Homeಮುಖಪುಟಸಿರಿಯಾದ ಹಂಗಾಮಿ ಪ್ರಧಾನಿಯಾಗಿ ಮೊಹಮ್ಮದ್ ಅಲ್ ಬಶೀರ್ ನೇಮಕ

ಸಿರಿಯಾದ ಹಂಗಾಮಿ ಪ್ರಧಾನಿಯಾಗಿ ಮೊಹಮ್ಮದ್ ಅಲ್ ಬಶೀರ್ ನೇಮಕ

- Advertisement -
- Advertisement -

ರಾಜಕೀಯ ಅರಾಜಕತೆ ಉಂಟಾಗಿರುವ ಸಿರಿಯಾದ ಹಂಗಾಮಿ ಪ್ರಧಾನಿಯಾಗಿ ಮೊಹಮ್ಮದ್ ಅಲ್ ಬಶೀರ್ ಆಯ್ಕೆಯಾಗಿದ್ದಾರೆ. ಮಂಗಳವಾರ (ಡಿ.10) ಹಾಲಿ ಸರ್ಕಾರ ಮತ್ತು ಮುಂಬರುವ ಸರ್ಕಾರದ ಮುಖ್ಯಸ್ಥರ ಜೊತೆ ಬಶೀರ್ ಸಭೆ ನಡೆಸಿದ್ದಾರೆ.

ವರದಿಗಳ ಪ್ರಕಾರ, ಸಿರಿಯಾದ ಅಧ್ಯಕ್ಷರಾಗಿದ್ದ ಬಶರ್ ಅಲ್ ಅಸದ್ ಪಲಾಯನ ಮಾಡಿದ ಬಳಿಕ, ಪ್ರಧಾನಿ ಮೊಹಮ್ಮದ್ ಘಾಝಿ ಅಲ್ ಜಲಾಲಿ ಬಂಡುಕೋರರನ್ನು ಬೆಂಬಲಿಸಿದ್ದಾರೆ. ನೂತನ ಮಧ್ಯಂತರ ಸರ್ಕಾರ ರಚನೆಗೆ ಸಹಕಾರ ನೀಡುವುದಾಗಿ ಹೇಳಿದ್ದಾರೆ. ಹಾಗಾಗಿ, ಬಂಡುಕೋರರ ಗುಂಪಿನ ನಾಯಕ ಮೊಹಮ್ಮದ್ ಅಲ್ ಬಶೀರ್ ಅಧಿಕಾರವಹಿಸಿಕೊಂಡಿದ್ದಾರೆ. 2025ರ ಮಾರ್ಚ್‌ವರೆಗೆ ಅವರು ಪ್ರಧಾನಿಯಾಗಿ ದೇಶವನ್ನು ಮುನ್ನಡೆಸಲಿದ್ದಾರೆ. ಬಶೀರ್ ಆಡಳಿತವನ್ನು ‘ಪರಿವರ್ತನಾ ಸರ್ಕಾರ’ (Transitional Govt) ಎಂದು ಹೇಳಲಾಗಿದೆ.

ಸೋಮವಾರ (ಡಿ.9) ಬಂಡುಕೋರರ ಗುಂಪಿನ ಕಮಾಂಡರ್ ಅಬು ಮೊಹಮ್ಮದ್ ಅಲ್-ಜುಲಾನಿ ಅವರು ಪ್ರಧಾನಿ ಮೊಹಮ್ಮದ್ ಘಾಝಿ ಅಲ್ ಜಲಾಲಿ ಮತ್ತು ಉಪಾಧ್ಯಕ್ಷ ಫೈಸಲ್ ಮೆಕ್ದಾದ್ ಅವರನ್ನು ಭೇಟಿಯಾಗಿ ಮಧ್ಯಂತರ ಸರ್ಕಾರ ರಚನೆ ಕುರಿತು ಚರ್ಚೆ ನಡೆಸಿದ್ದರು.

ಆ ಬಳಿಕ, ಹೋರಾಟಗಾರರ ಗುಂಪಿಗೆ ಸಂಪೂರ್ಣ ಬೆಂಬಲ ನೀಡುತ್ತೇವೆ. ನನ್ನ ಸರ್ಕಾರ ಇನ್ನುಮುಂದೆ ಹೋರಾಟಗಾರರ ಸರ್ಕಾರವಾಗಿ ಬದಲಾಗಲಿದೆ ಎಂದು ಪ್ರಧಾನಿ ಜಲಾಲಿ ಹೇಳಿದ್ದರು.

