Homeಎಕಾನಮಿಭಾರತದ ಆರ್ಥಿಕತೆ ಕುಸಿತಕ್ಕೆ ಮೊಘಲರು ಮತ್ತು ಬ್ರಿಟಿಷರು ಕಾರಣ ಎಂದೇಳಿ ಟ್ರೋಲ್‌ಗೆ ಒಳಗಾದ ಸಿಎಂ ಯೋಗಿ..

ಭಾರತದ ಆರ್ಥಿಕತೆ ಕುಸಿತಕ್ಕೆ ಮೊಘಲರು ಮತ್ತು ಬ್ರಿಟಿಷರು ಕಾರಣ ಎಂದೇಳಿ ಟ್ರೋಲ್‌ಗೆ ಒಳಗಾದ ಸಿಎಂ ಯೋಗಿ..

- Advertisement -
- Advertisement -

ನಮ್ಮ ಸಾಂಸ್ಕೃತಿಕ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಮೂಲಕ ಮೊಘಲರು ಮತ್ತು ಬ್ರಿಟಿಷರು ಭಾರತೀಯ ಆರ್ಥಿಕತೆಯ ಮೇಲೆ ದಾಳಿ ಮಾಡಿದ್ದಾರೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಹೇಳಿದ್ದಾರೆ.

ಭಾರತದ ಆರ್ಥಿಕತೆಯನ್ನು ದುರ್ಬಲಗೊಳಿಸಲು ಮೊಘಲರು ಮತ್ತು ಬ್ರಿಟಿಷರು ಮುಂದಾಗಿದ್ದರು ಎಂದ ಅವರು ಮೊಘಲರ ಆಗಮನದ ಮೊದಲು ಭಾರತವು ವಿಶ್ವದ ಅತಿದೊಡ್ಡ ಆರ್ಥಿಕ ಶಕ್ತಿಯಾಗಿತ್ತು. ಬ್ರಿಟಿಷರು ದೇಶವನ್ನು ತೊರೆಯುವ ಹೊತ್ತಿಗೆ ಅದು ಕೇವಲ ತನ್ನ ಅದ್ಭುತ ಸ್ವಭಾವದ ನೆರಳು ಮಾತ್ರವಾಗಿದೆ ಎಂದು ಹೇಳಿದ್ದಾರೆ.

ಮುಂಬೈನಲ್ಲಿ ನಡೆದ ವಿಶ್ವ ಹಿಂದೂ ಆರ್ಥಿಕ ವೇದಿಕೆಯಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್, ಮೊಘಲರು ಭಾರತದ ಮೇಲೆ ದಾಳಿ ಮಾಡುವ ಮೊದಲು, ದೇಶವು ವಿಶ್ವದ ಅತಿದೊಡ್ಡ ಆರ್ಥಿಕ ಶಕ್ತಿಯಾಗಿತ್ತು ಎಂದು ವಿವರಿಸಿದರು. ಮೊಘಲರು ಭಾರತಕ್ಕೆ ಬರುವ ಹೊತ್ತಿಗೆ ಭಾರತವು ವಿಶ್ವದ ಆರ್ಥಿಕತೆಯ ಮೂರನೇ ಒಂದು ಭಾಗದಷ್ಟು ಪಾಲನ್ನು ಹೊಂದಿತ್ತು ಎಂದಿದ್ದಾರೆ.

“ಮೊಘಲ್ ಯುಗದಲ್ಲಿ ಭಾರತವು ಶೇಕಡಾ 36 ಕ್ಕಿಂತ ಹೆಚ್ಚು ಪಾಲನ್ನು ಹೊಂದಿರುವ ವಿಶ್ವ ಆರ್ಥಿಕತೆಯಲ್ಲಿ ಅತಿದೊಡ್ಡ ಪಾಲುದಾರರಾಗಿದ್ದರು ಮತ್ತು ಅವರು ಹೊರಟು ಬ್ರಿಟಿಷರು ಬರುವ ಹೊತ್ತಿಗೆ ಭಾರತದ ಪಾಲು ಶೇಕಡಾ 20 ಕ್ಕೆ ಇಳಿದಿತ್ತು” ಎಂದು ಉತ್ತರ ಪ್ರದೇಶದ ಸಿಎಂ ಹೇಳಿದ್ದಾರೆ

ದೇಶದಲ್ಲಿ ತಮ್ಮ 200 ವರ್ಷಗಳ ಆಳ್ವಿಕೆಯಲ್ಲಿ, ಬ್ರಿಟಿಷರು ಭಾರತೀಯ ಆರ್ಥಿಕತೆಯನ್ನು ದುರ್ಬಲಗೊಳಿಸಿದರು ಮತ್ತು ಅವರು ಹೊರಡುವ ಹೊತ್ತಿಗೆ ಅದನ್ನು ಕೇವಲ ಶೇ.೪ಕ್ಕೆ ಇಳಿಸಿದ್ದರು ಎಂದು ಅವರು ಒತ್ತಿ ಹೇಳಿದ್ದಾರೆ.

