Homeಮುಖಪುಟಹೆಸರಿಗಷ್ಟೇ ಆಯ್ತು ಮೋದಿಯ ‘ಉಜ್ವಲಾ’, ನಿಲ್ಲಲೇ ಇಲ್ಲ ಒಲೆ ಮುಂದೆ ಝಳ ಝಳ!

ಹೆಸರಿಗಷ್ಟೇ ಆಯ್ತು ಮೋದಿಯ ‘ಉಜ್ವಲಾ’, ನಿಲ್ಲಲೇ ಇಲ್ಲ ಒಲೆ ಮುಂದೆ ಝಳ ಝಳ!

- Advertisement -
- Advertisement -
ಈ ಚಿತ್ರ ಉಜ್ವಾಲ ಯೋಜನೆಯ ಬಗ್ಗೆ ಏನು ಹೇಳುತ್ತದೆ

ಚುನಾವಣಾ ಪ್ರಚಾರದಲ್ಲಿ ಹಾಲಿ ಬಿಜೆಪಿಯ ಎಂಪಿಗಳು ‘ಉಜ್ವಲಾ’ ಯೋಜನೆ ಬಗ್ಗೆ ವಿಪರೀತವಾಗಿ ಬಡಾಯಿ ಕೊಚ್ಚಿಕೊಳ್ಳುತ್ತಿದ್ದಾರೆ. ಆದರೆ ಸುಮ್ಮನೆ ಹೆಸರಿಗಷ್ಟೇ ಎಂಬಂತೆ ಆಗಿರುವ ಈ ಯೋಜನೆ ಬಡವರನ್ನು ಒಂದು ರೀತಿಯಲ್ಲಿ ಅವಮಾನಿಸುತ್ತಲೂ ಇದೆ. ಫಲಾನುಭವಿಗಳ ಪೈಕಿ ಶೇ. 85ರಷ್ಟು ಕುಟುಂಬಗಳು ಈಗಲೂ ಸೌದೆ ಒಲೆ, ಸೀಮೆಎಣ್ಣೆ ಸ್ಟವ್‍ಗಳನ್ನೇ ಆಶ್ರಯಿಸಿವೆ. ಬಡವರ ಆದಾಯ ಹೆಚ್ಚಿಸುವ ಯಾವ ದೊಡ್ಡ ಯೋಜನೆಯನ್ನು ಜಾರಿಗೆ ತರದ ಸರ್ಕಾರ, ಬಡ ಕುಟುಂಬಗಳು 800-1000 ತೆತ್ತು ಗ್ಯಾಸ್ ರಿಫಿಲ್ ಮಾಡಬೇಕೆಂದು ಬಯಸುತ್ತಿದೆ. ಮೋದಿ ಸರ್ಕಾರದ ಮೂರ್ಖತನದ ಯೋಜನೆಗಳಿಗೆ ಈ ‘ಉಜ್ವಲಾ’ ಸ್ಕೀಮ್ ಕೂಡ ಒಂದು ಸಾಕ್ಷಿ.

ಆಗಾಗ, ಹಲವಾರು ಸಂಘಸಂಸ್ಥೆಗಳು ಇದರ ವೈಫಲ್ಯದ ಬಗ್ಗೆ ಧ್ವನಿ ಎತ್ತುತ್ತಲೇ ಬಂದಿವೆ. ಈಗ ‘ರಿಸರ್ಚ್ ಇನ್ಸ್ಟಿಟ್ಯೂಟ್ ಫಾರ್ ಕಂಪಾಸಿನೇಟ್ ಎಕಾನಮಿ’ ( RICE ) ನಾಲ್ಕು ರಾಜ್ಯಗಳಲ್ಲಿ ಅಧ್ಯಯನ ಮಾಡಿದ್ದು, ‘ಉಜ್ವಲಾ’ ಫಲಾನುಭವಿಗಳ ಪೈಕಿ ಶೇ. 85ರಷ್ಟು ಕುಟುಂಬಗಳು ಈಗಲೂ ಸೌದೆ ಒಲೆಯನ್ನೇ ಉಪಯೋಗಿಸುತ್ತಿವೆ. ಗ್ಯಾಸ್ ಸ್ಟವ್ ಕೊಟ್ಟು ಕೈ ತೊಳೆದುಕೊಂಡ ಮೋದಿ ಸರ್ಕಾರ, ಗ್ಯಾಸ್ ರಿಫಿಲ್ ಬಗ್ಗೆ ಎಂದೂ, ಇಂದಿಗೂ ಯೋಚಿಸಲೇ ಇಲ್ಲ. ಜೊತೆಗೆ ಸಿಲಿಂಡರ್ ದರದಲ್ಲೂ ಏರಿಕೆ ಮಾಡುತ್ತಲೇ ಬಂದಿತು.

