Homeಎಕಾನಮಿಭಾರತದ ಆರ್ಥಿಕತೆ ಕುಸಿತಕ್ಕೆ ಮೊಘಲರು ಮತ್ತು ಬ್ರಿಟಿಷರು ಕಾರಣ ಎಂದೇಳಿ ಟ್ರೋಲ್‌ಗೆ ಒಳಗಾದ ಸಿಎಂ ಯೋಗಿ..

ಭಾರತದ ಆರ್ಥಿಕತೆ ಕುಸಿತಕ್ಕೆ ಮೊಘಲರು ಮತ್ತು ಬ್ರಿಟಿಷರು ಕಾರಣ ಎಂದೇಳಿ ಟ್ರೋಲ್‌ಗೆ ಒಳಗಾದ ಸಿಎಂ ಯೋಗಿ..

- Advertisement -
- Advertisement -

ನಮ್ಮ ಸಾಂಸ್ಕೃತಿಕ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಮೂಲಕ ಮೊಘಲರು ಮತ್ತು ಬ್ರಿಟಿಷರು ಭಾರತೀಯ ಆರ್ಥಿಕತೆಯ ಮೇಲೆ ದಾಳಿ ಮಾಡಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಹೇಳಿದ್ದಾರೆ.

ಭಾರತದ ಆರ್ಥಿಕತೆಯನ್ನು ದುರ್ಬಲಗೊಳಿಸಲು ಮೊಘಲರು ಮತ್ತು ಬ್ರಿಟಿಷರು ಮುಂದಾಗಿದ್ದರು ಎಂದ ಅವರು ಮೊಘಲರ ಆಗಮನದ ಮೊದಲು ಭಾರತವು ವಿಶ್ವದ ಅತಿದೊಡ್ಡ ಆರ್ಥಿಕ ಶಕ್ತಿಯಾಗಿತ್ತು. ಬ್ರಿಟಿಷರು ದೇಶವನ್ನು ತೊರೆಯುವ ಹೊತ್ತಿಗೆ ಅದು ಕೇವಲ ತನ್ನ ಅದ್ಭುತ ಸ್ವಭಾವದ ನೆರಳು ಮಾತ್ರವಾಗಿದೆ ಎಂದು ಹೇಳಿದ್ದಾರೆ.

ಮುಂಬೈನಲ್ಲಿ ನಡೆದ ವಿಶ್ವ ಹಿಂದೂ ಆರ್ಥಿಕ ವೇದಿಕೆಯಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್, ಮೊಘಲರು ಭಾರತದ ಮೇಲೆ ದಾಳಿ ಮಾಡುವ ಮೊದಲು, ದೇಶವು ವಿಶ್ವದ ಅತಿದೊಡ್ಡ ಆರ್ಥಿಕ ಶಕ್ತಿಯಾಗಿತ್ತು ಎಂದು ವಿವರಿಸಿದರು. ಮೊಘಲರು ಭಾರತಕ್ಕೆ ಬರುವ ಹೊತ್ತಿಗೆ ಭಾರತವು ವಿಶ್ವದ ಆರ್ಥಿಕತೆಯ ಮೂರನೇ ಒಂದು ಭಾಗದಷ್ಟು ಪಾಲನ್ನು ಹೊಂದಿತ್ತು ಎಂದಿದ್ದಾರೆ.

“ಮೊಘಲ್ ಯುಗದಲ್ಲಿ ಭಾರತವು ಶೇಕಡಾ 36 ಕ್ಕಿಂತ ಹೆಚ್ಚು ಪಾಲನ್ನು ಹೊಂದಿರುವ ವಿಶ್ವ ಆರ್ಥಿಕತೆಯಲ್ಲಿ ಅತಿದೊಡ್ಡ ಪಾಲುದಾರರಾಗಿದ್ದರು ಮತ್ತು ಅವರು ಹೊರಟು ಬ್ರಿಟಿಷರು ಬರುವ ಹೊತ್ತಿಗೆ ಭಾರತದ ಪಾಲು ಶೇಕಡಾ 20 ಕ್ಕೆ ಇಳಿದಿತ್ತು” ಎಂದು ಉತ್ತರ ಪ್ರದೇಶದ ಸಿಎಂ ಹೇಳಿದ್ದಾರೆ

ದೇಶದಲ್ಲಿ ತಮ್ಮ 200 ವರ್ಷಗಳ ಆಳ್ವಿಕೆಯಲ್ಲಿ, ಬ್ರಿಟಿಷರು ಭಾರತೀಯ ಆರ್ಥಿಕತೆಯನ್ನು ದುರ್ಬಲಗೊಳಿಸಿದರು ಮತ್ತು ಅವರು ಹೊರಡುವ ಹೊತ್ತಿಗೆ ಅದನ್ನು ಕೇವಲ ಶೇ.೪ಕ್ಕೆ ಇಳಿಸಿದ್ದರು ಎಂದು ಅವರು ಒತ್ತಿ ಹೇಳಿದ್ದಾರೆ.

