Homeಎಕಾನಮಿಭಾರತದ ಆರ್ಥಿಕತೆ ಕುಸಿತಕ್ಕೆ ಮೊಘಲರು ಮತ್ತು ಬ್ರಿಟಿಷರು ಕಾರಣ ಎಂದೇಳಿ ಟ್ರೋಲ್‌ಗೆ ಒಳಗಾದ ಸಿಎಂ ಯೋಗಿ..

ಭಾರತದ ಆರ್ಥಿಕತೆ ಕುಸಿತಕ್ಕೆ ಮೊಘಲರು ಮತ್ತು ಬ್ರಿಟಿಷರು ಕಾರಣ ಎಂದೇಳಿ ಟ್ರೋಲ್‌ಗೆ ಒಳಗಾದ ಸಿಎಂ ಯೋಗಿ..

- Advertisement -
- Advertisement -

ನಮ್ಮ ಸಾಂಸ್ಕೃತಿಕ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಮೂಲಕ ಮೊಘಲರು ಮತ್ತು ಬ್ರಿಟಿಷರು ಭಾರತೀಯ ಆರ್ಥಿಕತೆಯ ಮೇಲೆ ದಾಳಿ ಮಾಡಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಹೇಳಿದ್ದಾರೆ.

ಭಾರತದ ಆರ್ಥಿಕತೆಯನ್ನು ದುರ್ಬಲಗೊಳಿಸಲು ಮೊಘಲರು ಮತ್ತು ಬ್ರಿಟಿಷರು ಮುಂದಾಗಿದ್ದರು ಎಂದ ಅವರು ಮೊಘಲರ ಆಗಮನದ ಮೊದಲು ಭಾರತವು ವಿಶ್ವದ ಅತಿದೊಡ್ಡ ಆರ್ಥಿಕ ಶಕ್ತಿಯಾಗಿತ್ತು. ಬ್ರಿಟಿಷರು ದೇಶವನ್ನು ತೊರೆಯುವ ಹೊತ್ತಿಗೆ ಅದು ಕೇವಲ ತನ್ನ ಅದ್ಭುತ ಸ್ವಭಾವದ ನೆರಳು ಮಾತ್ರವಾಗಿದೆ ಎಂದು ಹೇಳಿದ್ದಾರೆ.

ಮುಂಬೈನಲ್ಲಿ ನಡೆದ ವಿಶ್ವ ಹಿಂದೂ ಆರ್ಥಿಕ ವೇದಿಕೆಯಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್, ಮೊಘಲರು ಭಾರತದ ಮೇಲೆ ದಾಳಿ ಮಾಡುವ ಮೊದಲು, ದೇಶವು ವಿಶ್ವದ ಅತಿದೊಡ್ಡ ಆರ್ಥಿಕ ಶಕ್ತಿಯಾಗಿತ್ತು ಎಂದು ವಿವರಿಸಿದರು. ಮೊಘಲರು ಭಾರತಕ್ಕೆ ಬರುವ ಹೊತ್ತಿಗೆ ಭಾರತವು ವಿಶ್ವದ ಆರ್ಥಿಕತೆಯ ಮೂರನೇ ಒಂದು ಭಾಗದಷ್ಟು ಪಾಲನ್ನು ಹೊಂದಿತ್ತು ಎಂದಿದ್ದಾರೆ.

“ಮೊಘಲ್ ಯುಗದಲ್ಲಿ ಭಾರತವು ಶೇಕಡಾ 36 ಕ್ಕಿಂತ ಹೆಚ್ಚು ಪಾಲನ್ನು ಹೊಂದಿರುವ ವಿಶ್ವ ಆರ್ಥಿಕತೆಯಲ್ಲಿ ಅತಿದೊಡ್ಡ ಪಾಲುದಾರರಾಗಿದ್ದರು ಮತ್ತು ಅವರು ಹೊರಟು ಬ್ರಿಟಿಷರು ಬರುವ ಹೊತ್ತಿಗೆ ಭಾರತದ ಪಾಲು ಶೇಕಡಾ 20 ಕ್ಕೆ ಇಳಿದಿತ್ತು” ಎಂದು ಉತ್ತರ ಪ್ರದೇಶದ ಸಿಎಂ ಹೇಳಿದ್ದಾರೆ

ದೇಶದಲ್ಲಿ ತಮ್ಮ 200 ವರ್ಷಗಳ ಆಳ್ವಿಕೆಯಲ್ಲಿ, ಬ್ರಿಟಿಷರು ಭಾರತೀಯ ಆರ್ಥಿಕತೆಯನ್ನು ದುರ್ಬಲಗೊಳಿಸಿದರು ಮತ್ತು ಅವರು ಹೊರಡುವ ಹೊತ್ತಿಗೆ ಅದನ್ನು ಕೇವಲ ಶೇ.೪ಕ್ಕೆ ಇಳಿಸಿದ್ದರು ಎಂದು ಅವರು ಒತ್ತಿ ಹೇಳಿದ್ದಾರೆ.

