Homeಮುಖಪುಟಹೆಸರಿಗಷ್ಟೇ ಆಯ್ತು ಮೋದಿಯ ‘ಉಜ್ವಲಾ’, ನಿಲ್ಲಲೇ ಇಲ್ಲ ಒಲೆ ಮುಂದೆ ಝಳ ಝಳ!

ಹೆಸರಿಗಷ್ಟೇ ಆಯ್ತು ಮೋದಿಯ ‘ಉಜ್ವಲಾ’, ನಿಲ್ಲಲೇ ಇಲ್ಲ ಒಲೆ ಮುಂದೆ ಝಳ ಝಳ!

- Advertisement -
- Advertisement -
ಈ ಚಿತ್ರ ಉಜ್ವಾಲ ಯೋಜನೆಯ ಬಗ್ಗೆ ಏನು ಹೇಳುತ್ತದೆ

ಚುನಾವಣಾ ಪ್ರಚಾರದಲ್ಲಿ ಹಾಲಿ ಬಿಜೆಪಿಯ ಎಂಪಿಗಳು ‘ಉಜ್ವಲಾ’ ಯೋಜನೆ ಬಗ್ಗೆ ವಿಪರೀತವಾಗಿ ಬಡಾಯಿ ಕೊಚ್ಚಿಕೊಳ್ಳುತ್ತಿದ್ದಾರೆ. ಆದರೆ ಸುಮ್ಮನೆ ಹೆಸರಿಗಷ್ಟೇ ಎಂಬಂತೆ ಆಗಿರುವ ಈ ಯೋಜನೆ ಬಡವರನ್ನು ಒಂದು ರೀತಿಯಲ್ಲಿ ಅವಮಾನಿಸುತ್ತಲೂ ಇದೆ. ಫಲಾನುಭವಿಗಳ ಪೈಕಿ ಶೇ. 85ರಷ್ಟು ಕುಟುಂಬಗಳು ಈಗಲೂ ಸೌದೆ ಒಲೆ, ಸೀಮೆಎಣ್ಣೆ ಸ್ಟವ್‍ಗಳನ್ನೇ ಆಶ್ರಯಿಸಿವೆ. ಬಡವರ ಆದಾಯ ಹೆಚ್ಚಿಸುವ ಯಾವ ದೊಡ್ಡ ಯೋಜನೆಯನ್ನು ಜಾರಿಗೆ ತರದ ಸರ್ಕಾರ, ಬಡ ಕುಟುಂಬಗಳು 800-1000 ತೆತ್ತು ಗ್ಯಾಸ್ ರಿಫಿಲ್ ಮಾಡಬೇಕೆಂದು ಬಯಸುತ್ತಿದೆ. ಮೋದಿ ಸರ್ಕಾರದ ಮೂರ್ಖತನದ ಯೋಜನೆಗಳಿಗೆ ಈ ‘ಉಜ್ವಲಾ’ ಸ್ಕೀಮ್ ಕೂಡ ಒಂದು ಸಾಕ್ಷಿ.

ಆಗಾಗ, ಹಲವಾರು ಸಂಘಸಂಸ್ಥೆಗಳು ಇದರ ವೈಫಲ್ಯದ ಬಗ್ಗೆ ಧ್ವನಿ ಎತ್ತುತ್ತಲೇ ಬಂದಿವೆ. ಈಗ ‘ರಿಸರ್ಚ್ ಇನ್ಸ್ಟಿಟ್ಯೂಟ್ ಫಾರ್ ಕಂಪಾಸಿನೇಟ್ ಎಕಾನಮಿ’ ( RICE ) ನಾಲ್ಕು ರಾಜ್ಯಗಳಲ್ಲಿ ಅಧ್ಯಯನ ಮಾಡಿದ್ದು, ‘ಉಜ್ವಲಾ’ ಫಲಾನುಭವಿಗಳ ಪೈಕಿ ಶೇ. 85ರಷ್ಟು ಕುಟುಂಬಗಳು ಈಗಲೂ ಸೌದೆ ಒಲೆಯನ್ನೇ ಉಪಯೋಗಿಸುತ್ತಿವೆ. ಗ್ಯಾಸ್ ಸ್ಟವ್ ಕೊಟ್ಟು ಕೈ ತೊಳೆದುಕೊಂಡ ಮೋದಿ ಸರ್ಕಾರ, ಗ್ಯಾಸ್ ರಿಫಿಲ್ ಬಗ್ಗೆ ಎಂದೂ, ಇಂದಿಗೂ ಯೋಚಿಸಲೇ ಇಲ್ಲ. ಜೊತೆಗೆ ಸಿಲಿಂಡರ್ ದರದಲ್ಲೂ ಏರಿಕೆ ಮಾಡುತ್ತಲೇ ಬಂದಿತು.

