Homeಮುಖಪುಟಸಿರಿಯಾದ ಹಂಗಾಮಿ ಪ್ರಧಾನಿಯಾಗಿ ಮೊಹಮ್ಮದ್ ಅಲ್ ಬಶೀರ್ ನೇಮಕ

ಸಿರಿಯಾದ ಹಂಗಾಮಿ ಪ್ರಧಾನಿಯಾಗಿ ಮೊಹಮ್ಮದ್ ಅಲ್ ಬಶೀರ್ ನೇಮಕ

- Advertisement -
- Advertisement -

ರಾಜಕೀಯ ಅರಾಜಕತೆ ಉಂಟಾಗಿರುವ ಸಿರಿಯಾದ ಹಂಗಾಮಿ ಪ್ರಧಾನಿಯಾಗಿ ಮೊಹಮ್ಮದ್ ಅಲ್ ಬಶೀರ್ ಆಯ್ಕೆಯಾಗಿದ್ದಾರೆ. ಮಂಗಳವಾರ (ಡಿ.10) ಹಾಲಿ ಸರ್ಕಾರ ಮತ್ತು ಮುಂಬರುವ ಸರ್ಕಾರದ ಮುಖ್ಯಸ್ಥರ ಜೊತೆ ಬಶೀರ್ ಸಭೆ ನಡೆಸಿದ್ದಾರೆ.

ವರದಿಗಳ ಪ್ರಕಾರ, ಸಿರಿಯಾದ ಅಧ್ಯಕ್ಷರಾಗಿದ್ದ ಬಶರ್ ಅಲ್ ಅಸದ್ ಪಲಾಯನ ಮಾಡಿದ ಬಳಿಕ, ಪ್ರಧಾನಿ ಮೊಹಮ್ಮದ್ ಘಾಝಿ ಅಲ್ ಜಲಾಲಿ ಬಂಡುಕೋರರನ್ನು ಬೆಂಬಲಿಸಿದ್ದಾರೆ. ನೂತನ ಮಧ್ಯಂತರ ಸರ್ಕಾರ ರಚನೆಗೆ ಸಹಕಾರ ನೀಡುವುದಾಗಿ ಹೇಳಿದ್ದಾರೆ. ಹಾಗಾಗಿ, ಬಂಡುಕೋರರ ಗುಂಪಿನ ನಾಯಕ ಮೊಹಮ್ಮದ್ ಅಲ್ ಬಶೀರ್ ಅಧಿಕಾರವಹಿಸಿಕೊಂಡಿದ್ದಾರೆ. 2025ರ ಮಾರ್ಚ್‌ವರೆಗೆ ಅವರು ಪ್ರಧಾನಿಯಾಗಿ ದೇಶವನ್ನು ಮುನ್ನಡೆಸಲಿದ್ದಾರೆ. ಬಶೀರ್ ಆಡಳಿತವನ್ನು ‘ಪರಿವರ್ತನಾ ಸರ್ಕಾರ’ (Transitional Govt) ಎಂದು ಹೇಳಲಾಗಿದೆ.

ಸೋಮವಾರ (ಡಿ.9) ಬಂಡುಕೋರರ ಗುಂಪಿನ ಕಮಾಂಡರ್ ಅಬು ಮೊಹಮ್ಮದ್ ಅಲ್-ಜುಲಾನಿ ಅವರು ಪ್ರಧಾನಿ ಮೊಹಮ್ಮದ್ ಘಾಝಿ ಅಲ್ ಜಲಾಲಿ ಮತ್ತು ಉಪಾಧ್ಯಕ್ಷ ಫೈಸಲ್ ಮೆಕ್ದಾದ್ ಅವರನ್ನು ಭೇಟಿಯಾಗಿ ಮಧ್ಯಂತರ ಸರ್ಕಾರ ರಚನೆ ಕುರಿತು ಚರ್ಚೆ ನಡೆಸಿದ್ದರು.

ಆ ಬಳಿಕ, ಹೋರಾಟಗಾರರ ಗುಂಪಿಗೆ ಸಂಪೂರ್ಣ ಬೆಂಬಲ ನೀಡುತ್ತೇವೆ. ನನ್ನ ಸರ್ಕಾರ ಇನ್ನುಮುಂದೆ ಹೋರಾಟಗಾರರ ಸರ್ಕಾರವಾಗಿ ಬದಲಾಗಲಿದೆ ಎಂದು ಪ್ರಧಾನಿ ಜಲಾಲಿ ಹೇಳಿದ್ದರು.

