Homeಎಕಾನಮಿಭಾರತದ ಆರ್ಥಿಕತೆ ಕುಸಿತಕ್ಕೆ ಮೊಘಲರು ಮತ್ತು ಬ್ರಿಟಿಷರು ಕಾರಣ ಎಂದೇಳಿ ಟ್ರೋಲ್‌ಗೆ ಒಳಗಾದ ಸಿಎಂ ಯೋಗಿ..

ಭಾರತದ ಆರ್ಥಿಕತೆ ಕುಸಿತಕ್ಕೆ ಮೊಘಲರು ಮತ್ತು ಬ್ರಿಟಿಷರು ಕಾರಣ ಎಂದೇಳಿ ಟ್ರೋಲ್‌ಗೆ ಒಳಗಾದ ಸಿಎಂ ಯೋಗಿ..

- Advertisement -
- Advertisement -

ನಮ್ಮ ಸಾಂಸ್ಕೃತಿಕ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಮೂಲಕ ಮೊಘಲರು ಮತ್ತು ಬ್ರಿಟಿಷರು ಭಾರತೀಯ ಆರ್ಥಿಕತೆಯ ಮೇಲೆ ದಾಳಿ ಮಾಡಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಹೇಳಿದ್ದಾರೆ.

ಭಾರತದ ಆರ್ಥಿಕತೆಯನ್ನು ದುರ್ಬಲಗೊಳಿಸಲು ಮೊಘಲರು ಮತ್ತು ಬ್ರಿಟಿಷರು ಮುಂದಾಗಿದ್ದರು ಎಂದ ಅವರು ಮೊಘಲರ ಆಗಮನದ ಮೊದಲು ಭಾರತವು ವಿಶ್ವದ ಅತಿದೊಡ್ಡ ಆರ್ಥಿಕ ಶಕ್ತಿಯಾಗಿತ್ತು. ಬ್ರಿಟಿಷರು ದೇಶವನ್ನು ತೊರೆಯುವ ಹೊತ್ತಿಗೆ ಅದು ಕೇವಲ ತನ್ನ ಅದ್ಭುತ ಸ್ವಭಾವದ ನೆರಳು ಮಾತ್ರವಾಗಿದೆ ಎಂದು ಹೇಳಿದ್ದಾರೆ.

ಮುಂಬೈನಲ್ಲಿ ನಡೆದ ವಿಶ್ವ ಹಿಂದೂ ಆರ್ಥಿಕ ವೇದಿಕೆಯಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್, ಮೊಘಲರು ಭಾರತದ ಮೇಲೆ ದಾಳಿ ಮಾಡುವ ಮೊದಲು, ದೇಶವು ವಿಶ್ವದ ಅತಿದೊಡ್ಡ ಆರ್ಥಿಕ ಶಕ್ತಿಯಾಗಿತ್ತು ಎಂದು ವಿವರಿಸಿದರು. ಮೊಘಲರು ಭಾರತಕ್ಕೆ ಬರುವ ಹೊತ್ತಿಗೆ ಭಾರತವು ವಿಶ್ವದ ಆರ್ಥಿಕತೆಯ ಮೂರನೇ ಒಂದು ಭಾಗದಷ್ಟು ಪಾಲನ್ನು ಹೊಂದಿತ್ತು ಎಂದಿದ್ದಾರೆ.

“ಮೊಘಲ್ ಯುಗದಲ್ಲಿ ಭಾರತವು ಶೇಕಡಾ 36 ಕ್ಕಿಂತ ಹೆಚ್ಚು ಪಾಲನ್ನು ಹೊಂದಿರುವ ವಿಶ್ವ ಆರ್ಥಿಕತೆಯಲ್ಲಿ ಅತಿದೊಡ್ಡ ಪಾಲುದಾರರಾಗಿದ್ದರು ಮತ್ತು ಅವರು ಹೊರಟು ಬ್ರಿಟಿಷರು ಬರುವ ಹೊತ್ತಿಗೆ ಭಾರತದ ಪಾಲು ಶೇಕಡಾ 20 ಕ್ಕೆ ಇಳಿದಿತ್ತು” ಎಂದು ಉತ್ತರ ಪ್ರದೇಶದ ಸಿಎಂ ಹೇಳಿದ್ದಾರೆ

ದೇಶದಲ್ಲಿ ತಮ್ಮ 200 ವರ್ಷಗಳ ಆಳ್ವಿಕೆಯಲ್ಲಿ, ಬ್ರಿಟಿಷರು ಭಾರತೀಯ ಆರ್ಥಿಕತೆಯನ್ನು ದುರ್ಬಲಗೊಳಿಸಿದರು ಮತ್ತು ಅವರು ಹೊರಡುವ ಹೊತ್ತಿಗೆ ಅದನ್ನು ಕೇವಲ ಶೇ.೪ಕ್ಕೆ ಇಳಿಸಿದ್ದರು ಎಂದು ಅವರು ಒತ್ತಿ ಹೇಳಿದ್ದಾರೆ.

