Homeಮುಖಪುಟಹೆಸರಿಗಷ್ಟೇ ಆಯ್ತು ಮೋದಿಯ ‘ಉಜ್ವಲಾ’, ನಿಲ್ಲಲೇ ಇಲ್ಲ ಒಲೆ ಮುಂದೆ ಝಳ ಝಳ!

ಹೆಸರಿಗಷ್ಟೇ ಆಯ್ತು ಮೋದಿಯ ‘ಉಜ್ವಲಾ’, ನಿಲ್ಲಲೇ ಇಲ್ಲ ಒಲೆ ಮುಂದೆ ಝಳ ಝಳ!

- Advertisement -
- Advertisement -
ಈ ಚಿತ್ರ ಉಜ್ವಾಲ ಯೋಜನೆಯ ಬಗ್ಗೆ ಏನು ಹೇಳುತ್ತದೆ

ಚುನಾವಣಾ ಪ್ರಚಾರದಲ್ಲಿ ಹಾಲಿ ಬಿಜೆಪಿಯ ಎಂಪಿಗಳು ‘ಉಜ್ವಲಾ’ ಯೋಜನೆ ಬಗ್ಗೆ ವಿಪರೀತವಾಗಿ ಬಡಾಯಿ ಕೊಚ್ಚಿಕೊಳ್ಳುತ್ತಿದ್ದಾರೆ. ಆದರೆ ಸುಮ್ಮನೆ ಹೆಸರಿಗಷ್ಟೇ ಎಂಬಂತೆ ಆಗಿರುವ ಈ ಯೋಜನೆ ಬಡವರನ್ನು ಒಂದು ರೀತಿಯಲ್ಲಿ ಅವಮಾನಿಸುತ್ತಲೂ ಇದೆ. ಫಲಾನುಭವಿಗಳ ಪೈಕಿ ಶೇ. 85ರಷ್ಟು ಕುಟುಂಬಗಳು ಈಗಲೂ ಸೌದೆ ಒಲೆ, ಸೀಮೆಎಣ್ಣೆ ಸ್ಟವ್‍ಗಳನ್ನೇ ಆಶ್ರಯಿಸಿವೆ. ಬಡವರ ಆದಾಯ ಹೆಚ್ಚಿಸುವ ಯಾವ ದೊಡ್ಡ ಯೋಜನೆಯನ್ನು ಜಾರಿಗೆ ತರದ ಸರ್ಕಾರ, ಬಡ ಕುಟುಂಬಗಳು 800-1000 ತೆತ್ತು ಗ್ಯಾಸ್ ರಿಫಿಲ್ ಮಾಡಬೇಕೆಂದು ಬಯಸುತ್ತಿದೆ. ಮೋದಿ ಸರ್ಕಾರದ ಮೂರ್ಖತನದ ಯೋಜನೆಗಳಿಗೆ ಈ ‘ಉಜ್ವಲಾ’ ಸ್ಕೀಮ್ ಕೂಡ ಒಂದು ಸಾಕ್ಷಿ.

ಆಗಾಗ, ಹಲವಾರು ಸಂಘಸಂಸ್ಥೆಗಳು ಇದರ ವೈಫಲ್ಯದ ಬಗ್ಗೆ ಧ್ವನಿ ಎತ್ತುತ್ತಲೇ ಬಂದಿವೆ. ಈಗ ‘ರಿಸರ್ಚ್ ಇನ್ಸ್ಟಿಟ್ಯೂಟ್ ಫಾರ್ ಕಂಪಾಸಿನೇಟ್ ಎಕಾನಮಿ’ ( RICE ) ನಾಲ್ಕು ರಾಜ್ಯಗಳಲ್ಲಿ ಅಧ್ಯಯನ ಮಾಡಿದ್ದು, ‘ಉಜ್ವಲಾ’ ಫಲಾನುಭವಿಗಳ ಪೈಕಿ ಶೇ. 85ರಷ್ಟು ಕುಟುಂಬಗಳು ಈಗಲೂ ಸೌದೆ ಒಲೆಯನ್ನೇ ಉಪಯೋಗಿಸುತ್ತಿವೆ. ಗ್ಯಾಸ್ ಸ್ಟವ್ ಕೊಟ್ಟು ಕೈ ತೊಳೆದುಕೊಂಡ ಮೋದಿ ಸರ್ಕಾರ, ಗ್ಯಾಸ್ ರಿಫಿಲ್ ಬಗ್ಗೆ ಎಂದೂ, ಇಂದಿಗೂ ಯೋಚಿಸಲೇ ಇಲ್ಲ. ಜೊತೆಗೆ ಸಿಲಿಂಡರ್ ದರದಲ್ಲೂ ಏರಿಕೆ ಮಾಡುತ್ತಲೇ ಬಂದಿತು.

