Homeಮುಖಪುಟಮೋದಿ ಆಡಳಿತದಲ್ಲಿ ಭಾರತದ ಇಮೇಜ್‌ ಜಾಗತಿಕವಾಗಿ ಸುಧಾರಿಸಿಲ್ಲ: ವರದಿ

ಮೋದಿ ಆಡಳಿತದಲ್ಲಿ ಭಾರತದ ಇಮೇಜ್‌ ಜಾಗತಿಕವಾಗಿ ಸುಧಾರಿಸಿಲ್ಲ: ವರದಿ

- Advertisement -
- Advertisement -

ಕಳೆದ ಒಂದು ದಶಕದಲ್ಲಿ ಅಂದರೆ ಮೋದಿ ಆಡಳಿತದಲ್ಲಿ ‘ಭಾರತದ ಜಾಗತಿಕ ಖ್ಯಾತಿಯು ಸುಧಾರಣೆಯನ್ನು ಕಂಡಿಲ್ಲ’ ಎಂಬ ಮಹತ್ವದ ಅಂಶವನ್ನು ವರದಿಯೊಂದು ಬಹಿರಂಗ ಮಾಡಿದೆ. ಈ ವರದಿಯನ್ನು ಅಂತರಾಷ್ಟ್ರೀಯ ಖ್ಯಾತಿಯ ಎರಡು ಪ್ರಮುಖ ಶಿಕ್ಷಣ ತಜ್ಞರು ಸಮೀಕ್ಷೆಗಳು ಮತ್ತು ಅಭಿಪ್ರಾಯ ಸಂಗ್ರಹಣೆ ಮೂಲಕ ಸಿದ್ದಪಡಿಸಿದ್ದಾರೆ. ಈ ವರದಿಯು ಮೋದಿಯನ್ನು ‘ವಿಶ್ವಗುರು’ ಎಂದು ಹೇಳುತ್ತಿರುವ ಬಿಜೆಪಿಗೆ ಮತ್ತು ಕೆಲ ಮಾಧ್ಯಮಗಳಿಗೆ ದೊಡ್ಡ ಹಿನ್ನೆಡೆ ಉಂಟುಮಾಡಿದೆ.

‘ದಿ ಮೋದಿ ಮಿರಾಜ್: ಇಲ್ಯೂಷನ್ಸ್ ಅಂಡ್ ರಿಯಾಲಿಟಿ ಆಫ್ ಇಂಡಿಯಾಸ್ ಗ್ಲೋಬಲ್ ಸ್ಟ್ಯಾಂಡಿಂಗ್ ಅಂಡ್ ರೆಪ್ಯೂಟೇಶನ್’ ಎಂಬ ವರದಿಯನ್ನು ಜಾರ್ಜ್‌ಟೌನ್ ವಿಶ್ವವಿದ್ಯಾಲಯದ ಪ್ರೊಫೆಸರ್ ಇರ್ಫಾನ್ ನೂರುದ್ದೀನ್ ಮತ್ತು ನೆದರ್‌ಲ್ಯಾಂಡ್‌ನ ಗ್ರೋನಿಂಗನ್ ವಿಶ್ವವಿದ್ಯಾಲಯದ ಡಾ.ರೀತುಂಬ್ರಾ ಮನುವಿ ಸಿದ್ದಪಡಿಸಿದ್ದಾರೆ. ಇದಲ್ಲದೆ ಲಂಡನ್ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಓರಿಯಂಟಲ್ ಮತ್ತು ಆಫ್ರಿಕನ್ ಸ್ಟಡೀಸ್‌ನ ಡಾ ಸುಬೀರ್ ಸಿನ್ಹಾ ಅವರು ವರದಿ ಸಿದ್ದಪಡಿಸುವ ವೇಳೆ ಪ್ರಧಾನ ಸಲಹೆಗಾರರಾಗಿದ್ದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾರತದ ಜಾಗತಿಕ ಸ್ಥಾನಮಾನವನ್ನು ಹೆಚ್ಚಿಸಿದ್ದಾರೆ, ಮೋದಿ ಜಗತ್ತಿನಲ್ಲಿ ಭಾರೀ ಪ್ರಭಾವ ಬೀರಿದ್ದಾರೆ, ಮೋದಿ ಅಡಳಿತದಲ್ಲಿ ಭಾರತದ ಇಮೇಜ್‌ ಜಾಗತಿಕವಾಗಿ ಹೆಚ್ಚಾಗಿದೆ ಎಂದು ಆಡಳಿತ ಪಕ್ಷವು ಆಗಾಗ್ಗೆ ಪ್ರತಿಪಾದಿಸುತ್ತಿದೆ ಎಂದು ವರದಿಯಲ್ಲಿ ಲೇಖಕರು ಉಲ್ಲೇಖಿಸಿದ್ದು, ಈ ನಿರೂಪಣೆಯನ್ನು ಭಾರತೀಯ ಮಾಧ್ಯಮಗಳು ಹೆಚ್ಚಾಗಿ ಪ್ರಚಾರ ಮಾಡುತ್ತಿದೆ ಎಂದು ಹೇಳಿದೆ.

