Homeಮುಖಪುಟಹೆಸರಿಗಷ್ಟೇ ಆಯ್ತು ಮೋದಿಯ ‘ಉಜ್ವಲಾ’, ನಿಲ್ಲಲೇ ಇಲ್ಲ ಒಲೆ ಮುಂದೆ ಝಳ ಝಳ!

ಹೆಸರಿಗಷ್ಟೇ ಆಯ್ತು ಮೋದಿಯ ‘ಉಜ್ವಲಾ’, ನಿಲ್ಲಲೇ ಇಲ್ಲ ಒಲೆ ಮುಂದೆ ಝಳ ಝಳ!

- Advertisement -
- Advertisement -
ಈ ಚಿತ್ರ ಉಜ್ವಾಲ ಯೋಜನೆಯ ಬಗ್ಗೆ ಏನು ಹೇಳುತ್ತದೆ

ಚುನಾವಣಾ ಪ್ರಚಾರದಲ್ಲಿ ಹಾಲಿ ಬಿಜೆಪಿಯ ಎಂಪಿಗಳು ‘ಉಜ್ವಲಾ’ ಯೋಜನೆ ಬಗ್ಗೆ ವಿಪರೀತವಾಗಿ ಬಡಾಯಿ ಕೊಚ್ಚಿಕೊಳ್ಳುತ್ತಿದ್ದಾರೆ. ಆದರೆ ಸುಮ್ಮನೆ ಹೆಸರಿಗಷ್ಟೇ ಎಂಬಂತೆ ಆಗಿರುವ ಈ ಯೋಜನೆ ಬಡವರನ್ನು ಒಂದು ರೀತಿಯಲ್ಲಿ ಅವಮಾನಿಸುತ್ತಲೂ ಇದೆ. ಫಲಾನುಭವಿಗಳ ಪೈಕಿ ಶೇ. 85ರಷ್ಟು ಕುಟುಂಬಗಳು ಈಗಲೂ ಸೌದೆ ಒಲೆ, ಸೀಮೆಎಣ್ಣೆ ಸ್ಟವ್‍ಗಳನ್ನೇ ಆಶ್ರಯಿಸಿವೆ. ಬಡವರ ಆದಾಯ ಹೆಚ್ಚಿಸುವ ಯಾವ ದೊಡ್ಡ ಯೋಜನೆಯನ್ನು ಜಾರಿಗೆ ತರದ ಸರ್ಕಾರ, ಬಡ ಕುಟುಂಬಗಳು 800-1000 ತೆತ್ತು ಗ್ಯಾಸ್ ರಿಫಿಲ್ ಮಾಡಬೇಕೆಂದು ಬಯಸುತ್ತಿದೆ. ಮೋದಿ ಸರ್ಕಾರದ ಮೂರ್ಖತನದ ಯೋಜನೆಗಳಿಗೆ ಈ ‘ಉಜ್ವಲಾ’ ಸ್ಕೀಮ್ ಕೂಡ ಒಂದು ಸಾಕ್ಷಿ.

ಆಗಾಗ, ಹಲವಾರು ಸಂಘಸಂಸ್ಥೆಗಳು ಇದರ ವೈಫಲ್ಯದ ಬಗ್ಗೆ ಧ್ವನಿ ಎತ್ತುತ್ತಲೇ ಬಂದಿವೆ. ಈಗ ‘ರಿಸರ್ಚ್ ಇನ್ಸ್ಟಿಟ್ಯೂಟ್ ಫಾರ್ ಕಂಪಾಸಿನೇಟ್ ಎಕಾನಮಿ’ ( RICE ) ನಾಲ್ಕು ರಾಜ್ಯಗಳಲ್ಲಿ ಅಧ್ಯಯನ ಮಾಡಿದ್ದು, ‘ಉಜ್ವಲಾ’ ಫಲಾನುಭವಿಗಳ ಪೈಕಿ ಶೇ. 85ರಷ್ಟು ಕುಟುಂಬಗಳು ಈಗಲೂ ಸೌದೆ ಒಲೆಯನ್ನೇ ಉಪಯೋಗಿಸುತ್ತಿವೆ. ಗ್ಯಾಸ್ ಸ್ಟವ್ ಕೊಟ್ಟು ಕೈ ತೊಳೆದುಕೊಂಡ ಮೋದಿ ಸರ್ಕಾರ, ಗ್ಯಾಸ್ ರಿಫಿಲ್ ಬಗ್ಗೆ ಎಂದೂ, ಇಂದಿಗೂ ಯೋಚಿಸಲೇ ಇಲ್ಲ. ಜೊತೆಗೆ ಸಿಲಿಂಡರ್ ದರದಲ್ಲೂ ಏರಿಕೆ ಮಾಡುತ್ತಲೇ ಬಂದಿತು.

