Homeಮುಖಪುಟಸಿರಿಯಾದ ಹಂಗಾಮಿ ಪ್ರಧಾನಿಯಾಗಿ ಮೊಹಮ್ಮದ್ ಅಲ್ ಬಶೀರ್ ನೇಮಕ

ಸಿರಿಯಾದ ಹಂಗಾಮಿ ಪ್ರಧಾನಿಯಾಗಿ ಮೊಹಮ್ಮದ್ ಅಲ್ ಬಶೀರ್ ನೇಮಕ

- Advertisement -
- Advertisement -

ರಾಜಕೀಯ ಅರಾಜಕತೆ ಉಂಟಾಗಿರುವ ಸಿರಿಯಾದ ಹಂಗಾಮಿ ಪ್ರಧಾನಿಯಾಗಿ ಮೊಹಮ್ಮದ್ ಅಲ್ ಬಶೀರ್ ಆಯ್ಕೆಯಾಗಿದ್ದಾರೆ. ಮಂಗಳವಾರ (ಡಿ.10) ಹಾಲಿ ಸರ್ಕಾರ ಮತ್ತು ಮುಂಬರುವ ಸರ್ಕಾರದ ಮುಖ್ಯಸ್ಥರ ಜೊತೆ ಬಶೀರ್ ಸಭೆ ನಡೆಸಿದ್ದಾರೆ.

ವರದಿಗಳ ಪ್ರಕಾರ, ಸಿರಿಯಾದ ಅಧ್ಯಕ್ಷರಾಗಿದ್ದ ಬಶರ್ ಅಲ್ ಅಸದ್ ಪಲಾಯನ ಮಾಡಿದ ಬಳಿಕ, ಪ್ರಧಾನಿ ಮೊಹಮ್ಮದ್ ಘಾಝಿ ಅಲ್ ಜಲಾಲಿ ಬಂಡುಕೋರರನ್ನು ಬೆಂಬಲಿಸಿದ್ದಾರೆ. ನೂತನ ಮಧ್ಯಂತರ ಸರ್ಕಾರ ರಚನೆಗೆ ಸಹಕಾರ ನೀಡುವುದಾಗಿ ಹೇಳಿದ್ದಾರೆ. ಹಾಗಾಗಿ, ಬಂಡುಕೋರರ ಗುಂಪಿನ ನಾಯಕ ಮೊಹಮ್ಮದ್ ಅಲ್ ಬಶೀರ್ ಅಧಿಕಾರವಹಿಸಿಕೊಂಡಿದ್ದಾರೆ. 2025ರ ಮಾರ್ಚ್‌ವರೆಗೆ ಅವರು ಪ್ರಧಾನಿಯಾಗಿ ದೇಶವನ್ನು ಮುನ್ನಡೆಸಲಿದ್ದಾರೆ. ಬಶೀರ್ ಆಡಳಿತವನ್ನು ‘ಪರಿವರ್ತನಾ ಸರ್ಕಾರ’ (Transitional Govt) ಎಂದು ಹೇಳಲಾಗಿದೆ.

ಸೋಮವಾರ (ಡಿ.9) ಬಂಡುಕೋರರ ಗುಂಪಿನ ಕಮಾಂಡರ್ ಅಬು ಮೊಹಮ್ಮದ್ ಅಲ್-ಜುಲಾನಿ ಅವರು ಪ್ರಧಾನಿ ಮೊಹಮ್ಮದ್ ಘಾಝಿ ಅಲ್ ಜಲಾಲಿ ಮತ್ತು ಉಪಾಧ್ಯಕ್ಷ ಫೈಸಲ್ ಮೆಕ್ದಾದ್ ಅವರನ್ನು ಭೇಟಿಯಾಗಿ ಮಧ್ಯಂತರ ಸರ್ಕಾರ ರಚನೆ ಕುರಿತು ಚರ್ಚೆ ನಡೆಸಿದ್ದರು.

ಆ ಬಳಿಕ, ಹೋರಾಟಗಾರರ ಗುಂಪಿಗೆ ಸಂಪೂರ್ಣ ಬೆಂಬಲ ನೀಡುತ್ತೇವೆ. ನನ್ನ ಸರ್ಕಾರ ಇನ್ನುಮುಂದೆ ಹೋರಾಟಗಾರರ ಸರ್ಕಾರವಾಗಿ ಬದಲಾಗಲಿದೆ ಎಂದು ಪ್ರಧಾನಿ ಜಲಾಲಿ ಹೇಳಿದ್ದರು.

