Homeಮುಖಪುಟಸಿರಿಯಾದ ಹಂಗಾಮಿ ಪ್ರಧಾನಿಯಾಗಿ ಮೊಹಮ್ಮದ್ ಅಲ್ ಬಶೀರ್ ನೇಮಕ

ಸಿರಿಯಾದ ಹಂಗಾಮಿ ಪ್ರಧಾನಿಯಾಗಿ ಮೊಹಮ್ಮದ್ ಅಲ್ ಬಶೀರ್ ನೇಮಕ

- Advertisement -
- Advertisement -

ರಾಜಕೀಯ ಅರಾಜಕತೆ ಉಂಟಾಗಿರುವ ಸಿರಿಯಾದ ಹಂಗಾಮಿ ಪ್ರಧಾನಿಯಾಗಿ ಮೊಹಮ್ಮದ್ ಅಲ್ ಬಶೀರ್ ಆಯ್ಕೆಯಾಗಿದ್ದಾರೆ. ಮಂಗಳವಾರ (ಡಿ.10) ಹಾಲಿ ಸರ್ಕಾರ ಮತ್ತು ಮುಂಬರುವ ಸರ್ಕಾರದ ಮುಖ್ಯಸ್ಥರ ಜೊತೆ ಬಶೀರ್ ಸಭೆ ನಡೆಸಿದ್ದಾರೆ.

ವರದಿಗಳ ಪ್ರಕಾರ, ಸಿರಿಯಾದ ಅಧ್ಯಕ್ಷರಾಗಿದ್ದ ಬಶರ್ ಅಲ್ ಅಸದ್ ಪಲಾಯನ ಮಾಡಿದ ಬಳಿಕ, ಪ್ರಧಾನಿ ಮೊಹಮ್ಮದ್ ಘಾಝಿ ಅಲ್ ಜಲಾಲಿ ಬಂಡುಕೋರರನ್ನು ಬೆಂಬಲಿಸಿದ್ದಾರೆ. ನೂತನ ಮಧ್ಯಂತರ ಸರ್ಕಾರ ರಚನೆಗೆ ಸಹಕಾರ ನೀಡುವುದಾಗಿ ಹೇಳಿದ್ದಾರೆ. ಹಾಗಾಗಿ, ಬಂಡುಕೋರರ ಗುಂಪಿನ ನಾಯಕ ಮೊಹಮ್ಮದ್ ಅಲ್ ಬಶೀರ್ ಅಧಿಕಾರವಹಿಸಿಕೊಂಡಿದ್ದಾರೆ. 2025ರ ಮಾರ್ಚ್‌ವರೆಗೆ ಅವರು ಪ್ರಧಾನಿಯಾಗಿ ದೇಶವನ್ನು ಮುನ್ನಡೆಸಲಿದ್ದಾರೆ. ಬಶೀರ್ ಆಡಳಿತವನ್ನು ‘ಪರಿವರ್ತನಾ ಸರ್ಕಾರ’ (Transitional Govt) ಎಂದು ಹೇಳಲಾಗಿದೆ.

ಸೋಮವಾರ (ಡಿ.9) ಬಂಡುಕೋರರ ಗುಂಪಿನ ಕಮಾಂಡರ್ ಅಬು ಮೊಹಮ್ಮದ್ ಅಲ್-ಜುಲಾನಿ ಅವರು ಪ್ರಧಾನಿ ಮೊಹಮ್ಮದ್ ಘಾಝಿ ಅಲ್ ಜಲಾಲಿ ಮತ್ತು ಉಪಾಧ್ಯಕ್ಷ ಫೈಸಲ್ ಮೆಕ್ದಾದ್ ಅವರನ್ನು ಭೇಟಿಯಾಗಿ ಮಧ್ಯಂತರ ಸರ್ಕಾರ ರಚನೆ ಕುರಿತು ಚರ್ಚೆ ನಡೆಸಿದ್ದರು.

ಆ ಬಳಿಕ, ಹೋರಾಟಗಾರರ ಗುಂಪಿಗೆ ಸಂಪೂರ್ಣ ಬೆಂಬಲ ನೀಡುತ್ತೇವೆ. ನನ್ನ ಸರ್ಕಾರ ಇನ್ನುಮುಂದೆ ಹೋರಾಟಗಾರರ ಸರ್ಕಾರವಾಗಿ ಬದಲಾಗಲಿದೆ ಎಂದು ಪ್ರಧಾನಿ ಜಲಾಲಿ ಹೇಳಿದ್ದರು.

