Homeಮುಖಪುಟಮಹಿಳೆಯ ಬಗ್ಗೆ ಮೋದಿ ಆಡಿದ ಮಾತಿಗೆ ಅರ್ಥವಿಲ್ಲವೆ?: ಬಿಲ್ಕಿಸ್‌ ಬಾನೋ ಅತ್ಯಾಚಾರಿಗಳ ಬಿಡುಗಡೆ ಬಳಿಕ ಪ್ರತಿಪಕ್ಷಗಳ...

ಮಹಿಳೆಯ ಬಗ್ಗೆ ಮೋದಿ ಆಡಿದ ಮಾತಿಗೆ ಅರ್ಥವಿಲ್ಲವೆ?: ಬಿಲ್ಕಿಸ್‌ ಬಾನೋ ಅತ್ಯಾಚಾರಿಗಳ ಬಿಡುಗಡೆ ಬಳಿಕ ಪ್ರತಿಪಕ್ಷಗಳ ವಾಗ್ದಾಳಿ

- Advertisement -
- Advertisement -

2002ರ ಗುಜರಾತ್ ಗಲಭೆಯ ಸಂದರ್ಭದಲ್ಲಿ ನಡೆದ ಬಿಲ್ಕಿಸ್ ಬಾನೋ ಅವರ ಸಾಮೂಹಿಕ ಅತ್ಯಾಚಾರ ಮತ್ತು ಬಾನೋ ಕುಟುಂಬದ ಏಳು ಜನರ ಹತ್ಯೆಗೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಗುರಿಯಾದ 11 ಮಂದಿಯನ್ನು ಗುಜರಾತ್ ಸರ್ಕಾರ ಬಿಡುಗಡೆ ಮಾಡಿದೆ. ಅಪರಾಧಿಗಳು ಸಿಹಿಯನ್ನೂ ಹಂಚಿಕೊಂಡು ಸಂಭ್ರಮಾಚರಣೆ ಮಾಡಿದ್ದಾರೆ.

ದುರಂತ ಘಟನೆಯ ಅಪರಾಧಿಗಳಿಗೆ ಕ್ಷಮಾದಾನ ನೀಡಿರುವ ಬಿಜೆಪಿ ಸರ್ಕಾರ ಹಾಗೂ ನರೇಂದ್ರ ಮೋದಿ ನಾಯಕತ್ವದ ವಿರುದ್ಧ ಪ್ರತಿಪಕ್ಷಗಳು ವಾಗ್ದಾಳಿ ನಡೆಸಿವೆ.

ಬಿಜೆಪಿ ಸರ್ಕಾರ ಕ್ಷಮಾದಾನ ಪತ್ರ ನೀಡುವ ಕೆಲವು ಗಂಟೆಗಳ ಮೊದಲು ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪ್ರಧಾನಿ ಮೋದಿಯವರು ಮಾಡಿರುವ ಭಾಷಣವನ್ನು ಕಾಂಗ್ರೆಸ್ ಪ್ರಸ್ತಾಪಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಮಹಿಳಾ ಶಕ್ತಿಯ ಬಗ್ಗೆ ಮಾತನಾಡಿರುವುದನ್ನು ಉಲ್ಲೇಖಿಸಿ ಕಾಂಗ್ರೆಸ್ ನಾಯಕ ಪವನ್ ಖೇರಾ ಪತ್ರಿಕಾಗೋಷ್ಠಿ ನಡೆಸಿದ್ದಾರೆ.

ಗುಜರಾತ್ ಸರ್ಕಾರದ ಆದೇಶವನ್ನು ‘ಅಭೂತಪೂರ್ವ’ ಎಂದು ವ್ಯಂಗ್ಯವಾಡಿರುವ ಕಾಂಗ್ರೆಸ್, “ಅಪರಾಧಿಗಳ ಶಿಕ್ಷೆಯ 14 ವರ್ಷಗಳನ್ನು ಉದಾಹರಿಸಿ, ಅಪರಾಧಿಗಳ ನಡವಳಿಕೆಯನ್ನು ಉಲ್ಲೇಖಿಸಿ ಹೊರಗೆ ಕಳುಹಿಸಿದ್ದೀರಿ. ಅಪರಾಧದ ಸ್ವರೂಪ ಹಾಗೂ ಅತ್ಯಾಚಾರವನ್ನು ನೋಡಿದರೆ ಈಗ ನೀಡಿರುವ ಯಾವುದೇ ಶಿಕ್ಷೆಯು ಸಾಕಾಗುವುದಿಲ್ಲ ಎನಿಸುವುದಿಲ್ಲವೆ? ಬಿಡುಗಡೆಯಾದವರನ್ನು ನಾವು ಇಂದು ನೋಡಿದೆವು. ಅವರನ್ನು ಸನ್ಮಾನಿಸಲಾಗುತ್ತಿದೆ, ಗೌರವಿಸಲಾಗುತ್ತಿದೆ. ಇದು ಅಮೃತ ಮಹೋತ್ಸವವೇ?” ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

