Homeಮುಖಪುಟಹೆಸರಿಗಷ್ಟೇ ಆಯ್ತು ಮೋದಿಯ ‘ಉಜ್ವಲಾ’, ನಿಲ್ಲಲೇ ಇಲ್ಲ ಒಲೆ ಮುಂದೆ ಝಳ ಝಳ!

ಹೆಸರಿಗಷ್ಟೇ ಆಯ್ತು ಮೋದಿಯ ‘ಉಜ್ವಲಾ’, ನಿಲ್ಲಲೇ ಇಲ್ಲ ಒಲೆ ಮುಂದೆ ಝಳ ಝಳ!

- Advertisement -
- Advertisement -
ಈ ಚಿತ್ರ ಉಜ್ವಾಲ ಯೋಜನೆಯ ಬಗ್ಗೆ ಏನು ಹೇಳುತ್ತದೆ

ಚುನಾವಣಾ ಪ್ರಚಾರದಲ್ಲಿ ಹಾಲಿ ಬಿಜೆಪಿಯ ಎಂಪಿಗಳು ‘ಉಜ್ವಲಾ’ ಯೋಜನೆ ಬಗ್ಗೆ ವಿಪರೀತವಾಗಿ ಬಡಾಯಿ ಕೊಚ್ಚಿಕೊಳ್ಳುತ್ತಿದ್ದಾರೆ. ಆದರೆ ಸುಮ್ಮನೆ ಹೆಸರಿಗಷ್ಟೇ ಎಂಬಂತೆ ಆಗಿರುವ ಈ ಯೋಜನೆ ಬಡವರನ್ನು ಒಂದು ರೀತಿಯಲ್ಲಿ ಅವಮಾನಿಸುತ್ತಲೂ ಇದೆ. ಫಲಾನುಭವಿಗಳ ಪೈಕಿ ಶೇ. 85ರಷ್ಟು ಕುಟುಂಬಗಳು ಈಗಲೂ ಸೌದೆ ಒಲೆ, ಸೀಮೆಎಣ್ಣೆ ಸ್ಟವ್‍ಗಳನ್ನೇ ಆಶ್ರಯಿಸಿವೆ. ಬಡವರ ಆದಾಯ ಹೆಚ್ಚಿಸುವ ಯಾವ ದೊಡ್ಡ ಯೋಜನೆಯನ್ನು ಜಾರಿಗೆ ತರದ ಸರ್ಕಾರ, ಬಡ ಕುಟುಂಬಗಳು 800-1000 ತೆತ್ತು ಗ್ಯಾಸ್ ರಿಫಿಲ್ ಮಾಡಬೇಕೆಂದು ಬಯಸುತ್ತಿದೆ. ಮೋದಿ ಸರ್ಕಾರದ ಮೂರ್ಖತನದ ಯೋಜನೆಗಳಿಗೆ ಈ ‘ಉಜ್ವಲಾ’ ಸ್ಕೀಮ್ ಕೂಡ ಒಂದು ಸಾಕ್ಷಿ.

ಆಗಾಗ, ಹಲವಾರು ಸಂಘಸಂಸ್ಥೆಗಳು ಇದರ ವೈಫಲ್ಯದ ಬಗ್ಗೆ ಧ್ವನಿ ಎತ್ತುತ್ತಲೇ ಬಂದಿವೆ. ಈಗ ‘ರಿಸರ್ಚ್ ಇನ್ಸ್ಟಿಟ್ಯೂಟ್ ಫಾರ್ ಕಂಪಾಸಿನೇಟ್ ಎಕಾನಮಿ’ ( RICE ) ನಾಲ್ಕು ರಾಜ್ಯಗಳಲ್ಲಿ ಅಧ್ಯಯನ ಮಾಡಿದ್ದು, ‘ಉಜ್ವಲಾ’ ಫಲಾನುಭವಿಗಳ ಪೈಕಿ ಶೇ. 85ರಷ್ಟು ಕುಟುಂಬಗಳು ಈಗಲೂ ಸೌದೆ ಒಲೆಯನ್ನೇ ಉಪಯೋಗಿಸುತ್ತಿವೆ. ಗ್ಯಾಸ್ ಸ್ಟವ್ ಕೊಟ್ಟು ಕೈ ತೊಳೆದುಕೊಂಡ ಮೋದಿ ಸರ್ಕಾರ, ಗ್ಯಾಸ್ ರಿಫಿಲ್ ಬಗ್ಗೆ ಎಂದೂ, ಇಂದಿಗೂ ಯೋಚಿಸಲೇ ಇಲ್ಲ. ಜೊತೆಗೆ ಸಿಲಿಂಡರ್ ದರದಲ್ಲೂ ಏರಿಕೆ ಮಾಡುತ್ತಲೇ ಬಂದಿತು.

