Homeಎಕಾನಮಿಭಾರತದ ಆರ್ಥಿಕತೆ ಕುಸಿತಕ್ಕೆ ಮೊಘಲರು ಮತ್ತು ಬ್ರಿಟಿಷರು ಕಾರಣ ಎಂದೇಳಿ ಟ್ರೋಲ್‌ಗೆ ಒಳಗಾದ ಸಿಎಂ ಯೋಗಿ..

ಭಾರತದ ಆರ್ಥಿಕತೆ ಕುಸಿತಕ್ಕೆ ಮೊಘಲರು ಮತ್ತು ಬ್ರಿಟಿಷರು ಕಾರಣ ಎಂದೇಳಿ ಟ್ರೋಲ್‌ಗೆ ಒಳಗಾದ ಸಿಎಂ ಯೋಗಿ..

- Advertisement -
- Advertisement -

ನಮ್ಮ ಸಾಂಸ್ಕೃತಿಕ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಮೂಲಕ ಮೊಘಲರು ಮತ್ತು ಬ್ರಿಟಿಷರು ಭಾರತೀಯ ಆರ್ಥಿಕತೆಯ ಮೇಲೆ ದಾಳಿ ಮಾಡಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಹೇಳಿದ್ದಾರೆ.

ಭಾರತದ ಆರ್ಥಿಕತೆಯನ್ನು ದುರ್ಬಲಗೊಳಿಸಲು ಮೊಘಲರು ಮತ್ತು ಬ್ರಿಟಿಷರು ಮುಂದಾಗಿದ್ದರು ಎಂದ ಅವರು ಮೊಘಲರ ಆಗಮನದ ಮೊದಲು ಭಾರತವು ವಿಶ್ವದ ಅತಿದೊಡ್ಡ ಆರ್ಥಿಕ ಶಕ್ತಿಯಾಗಿತ್ತು. ಬ್ರಿಟಿಷರು ದೇಶವನ್ನು ತೊರೆಯುವ ಹೊತ್ತಿಗೆ ಅದು ಕೇವಲ ತನ್ನ ಅದ್ಭುತ ಸ್ವಭಾವದ ನೆರಳು ಮಾತ್ರವಾಗಿದೆ ಎಂದು ಹೇಳಿದ್ದಾರೆ.

ಮುಂಬೈನಲ್ಲಿ ನಡೆದ ವಿಶ್ವ ಹಿಂದೂ ಆರ್ಥಿಕ ವೇದಿಕೆಯಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್, ಮೊಘಲರು ಭಾರತದ ಮೇಲೆ ದಾಳಿ ಮಾಡುವ ಮೊದಲು, ದೇಶವು ವಿಶ್ವದ ಅತಿದೊಡ್ಡ ಆರ್ಥಿಕ ಶಕ್ತಿಯಾಗಿತ್ತು ಎಂದು ವಿವರಿಸಿದರು. ಮೊಘಲರು ಭಾರತಕ್ಕೆ ಬರುವ ಹೊತ್ತಿಗೆ ಭಾರತವು ವಿಶ್ವದ ಆರ್ಥಿಕತೆಯ ಮೂರನೇ ಒಂದು ಭಾಗದಷ್ಟು ಪಾಲನ್ನು ಹೊಂದಿತ್ತು ಎಂದಿದ್ದಾರೆ.

“ಮೊಘಲ್ ಯುಗದಲ್ಲಿ ಭಾರತವು ಶೇಕಡಾ 36 ಕ್ಕಿಂತ ಹೆಚ್ಚು ಪಾಲನ್ನು ಹೊಂದಿರುವ ವಿಶ್ವ ಆರ್ಥಿಕತೆಯಲ್ಲಿ ಅತಿದೊಡ್ಡ ಪಾಲುದಾರರಾಗಿದ್ದರು ಮತ್ತು ಅವರು ಹೊರಟು ಬ್ರಿಟಿಷರು ಬರುವ ಹೊತ್ತಿಗೆ ಭಾರತದ ಪಾಲು ಶೇಕಡಾ 20 ಕ್ಕೆ ಇಳಿದಿತ್ತು” ಎಂದು ಉತ್ತರ ಪ್ರದೇಶದ ಸಿಎಂ ಹೇಳಿದ್ದಾರೆ

ದೇಶದಲ್ಲಿ ತಮ್ಮ 200 ವರ್ಷಗಳ ಆಳ್ವಿಕೆಯಲ್ಲಿ, ಬ್ರಿಟಿಷರು ಭಾರತೀಯ ಆರ್ಥಿಕತೆಯನ್ನು ದುರ್ಬಲಗೊಳಿಸಿದರು ಮತ್ತು ಅವರು ಹೊರಡುವ ಹೊತ್ತಿಗೆ ಅದನ್ನು ಕೇವಲ ಶೇ.೪ಕ್ಕೆ ಇಳಿಸಿದ್ದರು ಎಂದು ಅವರು ಒತ್ತಿ ಹೇಳಿದ್ದಾರೆ.