ವಾಯುವ್ಯ ಸಿರಿಯಾದ ಇದ್ಲಿಬ್ ಮತ್ತು ಅಲೆಪ್ಪೋ ಪ್ರಾಂತ್ಯವನ್ನು ಬಂಡುಕೋರರ ಪ್ರಬಲ ಗುಂಪು ಹಯಾತ್ ತಹ್ರೀರ್ ಅಲ್-ಶಾಮ್ (ಹೆಚ್‌ಟಿಎಸ್‌) ತನ್ನ ವಶಕ್ಕೆ ಪಡೆದುಕೊಂಡ ಬಳಿಕ, ಕಳೆದ ಜನವರಿಯಿಂದ ಮೊಹಮ್ಮದ್ ಅಲ್ ಬಶೀರ್ ಅಲ್ಲಿನ ಆಡಳಿತ ನೋಡಿಕೊಳ್ಳುತ್ತಿದ್ದರು. ಬಶೀರ್ ಆಡಳಿತವನ್ನು ಬಂಡುಕೋರರ ಗುಂಪು ‘ಮುಕ್ತಿ ಸರ್ಕಾರ’ (Salvation government) ಎಂದಿದೆ.

ಮಂಗಳವಾರ ನಡೆಸಿದ ಸಭೆಯಲ್ಲಿ ಮೊಹಮ್ಮದ್ ಅಲ್ ಬಶೀರ್ ಅವರು ಮುಂದಿನ ಜವಾಬ್ದಾರಿ ಹಂಚಿಕೆ ಕುರಿತು ಮಾತುಕತೆ ನಡೆಸಿದ್ದಾರೆ. ದೇಶದ ಜನರು ‘ಸ್ಥಿರತೆ ಮತ್ತು ಶಾಂತತೆಯನ್ನು ಆನಂದಿಸಿ’ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ. ಸಿರಿಯಾದ ಹೊಸ ಸರ್ಕಾರ ‘ಉತ್ತಮ ಸಂದೇಶ’ ಸಾರಲಿ ಎಂದು ಸಿರಿಯಾದ ವಿಶ್ವಸಂಸ್ಥೆಯ ಪ್ರತಿನಿಧಿ ಹೇಳಿದ್ದಾರೆ.

ಸಿರಿಯಾದ ಭವಿಷ್ಯದ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡುತ್ತೇವೆ. ಹೊಸ ಸರ್ಕಾರ ಅಲ್ಪಸಂಖ್ಯಾತರನ್ನು ಗೌರವಿಸಲಿ, ವಿಶ್ವಾಸಾರ್ಹತೆ ಕಾಪಾಡಲಿ ಮತ್ತು ಎಲ್ಲರ ಒಳಗೊಳ್ಳುವಿಕೆಯನ್ನು ಖಾತ್ರಿಪಡಿಸಲಿ ಎಂದು ಯುಎಸ್‌ ಸರ್ಕಾರದ ಕಾರ್ಯದರ್ಶಿ ಆಂಟೋನಿ ಜೆ. ಬ್ಲಿಂಕೆನ್ ತಿಳಿಸಿದ್ದಾರೆ.

ಮೊಹಮ್ಮದ್ ಬಶೀರ್ ಯಾರು?

ಎಲೆಕ್ಟ್ರಿಕಲ್ ಎಂಜಿನಿಯರ್ ಪದವಿ ಪಡೆದಿರುವ ಸಿರಿಯಾದ ನೂತನ ಹಂಗಾಮಿ ಪ್ರಧಾನಿ ಮೊಹಮ್ಮದ್ ಅಲ್ ಬಶೀರ್, 2011 ರಲ್ಲಿ ದೇಶದಲ್ಲಿ ಅಂತರ್ಯುದ್ಧ ಪ್ರಾರಂಭವಾಗುವ ಮೊದಲು ಅನಿಲ ಸ್ಥಾವರಗಳಲ್ಲಿ ಕೆಲಸ ಮಾಡಿದ್ದರು.

