನ್ನ ಮಾರ್ಗವನ್ನು ಬದಲಾಯಿಸಿದರೆ ಜಾಗತಿಕವಾಗಿ ಭಾರತದ ಪ್ರಭಾವವು ತ್ವರಿತವಾಗಿ ಬದಲಾಗಬಹುದು ಎಂದು ಲೇಖಕರು ಹೇಳಿದ್ದಾರೆ.

ಇದನ್ನು ಓದಿ: ಬಿಎಸ್ಪಿ ಉತ್ತರಾಧಿಕಾರಿ ಸ್ಥಾನದಿಂದ ಸೋದರಳಿಯ ಆಕಾಶ್ ಆನಂದ್‌ಗೆ ವಜಾ ಮಾಡಿದ ಮಾಯಾವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...