ಮುಂಬರುವ ವರ್ಷಗಳಲ್ಲಿ ಕೇವಲ ಉತ್ತರ ಪ್ರದೇಶವೊಂದರಲ್ಲೇ ಒಂದು ಟ್ರಿಲಿಯನ್ ಆರ್ಥಿಕತೆ ಮಾಡುವುದಾಗಿ ಯೋಗಿ ಆದಿತ್ಯನಾಥ್ ಈ ತಿಂಗಳ ಆರಂಭದಲ್ಲಿ ಪ್ರತಿಪಾದಿಸಿದ್ದರು.

“ನಮ್ಮಲ್ಲಿ ಮಂತ್ರಿಗಳು ಮತ್ತು ಅಧಿಕಾರಗಳು ದೂರದೃಷ್ಟಿ ಹೊಂದಿದ್ದಾರೆ. ಸಂವಾದಾತ್ಮಕ ಅಧಿವೇಶನ ನಡೆಯಲಿದ್ದು, ಅಲ್ಲಿ ನಾವು ಅಭಿವೃದ್ಧಿ ಯೋಜನೆಗಳ ಪ್ರಯೋಜನಗಳು ರಾಜ್ಯದ ಪ್ರತಿಯೊಬ್ಬ ವ್ಯಕ್ತಿಗೂ ತಲುಪುವಂತೆ ನೋಡಿಕೊಳ್ಳಲು ಮಾರ್ಗಸೂಚಿಯನ್ನು ರೂಪಿಸುತ್ತೇವೆ. ಉತ್ತರ ಪ್ರದೇಶವನ್ನು 1 ಟ್ರಿಲಿಯನ್ ಆರ್ಥಿಕತೆಯನ್ನಾಗಿ ಮಾಡುವುದು ನಮ್ಮ ಗುರಿ” ಅವರು ಹೇಳಿದ್ದಾರೆ.

ಸಿಎಂ ಯೋಗಿಯವರ ಈ ಮಾತುಗಳನ್ನು ಬಹಳಷ್ಟು ಜನ ಟೀಕಿಸಿದ್ದರೆ ಇನ್ನಷ್ಟು ಜನ ಲೇವಡಿ ಮಾಡಿದ್ದಾರೆ. ಖ್ಯಾತ ಯೂಟೂಬರ್ ಧೃವ್ ರಾಠೀ ” ವಾವ್! ಫಂಟಾ ಬಾಬಾನಿಗೆ ಆರ್ಥಿಕತೆಯ ಬಗ್ಗೆ ಬಹಳಷ್ಟು ಜ್ಞಾನವಿದ್ದು ಇವರನ್ನು ಭಾರತದ ಅರ್ಥ ಸಚಿವರನ್ನಾಗಿ ಮಾಡಬೇಕೆಂದು ಮೋದಿಯವರಲ್ಲಿ ಮನವಿ ಮಾಡುತ್ತೇನೆ” ಎಂದು ಟ್ರೋಲ್ ಮಾಡಿದ್ದಾರೆ.

ಮೋಘಲರು ಭಾರತವನ್ನು ಆಳುತ್ತಿದ್ದಾಗ ಭಾರತ ವಿಶ್ವದಲ್ಲೇ ನಂಬರ್‌ ಒನ್ ಆರ್ಥಿಕತೆಯಾಗಿತ್ತು. ಈ ಮೋದಿ ಆಳ್ವಿಕೆಯಲ್ಲಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶಕ್ಕಿಂತಲೂ ಕಳಪೆಯಾಗಿದೆ ಎಂದು ಅಶೋಕ್ ಸಾವಾನ್ ರವರು ಟೀಕಿಸಿದ್ದಾರೆ.

ಮೂರು ಪೆಗ್ ಗೋಮುತ್ರ ಕುಡಿದಾಗ: ಭಾರತದ ಆರ್ಥಿಕತೆ ಕುಸಿತಕ್ಕೆ ಮೊಘಲರು ಮತ್ತು ಬ್ರಿಟಿಷರು ಕಾರಣ

ಐದು ಪೆಗ್ ಗೋಮುತ್ರ ಕುಡಿದಾಗ : ಭಾರತದ ಆರ್ಥಿಕತೆ ಕುಸಿತಕ್ಕೆ ಅಲೆಕ್ಸಾಂಡರ್ ಮತ್ತು ಮೌರ್ಯರು ಕಾರಣ ಎಂದು ಅದ್ವೈದ್ ಎಂಬುವವರು ಟ್ರೋಲ್ ಮಾಡಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...