ವಾಯುವ್ಯ ಸಿರಿಯಾದ ಇದ್ಲಿಬ್ ಮತ್ತು ಅಲೆಪ್ಪೋ ಪ್ರಾಂತ್ಯವನ್ನು ಬಂಡುಕೋರರ ಪ್ರಬಲ ಗುಂಪು ಹಯಾತ್ ತಹ್ರೀರ್ ಅಲ್-ಶಾಮ್ (ಹೆಚ್‌ಟಿಎಸ್‌) ತನ್ನ ವಶಕ್ಕೆ ಪಡೆದುಕೊಂಡ ಬಳಿಕ, ಕಳೆದ ಜನವರಿಯಿಂದ ಮೊಹಮ್ಮದ್ ಅಲ್ ಬಶೀರ್ ಅಲ್ಲಿನ ಆಡಳಿತ ನೋಡಿಕೊಳ್ಳುತ್ತಿದ್ದರು. ಬಶೀರ್ ಆಡಳಿತವನ್ನು ಬಂಡುಕೋರರ ಗುಂಪು ‘ಮುಕ್ತಿ ಸರ್ಕಾರ’ (Salvation government) ಎಂದಿದೆ.

ಮಂಗಳವಾರ ನಡೆಸಿದ ಸಭೆಯಲ್ಲಿ ಮೊಹಮ್ಮದ್ ಅಲ್ ಬಶೀರ್ ಅವರು ಮುಂದಿನ ಜವಾಬ್ದಾರಿ ಹಂಚಿಕೆ ಕುರಿತು ಮಾತುಕತೆ ನಡೆಸಿದ್ದಾರೆ. ದೇಶದ ಜನರು ‘ಸ್ಥಿರತೆ ಮತ್ತು ಶಾಂತತೆಯನ್ನು ಆನಂದಿಸಿ’ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ. ಸಿರಿಯಾದ ಹೊಸ ಸರ್ಕಾರ ‘ಉತ್ತಮ ಸಂದೇಶ’ ಸಾರಲಿ ಎಂದು ಸಿರಿಯಾದ ವಿಶ್ವಸಂಸ್ಥೆಯ ಪ್ರತಿನಿಧಿ ಹೇಳಿದ್ದಾರೆ.

ಸಿರಿಯಾದ ಭವಿಷ್ಯದ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡುತ್ತೇವೆ. ಹೊಸ ಸರ್ಕಾರ ಅಲ್ಪಸಂಖ್ಯಾತರನ್ನು ಗೌರವಿಸಲಿ, ವಿಶ್ವಾಸಾರ್ಹತೆ ಕಾಪಾಡಲಿ ಮತ್ತು ಎಲ್ಲರ ಒಳಗೊಳ್ಳುವಿಕೆಯನ್ನು ಖಾತ್ರಿಪಡಿಸಲಿ ಎಂದು ಯುಎಸ್‌ ಸರ್ಕಾರದ ಕಾರ್ಯದರ್ಶಿ ಆಂಟೋನಿ ಜೆ. ಬ್ಲಿಂಕೆನ್ ತಿಳಿಸಿದ್ದಾರೆ.

ಮೊಹಮ್ಮದ್ ಬಶೀರ್ ಯಾರು?

ಎಲೆಕ್ಟ್ರಿಕಲ್ ಎಂಜಿನಿಯರ್ ಪದವಿ ಪಡೆದಿರುವ ಸಿರಿಯಾದ ನೂತನ ಹಂಗಾಮಿ ಪ್ರಧಾನಿ ಮೊಹಮ್ಮದ್ ಅಲ್ ಬಶೀರ್, 2011 ರಲ್ಲಿ ದೇಶದಲ್ಲಿ ಅಂತರ್ಯುದ್ಧ ಪ್ರಾರಂಭವಾಗುವ ಮೊದಲು ಅನಿಲ ಸ್ಥಾವರಗಳಲ್ಲಿ ಕೆಲಸ ಮಾಡಿದ್ದರು.