ವಾಯುವ್ಯ ಸಿರಿಯಾದ ಇದ್ಲಿಬ್ ಮತ್ತು ಅಲೆಪ್ಪೋ ಪ್ರಾಂತ್ಯವನ್ನು ಬಂಡುಕೋರರ ಪ್ರಬಲ ಗುಂಪು ಹಯಾತ್ ತಹ್ರೀರ್ ಅಲ್-ಶಾಮ್ (ಹೆಚ್‌ಟಿಎಸ್‌) ತನ್ನ ವಶಕ್ಕೆ ಪಡೆದುಕೊಂಡ ಬಳಿಕ, ಕಳೆದ ಜನವರಿಯಿಂದ ಮೊಹಮ್ಮದ್ ಅಲ್ ಬಶೀರ್ ಅಲ್ಲಿನ ಆಡಳಿತ ನೋಡಿಕೊಳ್ಳುತ್ತಿದ್ದರು. ಬಶೀರ್ ಆಡಳಿತವನ್ನು ಬಂಡುಕೋರರ ಗುಂಪು ‘ಮುಕ್ತಿ ಸರ್ಕಾರ’ (Salvation government) ಎಂದಿದೆ.

ಮಂಗಳವಾರ ನಡೆಸಿದ ಸಭೆಯಲ್ಲಿ ಮೊಹಮ್ಮದ್ ಅಲ್ ಬಶೀರ್ ಅವರು ಮುಂದಿನ ಜವಾಬ್ದಾರಿ ಹಂಚಿಕೆ ಕುರಿತು ಮಾತುಕತೆ ನಡೆಸಿದ್ದಾರೆ. ದೇಶದ ಜನರು ‘ಸ್ಥಿರತೆ ಮತ್ತು ಶಾಂತತೆಯನ್ನು ಆನಂದಿಸಿ’ ಎಂದು ಹೇಳಿದ್ದಾರೆ ಎಂದು ವರದಿಯಾಗಿದೆ. ಸಿರಿಯಾದ ಹೊಸ ಸರ್ಕಾರ ‘ಉತ್ತಮ ಸಂದೇಶ’ ಸಾರಲಿ ಎಂದು ಸಿರಿಯಾದ ವಿಶ್ವಸಂಸ್ಥೆಯ ಪ್ರತಿನಿಧಿ ಹೇಳಿದ್ದಾರೆ.

ಸಿರಿಯಾದ ಭವಿಷ್ಯದ ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡುತ್ತೇವೆ. ಹೊಸ ಸರ್ಕಾರ ಅಲ್ಪಸಂಖ್ಯಾತರನ್ನು ಗೌರವಿಸಲಿ, ವಿಶ್ವಾಸಾರ್ಹತೆ ಕಾಪಾಡಲಿ ಮತ್ತು ಎಲ್ಲರ ಒಳಗೊಳ್ಳುವಿಕೆಯನ್ನು ಖಾತ್ರಿಪಡಿಸಲಿ ಎಂದು ಯುಎಸ್‌ ಸರ್ಕಾರದ ಕಾರ್ಯದರ್ಶಿ ಆಂಟೋನಿ ಜೆ. ಬ್ಲಿಂಕೆನ್ ತಿಳಿಸಿದ್ದಾರೆ.

ಮೊಹಮ್ಮದ್ ಬಶೀರ್ ಯಾರು?

ಎಲೆಕ್ಟ್ರಿಕಲ್ ಎಂಜಿನಿಯರ್ ಪದವಿ ಪಡೆದಿರುವ ಸಿರಿಯಾದ ನೂತನ ಹಂಗಾಮಿ ಪ್ರಧಾನಿ ಮೊಹಮ್ಮದ್ ಅಲ್ ಬಶೀರ್, 2011 ರಲ್ಲಿ ದೇಶದಲ್ಲಿ ಅಂತರ್ಯುದ್ಧ ಪ್ರಾರಂಭವಾಗುವ ಮೊದಲು ಅನಿಲ ಸ್ಥಾವರಗಳಲ್ಲಿ ಕೆಲಸ ಮಾಡಿದ್ದರು.

