Homeಮುಖಪುಟಮಹಿಳೆಯ ಬಗ್ಗೆ ಮೋದಿ ಆಡಿದ ಮಾತಿಗೆ ಅರ್ಥವಿಲ್ಲವೆ?: ಬಿಲ್ಕಿಸ್‌ ಬಾನೋ ಅತ್ಯಾಚಾರಿಗಳ ಬಿಡುಗಡೆ ಬಳಿಕ ಪ್ರತಿಪಕ್ಷಗಳ...

ಮಹಿಳೆಯ ಬಗ್ಗೆ ಮೋದಿ ಆಡಿದ ಮಾತಿಗೆ ಅರ್ಥವಿಲ್ಲವೆ?: ಬಿಲ್ಕಿಸ್‌ ಬಾನೋ ಅತ್ಯಾಚಾರಿಗಳ ಬಿಡುಗಡೆ ಬಳಿಕ ಪ್ರತಿಪಕ್ಷಗಳ ವಾಗ್ದಾಳಿ

- Advertisement -
- Advertisement -

2002ರ ಗುಜರಾತ್ ಗಲಭೆಯ ಸಂದರ್ಭದಲ್ಲಿ ನಡೆದ ಬಿಲ್ಕಿಸ್ ಬಾನೋ ಅವರ ಸಾಮೂಹಿಕ ಅತ್ಯಾಚಾರ ಮತ್ತು ಬಾನೋ ಕುಟುಂಬದ ಏಳು ಜನರ ಹತ್ಯೆಗೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಗುರಿಯಾದ 11 ಮಂದಿಯನ್ನು ಗುಜರಾತ್ ಸರ್ಕಾರ ಬಿಡುಗಡೆ ಮಾಡಿದೆ. ಅಪರಾಧಿಗಳು ಸಿಹಿಯನ್ನೂ ಹಂಚಿಕೊಂಡು ಸಂಭ್ರಮಾಚರಣೆ ಮಾಡಿದ್ದಾರೆ.

ದುರಂತ ಘಟನೆಯ ಅಪರಾಧಿಗಳಿಗೆ ಕ್ಷಮಾದಾನ ನೀಡಿರುವ ಬಿಜೆಪಿ ಸರ್ಕಾರ ಹಾಗೂ ನರೇಂದ್ರ ಮೋದಿ ನಾಯಕತ್ವದ ವಿರುದ್ಧ ಪ್ರತಿಪಕ್ಷಗಳು ವಾಗ್ದಾಳಿ ನಡೆಸಿವೆ.

ಬಿಜೆಪಿ ಸರ್ಕಾರ ಕ್ಷಮಾದಾನ ಪತ್ರ ನೀಡುವ ಕೆಲವು ಗಂಟೆಗಳ ಮೊದಲು ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪ್ರಧಾನಿ ಮೋದಿಯವರು ಮಾಡಿರುವ ಭಾಷಣವನ್ನು ಕಾಂಗ್ರೆಸ್ ಪ್ರಸ್ತಾಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಮಹಿಳಾ ಶಕ್ತಿಯ ಬಗ್ಗೆ ಮಾತನಾಡಿರುವುದನ್ನು ಉಲ್ಲೇಖಿಸಿ ಕಾಂಗ್ರೆಸ್ ನಾಯಕ ಪವನ್ ಖೇರಾ ಪತ್ರಿಕಾಗೋಷ್ಠಿ ನಡೆಸಿದ್ದಾರೆ.

ಗುಜರಾತ್ ಸರ್ಕಾರದ ಆದೇಶವನ್ನು ‘ಅಭೂತಪೂರ್ವ’ ಎಂದು ವ್ಯಂಗ್ಯವಾಡಿರುವ ಕಾಂಗ್ರೆಸ್, “ಅಪರಾಧಿಗಳ ಶಿಕ್ಷೆಯ 14 ವರ್ಷಗಳನ್ನು ಉದಾಹರಿಸಿ, ಅಪರಾಧಿಗಳ ನಡವಳಿಕೆಯನ್ನು ಉಲ್ಲೇಖಿಸಿ ಹೊರಗೆ ಕಳುಹಿಸಿದ್ದೀರಿ. ಅಪರಾಧದ ಸ್ವರೂಪ ಹಾಗೂ ಅತ್ಯಾಚಾರವನ್ನು ನೋಡಿದರೆ ಈಗ ನೀಡಿರುವ ಯಾವುದೇ ಶಿಕ್ಷೆಯು ಸಾಕಾಗುವುದಿಲ್ಲ ಎನಿಸುವುದಿಲ್ಲವೆ? ಬಿಡುಗಡೆಯಾದವರನ್ನು ನಾವು ಇಂದು ನೋಡಿದೆವು. ಅವರನ್ನು ಸನ್ಮಾನಿಸಲಾಗುತ್ತಿದೆ, ಗೌರವಿಸಲಾಗುತ್ತಿದೆ. ಇದು ಅಮೃತ ಮಹೋತ್ಸವವೇ?” ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