ಭಾರತೀಯರು ತಮ್ಮ ದೇಶದ ಜಾಗತಿಕ ಖ್ಯಾತಿಯ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಾರೆ, ಆದ್ದರಿಂದ ಭಾರತವು ಇತಿಹಾಸದಲ್ಲಿ ಅತಿದೊಡ್ಡ ಚುನಾವಣೆಯನ್ನು ಪ್ರಾರಂಭಿಸುತ್ತಿರುವಾಗ ಮೋದಿ ಈ ವಿಷಯದಲ್ಲಿ ಯಶಸ್ವಿಯಾಗಿದ್ದಾರೆಯೇ ಅಥವಾ ಇಲ್ಲವೇ ಎಂಬುವುದು ಬಹಳ ಮಹತ್ವದ್ದಾಗಿದೆ ಎಂದು ವರದಿ ಹೇಳಿದೆ.

ವರದಿಯು, 2023ರ ಪ್ಯೂ ಗ್ಲೋಬಲ್ ಆಟಿಟ್ಯೂಡ್ಸ್ ಸಮೀಕ್ಷೆಯ ವರದಿಯ ಡೇಟಾವನ್ನು ಉಲ್ಲೇಖಿಸಿದೆ. 23 ದೇಶಗಳಲ್ಲಿ 46% ವಯಸ್ಕರು ಭಾರತದ ಬಗ್ಗೆ ಉತ್ತಮ ದೃಷ್ಟಿಕೋನ, ಅಭಿಪ್ರಾಯ ಹೊಂದಿದ್ದಾರೆ ಎಂದು ಬಹಿರಂಗಪಡಿಸಿದೆ. ಇದಕ್ಕೆ ವಿರುದ್ಧವಾಗಿ 34% ಜನರು ಉತ್ತಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿಲ್ಲ ಎಂದು ವರದಿ ತಿಳಿಸಿದೆ.

ಸಮೀಕ್ಷೆ ನಡೆಸಿದ 12 ದೇಶಗಳಲ್ಲಿ ಕೇವಲ 37% ವಯಸ್ಕರು ಮೋದಿಯ ಬಗ್ಗೆ ವಿಶ್ವಾಸ, ನಂಬಿಕೆ ಹೊಂದಿರುವ ಬಗ್ಗೆ ಹೇಳಿದ್ದು, ಹೆಚ್ಚಿನ 40% ಜನರು ಮೋದಿಯ ಬಗ್ಗೆ ವಿಶ್ವಾಸ ನಮಗೆ ಇಲ್ಲ ಎಂದು ಹೇಳಿದ್ದಾರೆ.

2008ರಲ್ಲಿ ನಡೆಸಿದ ಇದೇ ರೀತಿಯ ಸಮೀಕ್ಷೆಯಲ್ಲಿ, ಭಾರತದ ಬಗ್ಗೆ ಸಕಾರಾತ್ಮಕ ಅಭಿಪ್ರಾಯ ಹೊರ ಬಂದಿತ್ತು. ಯುರೋಪಿಯನ್ನರಿಗೆ ಭಾರತದ ಬಗ್ಗೆ ಸಕಾರಾತ್ಮಕ ಅಭಿಪ್ರಾಯವಿತ್ತು. 15 ವರ್ಷಗಳ ನಂತರ ಯುರೋಪಿಯನ್ ರಾಷ್ಟ್ರಗಳಲ್ಲಿ ಸುಮಾರು 10 ಶೇಕಡಾ ಪಾಯಿಂಟ್‌ಗಳ ಗಮನಾರ್ಹ ಕುಸಿತ ಕಂಡುಬಂದಿದೆ. 2008ರಲ್ಲಿ ಫ್ರಾನ್ಸ್‌ನಲ್ಲಿ 70% ವಯಸ್ಕರು ಭಾರತದ ಬಗ್ಗೆ ಉತ್ತಮ ಅಭಿಪ್ರಾಯ ಹೊಂದಿದ್ದರು. 2023ಕ್ಕೆ ಇದರ ಅಂಕಿ-ಅಂಶಗಳು 39%ಕ್ಕೆ ಇಳಿಕೆಯಾಗಿದೆ.