ಮಧ್ಯ ಪ್ರದೇಶ, ರಾಜಸ್ಥಾನ, ಉತ್ತರಪ್ರದೇಶ ಮತ್ತು ಬಿಹಾರ್‍ಗಳಲ್ಲಿ ಈ ಅಧ್ಯಯನ ಮಾಡಲಾಗಿದ್ದು, ಬಹಳಷ್ಟು ಕುಟುಂಬಗಳು ಗ್ಯಾಸ್ ರಿಫಿಲ್ ಮಾಡಿಸಿಕೊಳ್ಳುವ ಆರ್ಥಿಕ ಸಾಮಥ್ರ್ಯ ಹೊಂದಿಲ್ಲ ಎಂಬುದು ಪತ್ತೆಯಾಗಿದೆ. ದೇಶದ ಇತರ ಭಾಗಗಳಲ್ಲೂ ಇಂಥದೇ ಪರಿಸ್ಥಿತಿಯಿದೆ. ಇದರಿಂದಾಗಿ, ಒಲೆ ಮುಂದೆ ಊದುತ್ತ, ಕೆಮ್ಮುತ್ತ ಬೆಂಕಿಯ ಝಳದ ಎದುರು ಮಹಿಳೆಯರು ಹೈರಾಣಾಗುತ್ತಿದ್ದಾರೆ. ಸೌದೆ ಒಲೆ ಬಳಕೆಯಿಂದ ಸಹಜವಾಗಿ ಮನೆಯೊಳಗೆ ವಾಯುಮಾಲಿನ್ಯ ಸಂಭವಿಸುತ್ತಿದೆ. ಇದಕ್ಕೆ ನವಜಾತ ಶಿಶುಗಳು ಪ್ರಾಣವನ್ನೂ ತೆರುತ್ತಿವೆ.

2016ರಲ್ಲಿ ಮೋದಿ ಸರ್ಕಾರ ಭಾರಿ ಸದ್ದಿನೊಂದಿಗೆ ‘ಉಜ್ವಲಾ’ ಯೋಜನೆಯನ್ನು ಆರಂಭಿಸಿತು. ಒಂದು ಗ್ಯಾಸ್ ಸಿಲಿಂಡರ್, ರೆಗುಲೇಟರ್ ಮತ್ತು ಪೈಪ್‍ಗಳನ್ನು ಈ ಯೋಜನೆಯ ಫಲಾನುಭವಿಗಳಿಗೆ ಉಚಿತವಾಗಿ ನೀಡಲಾಗುತ್ತದೆ. ಅಲ್ಲಿಗೆ ಮುಗಿಯಿತು. ಸ್ಟವ್ ಖರೀದಿಸಬೇಕು, ಮೊದಲ ಸಿಲಿಂಡರ್ ಮುಗಿದ ನಂತರ ರಿಫಿಲ್ ಮಾಡಿಸುವ ತಾಪತ್ರಯ ಶುರು. ಅಧ್ಯಯನ ಮಾಡಿದ 4 ರಾಜ್ಯಗಳಲ್ಲಿ ಎಲ್‍ಪಿಜಿ ಹೊಂದಿರುವವರ ಸಂಖ್ಯೆ ಗಣನೀಯವಾಗಿ ಏರಿದೆ ನಿಜ. ಆದರೆ ಉಜ್ವಲಾ ಯೋಜನೆಯಲ್ಲಿ ಎಲ್‍ಪಿಜಿ ಸಂಪರ್ಕ ಪಡೆದ ಶೇ. 85ರಷ್ಟು ಜನರು ಈಗಲೂ ಸೌದೆ ಒಲೆ, ಸೀಮೆ ಎಣ್ಣೆ ಸ್ಟವ್‍ಗಳನ್ನೇ ಬಳಸುತ್ತಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್

ಆನತೆಯ ಆದಾಯ ಹೆಚ್ಚಿಸುವುದು ಇರಲಿ, ನೋಟ್‍ಬ್ಯಾನ್‍ನಂತಹ ಕ್ರಮಗಳಿಂದ ಬಡವರ ಆದಾಯವನ್ನು ತಗ್ಗಿಸಿದ ಈ ಮೂರ್ಖ ಸರ್ಕಾರ ಜನ ಗ್ಯಾಸ್ ರಿಫಿಲ್ ಮಾಡಿಸಿಕೊಳ್ಳಬೇಕು ಎನ್ನುತ್ತದೆ. ಇದು ಕ್ರೂರ ಮತ್ತು ಅಮಾನವೀಯ ಅಲ್ಲವೇ ಮೋದೀಜಿ?

ಆಧಾರ: ದಿ ಹಿಂದೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...