ಇದನ್ನೂ ಓದಿರಿ: ಬಿಲ್ಕಿಸ್‌ ಬಾನೋ ಸಾಮೂಹಿಕ ಅತ್ಯಾಚಾರ ಪ್ರಕರಣ; ಎಲ್ಲ ಅಪರಾಧಿಗಳಿಗೆ ಕ್ಷಮೆ ನೀಡಿ ಬಿಡುಗಡೆ ಮಾಡಿದ ಗುಜರಾತ್ ಸರ್ಕಾರ!

ಅಟಲ್ ಬಿಹಾರಿ ವಾಜಪೇಯಿ ಅವರನ್ನು ನೆನೆದಿರುವ ಕಾಂಗ್ರೆಸ್‌ನ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಅಧ್ಯಕ್ಷ ಖೇರಾ, “2002ರ ಗಲಭೆಯ ನಂತರ ಗುಜರಾತ್‌ಗೆ ಭೇಟಿ ನೀಡಿದಾಗ ಮಾಜಿ ಪ್ರಧಾನಿ ವಾಜಪೇಯಿಯವರು ರಾಜಧರ್ಮದ ಬಗ್ಗೆ ಮಾತನಾಡಿದ್ದನ್ನು ಮೋದಿ ನೆನೆಯಬೇಕು” ಎಂದು ತಿಳಿಸಿದ್ದಾರೆ.

ಮೋದಿಯವರು ಕೆಂಪುಕೋಟೆಯ ಮೇಲೆ ಹೇಳಿದ್ದು ಕೇವಲ ಪದಗಳೇ ಅಥವಾ ಏನಾದರೂ ಅರ್ಥವಿದೆಯೇ ಎಂಬುದನ್ನು ಅವರು ಸ್ಪಷ್ಟಪಡಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

“ಪ್ರಧಾನಿ ಮೋದಿಯವರು ಮಾತನಾಡಿರುವುದಕ್ಕೆ ಅರ್ಥವಿಲ್ಲವೇ? ಅಥವಾ ಅವರ ಸ್ವಂತ ಪಕ್ಷ, ಅವರದೇ ಸರ್ಕಾರಗಳು ಮೋದಿಯವರ ಮಾತು ಕೇಳುವುದನ್ನು ನಿಲ್ಲಿಸಿವೆಯೇ? ಅಥವಾ ಮೋದಿಯವರು ದೇಶಕ್ಕೆ ಒಂದು ಮಾತು, ತಮ್ಮ ಪಕ್ಷದ ಸರ್ಕಾರಕ್ಕೆ ಒಂದು ಮಾತು ಹೇಳುತ್ತಾರೆಯೇ?” ಎಂದು ಕೇಳಿದ್ದಾರೆ.

ಬಿಲ್ಕಿಸ್ ಬಾನೊ ಅವರಿಗೆ 50 ಲಕ್ಷ ರೂಪಾಯಿ ಪರಿಹಾರವನ್ನು ಖಚಿತಪಡಿಸಿಕೊಳ್ಳಲು ಸುಪ್ರೀಂ ಕೋರ್ಟ್ 2017ರಲ್ಲಿ ಮಧ್ಯಪ್ರವೇಶಿಸಿದೆ ಎಂಬ ಅಂಶದತ್ತ ಗಮನಕ್ಕೆ ತಂದ ಖೇರಾ, “ಇದಿಷ್ಟೇ ಸಾಕು. ಬಿಲ್ಕಿಸ್‌ ಅವರಿಗೆ ಆಗಿರುವ ಅನ್ಯಾಯವನ್ನು ಒತ್ತಿಹೇಳುತ್ತದೆ” ಎಂದಿದ್ದಾರೆ.