ಮುಂಬರುವ ವರ್ಷಗಳಲ್ಲಿ ಕೇವಲ ಉತ್ತರ ಪ್ರದೇಶವೊಂದರಲ್ಲೇ ಒಂದು ಟ್ರಿಲಿಯನ್ ಆರ್ಥಿಕತೆ ಮಾಡುವುದಾಗಿ ಯೋಗಿ ಆದಿತ್ಯನಾಥ್ ಈ ತಿಂಗಳ ಆರಂಭದಲ್ಲಿ ಪ್ರತಿಪಾದಿಸಿದ್ದರು.

“ನಮ್ಮಲ್ಲಿ ಮಂತ್ರಿಗಳು ಮತ್ತು ಅಧಿಕಾರಗಳು ದೂರದೃಷ್ಟಿ ಹೊಂದಿದ್ದಾರೆ. ಸಂವಾದಾತ್ಮಕ ಅಧಿವೇಶನ ನಡೆಯಲಿದ್ದು, ಅಲ್ಲಿ ನಾವು ಅಭಿವೃದ್ಧಿ ಯೋಜನೆಗಳ ಪ್ರಯೋಜನಗಳು ರಾಜ್ಯದ ಪ್ರತಿಯೊಬ್ಬ ವ್ಯಕ್ತಿಗೂ ತಲುಪುವಂತೆ ನೋಡಿಕೊಳ್ಳಲು ಮಾರ್ಗಸೂಚಿಯನ್ನು ರೂಪಿಸುತ್ತೇವೆ. ಉತ್ತರ ಪ್ರದೇಶವನ್ನು 1 ಟ್ರಿಲಿಯನ್ ಆರ್ಥಿಕತೆಯನ್ನಾಗಿ ಮಾಡುವುದು ನಮ್ಮ ಗುರಿ” ಅವರು ಹೇಳಿದ್ದಾರೆ.

ಸಿಎಂ ಯೋಗಿಯವರ ಈ ಮಾತುಗಳನ್ನು ಬಹಳಷ್ಟು ಜನ ಟೀಕಿಸಿದ್ದರೆ ಇನ್ನಷ್ಟು ಜನ ಲೇವಡಿ ಮಾಡಿದ್ದಾರೆ. ಖ್ಯಾತ ಯೂಟೂಬರ್ ಧೃವ್ ರಾಠೀ ” ವಾವ್! ಫಂಟಾ ಬಾಬಾನಿಗೆ ಆರ್ಥಿಕತೆಯ ಬಗ್ಗೆ ಬಹಳಷ್ಟು ಜ್ಞಾನವಿದ್ದು ಇವರನ್ನು ಭಾರತದ ಅರ್ಥ ಸಚಿವರನ್ನಾಗಿ ಮಾಡಬೇಕೆಂದು ಮೋದಿಯವರಲ್ಲಿ ಮನವಿ ಮಾಡುತ್ತೇನೆ” ಎಂದು ಟ್ರೋಲ್ ಮಾಡಿದ್ದಾರೆ.

ಮೋಘಲರು ಭಾರತವನ್ನು ಆಳುತ್ತಿದ್ದಾಗ ಭಾರತ ವಿಶ್ವದಲ್ಲೇ ನಂಬರ್‌ ಒನ್ ಆರ್ಥಿಕತೆಯಾಗಿತ್ತು. ಈ ಮೋದಿ ಆಳ್ವಿಕೆಯಲ್ಲಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶಕ್ಕಿಂತಲೂ ಕಳಪೆಯಾಗಿದೆ ಎಂದು ಅಶೋಕ್ ಸಾವಾನ್ ರವರು ಟೀಕಿಸಿದ್ದಾರೆ.

ಮೂರು ಪೆಗ್ ಗೋಮುತ್ರ ಕುಡಿದಾಗ: ಭಾರತದ ಆರ್ಥಿಕತೆ ಕುಸಿತಕ್ಕೆ ಮೊಘಲರು ಮತ್ತು ಬ್ರಿಟಿಷರು ಕಾರಣ

ಐದು ಪೆಗ್ ಗೋಮುತ್ರ ಕುಡಿದಾಗ : ಭಾರತದ ಆರ್ಥಿಕತೆ ಕುಸಿತಕ್ಕೆ ಅಲೆಕ್ಸಾಂಡರ್ ಮತ್ತು ಮೌರ್ಯರು ಕಾರಣ ಎಂದು ಅದ್ವೈದ್ ಎಂಬುವವರು ಟ್ರೋಲ್ ಮಾಡಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...