ಇದನ್ನೂ ಓದಿರಿ: ಬಿಲ್ಕಿಸ್‌ ಬಾನೋ ಸಾಮೂಹಿಕ ಅತ್ಯಾಚಾರ ಪ್ರಕರಣ; ಎಲ್ಲ ಅಪರಾಧಿಗಳಿಗೆ ಕ್ಷಮೆ ನೀಡಿ ಬಿಡುಗಡೆ ಮಾಡಿದ ಗುಜರಾತ್ ಸರ್ಕಾರ!

ಅಟಲ್ ಬಿಹಾರಿ ವಾಜಪೇಯಿ ಅವರನ್ನು ನೆನೆದಿರುವ ಕಾಂಗ್ರೆಸ್‌ನ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಅಧ್ಯಕ್ಷ ಖೇರಾ, “2002ರ ಗಲಭೆಯ ನಂತರ ಗುಜರಾತ್‌ಗೆ ಭೇಟಿ ನೀಡಿದಾಗ ಮಾಜಿ ಪ್ರಧಾನಿ ವಾಜಪೇಯಿಯವರು ರಾಜಧರ್ಮದ ಬಗ್ಗೆ ಮಾತನಾಡಿದ್ದನ್ನು ಮೋದಿ ನೆನೆಯಬೇಕು” ಎಂದು ತಿಳಿಸಿದ್ದಾರೆ.

ಮೋದಿಯವರು ಕೆಂಪುಕೋಟೆಯ ಮೇಲೆ ಹೇಳಿದ್ದು ಕೇವಲ ಪದಗಳೇ ಅಥವಾ ಏನಾದರೂ ಅರ್ಥವಿದೆಯೇ ಎಂಬುದನ್ನು ಅವರು ಸ್ಪಷ್ಟಪಡಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

“ಪ್ರಧಾನಿ ಮೋದಿಯವರು ಮಾತನಾಡಿರುವುದಕ್ಕೆ ಅರ್ಥವಿಲ್ಲವೇ? ಅಥವಾ ಅವರ ಸ್ವಂತ ಪಕ್ಷ, ಅವರದೇ ಸರ್ಕಾರಗಳು ಮೋದಿಯವರ ಮಾತು ಕೇಳುವುದನ್ನು ನಿಲ್ಲಿಸಿವೆಯೇ? ಅಥವಾ ಮೋದಿಯವರು ದೇಶಕ್ಕೆ ಒಂದು ಮಾತು, ತಮ್ಮ ಪಕ್ಷದ ಸರ್ಕಾರಕ್ಕೆ ಒಂದು ಮಾತು ಹೇಳುತ್ತಾರೆಯೇ?” ಎಂದು ಕೇಳಿದ್ದಾರೆ.

ಬಿಲ್ಕಿಸ್ ಬಾನೊ ಅವರಿಗೆ 50 ಲಕ್ಷ ರೂಪಾಯಿ ಪರಿಹಾರವನ್ನು ಖಚಿತಪಡಿಸಿಕೊಳ್ಳಲು ಸುಪ್ರೀಂ ಕೋರ್ಟ್ 2017ರಲ್ಲಿ ಮಧ್ಯಪ್ರವೇಶಿಸಿದೆ ಎಂಬ ಅಂಶದತ್ತ ಗಮನಕ್ಕೆ ತಂದ ಖೇರಾ, “ಇದಿಷ್ಟೇ ಸಾಕು. ಬಿಲ್ಕಿಸ್‌ ಅವರಿಗೆ ಆಗಿರುವ ಅನ್ಯಾಯವನ್ನು ಒತ್ತಿಹೇಳುತ್ತದೆ” ಎಂದಿದ್ದಾರೆ.