ವಾಯುವ್ಯ ಸಿರಿಯಾದ ಇದ್ಲಿಬ್ ಮತ್ತು ಅಲೆಪ್ಪೋ ಪ್ರಾಂತ್ಯವನ್ನು ಬಂಡುಕೋರರ ಪ್ರಬಲ ಗುಂಪು ಹಯಾತ್ ತಹ್ರೀರ್ ಅಲ್-ಶಾಮ್ (ಹೆಚ್‌ಟಿಎಸ್‌) ತನ್ನ ವಶಕ್ಕೆ ಪಡೆದುಕೊಂಡ ಬಳಿಕ, ಕಳೆದ ಜನವರಿಯಿಂದ ಮೊಹಮ್ಮದ್ ಅಲ್ ಬಶೀರ್ ಅಲ್ಲಿನ ಆಡಳಿತ ನೋಡಿಕೊಳ್ಳುತ್ತಿದ್ದರು. ಬಶೀರ್ ಆಡಳಿತವನ್ನು ಬಂಡುಕೋರರ ಗುಂಪು ‘ಮುಕ್ತಿ ಸರ್ಕಾರ’ (Salvation government) ಎಂದಿದೆ.

ಮಂಗಳವಾರ ನಡೆಸಿದ ಸಭೆಯಲ್ಲಿ ಮೊಹಮ್ಮದ್ ಅಲ್ ಬಶೀರ್ ಅವರು ಮುಂದಿನ ಜವಾಬ್ದಾರಿ ಹಂಚಿಕೆ ಕುರಿತು ಮಾತುಕತೆ ನಡೆಸಿದ್ದಾರೆ. ದೇಶದ ಜನರು ‘ಸ್ಥಿರತೆ ಮತ್ತು ಶಾಂತತೆಯನ್ನು ಆನಂದಿಸಿ’ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ. ಸಿರಿಯಾದ ಹೊಸ ಸರ್ಕಾರ ‘ಉತ್ತಮ ಸಂದೇಶ’ ಸಾರಲಿ ಎಂದು ಸಿರಿಯಾದ ವಿಶ್ವಸಂಸ್ಥೆಯ ಪ್ರತಿನಿಧಿ ಹೇಳಿದ್ದಾರೆ.

ಸಿರಿಯಾದ ಭವಿಷ್ಯದ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡುತ್ತೇವೆ. ಹೊಸ ಸರ್ಕಾರ ಅಲ್ಪಸಂಖ್ಯಾತರನ್ನು ಗೌರವಿಸಲಿ, ವಿಶ್ವಾಸಾರ್ಹತೆ ಕಾಪಾಡಲಿ ಮತ್ತು ಎಲ್ಲರ ಒಳಗೊಳ್ಳುವಿಕೆಯನ್ನು ಖಾತ್ರಿಪಡಿಸಲಿ ಎಂದು ಯುಎಸ್‌ ಸರ್ಕಾರದ ಕಾರ್ಯದರ್ಶಿ ಆಂಟೋನಿ ಜೆ. ಬ್ಲಿಂಕೆನ್ ತಿಳಿಸಿದ್ದಾರೆ.

ಮೊಹಮ್ಮದ್ ಬಶೀರ್ ಯಾರು?

ಎಲೆಕ್ಟ್ರಿಕಲ್ ಎಂಜಿನಿಯರ್ ಪದವಿ ಪಡೆದಿರುವ ಸಿರಿಯಾದ ನೂತನ ಹಂಗಾಮಿ ಪ್ರಧಾನಿ ಮೊಹಮ್ಮದ್ ಅಲ್ ಬಶೀರ್, 2011 ರಲ್ಲಿ ದೇಶದಲ್ಲಿ ಅಂತರ್ಯುದ್ಧ ಪ್ರಾರಂಭವಾಗುವ ಮೊದಲು ಅನಿಲ ಸ್ಥಾವರಗಳಲ್ಲಿ ಕೆಲಸ ಮಾಡಿದ್ದರು.

