Homeಮುಖಪುಟಹೆಸರಿಗಷ್ಟೇ ಆಯ್ತು ಮೋದಿಯ ‘ಉಜ್ವಲಾ’, ನಿಲ್ಲಲೇ ಇಲ್ಲ ಒಲೆ ಮುಂದೆ ಝಳ ಝಳ!

ಹೆಸರಿಗಷ್ಟೇ ಆಯ್ತು ಮೋದಿಯ ‘ಉಜ್ವಲಾ’, ನಿಲ್ಲಲೇ ಇಲ್ಲ ಒಲೆ ಮುಂದೆ ಝಳ ಝಳ!

- Advertisement -
- Advertisement -
ಈ ಚಿತ್ರ ಉಜ್ವಾಲ ಯೋಜನೆಯ ಬಗ್ಗೆ ಏನು ಹೇಳುತ್ತದೆ

ಚುನಾವಣಾ ಪ್ರಚಾರದಲ್ಲಿ ಹಾಲಿ ಬಿಜೆಪಿಯ ಎಂಪಿಗಳು ‘ಉಜ್ವಲಾ’ ಯೋಜನೆ ಬಗ್ಗೆ ವಿಪರೀತವಾಗಿ ಬಡಾಯಿ ಕೊಚ್ಚಿಕೊಳ್ಳುತ್ತಿದ್ದಾರೆ. ಆದರೆ ಸುಮ್ಮನೆ ಹೆಸರಿಗಷ್ಟೇ ಎಂಬಂತೆ ಆಗಿರುವ ಈ ಯೋಜನೆ ಬಡವರನ್ನು ಒಂದು ರೀತಿಯಲ್ಲಿ ಅವಮಾನಿಸುತ್ತಲೂ ಇದೆ. ಫಲಾನುಭವಿಗಳ ಪೈಕಿ ಶೇ. 85ರಷ್ಟು ಕುಟುಂಬಗಳು ಈಗಲೂ ಸೌದೆ ಒಲೆ, ಸೀಮೆಎಣ್ಣೆ ಸ್ಟವ್‍ಗಳನ್ನೇ ಆಶ್ರಯಿಸಿವೆ. ಬಡವರ ಆದಾಯ ಹೆಚ್ಚಿಸುವ ಯಾವ ದೊಡ್ಡ ಯೋಜನೆಯನ್ನು ಜಾರಿಗೆ ತರದ ಸರ್ಕಾರ, ಬಡ ಕುಟುಂಬಗಳು 800-1000 ತೆತ್ತು ಗ್ಯಾಸ್ ರಿಫಿಲ್ ಮಾಡಬೇಕೆಂದು ಬಯಸುತ್ತಿದೆ. ಮೋದಿ ಸರ್ಕಾರದ ಮೂರ್ಖತನದ ಯೋಜನೆಗಳಿಗೆ ಈ ‘ಉಜ್ವಲಾ’ ಸ್ಕೀಮ್ ಕೂಡ ಒಂದು ಸಾಕ್ಷಿ.

ಆಗಾಗ, ಹಲವಾರು ಸಂಘಸಂಸ್ಥೆಗಳು ಇದರ ವೈಫಲ್ಯದ ಬಗ್ಗೆ ಧ್ವನಿ ಎತ್ತುತ್ತಲೇ ಬಂದಿವೆ. ಈಗ ‘ರಿಸರ್ಚ್ ಇನ್ಸ್ಟಿಟ್ಯೂಟ್ ಫಾರ್ ಕಂಪಾಸಿನೇಟ್ ಎಕಾನಮಿ’ ( RICE ) ನಾಲ್ಕು ರಾಜ್ಯಗಳಲ್ಲಿ ಅಧ್ಯಯನ ಮಾಡಿದ್ದು, ‘ಉಜ್ವಲಾ’ ಫಲಾನುಭವಿಗಳ ಪೈಕಿ ಶೇ. 85ರಷ್ಟು ಕುಟುಂಬಗಳು ಈಗಲೂ ಸೌದೆ ಒಲೆಯನ್ನೇ ಉಪಯೋಗಿಸುತ್ತಿವೆ. ಗ್ಯಾಸ್ ಸ್ಟವ್ ಕೊಟ್ಟು ಕೈ ತೊಳೆದುಕೊಂಡ ಮೋದಿ ಸರ್ಕಾರ, ಗ್ಯಾಸ್ ರಿಫಿಲ್ ಬಗ್ಗೆ ಎಂದೂ, ಇಂದಿಗೂ ಯೋಚಿಸಲೇ ಇಲ್ಲ. ಜೊತೆಗೆ ಸಿಲಿಂಡರ್ ದರದಲ್ಲೂ ಏರಿಕೆ ಮಾಡುತ್ತಲೇ ಬಂದಿತು.