ಕಳೆದ ಜನವರಿಯಲ್ಲಿ ಬಶೀರ್ ಅವರನ್ನು ತಮ್ಮ ನಿಯಂತ್ರಣದಲ್ಲಿರುವ ಇದ್ಲಿಬ್ ಮತ್ತು ಅಲೆಪ್ಪೋ ಪ್ರಾಂತ್ಯಗಳ ‘ಮುಕ್ತಿ ಸರ್ಕಾರ’ದ (Salvation government) ಪ್ರಧಾನ ಮಂತ್ರಿಯಾಗಿ ಅಥವಾ ಆಡಳಿತಗಾರನಾಗಿ ಹಯಾತ್ ತಹ್ರೀರ್ ಅಲ್-ಶಾಮ್ (ಹೆಚ್‌ಟಿಎಸ್‌) ನೇಮಿಸಿತ್ತು.

ಇಸ್ಲಾಮಿಕ್ ನೀತಿಗಳಿಂದ ಮಾರ್ಗದರ್ಶಿಸಲ್ಪಟ್ಟ ಧಾರ್ಮಿಕ ಮಂಡಳಿಯ ಮೂಲಕ ಸಚಿವಾಲಯಗಳು, ಸ್ಥಳೀಯ ಇಲಾಖೆಗಳು, ನ್ಯಾಯಾಂಗ ಮತ್ತು ಭದ್ರತಾ ಅಧಿಕಾರಿಗಳೊಂದಿಗೆ ಬಂಡುಕೋರರ ಮುಕ್ತಿ ಸರ್ಕಾರ ಒಂದು ರಾಜ್ಯದಂತೆ ಕಾರ್ಯನಿರ್ವಹಿಸಿತ್ತು.

ಬಂಡುಕೋರರ ಗುಂಪು ಹೆಚ್‌ಟಿಎಸ್ ಮತ್ತು ಅದರ ಮಿತ್ರರು ಇದ್ಲಿಬ್ ಮತ್ತು ಅಲೆಪ್ಪೋ ಪ್ರಾಂತ್ಯಗಳನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡ ಬಳಿಕ, ಅಲ್ಲಿನ ಸರ್ಕಾರಿ ಕಚೇರಿಗಳು ಸೇರಿದಂತೆ ಎಲ್ಲಾ ಕಾರ್ಯ ಚಟುವಟಿಕೆಗಳು ಸ್ಥಗಿತಗೊಂಡಿತ್ತು. ಆಗ ಮುಕ್ತಿ ಸರ್ಕಾರದ ಮೂಲಕ ಅವುಗಳನ್ನು ಮೊಹಮ್ಮದ್ ಅಲ್ ಬಶೀರ್ ಪುನಃ ಸ್ಥಾಪಿಸಿದ್ದರು.

ಬಂಡುಕೋರರ ಗುಂಪು ಸಿರಿಯಾದ ರಾಜಧಾನಿ ಡಮಾಸ್ಕಸ್ ಮೇಲೆ ಡಿ.8ರಂದು ಹಿಡಿತ ಸಾಧಿಸಿದ್ದಾರೆ. ಆ ಬಳಿಕ ಅಧ್ಯಕ್ಷ ಬಶರ್ ಅಲ್ ಅಸಾದ್ ಮತ್ತು ಕುಟುಂಬ ರಷ್ಯಾದ ಮಾಸ್ಕೋಗೆ ಪಲಾಯನ ಮಾಡಿದೆ. ಸಿರಿಯಾ ಬಂಡುಕೋರರ ವಶವಾಗುವ ಮೂಲಕ ಬಶರ್ ಅಲ್ ಅಸಾದ್ ಕುಟುಂಬದ 50 ವರ್ಷಗಳ ನಿರಂಕುಶ ಆಡಳಿತ ಕೊನೆಗೊಂಡಿದೆ. ಬಂಡುಕೋರರ ಗುಂಪು, ” ನಮ್ಮ ಹೋರಾಟ ಅಸದ್ ಆಡಳಿತ ವಿರುದ್ದವಾಗಿತ್ತು. ಆತನ ಹುದ್ದೆಯಿಂದ ಕೆಳಗಿಳಿದ ಬಳಿಕ ಮುಂದೆ ಎಲ್ಲರನ್ನು ಒಳಗೊಂಡ ಸರ್ಕಾರ ರಚಿಸಿ ದೇಶ ಮುನ್ನಡೆಸುತ್ತೇವೆ” ಎಂದಿದೆ.

ಇದನ್ನೂ ಓದಿ : ಉತ್ತರ ಪ್ರದೇಶ | 180 ವರ್ಷ ಹಳೆಯ ಮಸೀದಿಯನ್ನು ಭಾಗಶಃ ಕೆಡವಿದ ಜಿಲ್ಲಾಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...