HomeಮುಖಪುಟNEET UG|1,500 ಅಭ್ಯರ್ಥಿಗಳ ಫಲಿತಾಂಶ ಮರು ಪರಿಶೀಲಿಸಲು ಸಮಿತಿ ರಚನೆ: ಎನ್‌ಟಿಎ

NEET UG|1,500 ಅಭ್ಯರ್ಥಿಗಳ ಫಲಿತಾಂಶ ಮರು ಪರಿಶೀಲಿಸಲು ಸಮಿತಿ ರಚನೆ: ಎನ್‌ಟಿಎ

- Advertisement -
- Advertisement -

ನೀಟ್-ಯುಜಿ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ 1,500ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೀಡಿದ ಗ್ರೇಸ್ ಅಂಕಗಳನ್ನು ಪರಿಶೀಲಿಸಲು ಶಿಕ್ಷಣ ಸಚಿವಾಲಯ ನಾಲ್ವರು ಸದಸ್ಯರ ಸಮಿತಿ ರಚಿಸಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಶನಿವಾರ ತಿಳಿಸಿದೆ.

ಜೂನ್ 4ರಂದು ಪ್ರಕಟಗೊಂಡ ಫಲಿತಾಂಶ ಪ್ರಕಟಗೊಂಡ ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದ ಎನ್‌ಟಿಎ “ಪರೀಕ್ಷೆಯ ಸಮಗ್ರತೆಯಲ್ಲಿ ರಾಜಿಯಾಗಿಲ್ಲ” ಎಂದಿದೆ.

“ಈ ಸಮಸ್ಯೆ ಆರು ಕೇಂದ್ರಗಳ ಕೇವಲ 1,600 ಅಭ್ಯರ್ಥಿಗಳಿಗೆ ಮಾತ್ರ ಸಂಬಂಧಿಸಿದೆ” ಎಂದು ಎನ್‌ಟಿಎ ಮಹಾನಿರ್ದೇಶಕ ಸುಬೋಧ್ ಕುಮಾರ್ ಸಿಂಗ್ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

“ಗ್ರೇಸ್ ಅಂಕಗಳನ್ನು ನೀಡುವಿಕೆಯು ಪರೀಕ್ಷೆಯ ಅರ್ಹತಾ ಮಾನದಂಡಗಳ ಮೇಲೆ ಪರಿಣಾಮ ಬೀರಿಲ್ಲ ಮತ್ತು ಸಮಸ್ಯೆಗೊಳಗಾದ ಅಭ್ಯರ್ಥಿಗಳ ಫಲಿತಾಂಶಗಳ ಪರಿಶೀಲನೆಯು ಪ್ರವೇಶ ಪ್ರಕ್ರಿಯೆಯ ಮೇಲೆ ಪರಿಣಾಮ ಬೀರುವುದಿಲ್ಲ” ಎಂದು ಸುಭೋದ್ ಕುಮಾರ್ ತಿಳಿಸಿದ್ದು, ಸಮಿತಿಯು ಒಂದು ವಾರದೊಳಗೆ ಶಿಫಾರಸುಗಳನ್ನು ಮತ್ತು ಫಲಿತಾಂಶವನ್ನು ಸಲ್ಲಿಸಲಿದೆ. ಈ ವಿದ್ಯಾರ್ಥಿಗಳನ್ನು ಪರಿಷ್ಕರಿಸಬಹುದು” ಎಂದು ಹೇಳಿದ್ದಾರೆ.

ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಅನೇಕ ಅಭ್ಯರ್ಥಿಗಳು ಮತ್ತು ಪ್ರತಿಪಕ್ಷಗಳ ನಾಯಕರು ಆರೋಪಿಸಿದ್ದಾರೆ. ಈ ಬಾರಿಯ ಪರೀಕ್ಷೆಯಲ್ಲಿ 67 ಅಭ್ಯರ್ಥಿಗಳು 720ಕ್ಕೆ 720 ಅಂಕ ಪಡೆದಿರುವುದು ಮತ್ತು ಈ ಪೈಕಿ ಆರು ಅಭ್ಯರ್ಥಿಗಳು ಹರಿಯಾಣದ ಒಂದೇ ಪರೀಕ್ಷಾ ಕೇಂದ್ರದವರು ಎಂಬುವುದು ಅನುಮಾನಕ್ಕೆ ಕಾರಣವಾಗಿದೆ.