“ಕೆಂಪು ಕೋಟೆಯಲ್ಲಿ ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡಲು ಪ್ರಧಾನಿಯವರಿಗೆ ಎಷ್ಟು ಧೈರ್ಯ?” ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿರಿ: 25 ವರ್ಷಗಳಲ್ಲಿ ಭಾರತ ಅಭಿವೃದ್ಧಿ ಹೊಂದಿದ ದೇಶವಾಗಬೇಕು: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಭಾಷಣ

ಭಾರತವು ಸ್ವಾತಂತ್ರ್ಯದ 75ನೇ ವರ್ಷವನ್ನು ಆಚರಿಸಿದ ದಿನದಂದು ಗುಜರಾತ್ ಆದೇಶ ಬಂದಿತು ಎಂಬ ಅಂಶವನ್ನು ಕಾಂಗ್ರೆಸ್ ಒತ್ತಿಹೇಳಿದೆ.

ಕಥುವಾ, ಉನ್ನಾವೋ ಅತ್ಯಾಚಾರ ಪ್ರಕರಣಗಳಲ್ಲಿ ಏನಾಯಿತು ಎಂಬುದಕ್ಕೆ ಗುಜರಾತ್ ಸರ್ಕಾರದ ಬಿಲ್ಕಿಸ್ ಬಾನೊ ಆದೇಶವನ್ನು ಲಿಂಕ್ ಮಾಡಿದ ಖೇರಾ, “ಇವೆಲ್ಲವೂ ಬಿಜೆಪಿ ಸರ್ಕಾರದ ಮನೋಧರ್ಮವನ್ನು ತೋರಿಸುತ್ತವೆ. ಕಥುವಾ ಪ್ರಕರಣದಲ್ಲಿ, ಬಹುಶಃ ದೇಶದಲ್ಲಿಯೇ ಮೊದಲ ಬಾರಿಗೆ ಬಿಜೆಪಿಯ ಹಿರಿಯ ನಾಯಕರು ಅತ್ಯಾಚಾರಿಗಳ ಬೆಂಬಲಕ್ಕಾಗಿ ಬೀದಿಗಿಳಿದಿದ್ದರು” ಎಂದು ವಿವಾಸಿದ್ದಾರೆ.

ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಮೋದಿಯವರು ಆಡಿರುವ ಮಾತುಗಳು ಶ್ಲಾಘನೀಯವಾಗಿದ್ದರೂ, ಅವರು ಈ ಹಿಂದೆ ಪ್ರತಿಪಕ್ಷದ ನಾಯಕರ ಮೇಲೆ ದಾಳಿ ಮಾಡಲು ಅತ್ಯಂತ ಕೀಳುಮಟ್ಟದಲ್ಲಿ ಮಾತನಾಡಿದ್ದರು ಎಂಬುದನ್ನು ಮರೆಯಬಾರದು. ‘50 ಕೋಟಿ ರೂ. ಗೆಳತಿ’, ‘ಕಾಂಗ್ರೆಸ್ ವಿಧವೆ’, ‘ಜೆರ್ಸಿ ಹಸು’ ಮತ್ತು ‘ಸ್ರೂಪನಖಿ’ ಎಂಬ ಪದಗಳನ್ನು ಬಳಸಿದ್ದರು ಎಂದು ಅವರು ಉಲ್ಲೇಖಿಸಿದ್ದಾರೆ.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಖೇರಾ ಅವರು, “ಒಂದೋ ಗುಜರಾತ್ ಸರ್ಕಾರ ತನ್ನ ಆದೇಶವನ್ನು ಹಿಂಪಡೆಯಬೇಕು ಅಥವಾ ಪ್ರಧಾನಿ ಮೋದಿ ತನ್ನ ಮಾತುಗಳನ್ನು ಹಿಂಪಡೆಯಬೇಕು” ಎಂದು ಆಗ್ರಹಿಸಿದ್ದಾರೆ.

ಗುಜರಾತ್ ಚುನಾವಣೆಯಲ್ಲಿ ಕಾಂಗ್ರೆಸ್‌ನಂತೆಯೇ ಸ್ಪರ್ಧಿಯಾಗಿರುವ ಆಮ್ ಆದ್ಮಿ ಪಕ್ಷವು ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಇತರೆ ಪಕ್ಷಗಳಾದ ಆರ್‌ಜೆಡಿ, ಎಐಎಂಐಎಂ ಮತ್ತು ಸಿಪಿಎಂ ಪಕ್ಷಗಳು ಬಿಜೆಪಿ ಸರ್ಕಾರದ ಕ್ರಮವನ್ನು ಟೀಕಿಸಿವೆ.