ಮುಂಬರುವ ವರ್ಷಗಳಲ್ಲಿ ಕೇವಲ ಉತ್ತರ ಪ್ರದೇಶವೊಂದರಲ್ಲೇ ಒಂದು ಟ್ರಿಲಿಯನ್ ಆರ್ಥಿಕತೆ ಮಾಡುವುದಾಗಿ ಯೋಗಿ ಆದಿತ್ಯನಾಥ್ ಈ ತಿಂಗಳ ಆರಂಭದಲ್ಲಿ ಪ್ರತಿಪಾದಿಸಿದ್ದರು.

“ನಮ್ಮಲ್ಲಿ ಮಂತ್ರಿಗಳು ಮತ್ತು ಅಧಿಕಾರಗಳು ದೂರದೃಷ್ಟಿ ಹೊಂದಿದ್ದಾರೆ. ಸಂವಾದಾತ್ಮಕ ಅಧಿವೇಶನ ನಡೆಯಲಿದ್ದು, ಅಲ್ಲಿ ನಾವು ಅಭಿವೃದ್ಧಿ ಯೋಜನೆಗಳ ಪ್ರಯೋಜನಗಳು ರಾಜ್ಯದ ಪ್ರತಿಯೊಬ್ಬ ವ್ಯಕ್ತಿಗೂ ತಲುಪುವಂತೆ ನೋಡಿಕೊಳ್ಳಲು ಮಾರ್ಗಸೂಚಿಯನ್ನು ರೂಪಿಸುತ್ತೇವೆ. ಉತ್ತರ ಪ್ರದೇಶವನ್ನು 1 ಟ್ರಿಲಿಯನ್ ಆರ್ಥಿಕತೆಯನ್ನಾಗಿ ಮಾಡುವುದು ನಮ್ಮ ಗುರಿ” ಅವರು ಹೇಳಿದ್ದಾರೆ.

ಸಿಎಂ ಯೋಗಿಯವರ ಈ ಮಾತುಗಳನ್ನು ಬಹಳಷ್ಟು ಜನ ಟೀಕಿಸಿದ್ದರೆ ಇನ್ನಷ್ಟು ಜನ ಲೇವಡಿ ಮಾಡಿದ್ದಾರೆ. ಖ್ಯಾತ ಯೂಟೂಬರ್ ಧೃವ್ ರಾಠೀ ” ವಾವ್! ಫಂಟಾ ಬಾಬಾನಿಗೆ ಆರ್ಥಿಕತೆಯ ಬಗ್ಗೆ ಬಹಳಷ್ಟು ಜ್ಞಾನವಿದ್ದು ಇವರನ್ನು ಭಾರತದ ಅರ್ಥ ಸಚಿವರನ್ನಾಗಿ ಮಾಡಬೇಕೆಂದು ಮೋದಿಯವರಲ್ಲಿ ಮನವಿ ಮಾಡುತ್ತೇನೆ” ಎಂದು ಟ್ರೋಲ್ ಮಾಡಿದ್ದಾರೆ.

ಮೋಘಲರು ಭಾರತವನ್ನು ಆಳುತ್ತಿದ್ದಾಗ ಭಾರತ ವಿಶ್ವದಲ್ಲೇ ನಂಬರ್‌ ಒನ್ ಆರ್ಥಿಕತೆಯಾಗಿತ್ತು. ಈ ಮೋದಿ ಆಳ್ವಿಕೆಯಲ್ಲಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶಕ್ಕಿಂತಲೂ ಕಳಪೆಯಾಗಿದೆ ಎಂದು ಅಶೋಕ್ ಸಾವಾನ್ ರವರು ಟೀಕಿಸಿದ್ದಾರೆ.

ಮೂರು ಪೆಗ್ ಗೋಮುತ್ರ ಕುಡಿದಾಗ: ಭಾರತದ ಆರ್ಥಿಕತೆ ಕುಸಿತಕ್ಕೆ ಮೊಘಲರು ಮತ್ತು ಬ್ರಿಟಿಷರು ಕಾರಣ

ಐದು ಪೆಗ್ ಗೋಮುತ್ರ ಕುಡಿದಾಗ : ಭಾರತದ ಆರ್ಥಿಕತೆ ಕುಸಿತಕ್ಕೆ ಅಲೆಕ್ಸಾಂಡರ್ ಮತ್ತು ಮೌರ್ಯರು ಕಾರಣ ಎಂದು ಅದ್ವೈದ್ ಎಂಬುವವರು ಟ್ರೋಲ್ ಮಾಡಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...