ಸುಪ್ರೀಂ ಕೋರ್ಟ್ ತೀರ್ಪು ಉಲ್ಲೇಖಿಸಿದ ಎನ್‌ಟಿಎ

“ಕೆಲ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದ ಅಧೀಕ್ಷಕರ ಕಾರಣದಿಂದ ಪರೀಕ್ಷೆ ಬರೆಯಲು ಕಡಿಮೆ ಸಮಯ ಸಿಕ್ಕಿದೆ ಎಂದು ಆರೋಪಿಸಿದ್ದಾರೆ” ಎಂದು ಸಿಂಗ್ ಹೇಳಿದ್ದು, “ಗ್ರೇಸ್ ಅಂಕಗಳನ್ನು ನೀಡುವ ನಿರ್ಧಾರವು 2018 ರ ಸುಪ್ರೀಂ ಕೋರ್ಟ್ ತೀರ್ಪಿನ ಮೇಲೆ ಆಧಾರಿತವಾಗಿದೆ” ಎಂದಿದ್ದಾರೆ.

“ಸಮಯದಲ್ಲಿ ಸಮಯದ ಕೊರತೆಯಾಗಿದ್ದರೆ, ಆ ಸಮಸ್ಯೆ ಪರಿಹರಿಸಲು ಒಂದು ಸೂತ್ರವಿದೆ. 2018ರ ಸುಪ್ರೀಂ ಕೋರ್ಟ್ ಆದೇಶದಂತೆ ಈ ಸಮಸ್ಯೆ ಗ್ರೇಸ್ ಮಾರ್ಕ್ ಸೂಕ್ತವೆಂದು ಭಾವಿಸಿ ಪ್ರತಿಯೊಬ್ಬ ಅಂಕ ಹೆಚ್ಚಿಸಲಾಗಿದೆ” ಎಂದು ಸುಬೋಧ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

718 ಮತ್ತು 719 ಅಂಕಗಳನ್ನು ನೀಡಲಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಸುಭೋದ್ ಕುಮಾರ್, ಆ ರೀತಿ ಅಂಕ ನೀಡಲು ಸಾಧ್ಯವಿಲ್ಲ. +4-1 ನೆಗೆಟಿವ್ ಮಾರ್ಕಿಂಗ್ ಸಿಸ್ಟಮ್‌ನಿಂದ ಇದು ಸಾಧ್ಯವಿಲ್ಲ. ಆದರೆ, ಸ್ಕೇಲ್ ಫಾರ್ಮುಲಾದಿಂದ ಇದು ಆಗಿರಬಹುದು ಎಂದಿದ್ದಾರೆ.

ಅಭ್ಯರ್ಥಿಗಳು 718 ಮತ್ತು 719 ಅಂಕಗಳನ್ನು ಗಳಿಸಿರುವ ಬಗ್ಗೆ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ​​(ಐಎಂಎ) ನ ಜೂನಿಯರ್ ವೈದ್ಯರು ಪ್ರಶ್ನೆ ಎತ್ತಿದ್ದು, ಈ ಕುರಿತು ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆಗೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಇಂಡಿಯಾ ಒಕ್ಕೂಟ ನಿತೀಶ್‌ ಕುಮಾರ್‌ಗೆ ಪ್ರಧಾನಿ ಹುದ್ದೆಯ ಆಫರ್ ನೀಡಿದೆ ಎಂದ ಜೆಡಿಯು: ಕಾಂಗ್ರೆಸ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...