ಕಳೆದ ಜನವರಿಯಲ್ಲಿ ಬಶೀರ್ ಅವರನ್ನು ತಮ್ಮ ನಿಯಂತ್ರಣದಲ್ಲಿರುವ ಇದ್ಲಿಬ್ ಮತ್ತು ಅಲೆಪ್ಪೋ ಪ್ರಾಂತ್ಯಗಳ ‘ಮುಕ್ತಿ ಸರ್ಕಾರ’ದ (Salvation government) ಪ್ರಧಾನ ಮಂತ್ರಿಯಾಗಿ ಅಥವಾ ಆಡಳಿತಗಾರನಾಗಿ ಹಯಾತ್ ತಹ್ರೀರ್ ಅಲ್-ಶಾಮ್ (ಹೆಚ್‌ಟಿಎಸ್‌) ನೇಮಿಸಿತ್ತು.

ಇಸ್ಲಾಮಿಕ್ ನೀತಿಗಳಿಂದ ಮಾರ್ಗದರ್ಶಿಸಲ್ಪಟ್ಟ ಧಾರ್ಮಿಕ ಮಂಡಳಿಯ ಮೂಲಕ ಸಚಿವಾಲಯಗಳು, ಸ್ಥಳೀಯ ಇಲಾಖೆಗಳು, ನ್ಯಾಯಾಂಗ ಮತ್ತು ಭದ್ರತಾ ಅಧಿಕಾರಿಗಳೊಂದಿಗೆ ಬಂಡುಕೋರರ ಮುಕ್ತಿ ಸರ್ಕಾರ ಒಂದು ರಾಜ್ಯದಂತೆ ಕಾರ್ಯನಿರ್ವಹಿಸಿತ್ತು.

ಬಂಡುಕೋರರ ಗುಂಪು ಹೆಚ್‌ಟಿಎಸ್ ಮತ್ತು ಅದರ ಮಿತ್ರರು ಇದ್ಲಿಬ್ ಮತ್ತು ಅಲೆಪ್ಪೋ ಪ್ರಾಂತ್ಯಗಳನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡ ಬಳಿಕ, ಅಲ್ಲಿನ ಸರ್ಕಾರಿ ಕಚೇರಿಗಳು ಸೇರಿದಂತೆ ಎಲ್ಲಾ ಕಾರ್ಯ ಚಟುವಟಿಕೆಗಳು ಸ್ಥಗಿತಗೊಂಡಿತ್ತು. ಆಗ ಮುಕ್ತಿ ಸರ್ಕಾರದ ಮೂಲಕ ಅವುಗಳನ್ನು ಮೊಹಮ್ಮದ್ ಅಲ್ ಬಶೀರ್ ಪುನಃ ಸ್ಥಾಪಿಸಿದ್ದರು.

ಬಂಡುಕೋರರ ಗುಂಪು ಸಿರಿಯಾದ ರಾಜಧಾನಿ ಡಮಾಸ್ಕಸ್ ಮೇಲೆ ಡಿ.8ರಂದು ಹಿಡಿತ ಸಾಧಿಸಿದ್ದಾರೆ. ಆ ಬಳಿಕ ಅಧ್ಯಕ್ಷ ಬಶರ್ ಅಲ್ ಅಸಾದ್ ಮತ್ತು ಕುಟುಂಬ ರಷ್ಯಾದ ಮಾಸ್ಕೋಗೆ ಪಲಾಯನ ಮಾಡಿದೆ. ಸಿರಿಯಾ ಬಂಡುಕೋರರ ವಶವಾಗುವ ಮೂಲಕ ಬಶರ್ ಅಲ್ ಅಸಾದ್ ಕುಟುಂಬದ 50 ವರ್ಷಗಳ ನಿರಂಕುಶ ಆಡಳಿತ ಕೊನೆಗೊಂಡಿದೆ. ಬಂಡುಕೋರರ ಗುಂಪು, ” ನಮ್ಮ ಹೋರಾಟ ಅಸದ್ ಆಡಳಿತ ವಿರುದ್ದವಾಗಿತ್ತು. ಆತನ ಹುದ್ದೆಯಿಂದ ಕೆಳಗಿಳಿದ ಬಳಿಕ ಮುಂದೆ ಎಲ್ಲರನ್ನು ಒಳಗೊಂಡ ಸರ್ಕಾರ ರಚಿಸಿ ದೇಶ ಮುನ್ನಡೆಸುತ್ತೇವೆ” ಎಂದಿದೆ.

ಇದನ್ನೂ ಓದಿ : ಉತ್ತರ ಪ್ರದೇಶ | 180 ವರ್ಷ ಹಳೆಯ ಮಸೀದಿಯನ್ನು ಭಾಗಶಃ ಕೆಡವಿದ ಜಿಲ್ಲಾಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...