ಮಧ್ಯ ಪ್ರದೇಶ, ರಾಜಸ್ಥಾನ, ಉತ್ತರಪ್ರದೇಶ ಮತ್ತು ಬಿಹಾರ್‍ಗಳಲ್ಲಿ ಈ ಅಧ್ಯಯನ ಮಾಡಲಾಗಿದ್ದು, ಬಹಳಷ್ಟು ಕುಟುಂಬಗಳು ಗ್ಯಾಸ್ ರಿಫಿಲ್ ಮಾಡಿಸಿಕೊಳ್ಳುವ ಆರ್ಥಿಕ ಸಾಮಥ್ರ್ಯ ಹೊಂದಿಲ್ಲ ಎಂಬುದು ಪತ್ತೆಯಾಗಿದೆ. ದೇಶದ ಇತರ ಭಾಗಗಳಲ್ಲೂ ಇಂಥದೇ ಪರಿಸ್ಥಿತಿಯಿದೆ. ಇದರಿಂದಾಗಿ, ಒಲೆ ಮುಂದೆ ಊದುತ್ತ, ಕೆಮ್ಮುತ್ತ ಬೆಂಕಿಯ ಝಳದ ಎದುರು ಮಹಿಳೆಯರು ಹೈರಾಣಾಗುತ್ತಿದ್ದಾರೆ. ಸೌದೆ ಒಲೆ ಬಳಕೆಯಿಂದ ಸಹಜವಾಗಿ ಮನೆಯೊಳಗೆ ವಾಯುಮಾಲಿನ್ಯ ಸಂಭವಿಸುತ್ತಿದೆ. ಇದಕ್ಕೆ ನವಜಾತ ಶಿಶುಗಳು ಪ್ರಾಣವನ್ನೂ ತೆರುತ್ತಿವೆ.

2016ರಲ್ಲಿ ಮೋದಿ ಸರ್ಕಾರ ಭಾರಿ ಸದ್ದಿನೊಂದಿಗೆ ‘ಉಜ್ವಲಾ’ ಯೋಜನೆಯನ್ನು ಆರಂಭಿಸಿತು. ಒಂದು ಗ್ಯಾಸ್ ಸಿಲಿಂಡರ್, ರೆಗುಲೇಟರ್ ಮತ್ತು ಪೈಪ್‍ಗಳನ್ನು ಈ ಯೋಜನೆಯ ಫಲಾನುಭವಿಗಳಿಗೆ ಉಚಿತವಾಗಿ ನೀಡಲಾಗುತ್ತದೆ. ಅಲ್ಲಿಗೆ ಮುಗಿಯಿತು. ಸ್ಟವ್ ಖರೀದಿಸಬೇಕು, ಮೊದಲ ಸಿಲಿಂಡರ್ ಮುಗಿದ ನಂತರ ರಿಫಿಲ್ ಮಾಡಿಸುವ ತಾಪತ್ರಯ ಶುರು. ಅಧ್ಯಯನ ಮಾಡಿದ 4 ರಾಜ್ಯಗಳಲ್ಲಿ ಎಲ್‍ಪಿಜಿ ಹೊಂದಿರುವವರ ಸಂಖ್ಯೆ ಗಣನೀಯವಾಗಿ ಏರಿದೆ ನಿಜ. ಆದರೆ ಉಜ್ವಲಾ ಯೋಜನೆಯಲ್ಲಿ ಎಲ್‍ಪಿಜಿ ಸಂಪರ್ಕ ಪಡೆದ ಶೇ. 85ರಷ್ಟು ಜನರು ಈಗಲೂ ಸೌದೆ ಒಲೆ, ಸೀಮೆ ಎಣ್ಣೆ ಸ್ಟವ್‍ಗಳನ್ನೇ ಬಳಸುತ್ತಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್

ಆನತೆಯ ಆದಾಯ ಹೆಚ್ಚಿಸುವುದು ಇರಲಿ, ನೋಟ್‍ಬ್ಯಾನ್‍ನಂತಹ ಕ್ರಮಗಳಿಂದ ಬಡವರ ಆದಾಯವನ್ನು ತಗ್ಗಿಸಿದ ಈ ಮೂರ್ಖ ಸರ್ಕಾರ ಜನ ಗ್ಯಾಸ್ ರಿಫಿಲ್ ಮಾಡಿಸಿಕೊಳ್ಳಬೇಕು ಎನ್ನುತ್ತದೆ. ಇದು ಕ್ರೂರ ಮತ್ತು ಅಮಾನವೀಯ ಅಲ್ಲವೇ ಮೋದೀಜಿ?

ಆಧಾರ: ದಿ ಹಿಂದೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...