ಮುಂಬರುವ ವರ್ಷಗಳಲ್ಲಿ ಕೇವಲ ಉತ್ತರ ಪ್ರದೇಶವೊಂದರಲ್ಲೇ ಒಂದು ಟ್ರಿಲಿಯನ್ ಆರ್ಥಿಕತೆ ಮಾಡುವುದಾಗಿ ಯೋಗಿ ಆದಿತ್ಯನಾಥ್ ಈ ತಿಂಗಳ ಆರಂಭದಲ್ಲಿ ಪ್ರತಿಪಾದಿಸಿದ್ದರು.

“ನಮ್ಮಲ್ಲಿ ಮಂತ್ರಿಗಳು ಮತ್ತು ಅಧಿಕಾರಗಳು ದೂರದೃಷ್ಟಿ ಹೊಂದಿದ್ದಾರೆ. ಸಂವಾದಾತ್ಮಕ ಅಧಿವೇಶನ ನಡೆಯಲಿದ್ದು, ಅಲ್ಲಿ ನಾವು ಅಭಿವೃದ್ಧಿ ಯೋಜನೆಗಳ ಪ್ರಯೋಜನಗಳು ರಾಜ್ಯದ ಪ್ರತಿಯೊಬ್ಬ ವ್ಯಕ್ತಿಗೂ ತಲುಪುವಂತೆ ನೋಡಿಕೊಳ್ಳಲು ಮಾರ್ಗಸೂಚಿಯನ್ನು ರೂಪಿಸುತ್ತೇವೆ. ಉತ್ತರ ಪ್ರದೇಶವನ್ನು 1 ಟ್ರಿಲಿಯನ್ ಆರ್ಥಿಕತೆಯನ್ನಾಗಿ ಮಾಡುವುದು ನಮ್ಮ ಗುರಿ” ಅವರು ಹೇಳಿದ್ದಾರೆ.

ಸಿಎಂ ಯೋಗಿಯವರ ಈ ಮಾತುಗಳನ್ನು ಬಹಳಷ್ಟು ಜನ ಟೀಕಿಸಿದ್ದರೆ ಇನ್ನಷ್ಟು ಜನ ಲೇವಡಿ ಮಾಡಿದ್ದಾರೆ. ಖ್ಯಾತ ಯೂಟೂಬರ್ ಧೃವ್ ರಾಠೀ ” ವಾವ್! ಫಂಟಾ ಬಾಬಾನಿಗೆ ಆರ್ಥಿಕತೆಯ ಬಗ್ಗೆ ಬಹಳಷ್ಟು ಜ್ಞಾನವಿದ್ದು ಇವರನ್ನು ಭಾರತದ ಅರ್ಥ ಸಚಿವರನ್ನಾಗಿ ಮಾಡಬೇಕೆಂದು ಮೋದಿಯವರಲ್ಲಿ ಮನವಿ ಮಾಡುತ್ತೇನೆ” ಎಂದು ಟ್ರೋಲ್ ಮಾಡಿದ್ದಾರೆ.

ಮೋಘಲರು ಭಾರತವನ್ನು ಆಳುತ್ತಿದ್ದಾಗ ಭಾರತ ವಿಶ್ವದಲ್ಲೇ ನಂಬರ್‌ ಒನ್ ಆರ್ಥಿಕತೆಯಾಗಿತ್ತು. ಈ ಮೋದಿ ಆಳ್ವಿಕೆಯಲ್ಲಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶಕ್ಕಿಂತಲೂ ಕಳಪೆಯಾಗಿದೆ ಎಂದು ಅಶೋಕ್ ಸಾವಾನ್ ರವರು ಟೀಕಿಸಿದ್ದಾರೆ.

ಮೂರು ಪೆಗ್ ಗೋಮುತ್ರ ಕುಡಿದಾಗ: ಭಾರತದ ಆರ್ಥಿಕತೆ ಕುಸಿತಕ್ಕೆ ಮೊಘಲರು ಮತ್ತು ಬ್ರಿಟಿಷರು ಕಾರಣ

ಐದು ಪೆಗ್ ಗೋಮುತ್ರ ಕುಡಿದಾಗ : ಭಾರತದ ಆರ್ಥಿಕತೆ ಕುಸಿತಕ್ಕೆ ಅಲೆಕ್ಸಾಂಡರ್ ಮತ್ತು ಮೌರ್ಯರು ಕಾರಣ ಎಂದು ಅದ್ವೈದ್ ಎಂಬುವವರು ಟ್ರೋಲ್ ಮಾಡಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...