ಮುಂಬರುವ ವರ್ಷಗಳಲ್ಲಿ ಕೇವಲ ಉತ್ತರ ಪ್ರದೇಶವೊಂದರಲ್ಲೇ ಒಂದು ಟ್ರಿಲಿಯನ್ ಆರ್ಥಿಕತೆ ಮಾಡುವುದಾಗಿ ಯೋಗಿ ಆದಿತ್ಯನಾಥ್ ಈ ತಿಂಗಳ ಆರಂಭದಲ್ಲಿ ಪ್ರತಿಪಾದಿಸಿದ್ದರು.

“ನಮ್ಮಲ್ಲಿ ಮಂತ್ರಿಗಳು ಮತ್ತು ಅಧಿಕಾರಗಳು ದೂರದೃಷ್ಟಿ ಹೊಂದಿದ್ದಾರೆ. ಸಂವಾದಾತ್ಮಕ ಅಧಿವೇಶನ ನಡೆಯಲಿದ್ದು, ಅಲ್ಲಿ ನಾವು ಅಭಿವೃದ್ಧಿ ಯೋಜನೆಗಳ ಪ್ರಯೋಜನಗಳು ರಾಜ್ಯದ ಪ್ರತಿಯೊಬ್ಬ ವ್ಯಕ್ತಿಗೂ ತಲುಪುವಂತೆ ನೋಡಿಕೊಳ್ಳಲು ಮಾರ್ಗಸೂಚಿಯನ್ನು ರೂಪಿಸುತ್ತೇವೆ. ಉತ್ತರ ಪ್ರದೇಶವನ್ನು 1 ಟ್ರಿಲಿಯನ್ ಆರ್ಥಿಕತೆಯನ್ನಾಗಿ ಮಾಡುವುದು ನಮ್ಮ ಗುರಿ” ಅವರು ಹೇಳಿದ್ದಾರೆ.

ಸಿಎಂ ಯೋಗಿಯವರ ಈ ಮಾತುಗಳನ್ನು ಬಹಳಷ್ಟು ಜನ ಟೀಕಿಸಿದ್ದರೆ ಇನ್ನಷ್ಟು ಜನ ಲೇವಡಿ ಮಾಡಿದ್ದಾರೆ. ಖ್ಯಾತ ಯೂಟೂಬರ್ ಧೃವ್ ರಾಠೀ ” ವಾವ್! ಫಂಟಾ ಬಾಬಾನಿಗೆ ಆರ್ಥಿಕತೆಯ ಬಗ್ಗೆ ಬಹಳಷ್ಟು ಜ್ಞಾನವಿದ್ದು ಇವರನ್ನು ಭಾರತದ ಅರ್ಥ ಸಚಿವರನ್ನಾಗಿ ಮಾಡಬೇಕೆಂದು ಮೋದಿಯವರಲ್ಲಿ ಮನವಿ ಮಾಡುತ್ತೇನೆ” ಎಂದು ಟ್ರೋಲ್ ಮಾಡಿದ್ದಾರೆ.

ಮೋಘಲರು ಭಾರತವನ್ನು ಆಳುತ್ತಿದ್ದಾಗ ಭಾರತ ವಿಶ್ವದಲ್ಲೇ ನಂಬರ್‌ ಒನ್ ಆರ್ಥಿಕತೆಯಾಗಿತ್ತು. ಈ ಮೋದಿ ಆಳ್ವಿಕೆಯಲ್ಲಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶಕ್ಕಿಂತಲೂ ಕಳಪೆಯಾಗಿದೆ ಎಂದು ಅಶೋಕ್ ಸಾವಾನ್ ರವರು ಟೀಕಿಸಿದ್ದಾರೆ.

ಮೂರು ಪೆಗ್ ಗೋಮುತ್ರ ಕುಡಿದಾಗ: ಭಾರತದ ಆರ್ಥಿಕತೆ ಕುಸಿತಕ್ಕೆ ಮೊಘಲರು ಮತ್ತು ಬ್ರಿಟಿಷರು ಕಾರಣ

ಐದು ಪೆಗ್ ಗೋಮುತ್ರ ಕುಡಿದಾಗ : ಭಾರತದ ಆರ್ಥಿಕತೆ ಕುಸಿತಕ್ಕೆ ಅಲೆಕ್ಸಾಂಡರ್ ಮತ್ತು ಮೌರ್ಯರು ಕಾರಣ ಎಂದು ಅದ್ವೈದ್ ಎಂಬುವವರು ಟ್ರೋಲ್ ಮಾಡಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...