“ಕೆಂಪು ಕೋಟೆಯಲ್ಲಿ ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡಲು ಪ್ರಧಾನಿಯವರಿಗೆ ಎಷ್ಟು ಧೈರ್ಯ?” ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿರಿ: 25 ವರ್ಷಗಳಲ್ಲಿ ಭಾರತ ಅಭಿವೃದ್ಧಿ ಹೊಂದಿದ ದೇಶವಾಗಬೇಕು: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಭಾಷಣ

ಭಾರತವು ಸ್ವಾತಂತ್ರ್ಯದ 75ನೇ ವರ್ಷವನ್ನು ಆಚರಿಸಿದ ದಿನದಂದು ಗುಜರಾತ್ ಆದೇಶ ಬಂದಿತು ಎಂಬ ಅಂಶವನ್ನು ಕಾಂಗ್ರೆಸ್ ಒತ್ತಿಹೇಳಿದೆ.

ಕಥುವಾ, ಉನ್ನಾವೋ ಅತ್ಯಾಚಾರ ಪ್ರಕರಣಗಳಲ್ಲಿ ಏನಾಯಿತು ಎಂಬುದಕ್ಕೆ ಗುಜರಾತ್ ಸರ್ಕಾರದ ಬಿಲ್ಕಿಸ್ ಬಾನೊ ಆದೇಶವನ್ನು ಲಿಂಕ್ ಮಾಡಿದ ಖೇರಾ, “ಇವೆಲ್ಲವೂ ಬಿಜೆಪಿ ಸರ್ಕಾರದ ಮನೋಧರ್ಮವನ್ನು ತೋರಿಸುತ್ತವೆ. ಕಥುವಾ ಪ್ರಕರಣದಲ್ಲಿ, ಬಹುಶಃ ದೇಶದಲ್ಲಿಯೇ ಮೊದಲ ಬಾರಿಗೆ ಬಿಜೆಪಿಯ ಹಿರಿಯ ನಾಯಕರು ಅತ್ಯಾಚಾರಿಗಳ ಬೆಂಬಲಕ್ಕಾಗಿ ಬೀದಿಗಿಳಿದಿದ್ದರು” ಎಂದು ವಿವಾಸಿದ್ದಾರೆ.

ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಮೋದಿಯವರು ಆಡಿರುವ ಮಾತುಗಳು ಶ್ಲಾಘನೀಯವಾಗಿದ್ದರೂ, ಅವರು ಈ ಹಿಂದೆ ಪ್ರತಿಪಕ್ಷದ ನಾಯಕರ ಮೇಲೆ ದಾಳಿ ಮಾಡಲು ಅತ್ಯಂತ ಕೀಳುಮಟ್ಟದಲ್ಲಿ ಮಾತನಾಡಿದ್ದರು ಎಂಬುದನ್ನು ಮರೆಯಬಾರದು. ‘50 ಕೋಟಿ ರೂ. ಗೆಳತಿ’, ‘ಕಾಂಗ್ರೆಸ್ ವಿಧವೆ’, ‘ಜೆರ್ಸಿ ಹಸು’ ಮತ್ತು ‘ಸ್ರೂಪನಖಿ’ ಎಂಬ ಪದಗಳನ್ನು ಬಳಸಿದ್ದರು ಎಂದು ಅವರು ಉಲ್ಲೇಖಿಸಿದ್ದಾರೆ.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಖೇರಾ ಅವರು, “ಒಂದೋ ಗುಜರಾತ್ ಸರ್ಕಾರ ತನ್ನ ಆದೇಶವನ್ನು ಹಿಂಪಡೆಯಬೇಕು ಅಥವಾ ಪ್ರಧಾನಿ ಮೋದಿ ತನ್ನ ಮಾತುಗಳನ್ನು ಹಿಂಪಡೆಯಬೇಕು” ಎಂದು ಆಗ್ರಹಿಸಿದ್ದಾರೆ.

ಗುಜರಾತ್ ಚುನಾವಣೆಯಲ್ಲಿ ಕಾಂಗ್ರೆಸ್‌ನಂತೆಯೇ ಸ್ಪರ್ಧಿಯಾಗಿರುವ ಆಮ್ ಆದ್ಮಿ ಪಕ್ಷವು ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಇತರೆ ಪಕ್ಷಗಳಾದ ಆರ್‌ಜೆಡಿ, ಎಐಎಂಐಎಂ ಮತ್ತು ಸಿಪಿಎಂ ಪಕ್ಷಗಳು ಬಿಜೆಪಿ ಸರ್ಕಾರದ ಕ್ರಮವನ್ನು ಟೀಕಿಸಿವೆ.