ಮಧ್ಯ ಪ್ರದೇಶ, ರಾಜಸ್ಥಾನ, ಉತ್ತರಪ್ರದೇಶ ಮತ್ತು ಬಿಹಾರ್‍ಗಳಲ್ಲಿ ಈ ಅಧ್ಯಯನ ಮಾಡಲಾಗಿದ್ದು, ಬಹಳಷ್ಟು ಕುಟುಂಬಗಳು ಗ್ಯಾಸ್ ರಿಫಿಲ್ ಮಾಡಿಸಿಕೊಳ್ಳುವ ಆರ್ಥಿಕ ಸಾಮಥ್ರ್ಯ ಹೊಂದಿಲ್ಲ ಎಂಬುದು ಪತ್ತೆಯಾಗಿದೆ. ದೇಶದ ಇತರ ಭಾಗಗಳಲ್ಲೂ ಇಂಥದೇ ಪರಿಸ್ಥಿತಿಯಿದೆ. ಇದರಿಂದಾಗಿ, ಒಲೆ ಮುಂದೆ ಊದುತ್ತ, ಕೆಮ್ಮುತ್ತ ಬೆಂಕಿಯ ಝಳದ ಎದುರು ಮಹಿಳೆಯರು ಹೈರಾಣಾಗುತ್ತಿದ್ದಾರೆ. ಸೌದೆ ಒಲೆ ಬಳಕೆಯಿಂದ ಸಹಜವಾಗಿ ಮನೆಯೊಳಗೆ ವಾಯುಮಾಲಿನ್ಯ ಸಂಭವಿಸುತ್ತಿದೆ. ಇದಕ್ಕೆ ನವಜಾತ ಶಿಶುಗಳು ಪ್ರಾಣವನ್ನೂ ತೆರುತ್ತಿವೆ.

2016ರಲ್ಲಿ ಮೋದಿ ಸರ್ಕಾರ ಭಾರಿ ಸದ್ದಿನೊಂದಿಗೆ ‘ಉಜ್ವಲಾ’ ಯೋಜನೆಯನ್ನು ಆರಂಭಿಸಿತು. ಒಂದು ಗ್ಯಾಸ್ ಸಿಲಿಂಡರ್, ರೆಗುಲೇಟರ್ ಮತ್ತು ಪೈಪ್‍ಗಳನ್ನು ಈ ಯೋಜನೆಯ ಫಲಾನುಭವಿಗಳಿಗೆ ಉಚಿತವಾಗಿ ನೀಡಲಾಗುತ್ತದೆ. ಅಲ್ಲಿಗೆ ಮುಗಿಯಿತು. ಸ್ಟವ್ ಖರೀದಿಸಬೇಕು, ಮೊದಲ ಸಿಲಿಂಡರ್ ಮುಗಿದ ನಂತರ ರಿಫಿಲ್ ಮಾಡಿಸುವ ತಾಪತ್ರಯ ಶುರು. ಅಧ್ಯಯನ ಮಾಡಿದ 4 ರಾಜ್ಯಗಳಲ್ಲಿ ಎಲ್‍ಪಿಜಿ ಹೊಂದಿರುವವರ ಸಂಖ್ಯೆ ಗಣನೀಯವಾಗಿ ಏರಿದೆ ನಿಜ. ಆದರೆ ಉಜ್ವಲಾ ಯೋಜನೆಯಲ್ಲಿ ಎಲ್‍ಪಿಜಿ ಸಂಪರ್ಕ ಪಡೆದ ಶೇ. 85ರಷ್ಟು ಜನರು ಈಗಲೂ ಸೌದೆ ಒಲೆ, ಸೀಮೆ ಎಣ್ಣೆ ಸ್ಟವ್‍ಗಳನ್ನೇ ಬಳಸುತ್ತಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್

ಆನತೆಯ ಆದಾಯ ಹೆಚ್ಚಿಸುವುದು ಇರಲಿ, ನೋಟ್‍ಬ್ಯಾನ್‍ನಂತಹ ಕ್ರಮಗಳಿಂದ ಬಡವರ ಆದಾಯವನ್ನು ತಗ್ಗಿಸಿದ ಈ ಮೂರ್ಖ ಸರ್ಕಾರ ಜನ ಗ್ಯಾಸ್ ರಿಫಿಲ್ ಮಾಡಿಸಿಕೊಳ್ಳಬೇಕು ಎನ್ನುತ್ತದೆ. ಇದು ಕ್ರೂರ ಮತ್ತು ಅಮಾನವೀಯ ಅಲ್ಲವೇ ಮೋದೀಜಿ?

ಆಧಾರ: ದಿ ಹಿಂದೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...