ಕಳೆದ ಜನವರಿಯಲ್ಲಿ ಬಶೀರ್ ಅವರನ್ನು ತಮ್ಮ ನಿಯಂತ್ರಣದಲ್ಲಿರುವ ಇದ್ಲಿಬ್ ಮತ್ತು ಅಲೆಪ್ಪೋ ಪ್ರಾಂತ್ಯಗಳ ‘ಮುಕ್ತಿ ಸರ್ಕಾರ’ದ (Salvation government) ಪ್ರಧಾನ ಮಂತ್ರಿಯಾಗಿ ಅಥವಾ ಆಡಳಿತಗಾರನಾಗಿ ಹಯಾತ್ ತಹ್ರೀರ್ ಅಲ್-ಶಾಮ್ (ಹೆಚ್‌ಟಿಎಸ್‌) ನೇಮಿಸಿತ್ತು.

ಇಸ್ಲಾಮಿಕ್ ನೀತಿಗಳಿಂದ ಮಾರ್ಗದರ್ಶಿಸಲ್ಪಟ್ಟ ಧಾರ್ಮಿಕ ಮಂಡಳಿಯ ಮೂಲಕ ಸಚಿವಾಲಯಗಳು, ಸ್ಥಳೀಯ ಇಲಾಖೆಗಳು, ನ್ಯಾಯಾಂಗ ಮತ್ತು ಭದ್ರತಾ ಅಧಿಕಾರಿಗಳೊಂದಿಗೆ ಬಂಡುಕೋರರ ಮುಕ್ತಿ ಸರ್ಕಾರ ಒಂದು ರಾಜ್ಯದಂತೆ ಕಾರ್ಯನಿರ್ವಹಿಸಿತ್ತು.

ಬಂಡುಕೋರರ ಗುಂಪು ಹೆಚ್‌ಟಿಎಸ್ ಮತ್ತು ಅದರ ಮಿತ್ರರು ಇದ್ಲಿಬ್ ಮತ್ತು ಅಲೆಪ್ಪೋ ಪ್ರಾಂತ್ಯಗಳನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡ ಬಳಿಕ, ಅಲ್ಲಿನ ಸರ್ಕಾರಿ ಕಚೇರಿಗಳು ಸೇರಿದಂತೆ ಎಲ್ಲಾ ಕಾರ್ಯ ಚಟುವಟಿಕೆಗಳು ಸ್ಥಗಿತಗೊಂಡಿತ್ತು. ಆಗ ಮುಕ್ತಿ ಸರ್ಕಾರದ ಮೂಲಕ ಅವುಗಳನ್ನು ಮೊಹಮ್ಮದ್ ಅಲ್ ಬಶೀರ್ ಪುನಃ ಸ್ಥಾಪಿಸಿದ್ದರು.

ಬಂಡುಕೋರರ ಗುಂಪು ಸಿರಿಯಾದ ರಾಜಧಾನಿ ಡಮಾಸ್ಕಸ್ ಮೇಲೆ ಡಿ.8ರಂದು ಹಿಡಿತ ಸಾಧಿಸಿದ್ದಾರೆ. ಆ ಬಳಿಕ ಅಧ್ಯಕ್ಷ ಬಶರ್ ಅಲ್ ಅಸಾದ್ ಮತ್ತು ಕುಟುಂಬ ರಷ್ಯಾದ ಮಾಸ್ಕೋಗೆ ಪಲಾಯನ ಮಾಡಿದೆ. ಸಿರಿಯಾ ಬಂಡುಕೋರರ ವಶವಾಗುವ ಮೂಲಕ ಬಶರ್ ಅಲ್ ಅಸಾದ್ ಕುಟುಂಬದ 50 ವರ್ಷಗಳ ನಿರಂಕುಶ ಆಡಳಿತ ಕೊನೆಗೊಂಡಿದೆ. ಬಂಡುಕೋರರ ಗುಂಪು, ” ನಮ್ಮ ಹೋರಾಟ ಅಸದ್ ಆಡಳಿತ ವಿರುದ್ದವಾಗಿತ್ತು. ಆತನ ಹುದ್ದೆಯಿಂದ ಕೆಳಗಿಳಿದ ಬಳಿಕ ಮುಂದೆ ಎಲ್ಲರನ್ನು ಒಳಗೊಂಡ ಸರ್ಕಾರ ರಚಿಸಿ ದೇಶ ಮುನ್ನಡೆಸುತ್ತೇವೆ” ಎಂದಿದೆ.

ಇದನ್ನೂ ಓದಿ : ಉತ್ತರ ಪ್ರದೇಶ | 180 ವರ್ಷ ಹಳೆಯ ಮಸೀದಿಯನ್ನು ಭಾಗಶಃ ಕೆಡವಿದ ಜಿಲ್ಲಾಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...