ಮಧ್ಯ ಪ್ರದೇಶ, ರಾಜಸ್ಥಾನ, ಉತ್ತರಪ್ರದೇಶ ಮತ್ತು ಬಿಹಾರ್‍ಗಳಲ್ಲಿ ಈ ಅಧ್ಯಯನ ಮಾಡಲಾಗಿದ್ದು, ಬಹಳಷ್ಟು ಕುಟುಂಬಗಳು ಗ್ಯಾಸ್ ರಿಫಿಲ್ ಮಾಡಿಸಿಕೊಳ್ಳುವ ಆರ್ಥಿಕ ಸಾಮಥ್ರ್ಯ ಹೊಂದಿಲ್ಲ ಎಂಬುದು ಪತ್ತೆಯಾಗಿದೆ. ದೇಶದ ಇತರ ಭಾಗಗಳಲ್ಲೂ ಇಂಥದೇ ಪರಿಸ್ಥಿತಿಯಿದೆ. ಇದರಿಂದಾಗಿ, ಒಲೆ ಮುಂದೆ ಊದುತ್ತ, ಕೆಮ್ಮುತ್ತ ಬೆಂಕಿಯ ಝಳದ ಎದುರು ಮಹಿಳೆಯರು ಹೈರಾಣಾಗುತ್ತಿದ್ದಾರೆ. ಸೌದೆ ಒಲೆ ಬಳಕೆಯಿಂದ ಸಹಜವಾಗಿ ಮನೆಯೊಳಗೆ ವಾಯುಮಾಲಿನ್ಯ ಸಂಭವಿಸುತ್ತಿದೆ. ಇದಕ್ಕೆ ನವಜಾತ ಶಿಶುಗಳು ಪ್ರಾಣವನ್ನೂ ತೆರುತ್ತಿವೆ.

2016ರಲ್ಲಿ ಮೋದಿ ಸರ್ಕಾರ ಭಾರಿ ಸದ್ದಿನೊಂದಿಗೆ ‘ಉಜ್ವಲಾ’ ಯೋಜನೆಯನ್ನು ಆರಂಭಿಸಿತು. ಒಂದು ಗ್ಯಾಸ್ ಸಿಲಿಂಡರ್, ರೆಗುಲೇಟರ್ ಮತ್ತು ಪೈಪ್‍ಗಳನ್ನು ಈ ಯೋಜನೆಯ ಫಲಾನುಭವಿಗಳಿಗೆ ಉಚಿತವಾಗಿ ನೀಡಲಾಗುತ್ತದೆ. ಅಲ್ಲಿಗೆ ಮುಗಿಯಿತು. ಸ್ಟವ್ ಖರೀದಿಸಬೇಕು, ಮೊದಲ ಸಿಲಿಂಡರ್ ಮುಗಿದ ನಂತರ ರಿಫಿಲ್ ಮಾಡಿಸುವ ತಾಪತ್ರಯ ಶುರು. ಅಧ್ಯಯನ ಮಾಡಿದ 4 ರಾಜ್ಯಗಳಲ್ಲಿ ಎಲ್‍ಪಿಜಿ ಹೊಂದಿರುವವರ ಸಂಖ್ಯೆ ಗಣನೀಯವಾಗಿ ಏರಿದೆ ನಿಜ. ಆದರೆ ಉಜ್ವಲಾ ಯೋಜನೆಯಲ್ಲಿ ಎಲ್‍ಪಿಜಿ ಸಂಪರ್ಕ ಪಡೆದ ಶೇ. 85ರಷ್ಟು ಜನರು ಈಗಲೂ ಸೌದೆ ಒಲೆ, ಸೀಮೆ ಎಣ್ಣೆ ಸ್ಟವ್‍ಗಳನ್ನೇ ಬಳಸುತ್ತಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್

ಆನತೆಯ ಆದಾಯ ಹೆಚ್ಚಿಸುವುದು ಇರಲಿ, ನೋಟ್‍ಬ್ಯಾನ್‍ನಂತಹ ಕ್ರಮಗಳಿಂದ ಬಡವರ ಆದಾಯವನ್ನು ತಗ್ಗಿಸಿದ ಈ ಮೂರ್ಖ ಸರ್ಕಾರ ಜನ ಗ್ಯಾಸ್ ರಿಫಿಲ್ ಮಾಡಿಸಿಕೊಳ್ಳಬೇಕು ಎನ್ನುತ್ತದೆ. ಇದು ಕ್ರೂರ ಮತ್ತು ಅಮಾನವೀಯ ಅಲ್ಲವೇ ಮೋದೀಜಿ?

ಆಧಾರ: ದಿ ಹಿಂದೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...