Homeಮುಖಪುಟಹೆಸರಿಗಷ್ಟೇ ಆಯ್ತು ಮೋದಿಯ ‘ಉಜ್ವಲಾ’, ನಿಲ್ಲಲೇ ಇಲ್ಲ ಒಲೆ ಮುಂದೆ ಝಳ ಝಳ!

ಹೆಸರಿಗಷ್ಟೇ ಆಯ್ತು ಮೋದಿಯ ‘ಉಜ್ವಲಾ’, ನಿಲ್ಲಲೇ ಇಲ್ಲ ಒಲೆ ಮುಂದೆ ಝಳ ಝಳ!

- Advertisement -
- Advertisement -
ಈ ಚಿತ್ರ ಉಜ್ವಾಲ ಯೋಜನೆಯ ಬಗ್ಗೆ ಏನು ಹೇಳುತ್ತದೆ

ಚುನಾವಣಾ ಪ್ರಚಾರದಲ್ಲಿ ಹಾಲಿ ಬಿಜೆಪಿಯ ಎಂಪಿಗಳು ‘ಉಜ್ವಲಾ’ ಯೋಜನೆ ಬಗ್ಗೆ ವಿಪರೀತವಾಗಿ ಬಡಾಯಿ ಕೊಚ್ಚಿಕೊಳ್ಳುತ್ತಿದ್ದಾರೆ. ಆದರೆ ಸುಮ್ಮನೆ ಹೆಸರಿಗಷ್ಟೇ ಎಂಬಂತೆ ಆಗಿರುವ ಈ ಯೋಜನೆ ಬಡವರನ್ನು ಒಂದು ರೀತಿಯಲ್ಲಿ ಅವಮಾನಿಸುತ್ತಲೂ ಇದೆ. ಫಲಾನುಭವಿಗಳ ಪೈಕಿ ಶೇ. 85ರಷ್ಟು ಕುಟುಂಬಗಳು ಈಗಲೂ ಸೌದೆ ಒಲೆ, ಸೀಮೆಎಣ್ಣೆ ಸ್ಟವ್‍ಗಳನ್ನೇ ಆಶ್ರಯಿಸಿವೆ. ಬಡವರ ಆದಾಯ ಹೆಚ್ಚಿಸುವ ಯಾವ ದೊಡ್ಡ ಯೋಜನೆಯನ್ನು ಜಾರಿಗೆ ತರದ ಸರ್ಕಾರ, ಬಡ ಕುಟುಂಬಗಳು 800-1000 ತೆತ್ತು ಗ್ಯಾಸ್ ರಿಫಿಲ್ ಮಾಡಬೇಕೆಂದು ಬಯಸುತ್ತಿದೆ. ಮೋದಿ ಸರ್ಕಾರದ ಮೂರ್ಖತನದ ಯೋಜನೆಗಳಿಗೆ ಈ ‘ಉಜ್ವಲಾ’ ಸ್ಕೀಮ್ ಕೂಡ ಒಂದು ಸಾಕ್ಷಿ.

ಆಗಾಗ, ಹಲವಾರು ಸಂಘಸಂಸ್ಥೆಗಳು ಇದರ ವೈಫಲ್ಯದ ಬಗ್ಗೆ ಧ್ವನಿ ಎತ್ತುತ್ತಲೇ ಬಂದಿವೆ. ಈಗ ‘ರಿಸರ್ಚ್ ಇನ್ಸ್ಟಿಟ್ಯೂಟ್ ಫಾರ್ ಕಂಪಾಸಿನೇಟ್ ಎಕಾನಮಿ’ ( RICE ) ನಾಲ್ಕು ರಾಜ್ಯಗಳಲ್ಲಿ ಅಧ್ಯಯನ ಮಾಡಿದ್ದು, ‘ಉಜ್ವಲಾ’ ಫಲಾನುಭವಿಗಳ ಪೈಕಿ ಶೇ. 85ರಷ್ಟು ಕುಟುಂಬಗಳು ಈಗಲೂ ಸೌದೆ ಒಲೆಯನ್ನೇ ಉಪಯೋಗಿಸುತ್ತಿವೆ. ಗ್ಯಾಸ್ ಸ್ಟವ್ ಕೊಟ್ಟು ಕೈ ತೊಳೆದುಕೊಂಡ ಮೋದಿ ಸರ್ಕಾರ, ಗ್ಯಾಸ್ ರಿಫಿಲ್ ಬಗ್ಗೆ ಎಂದೂ, ಇಂದಿಗೂ ಯೋಚಿಸಲೇ ಇಲ್ಲ. ಜೊತೆಗೆ ಸಿಲಿಂಡರ್ ದರದಲ್ಲೂ ಏರಿಕೆ ಮಾಡುತ್ತಲೇ ಬಂದಿತು.