ಮಧ್ಯ ಪ್ರದೇಶ, ರಾಜಸ್ಥಾನ, ಉತ್ತರಪ್ರದೇಶ ಮತ್ತು ಬಿಹಾರ್‍ಗಳಲ್ಲಿ ಈ ಅಧ್ಯಯನ ಮಾಡಲಾಗಿದ್ದು, ಬಹಳಷ್ಟು ಕುಟುಂಬಗಳು ಗ್ಯಾಸ್ ರಿಫಿಲ್ ಮಾಡಿಸಿಕೊಳ್ಳುವ ಆರ್ಥಿಕ ಸಾಮಥ್ರ್ಯ ಹೊಂದಿಲ್ಲ ಎಂಬುದು ಪತ್ತೆಯಾಗಿದೆ. ದೇಶದ ಇತರ ಭಾಗಗಳಲ್ಲೂ ಇಂಥದೇ ಪರಿಸ್ಥಿತಿಯಿದೆ. ಇದರಿಂದಾಗಿ, ಒಲೆ ಮುಂದೆ ಊದುತ್ತ, ಕೆಮ್ಮುತ್ತ ಬೆಂಕಿಯ ಝಳದ ಎದುರು ಮಹಿಳೆಯರು ಹೈರಾಣಾಗುತ್ತಿದ್ದಾರೆ. ಸೌದೆ ಒಲೆ ಬಳಕೆಯಿಂದ ಸಹಜವಾಗಿ ಮನೆಯೊಳಗೆ ವಾಯುಮಾಲಿನ್ಯ ಸಂಭವಿಸುತ್ತಿದೆ. ಇದಕ್ಕೆ ನವಜಾತ ಶಿಶುಗಳು ಪ್ರಾಣವನ್ನೂ ತೆರುತ್ತಿವೆ.

2016ರಲ್ಲಿ ಮೋದಿ ಸರ್ಕಾರ ಭಾರಿ ಸದ್ದಿನೊಂದಿಗೆ ‘ಉಜ್ವಲಾ’ ಯೋಜನೆಯನ್ನು ಆರಂಭಿಸಿತು. ಒಂದು ಗ್ಯಾಸ್ ಸಿಲಿಂಡರ್, ರೆಗುಲೇಟರ್ ಮತ್ತು ಪೈಪ್‍ಗಳನ್ನು ಈ ಯೋಜನೆಯ ಫಲಾನುಭವಿಗಳಿಗೆ ಉಚಿತವಾಗಿ ನೀಡಲಾಗುತ್ತದೆ. ಅಲ್ಲಿಗೆ ಮುಗಿಯಿತು. ಸ್ಟವ್ ಖರೀದಿಸಬೇಕು, ಮೊದಲ ಸಿಲಿಂಡರ್ ಮುಗಿದ ನಂತರ ರಿಫಿಲ್ ಮಾಡಿಸುವ ತಾಪತ್ರಯ ಶುರು. ಅಧ್ಯಯನ ಮಾಡಿದ 4 ರಾಜ್ಯಗಳಲ್ಲಿ ಎಲ್‍ಪಿಜಿ ಹೊಂದಿರುವವರ ಸಂಖ್ಯೆ ಗಣನೀಯವಾಗಿ ಏರಿದೆ ನಿಜ. ಆದರೆ ಉಜ್ವಲಾ ಯೋಜನೆಯಲ್ಲಿ ಎಲ್‍ಪಿಜಿ ಸಂಪರ್ಕ ಪಡೆದ ಶೇ. 85ರಷ್ಟು ಜನರು ಈಗಲೂ ಸೌದೆ ಒಲೆ, ಸೀಮೆ ಎಣ್ಣೆ ಸ್ಟವ್‍ಗಳನ್ನೇ ಬಳಸುತ್ತಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್

ಆನತೆಯ ಆದಾಯ ಹೆಚ್ಚಿಸುವುದು ಇರಲಿ, ನೋಟ್‍ಬ್ಯಾನ್‍ನಂತಹ ಕ್ರಮಗಳಿಂದ ಬಡವರ ಆದಾಯವನ್ನು ತಗ್ಗಿಸಿದ ಈ ಮೂರ್ಖ ಸರ್ಕಾರ ಜನ ಗ್ಯಾಸ್ ರಿಫಿಲ್ ಮಾಡಿಸಿಕೊಳ್ಳಬೇಕು ಎನ್ನುತ್ತದೆ. ಇದು ಕ್ರೂರ ಮತ್ತು ಅಮಾನವೀಯ ಅಲ್ಲವೇ ಮೋದೀಜಿ?

ಆಧಾರ: ದಿ ಹಿಂದೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...