ಮಧ್ಯ ಪ್ರದೇಶ, ರಾಜಸ್ಥಾನ, ಉತ್ತರಪ್ರದೇಶ ಮತ್ತು ಬಿಹಾರ್‍ಗಳಲ್ಲಿ ಈ ಅಧ್ಯಯನ ಮಾಡಲಾಗಿದ್ದು, ಬಹಳಷ್ಟು ಕುಟುಂಬಗಳು ಗ್ಯಾಸ್ ರಿಫಿಲ್ ಮಾಡಿಸಿಕೊಳ್ಳುವ ಆರ್ಥಿಕ ಸಾಮಥ್ರ್ಯ ಹೊಂದಿಲ್ಲ ಎಂಬುದು ಪತ್ತೆಯಾಗಿದೆ. ದೇಶದ ಇತರ ಭಾಗಗಳಲ್ಲೂ ಇಂಥದೇ ಪರಿಸ್ಥಿತಿಯಿದೆ. ಇದರಿಂದಾಗಿ, ಒಲೆ ಮುಂದೆ ಊದುತ್ತ, ಕೆಮ್ಮುತ್ತ ಬೆಂಕಿಯ ಝಳದ ಎದುರು ಮಹಿಳೆಯರು ಹೈರಾಣಾಗುತ್ತಿದ್ದಾರೆ. ಸೌದೆ ಒಲೆ ಬಳಕೆಯಿಂದ ಸಹಜವಾಗಿ ಮನೆಯೊಳಗೆ ವಾಯುಮಾಲಿನ್ಯ ಸಂಭವಿಸುತ್ತಿದೆ. ಇದಕ್ಕೆ ನವಜಾತ ಶಿಶುಗಳು ಪ್ರಾಣವನ್ನೂ ತೆರುತ್ತಿವೆ.

2016ರಲ್ಲಿ ಮೋದಿ ಸರ್ಕಾರ ಭಾರಿ ಸದ್ದಿನೊಂದಿಗೆ ‘ಉಜ್ವಲಾ’ ಯೋಜನೆಯನ್ನು ಆರಂಭಿಸಿತು. ಒಂದು ಗ್ಯಾಸ್ ಸಿಲಿಂಡರ್, ರೆಗುಲೇಟರ್ ಮತ್ತು ಪೈಪ್‍ಗಳನ್ನು ಈ ಯೋಜನೆಯ ಫಲಾನುಭವಿಗಳಿಗೆ ಉಚಿತವಾಗಿ ನೀಡಲಾಗುತ್ತದೆ. ಅಲ್ಲಿಗೆ ಮುಗಿಯಿತು. ಸ್ಟವ್ ಖರೀದಿಸಬೇಕು, ಮೊದಲ ಸಿಲಿಂಡರ್ ಮುಗಿದ ನಂತರ ರಿಫಿಲ್ ಮಾಡಿಸುವ ತಾಪತ್ರಯ ಶುರು. ಅಧ್ಯಯನ ಮಾಡಿದ 4 ರಾಜ್ಯಗಳಲ್ಲಿ ಎಲ್‍ಪಿಜಿ ಹೊಂದಿರುವವರ ಸಂಖ್ಯೆ ಗಣನೀಯವಾಗಿ ಏರಿದೆ ನಿಜ. ಆದರೆ ಉಜ್ವಲಾ ಯೋಜನೆಯಲ್ಲಿ ಎಲ್‍ಪಿಜಿ ಸಂಪರ್ಕ ಪಡೆದ ಶೇ. 85ರಷ್ಟು ಜನರು ಈಗಲೂ ಸೌದೆ ಒಲೆ, ಸೀಮೆ ಎಣ್ಣೆ ಸ್ಟವ್‍ಗಳನ್ನೇ ಬಳಸುತ್ತಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್

ಆನತೆಯ ಆದಾಯ ಹೆಚ್ಚಿಸುವುದು ಇರಲಿ, ನೋಟ್‍ಬ್ಯಾನ್‍ನಂತಹ ಕ್ರಮಗಳಿಂದ ಬಡವರ ಆದಾಯವನ್ನು ತಗ್ಗಿಸಿದ ಈ ಮೂರ್ಖ ಸರ್ಕಾರ ಜನ ಗ್ಯಾಸ್ ರಿಫಿಲ್ ಮಾಡಿಸಿಕೊಳ್ಳಬೇಕು ಎನ್ನುತ್ತದೆ. ಇದು ಕ್ರೂರ ಮತ್ತು ಅಮಾನವೀಯ ಅಲ್ಲವೇ ಮೋದೀಜಿ?

ಆಧಾರ: ದಿ ಹಿಂದೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...