ಮಧ್ಯ ಪ್ರದೇಶ, ರಾಜಸ್ಥಾನ, ಉತ್ತರಪ್ರದೇಶ ಮತ್ತು ಬಿಹಾರ್‍ಗಳಲ್ಲಿ ಈ ಅಧ್ಯಯನ ಮಾಡಲಾಗಿದ್ದು, ಬಹಳಷ್ಟು ಕುಟುಂಬಗಳು ಗ್ಯಾಸ್ ರಿಫಿಲ್ ಮಾಡಿಸಿಕೊಳ್ಳುವ ಆರ್ಥಿಕ ಸಾಮಥ್ರ್ಯ ಹೊಂದಿಲ್ಲ ಎಂಬುದು ಪತ್ತೆಯಾಗಿದೆ. ದೇಶದ ಇತರ ಭಾಗಗಳಲ್ಲೂ ಇಂಥದೇ ಪರಿಸ್ಥಿತಿಯಿದೆ. ಇದರಿಂದಾಗಿ, ಒಲೆ ಮುಂದೆ ಊದುತ್ತ, ಕೆಮ್ಮುತ್ತ ಬೆಂಕಿಯ ಝಳದ ಎದುರು ಮಹಿಳೆಯರು ಹೈರಾಣಾಗುತ್ತಿದ್ದಾರೆ. ಸೌದೆ ಒಲೆ ಬಳಕೆಯಿಂದ ಸಹಜವಾಗಿ ಮನೆಯೊಳಗೆ ವಾಯುಮಾಲಿನ್ಯ ಸಂಭವಿಸುತ್ತಿದೆ. ಇದಕ್ಕೆ ನವಜಾತ ಶಿಶುಗಳು ಪ್ರಾಣವನ್ನೂ ತೆರುತ್ತಿವೆ.

2016ರಲ್ಲಿ ಮೋದಿ ಸರ್ಕಾರ ಭಾರಿ ಸದ್ದಿನೊಂದಿಗೆ ‘ಉಜ್ವಲಾ’ ಯೋಜನೆಯನ್ನು ಆರಂಭಿಸಿತು. ಒಂದು ಗ್ಯಾಸ್ ಸಿಲಿಂಡರ್, ರೆಗುಲೇಟರ್ ಮತ್ತು ಪೈಪ್‍ಗಳನ್ನು ಈ ಯೋಜನೆಯ ಫಲಾನುಭವಿಗಳಿಗೆ ಉಚಿತವಾಗಿ ನೀಡಲಾಗುತ್ತದೆ. ಅಲ್ಲಿಗೆ ಮುಗಿಯಿತು. ಸ್ಟವ್ ಖರೀದಿಸಬೇಕು, ಮೊದಲ ಸಿಲಿಂಡರ್ ಮುಗಿದ ನಂತರ ರಿಫಿಲ್ ಮಾಡಿಸುವ ತಾಪತ್ರಯ ಶುರು. ಅಧ್ಯಯನ ಮಾಡಿದ 4 ರಾಜ್ಯಗಳಲ್ಲಿ ಎಲ್‍ಪಿಜಿ ಹೊಂದಿರುವವರ ಸಂಖ್ಯೆ ಗಣನೀಯವಾಗಿ ಏರಿದೆ ನಿಜ. ಆದರೆ ಉಜ್ವಲಾ ಯೋಜನೆಯಲ್ಲಿ ಎಲ್‍ಪಿಜಿ ಸಂಪರ್ಕ ಪಡೆದ ಶೇ. 85ರಷ್ಟು ಜನರು ಈಗಲೂ ಸೌದೆ ಒಲೆ, ಸೀಮೆ ಎಣ್ಣೆ ಸ್ಟವ್‍ಗಳನ್ನೇ ಬಳಸುತ್ತಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್

ಆನತೆಯ ಆದಾಯ ಹೆಚ್ಚಿಸುವುದು ಇರಲಿ, ನೋಟ್‍ಬ್ಯಾನ್‍ನಂತಹ ಕ್ರಮಗಳಿಂದ ಬಡವರ ಆದಾಯವನ್ನು ತಗ್ಗಿಸಿದ ಈ ಮೂರ್ಖ ಸರ್ಕಾರ ಜನ ಗ್ಯಾಸ್ ರಿಫಿಲ್ ಮಾಡಿಸಿಕೊಳ್ಳಬೇಕು ಎನ್ನುತ್ತದೆ. ಇದು ಕ್ರೂರ ಮತ್ತು ಅಮಾನವೀಯ ಅಲ್ಲವೇ ಮೋದೀಜಿ?

ಆಧಾರ: ದಿ ಹಿಂದೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...