ಕಳೆದ ಜನವರಿಯಲ್ಲಿ ಬಶೀರ್ ಅವರನ್ನು ತಮ್ಮ ನಿಯಂತ್ರಣದಲ್ಲಿರುವ ಇದ್ಲಿಬ್ ಮತ್ತು ಅಲೆಪ್ಪೋ ಪ್ರಾಂತ್ಯಗಳ ‘ಮುಕ್ತಿ ಸರ್ಕಾರ’ದ (Salvation government) ಪ್ರಧಾನ ಮಂತ್ರಿಯಾಗಿ ಅಥವಾ ಆಡಳಿತಗಾರನಾಗಿ ಹಯಾತ್ ತಹ್ರೀರ್ ಅಲ್-ಶಾಮ್ (ಹೆಚ್‌ಟಿಎಸ್‌) ನೇಮಿಸಿತ್ತು.

ಇಸ್ಲಾಮಿಕ್ ನೀತಿಗಳಿಂದ ಮಾರ್ಗದರ್ಶಿಸಲ್ಪಟ್ಟ ಧಾರ್ಮಿಕ ಮಂಡಳಿಯ ಮೂಲಕ ಸಚಿವಾಲಯಗಳು, ಸ್ಥಳೀಯ ಇಲಾಖೆಗಳು, ನ್ಯಾಯಾಂಗ ಮತ್ತು ಭದ್ರತಾ ಅಧಿಕಾರಿಗಳೊಂದಿಗೆ ಬಂಡುಕೋರರ ಮುಕ್ತಿ ಸರ್ಕಾರ ಒಂದು ರಾಜ್ಯದಂತೆ ಕಾರ್ಯನಿರ್ವಹಿಸಿತ್ತು.

ಬಂಡುಕೋರರ ಗುಂಪು ಹೆಚ್‌ಟಿಎಸ್ ಮತ್ತು ಅದರ ಮಿತ್ರರು ಇದ್ಲಿಬ್ ಮತ್ತು ಅಲೆಪ್ಪೋ ಪ್ರಾಂತ್ಯಗಳನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡ ಬಳಿಕ, ಅಲ್ಲಿನ ಸರ್ಕಾರಿ ಕಚೇರಿಗಳು ಸೇರಿದಂತೆ ಎಲ್ಲಾ ಕಾರ್ಯ ಚಟುವಟಿಕೆಗಳು ಸ್ಥಗಿತಗೊಂಡಿತ್ತು. ಆಗ ಮುಕ್ತಿ ಸರ್ಕಾರದ ಮೂಲಕ ಅವುಗಳನ್ನು ಮೊಹಮ್ಮದ್ ಅಲ್ ಬಶೀರ್ ಪುನಃ ಸ್ಥಾಪಿಸಿದ್ದರು.

ಬಂಡುಕೋರರ ಗುಂಪು ಸಿರಿಯಾದ ರಾಜಧಾನಿ ಡಮಾಸ್ಕಸ್ ಮೇಲೆ ಡಿ.8ರಂದು ಹಿಡಿತ ಸಾಧಿಸಿದ್ದಾರೆ. ಆ ಬಳಿಕ ಅಧ್ಯಕ್ಷ ಬಶರ್ ಅಲ್ ಅಸಾದ್ ಮತ್ತು ಕುಟುಂಬ ರಷ್ಯಾದ ಮಾಸ್ಕೋಗೆ ಪಲಾಯನ ಮಾಡಿದೆ. ಸಿರಿಯಾ ಬಂಡುಕೋರರ ವಶವಾಗುವ ಮೂಲಕ ಬಶರ್ ಅಲ್ ಅಸಾದ್ ಕುಟುಂಬದ 50 ವರ್ಷಗಳ ನಿರಂಕುಶ ಆಡಳಿತ ಕೊನೆಗೊಂಡಿದೆ. ಬಂಡುಕೋರರ ಗುಂಪು, ” ನಮ್ಮ ಹೋರಾಟ ಅಸದ್ ಆಡಳಿತ ವಿರುದ್ದವಾಗಿತ್ತು. ಆತನ ಹುದ್ದೆಯಿಂದ ಕೆಳಗಿಳಿದ ಬಳಿಕ ಮುಂದೆ ಎಲ್ಲರನ್ನು ಒಳಗೊಂಡ ಸರ್ಕಾರ ರಚಿಸಿ ದೇಶ ಮುನ್ನಡೆಸುತ್ತೇವೆ” ಎಂದಿದೆ.

ಇದನ್ನೂ ಓದಿ : ಉತ್ತರ ಪ್ರದೇಶ | 180 ವರ್ಷ ಹಳೆಯ ಮಸೀದಿಯನ್ನು ಭಾಗಶಃ ಕೆಡವಿದ ಜಿಲ್ಲಾಡಳಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...