ಯುನೈಟೆಡ್ ಸ್ಟೇಟ್ಸ್‌ನಲ್ಲಿ 2008ರಲ್ಲಿ 63% ಜನರು ಭಾರತದ ಬಗ್ಗೆ ಅನುಕೂಲಕರ ದೃಷ್ಟಿಕೋನವನ್ನು ಹೊಂದಿದ್ದರು ಇದು 2023ರಲ್ಲಿ 51%ಕ್ಕೆ ಇಳಿದಿದೆ. ಕಳೆದ ವರ್ಷದ ಸಮೀಕ್ಷೆಯ ಪ್ರಕಾರ, ಕೇವಲ 23% ಅಮೆರಿಕನ್ನರು ಜಾಗತಿಕ ಮಟ್ಟದಲ್ಲಿ ಭಾರತದ ಪ್ರಭಾವವು ಇದೆ ಎಂದು ನಂಬಿದ್ದರು. ಸುಮಾರು 40% ಅಮೆರಿಕನ್ನರು 2023ರಲ್ಲಿ ಮೋದಿಯ ಬಗ್ಗೆ ನಾವು ಕೇಳಿಲ್ಲ ಎಂದು ಹೇಳಿದ್ದಾರೆ. 37% ಅಮೆರಿಕನ್ನರು  ಮೋದಿಯ ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯದ ಬಗೆಗಿನ ವಿಶ್ವಾಸ ಸ್ವಲ್ಪ ಇದೆ ಅಥವಾ ಇಲ್ಲ ಎಂಬ ಪ್ರತಿಕ್ರಿಯೆಯನ್ನು ನೀಡಿದ್ದಾರೆ.

ಮಾರ್ಚ್ 2024ರ ಯುಗೋವ್ ಸಮೀಕ್ಷೆಯ ಅತ್ಯಂತ ಜನಪ್ರಿಯ ವಿದೇಶಿ ರಾಜಕಾರಣಿಯ ಪಟ್ಟಿಯಲ್ಲಿ ಮೋದಿ 26ನೇ ಸ್ಥಾನದಲ್ಲಿದ್ದಾರೆ. ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರಿಗಿಂತ ಮೋದಿ ಹಿಂದಿದ್ದಾರೆ.  ಸಮೀಕ್ಷೆಯ ಪ್ರಕಾರ, 51% ಅಮೆರಿಕನ್ನರು ಮೋದಿಯವರ ಬಗ್ಗೆ ಕೇಳಿದ್ದಾರೆ. ಅವರಲ್ಲಿ ಕೇವಲ 22% ಜನರು ಮಾತ್ರ ಅವರ ಬಗ್ಗೆ ಸಕಾರಾತ್ಮಕ ದೃಷ್ಟಿಕೋನವನ್ನು ಹೊಂದಿದ್ದಾರೆ.

GlobeScan ನಡೆಸಿದ ಇತ್ತೀಚಿನ ಆನ್‌ಲೈನ್ ಸಮೀಕ್ಷೆಯಲ್ಲಿ 84% ರಷ್ಟು ಜನರು ಮೋದಿ ಸರ್ಕಾರ ಮಾನವ ಹಕ್ಕುಗಳ ಬಗ್ಗೆ ಸಮರ್ಥಿಸಬೇಕೆಂದು ನಂಬುತ್ತಾರೆ. ಸುಮಾರು 90% ರಷ್ಟು ಅಮೆರಿಕಾದಲ್ಲಿ ಸಿಖ್‌ ಪ್ರತ್ಯೇಕತಾವಾದಿ ನಾಯಕ ಪನ್ನೂನ್‌ ಹತ್ಯೆ ಸಂಚಿನ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಮೋದಿ ಜಗತ್ತಿನಲ್ಲಿ ಪ್ರಭಾವ ಬೀರಿದ್ದಾರೆಂದು ಭ್ರಮೆ ಹರಡುವಲ್ಲಿ ಭಾರತೀಯ ಮಾಧ್ಯಮಗಳು ಸಹಭಾಗಿತ್ವವನ್ನು ಹೊಂದಿರಬಹುದು ಎಂದು ವರದಿಯು ಹೇಳಿದೆ, ಮಾನವ ಹಕ್ಕುಗಳು ಮತ್ತು ಪ್ರಜಾಸತ್ತಾತ್ಮಕ ಮಾನದಂಡಗಳಿಗೆ ಹೆಚ್ಚಿನ ಗೌರವದ ಕಡೆಗೆ ತನ್ನ ಮಾರ್ಗವನ್ನು ಬದಲಾಯಿಸಿದರೆ ಜಾಗತಿಕವಾಗಿ ಭಾರತದ ಪ್ರಭಾವವು ತ್ವರಿತವಾಗಿ ಬದಲಾಗಬಹುದು ಎಂದು ಲೇಖಕರು ಹೇಳಿದ್ದಾರೆ.

ಇದನ್ನು ಓದಿ: ಬಿಎಸ್ಪಿ ಉತ್ತರಾಧಿಕಾರಿ ಸ್ಥಾನದಿಂದ ಸೋದರಳಿಯ ಆಕಾಶ್ ಆನಂದ್‌ಗೆ ವಜಾ ಮಾಡಿದ ಮಾಯಾವತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...