HomeಮುಖಪುಟNEET UG|1,500 ಅಭ್ಯರ್ಥಿಗಳ ಫಲಿತಾಂಶ ಮರು ಪರಿಶೀಲಿಸಲು ಸಮಿತಿ ರಚನೆ: ಎನ್‌ಟಿಎ

NEET UG|1,500 ಅಭ್ಯರ್ಥಿಗಳ ಫಲಿತಾಂಶ ಮರು ಪರಿಶೀಲಿಸಲು ಸಮಿತಿ ರಚನೆ: ಎನ್‌ಟಿಎ

- Advertisement -
- Advertisement -

ನೀಟ್-ಯುಜಿ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ 1,500ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೀಡಿದ ಗ್ರೇಸ್ ಅಂಕಗಳನ್ನು ಪರಿಶೀಲಿಸಲು ಶಿಕ್ಷಣ ಸಚಿವಾಲಯ ನಾಲ್ವರು ಸದಸ್ಯರ ಸಮಿತಿ ರಚಿಸಿದೆ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಶನಿವಾರ ತಿಳಿಸಿದೆ.

ಜೂನ್ 4ರಂದು ಪ್ರಕಟಗೊಂಡ ಫಲಿತಾಂಶ ಪ್ರಕಟಗೊಂಡ ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದ ಎನ್‌ಟಿಎ “ಪರೀಕ್ಷೆಯ ಸಮಗ್ರತೆಯಲ್ಲಿ ರಾಜಿಯಾಗಿಲ್ಲ” ಎಂದಿದೆ.

“ಈ ಸಮಸ್ಯೆ ಆರು ಕೇಂದ್ರಗಳ ಕೇವಲ 1,600 ಅಭ್ಯರ್ಥಿಗಳಿಗೆ ಮಾತ್ರ ಸಂಬಂಧಿಸಿದೆ” ಎಂದು ಎನ್‌ಟಿಎ ಮಹಾನಿರ್ದೇಶಕ ಸುಬೋಧ್ ಕುಮಾರ್ ಸಿಂಗ್ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

“ಗ್ರೇಸ್ ಅಂಕಗಳನ್ನು ನೀಡುವಿಕೆಯು ಪರೀಕ್ಷೆಯ ಅರ್ಹತಾ ಮಾನದಂಡಗಳ ಮೇಲೆ ಪರಿಣಾಮ ಬೀರಿಲ್ಲ ಮತ್ತು ಸಮಸ್ಯೆಗೊಳಗಾದ ಅಭ್ಯರ್ಥಿಗಳ ಫಲಿತಾಂಶಗಳ ಪರಿಶೀಲನೆಯು ಪ್ರವೇಶ ಪ್ರಕ್ರಿಯೆಯ ಮೇಲೆ ಪರಿಣಾಮ ಬೀರುವುದಿಲ್ಲ” ಎಂದು ಸುಭೋದ್ ಕುಮಾರ್ ತಿಳಿಸಿದ್ದು, ಸಮಿತಿಯು ಒಂದು ವಾರದೊಳಗೆ ಶಿಫಾರಸುಗಳನ್ನು ಮತ್ತು ಫಲಿತಾಂಶವನ್ನು ಸಲ್ಲಿಸಲಿದೆ. ಈ ವಿದ್ಯಾರ್ಥಿಗಳನ್ನು ಪರಿಷ್ಕರಿಸಬಹುದು” ಎಂದು ಹೇಳಿದ್ದಾರೆ.