ಆರ್‌ಜೆಡಿ ವಕ್ತಾರ ಎಜಾಜ್ ಅಹ್ಮದ್, “ಪ್ರಧಾನಿ ಮೋದಿ ಇಂದು ನಾರಿ ಸಮ್ಮಾನ್ ಬಗ್ಗೆ ದೊಡ್ಡದೊಡ್ಡ ಹೇಳಿಕೆಗಳನ್ನು ನೀಡಿದ್ದಾರೆ. ಮಹಿಳೆಯರನ್ನು ಅವಮಾನಿಸಬಾರದು ಎಂದಿದ್ದಾರೆ. ಆದರೆ ಕೆಲವೇ ಗಂಟೆಗಳ ನಂತರ ಗುಜರಾತ್ ಸರ್ಕಾರವು ಬಿಲ್ಕಿಸ್ ಬಾನೋ ಗ್ಯಾಂಗ್ರೇಪ್ ಪ್ರಕರಣದ ಅಪರಾಧಿಗಳನ್ನು ಬಿಡುಗಡೆ ಮಾಡುವ ಆದೇಶ ನೀಡಿದೆ” ಎಂದು ಟೀಕಿಸಿದ್ದಾರೆ.

ಇದನ್ನೂ ಓದಿರಿ: ಹಾಸನ: ಕೋರ್ಟ್ ಆವರಣದಲ್ಲಿಯೇ ಹೆಂಡತಿಯ ಕುತ್ತಿಗೆ ಕೊಯ್ದ ವ್ಯಕ್ತಿಯ ಬಂಧನ

ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಟ್ವೀಟ್ ಮಾಡಿದ್ದು, “ಇದು ಬಿಜೆಪಿಯ ಆಜಾದಿ ಕಾ ಅಮೃತ್ ಮಹೋತ್ಸವ ಆವೃತ್ತಿಯಾಗಿದೆ. ಘೋರ ಅಪರಾಧದ ತಪ್ಪಿತಸ್ಥರಿಗೆ ಸ್ವಾತಂತ್ರ್ಯ ನೀಡಲಾಗಿದೆ. ಬಿಜೆಪಿಯ ಧಾರ್ಮಿಕ ಪಕ್ಷಪಾತ ಎಷ್ಟರಮಟ್ಟಿಗೆ ಎಂದರೆ ಕ್ರೂರ ಅತ್ಯಾಚಾರ ಮತ್ತು ದ್ವೇಷದ ಅಪರಾಧಗಳು ಕೂಡ ಕ್ಷಮಾರ್ಹವಾಗಿವೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಗುಜರಾತ್ ಸರ್ಕಾರದ ಆದೇಶಕ್ಕೆ ಸಿಪಿಎಂ ತನ್ನ ತೀವ್ರ ಖಂಡನೆಯನ್ನು ವ್ಯಕ್ತಪಡಿಸಿದ್ದು, “ಇದು ನವ ಭಾರತದ ನಿಜವಾದ ಮುಖ. ಕೊಲೆಗಾರರು ಮತ್ತು ಅತ್ಯಾಚಾರಿಗಳನ್ನು ಬಿಡುಗಡೆ ಮಾಡಲಾಗಿದೆ. ನ್ಯಾಯಕ್ಕಾಗಿ ಹೋರಾಡಿದ ಕಾರ್ಯಕರ್ತೆ ತೀಸ್ತಾ ಜೈಲು ಪಾಲಾಗಿದ್ದಾರೆ” ಎಂದು ವಿಷಾದಿಸಿದೆ.

ಟಿಎಂಸಿ ವಕ್ತಾರ ಸಾಕೇತ್ ಗೋಖಲೆ ಟ್ವೀಟ್ ಮಾಡಿದ್ದು, “ಗುಜರಾತ್ ಸರ್ಕಾರವು 11 ಜನ ಅತ್ಯಾಚಾರಿಗಳನ್ನು ಬಿಡುಗಡೆ ಮಾಡಿದೆ. ಎಲ್ಲಿದೆ ಆಕ್ರೋಶ?” ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...