ಆರ್‌ಜೆಡಿ ವಕ್ತಾರ ಎಜಾಜ್ ಅಹ್ಮದ್, “ಪ್ರಧಾನಿ ಮೋದಿ ಇಂದು ನಾರಿ ಸಮ್ಮಾನ್ ಬಗ್ಗೆ ದೊಡ್ಡದೊಡ್ಡ ಹೇಳಿಕೆಗಳನ್ನು ನೀಡಿದ್ದಾರೆ. ಮಹಿಳೆಯರನ್ನು ಅವಮಾನಿಸಬಾರದು ಎಂದಿದ್ದಾರೆ. ಆದರೆ ಕೆಲವೇ ಗಂಟೆಗಳ ನಂತರ ಗುಜರಾತ್ ಸರ್ಕಾರವು ಬಿಲ್ಕಿಸ್ ಬಾನೋ ಗ್ಯಾಂಗ್ರೇಪ್ ಪ್ರಕರಣದ ಅಪರಾಧಿಗಳನ್ನು ಬಿಡುಗಡೆ ಮಾಡುವ ಆದೇಶ ನೀಡಿದೆ” ಎಂದು ಟೀಕಿಸಿದ್ದಾರೆ.

ಇದನ್ನೂ ಓದಿರಿ: ಹಾಸನ: ಕೋರ್ಟ್ ಆವರಣದಲ್ಲಿಯೇ ಹೆಂಡತಿಯ ಕುತ್ತಿಗೆ ಕೊಯ್ದ ವ್ಯಕ್ತಿಯ ಬಂಧನ

ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಟ್ವೀಟ್ ಮಾಡಿದ್ದು, “ಇದು ಬಿಜೆಪಿಯ ಆಜಾದಿ ಕಾ ಅಮೃತ್ ಮಹೋತ್ಸವ ಆವೃತ್ತಿಯಾಗಿದೆ. ಘೋರ ಅಪರಾಧದ ತಪ್ಪಿತಸ್ಥರಿಗೆ ಸ್ವಾತಂತ್ರ್ಯ ನೀಡಲಾಗಿದೆ. ಬಿಜೆಪಿಯ ಧಾರ್ಮಿಕ ಪಕ್ಷಪಾತ ಎಷ್ಟರಮಟ್ಟಿಗೆ ಎಂದರೆ ಕ್ರೂರ ಅತ್ಯಾಚಾರ ಮತ್ತು ದ್ವೇಷದ ಅಪರಾಧಗಳು ಕೂಡ ಕ್ಷಮಾರ್ಹವಾಗಿವೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಗುಜರಾತ್ ಸರ್ಕಾರದ ಆದೇಶಕ್ಕೆ ಸಿಪಿಎಂ ತನ್ನ ತೀವ್ರ ಖಂಡನೆಯನ್ನು ವ್ಯಕ್ತಪಡಿಸಿದ್ದು, “ಇದು ನವ ಭಾರತದ ನಿಜವಾದ ಮುಖ. ಕೊಲೆಗಾರರು ಮತ್ತು ಅತ್ಯಾಚಾರಿಗಳನ್ನು ಬಿಡುಗಡೆ ಮಾಡಲಾಗಿದೆ. ನ್ಯಾಯಕ್ಕಾಗಿ ಹೋರಾಡಿದ ಕಾರ್ಯಕರ್ತೆ ತೀಸ್ತಾ ಜೈಲು ಪಾಲಾಗಿದ್ದಾರೆ” ಎಂದು ವಿಷಾದಿಸಿದೆ.

ಟಿಎಂಸಿ ವಕ್ತಾರ ಸಾಕೇತ್ ಗೋಖಲೆ ಟ್ವೀಟ್ ಮಾಡಿದ್ದು, “ಗುಜರಾತ್ ಸರ್ಕಾರವು 11 ಜನ ಅತ್ಯಾಚಾರಿಗಳನ್ನು ಬಿಡುಗಡೆ ಮಾಡಿದೆ. ಎಲ್ಲಿದೆ ಆಕ್ರೋಶ?” ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....