ನೀಟ್ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಅನೇಕ ಅಭ್ಯರ್ಥಿಗಳು ಮತ್ತು ಪ್ರತಿಪಕ್ಷಗಳ ನಾಯಕರು ಆರೋಪಿಸಿದ್ದಾರೆ. ಈ ಬಾರಿಯ ಪರೀಕ್ಷೆಯಲ್ಲಿ 67 ಅಭ್ಯರ್ಥಿಗಳು 720ಕ್ಕೆ 720 ಅಂಕ ಪಡೆದಿರುವುದು ಮತ್ತು ಈ ಪೈಕಿ ಆರು ಅಭ್ಯರ್ಥಿಗಳು ಹರಿಯಾಣದ ಒಂದೇ ಪರೀಕ್ಷಾ ಕೇಂದ್ರದವರು ಎಂಬುವುದು ಅನುಮಾನಕ್ಕೆ ಕಾರಣವಾಗಿದೆ.

ಸುಪ್ರೀಂ ಕೋರ್ಟ್ ತೀರ್ಪು ಉಲ್ಲೇಖಿಸಿದ ಎನ್‌ಟಿಎ

“ಕೆಲ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದ ಅಧೀಕ್ಷಕರ ಕಾರಣದಿಂದ ಪರೀಕ್ಷೆ ಬರೆಯಲು ಕಡಿಮೆ ಸಮಯ ಸಿಕ್ಕಿದೆ ಎಂದು ಆರೋಪಿಸಿದ್ದಾರೆ” ಎಂದು ಸಿಂಗ್ ಹೇಳಿದ್ದು, “ಗ್ರೇಸ್ ಅಂಕಗಳನ್ನು ನೀಡುವ ನಿರ್ಧಾರವು 2018 ರ ಸುಪ್ರೀಂ ಕೋರ್ಟ್ ತೀರ್ಪಿನ ಮೇಲೆ ಆಧಾರಿತವಾಗಿದೆ” ಎಂದಿದ್ದಾರೆ.

“ಸಮಯದಲ್ಲಿ ಸಮಯದ ಕೊರತೆಯಾಗಿದ್ದರೆ, ಆ ಸಮಸ್ಯೆ ಪರಿಹರಿಸಲು ಒಂದು ಸೂತ್ರವಿದೆ. 2018ರ ಸುಪ್ರೀಂ ಕೋರ್ಟ್ ಆದೇಶದಂತೆ ಈ ಸಮಸ್ಯೆ ಗ್ರೇಸ್ ಮಾರ್ಕ್ ಸೂಕ್ತವೆಂದು ಭಾವಿಸಿ ಪ್ರತಿಯೊಬ್ಬ ಅಂಕ ಹೆಚ್ಚಿಸಲಾಗಿದೆ” ಎಂದು ಸುಬೋಧ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

718 ಮತ್ತು 719 ಅಂಕಗಳನ್ನು ನೀಡಲಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಸುಭೋದ್ ಕುಮಾರ್, ಆ ರೀತಿ ಅಂಕ ನೀಡಲು ಸಾಧ್ಯವಿಲ್ಲ. +4-1 ನೆಗೆಟಿವ್ ಮಾರ್ಕಿಂಗ್ ಸಿಸ್ಟಮ್‌ನಿಂದ ಇದು ಸಾಧ್ಯವಿಲ್ಲ. ಆದರೆ, ಸ್ಕೇಲ್ ಫಾರ್ಮುಲಾದಿಂದ ಇದು ಆಗಿರಬಹುದು ಎಂದಿದ್ದಾರೆ.

ಅಭ್ಯರ್ಥಿಗಳು 718 ಮತ್ತು 719 ಅಂಕಗಳನ್ನು ಗಳಿಸಿರುವ ಬಗ್ಗೆ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ​​(ಐಎಂಎ) ನ ಜೂನಿಯರ್ ವೈದ್ಯರು ಪ್ರಶ್ನೆ ಎತ್ತಿದ್ದು, ಈ ಕುರಿತು ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆಗೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಇಂಡಿಯಾ ಒಕ್ಕೂಟ ನಿತೀಶ್‌ ಕುಮಾರ್‌ಗೆ ಪ್ರಧಾನಿ ಹುದ್ದೆಯ ಆಫರ್ ನೀಡಿದೆ ಎಂದ ಜೆಡಿಯು: ಕಾಂಗ್ರೆಸ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...